Homeಫ್ಯಾಕ್ಟ್‌ಚೆಕ್FACT CHECK : ಹಿಂದೂ ಬಾಲಕನ ತಾಯತವನ್ನು ಮುಸ್ಲಿಮರು ಬಲವಂತದಿಂದ ತೆಗೆದಿದ್ದಾರೆ ಎಂಬುವುದು ಸುಳ್ಳು

FACT CHECK : ಹಿಂದೂ ಬಾಲಕನ ತಾಯತವನ್ನು ಮುಸ್ಲಿಮರು ಬಲವಂತದಿಂದ ತೆಗೆದಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಬಾಂಗ್ಲಾದೇಶದಲ್ಲಿ ಹಿಂದೂ ಬಾಲಕನ ಕತ್ತಿನಿಂದ ‘ತುಳಸಿ ಮಾಲೆ’ ಅಥವಾ ತಾಯತವನ್ನು ಮುಸ್ಲಿಮರು ಬಲವಂತವಾಗಿ ಕಿತ್ತು ಹಾಕಿದ್ದಾರೆ ಎಂದು ಆರೋಪಿಸಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಡಿಯೋದಲ್ಲಿ ಮೊಣಕಾಲು ಮಟ್ಟ ನೀರಿನಲ್ಲಿ ನಿಂತಿರುವ ಬಾಲಕನಿಗೆ ಆಹಾರ ಸಾಮಗ್ರಿ ನೀಡುವ ಮುಸ್ಲಿಂ ವ್ಯಕ್ತಿಯೊಬ್ಬರು, ಆತನ ಕತ್ತಿನಲ್ಲಿರುವ ತಾಯತವನ್ನು ಹಲ್ಲಿನಿಂದ ಕಚ್ಚಿ ಕತ್ತರಿಸಿ ತೆಗೆಯುವ ದೃಶ್ಯವಿದೆ. ವಿಡಿಯೋ ಮೇಲೆ ಬಾಂಗ್ಲಾ ಭಾಷೆಯಲ್ಲಿ “ನೊಖಾಲಿಯಲ್ಲಿ ರಿಲೀಫ್ ಸಾಮಗ್ರಿಗಳ ವಿತರಣೆಯ ಸಮಯದಲ್ಲಿ ಮಗುವಿಗೆ ಶಿರ್ಕ್‌ನಿಂದ ಮುಕ್ತಿ ದೊರೆಯಿತು” ಎಂದು ಬರೆಯಲಾಗಿದೆ.

ಆಗಾಗ ಸುಳ್ಳು ಸುದ್ದಿಗಳನ್ನು ಹಂಚಿಕೊಳ್ಳುವ ಜಿತೇಂದ್ರ ಪ್ರತಾಪ್ ಸಿಂಗ್ (@jpsin1) ಎಂಬ ಎಕ್ಸ್‌ ಬಳಕೆದಾರ ಆಗಸ್ಟ್ 30ರಂದು ವಿಡಿಯೋ ಹಂಚಿಕೊಂಡು “ಬಾಂಗ್ಲಾದೇಶದ ಹೊಸ ಸರ್ಕಾರ ಹಿಂದೂಗಳನ್ನು ಹೇಗೆ ನಾಶ ಮಾಡುತ್ತಿದೆ ಎಂಬುವುದನ್ನು ನೋಡಿ. ನೊಖಾಲಿಯಲ್ಲಿ ಪ್ರವಾಹದಲ್ಲಿ ದಿನಗಟ್ಟಲೆ ಸಿಲುಕಿ ಹಸಿದಿದ್ದ ಹಿಂದೂ ಮಗುವನ್ನು ಜಮಾತ್-ಎ-ಇಸ್ಲಾಮಿಯ ಮೌಲ್ವಿಯೊಬ್ಬರು ಸಹಾಯ ಪಡೆಯುವ ಮೊದಲು ಕಲಿಮಾವನ್ನು ಪಠಿಸುವಂತೆ ಒತ್ತಾಯಿಸಿದರು. ನಂತರ ಮೌಲ್ವಿಯು ಮಗುವಿನ ಹಿಂದೂ ಸಂಕೇತವಾದ ತುಳಸಿ ಮಾಲೆಯನ್ನು ಬಲವಂತವಾಗಿ ತೆಗೆದು ಹಾಕಿದರು. ಅವನು ಇನ್ನು ಮುಂದೆ ಹಿಂದೂ ಅಲ್ಲ ಎಂದು ಮಗುವಿಗೆ ಹೇಳಿದರು. ಮಗು ಮಾಲೆಯನ್ನು ಹಿಂದಕ್ಕೆ ಕೇಳಿದಾಗ, ಅವರು ಇನ್ನು ಮುಂದೆ ಯಾವುದೇ ಪರಿಹಾರ ಸಾಮಗ್ರಿಗಳನ್ನು ಸಿಗುವುದಿಲ್ಲ ಎಂದು ಹೇಳಿದ್ದಾರೆ” ಎಂದು ಬರೆದುಕೊಂಡಿದ್ದರು.

ಬಲಪಂಥೀಯ ಸುದ್ದಿ ವೆಬ್‌ಸೈಟ್ ‘ಓಪ್ಇಂಡಿಯಾ’ ಕೂಡ ವಿಡಿಯೋ ಕುರಿತು ಆಗಸ್ಟ್ 30ರಂದು ವರದಿ ಪ್ರಕಟಿಸಿತ್ತು. ವರದಿಯಲ್ಲಿ ಹಿಂದೂ ಮಗುವಿನಿಂದ ಮೌಲ್ವಿ ತುಳಸಿ ಮಾಲೆಯನ್ನು ತೆಗೆದಿದ್ದಾರೆ ಎಂದು ಆರೋಪಿಸಿತ್ತು. ಬಳಿಕ, ಮಗುವಿನ ಧರ್ಮವನ್ನು ಖಚಿತವಾಗಿ ದೃಢೀಕರಿಸಲು ಸಾಧ್ಯವಿಲ್ಲ ಎಂದು ಸುದ್ದಿಯಲ್ಲಿ ತಿದ್ದುಪಡಿ ಮಾಡಿತ್ತು. ಆದರೆ, ಸುದ್ದಿಯ ಯುಆರ್‌ಎಲ್‌ ಲಿಂಕ್‌ನಲ್ಲಿ ಇನ್ನೂ ಕೂಡ ಹಿಂದೂ ಮಗು ಎಂದೇ ಇದೆ.

ಬಲಪಂಥೀಯ ಎಕ್ಸ್‌ ಬಳಕೆದಾರ ರೌಶನ್ ಸಿನ್ಹಾ ಅಥವಾ ಮಿ. ಸಿನ್ಹಾ  ಆಗಸ್ಟ್ 30ರಂದು ವಿಡಿಯೋ ಹಂಚಿಕೊಂಡು ” ಬಾಂಗ್ಲಾದೇಶದಲ್ಲಿ ಇಸ್ಲಾಮಿಸ್ಟ್‌ಗಳು ಪರಿಹಾರ ಸಾಮಾಗ್ರಿ ನೀಡಲು ಹಿಂದೂ ಮಕ್ಕಳ ಕುತ್ತಿಗೆಯಿಂದ ಧಾರ್ಮಿಕ ದಾರವನ್ನು ತೆಗೆದಿದ್ದಾರೆ. ಭಾರತದಲ್ಲಿ ಯಾವುದಾದರೂ ಸಹಾಯಕ್ಕೆ ಬದಲಾಗಿ ಯಾವುದೇ ಹಿಂದೂ ಸ್ವಾಮಿ ಮುಸ್ಲಿಂ ವ್ಯಕ್ತಿಗೆ ಇದೇ ರೀತಿ ಮಾಡಿದರೆ ಏನಾಗುತ್ತಿತ್ತು ಊಹಿಸಿ” ಎಂದು ಬರೆದಕೊಂಡಿದ್ದರು.

ಮತ್ತೊಂದು ಬಲಪಂಥೀಯ ಎಕ್ಸ್‌ ಖಾತೆ ಫ್ರಂಟಲ್ ಫೋರ್ಸ್ (@FrontalForce) ಕೂಡ ಮಿ. ಸಿನ್ಹಾನಂತೆ ಬರೆದುಕೊಂಡು ಆಗಸ್ಟ್ 30ರಂದು ವಿಡಿಯೋ ಹಂಚಿಕೊಂಡಿತ್ತು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ಆ ಕುರಿತು ಮಾಹಿತಿ ಹುಡುಕಿದ್ದೇವೆ. ಈ ವೇಳೆ ಖ್ಯಾತ ಫ್ಯಾಕ್ಟ್‌ಚೆಕ್ ಸಂಸ್ಥೆ ಆಲ್ಟ್‌ ನ್ಯೂಸ್ ವಿಡಿಯೋ ಕುರಿತು ಸುದ್ದಿ ಮಾಡಿರುವುದು ಕಂಡು ಬಂದಿದೆ.

ಆಲ್ಟ್ ನ್ಯೂಸ್ ಸುದ್ದಿಯಲ್ಲಿ “ನಾವು ಬಾಂಗ್ಲಾದೇಶದ ಫ್ಯಾಕ್ಟ್‌ಚೆಕ್ಕರ್ ಸೊಹಾನುರ್ಹ್ಮಾನ್ ಅವರೊಂದಿಗೆ ಮಾತನಾಡಿದ್ದೇವೆ. ಅವರು ವಿಡಿಯೋದಲ್ಲಿರುವ ಬಾಲಕ ಹಿಂದೂ ಧರ್ಮವದನಲ್ಲ, ಮುಸ್ಲಿಂ. ಅಲ್ಲದೆ, ಆತನ ಕತ್ತಿನಿಂದ ತುಳಸಿ ಮಾಲೆಯನ್ನಲ್ಲ ತೆಗೆದಿರುವುದು. ಅದು ತಲಿಸ್ಮನ್ (ಮುಸ್ಲಿಮರು ಧರಿಸುವ ತಾಯತ) ಎಂದು ಹೇಳಿದ್ದಾರೆ ಎಂದು ತಿಳಿಸಲಾಗಿದೆ.

ನಾವು ಸೊಹಾನುರ್ಹ್ಮಾನ್ ಅವರ ಎಕ್ಸ್‌ ಖಾತೆಯನ್ನು ಪರಿಶೀಲಿಸಿದಾಗ, ಆಗಸ್ಟ್ 30ರಂದು ಅವರು ವಿಡಿಯೋ ಕುರಿತು ಸ್ಪಷ್ಟನೆ ಕೊಟ್ಟಿರುವುದು ಕಂಡು ಬಂದಿದೆ.

ಸೊಹಾನುರ್ಹ್ಮಾನ್ ಹೇಳಿರುವಂತೆ “ವೈರಲ್ ವಿಡಿಯೋವನ್ನು ಆಗಸ್ಟ್ 26ರಂದ ರಸೇಲ್ ಖಾನ್ ಎಂಬವರು ಮೊದಲು ಫೇಸ್‌ಬುಕ್‌ನಲ್ಲಿ ಅಪ್ಲೋಡ್ ಮಾಡಿದ್ದರು. ವಿಡಿಯೋದಲ್ಲಿ ಘಟನೆ ನಡೆದಿರುವುದು ನೊಖಾಲಿ  ಪ್ರದೇಶದಲ್ಲಿ ಎಂದಿದೆ. ಆ ಪ್ರದೇಶದಲ್ಲಿ ಚಂದ್‌ಪುರದ ‘ತೌಹಿದ್ ಅಕಾಡೆಮಿ ಮತ್ತು ಇಸ್ಲಾಮಿಕ್ ಸೆಂಟರ್’ ಎಂಬ ಹೆಸರಿನ ಸಲಫಿ ಇಸ್ಲಾಮಿಕ್ ಶಾಲೆಯು ಜನರಿಗೆ ಪರಿಹಾರ ಸಾಮಾಗ್ರಿಗಳನ್ನು ವಿತರಿಸಿತ್ತು. ಸಲಫಿ/ಅಹ್ಲೆ ಹದೀಸ್ ಅನುಯಾಯಿಗಳು ತವೀಜ್ (ತಾಯತ) ಧರಿಸುವುದನ್ನು ವಿರೋಧಿಸುತ್ತಾರೆ. ಸಲಫಿಗಳು ಅನೇಕ ಕಡೆಗಳಲ್ಲಿ ಜನರ ಕತ್ತಿನಿಂದ ತಾಯತ ಕತ್ತರಿಸಿದ ವಿಡಿಯೋಗಳು ಲಭ್ಯವಿದೆ”

“ಹಿಂದೂ ಬಾಲಕನ ತಾಯತ ಕತ್ತರಿಸಿ ಆತನನ್ನು ಶಿರ್ಕ್‌ನಿಂದ ಹೊರತರಲು ಸಾಧ್ಯವಿಲ್ಲ. ಈ ಶಿರ್ಕ್‌ ಅನ್ನುವುದು ಅಲ್ಲಾಹನನ್ನು ಆರಾಧಿಸುವ ಮುಸ್ಲಿಮರಿಗೆ ಸಂಬಂಧಿಸಿದ್ದಾಗಿದೆ. ಇಸ್ಲಾಮಿನಲ್ಲಿ ಬಹು ದೈವಾರಾಧನೆ ಶಿರ್ಕ್‌ ಎಂದು ಪರಿಗಣಿಸಲಾಗುತ್ತದೆ. ಸಲಫಿಗಳು ತಾಯತ ಧರಿಸುವುದನ್ನೂ ಬಹು ದೈವಾರಾಧನೆ ಎಂದು ಹೇಳುತ್ತಾರೆ. ಹಾಗಾಗಿ, ಮುಸ್ಲಿಂ ಬಾಲಕನ ಕತ್ತಿನಿಂದ ತಾಯತ ತೆಗೆದಿದ್ದಾರೆ” ಎಂದು ಸೊಹಾನುರ್ಹ್ಮಾನ್ ವಿವರಿಸಿದ್ದಾರೆ.

ವೈರಲ್ ವಿಡಿಯೋದಲ್ಲಿರುವ ಮೌಲ್ವಿಯ ಹೆಸರು ಅಬ್ದುಲ್ ಮಲೆಕ್ ಮಿಯಾಜಿ. ತೌಹೀದ್ ಅಕಾಡೆಮಿ ಮತ್ತು ಇಸ್ಲಾಮಿಕ್ ಸೆಂಟರ್ ನಿರ್ವಹಿಸುತ್ತಿರುವ ಜಾಮಿಯಾ ದಾರುತೌಹೀದ್‌ನ ಸಹಾಯಕ ಪ್ರಾಂಶುಪಾಲರಾಗಿದ್ದಾರೆ. ಅವರೊಂದಿಗೆ ಸೊಹಾನುರ್ಹ್ಮಾನ್ ಮಾತನಾಡಿದ್ದು,” ವಿಡಿಯೋದಲ್ಲಿ ಬಾಲಕನ ಕತ್ತಿನಿಂದ ತಾಯತ ಕತ್ತರಿಸಿದ್ದು ನಾನೆ. ನೊವಾಖಾಲಿಯಲ್ಲಿ ಪರಿಹಾರ ಸಾಮಾಗ್ರಿಗಳನ್ನು ವಿತರಿಸುತ್ತಿದ್ದಾಗ ಆ ವಿಡಿಯೋ ಚಿತ್ರೀಕರಿಸಲಾಗಿದೆ. ವಿಡಿಯೋದಲ್ಲಿರುವ ಮಗುವಿನ ಹೆಸರು ಸೊಹೈಲ್ ಎಂದಾಗಿದ್ದು, ಆತ ಸ್ಥಳೀಯ ಮದ್ರಾಸದಲ್ಲಿ ಮೂರನೇ ತರಗತಿಯಲ್ಲಿ ಓದುತ್ತಿದ್ದಾನೆ. ಆತನ ತಂದೆಯ ಹೆಸರು ಅಬ್ದುಲ್ ಹಕ್, ಮತ್ತು ತಾಯಿ ರಜಿಯಾ ಖಾತುನ್ ಎಂದಾಗಿದೆ. ಇಬ್ಬರೂ ನೌಖಾಲಿಯ ಚಾರ್ ಅಲಗಿ ಗ್ರಾಮದವರು” ಎಂದು ವಿವರಿಸಿದ್ದಾರೆ.

ಒಟ್ಟಿನಲ್ಲಿ, ಬಾಂಗ್ಲಾದೇಶದ ನೊವಾಖಾಲಿಯಲ್ಲಿ ಪ್ರವಾಹ ಬಂದಾಗ, ಅಲ್ಲಿನ ಸ್ಥಳೀಯ ಸಲಫಿ ಸಂಸ್ಥೆ ತೌಹೀದ್ ಅಕಾಡೆಮಿ ಜನರಿಗೆ ಪರಿಹಾರ ಸಾಮಾಗ್ರಿಗಳನ್ನು ವಿತರಿಸಿತ್ತು. ಈ ವೇಳೆ ಪರಿಹಾರ ಸ್ವೀಕರಿಸಲು ಬಂದ ಸೊಹೈಲ್ ಎಂಬ ಬಾಲಕನ ಕತ್ತಿನಲ್ಲಿ ತಾಯತ ಕಂಡು, ಅದನ್ನು ಮೌಲ್ವಿ ಕತ್ತರಿಸಿ ತೆಗೆದಿದ್ದಾರೆ. ಆ ವಿಡಿಯೋವನ್ನು ಹಿಂದೂ ಬಾಲಕನ ತುಳಸಿ ಮಾಲೆಯನ್ನು ಮುಸ್ಲಿಮರು ಕತ್ತರಿಸಿದ್ದಾರೆ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : FACT CHECK : ತಂದೆ ಇಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 24 ಸಾವಿರ ರೂ. ಸ್ಕಾಲರ್‌ಶಿಪ್…ವೈರಲ್ ಸಂದೇಶದ ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...