Homeಫ್ಯಾಕ್ಟ್‌ಚೆಕ್FACT CHECK : ಹಿಂದೂ ಬಾಲಕನ ತಾಯತವನ್ನು ಮುಸ್ಲಿಮರು ಬಲವಂತದಿಂದ ತೆಗೆದಿದ್ದಾರೆ ಎಂಬುವುದು ಸುಳ್ಳು

FACT CHECK : ಹಿಂದೂ ಬಾಲಕನ ತಾಯತವನ್ನು ಮುಸ್ಲಿಮರು ಬಲವಂತದಿಂದ ತೆಗೆದಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಬಾಂಗ್ಲಾದೇಶದಲ್ಲಿ ಹಿಂದೂ ಬಾಲಕನ ಕತ್ತಿನಿಂದ ‘ತುಳಸಿ ಮಾಲೆ’ ಅಥವಾ ತಾಯತವನ್ನು ಮುಸ್ಲಿಮರು ಬಲವಂತವಾಗಿ ಕಿತ್ತು ಹಾಕಿದ್ದಾರೆ ಎಂದು ಆರೋಪಿಸಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಡಿಯೋದಲ್ಲಿ ಮೊಣಕಾಲು ಮಟ್ಟ ನೀರಿನಲ್ಲಿ ನಿಂತಿರುವ ಬಾಲಕನಿಗೆ ಆಹಾರ ಸಾಮಗ್ರಿ ನೀಡುವ ಮುಸ್ಲಿಂ ವ್ಯಕ್ತಿಯೊಬ್ಬರು, ಆತನ ಕತ್ತಿನಲ್ಲಿರುವ ತಾಯತವನ್ನು ಹಲ್ಲಿನಿಂದ ಕಚ್ಚಿ ಕತ್ತರಿಸಿ ತೆಗೆಯುವ ದೃಶ್ಯವಿದೆ. ವಿಡಿಯೋ ಮೇಲೆ ಬಾಂಗ್ಲಾ ಭಾಷೆಯಲ್ಲಿ “ನೊಖಾಲಿಯಲ್ಲಿ ರಿಲೀಫ್ ಸಾಮಗ್ರಿಗಳ ವಿತರಣೆಯ ಸಮಯದಲ್ಲಿ ಮಗುವಿಗೆ ಶಿರ್ಕ್‌ನಿಂದ ಮುಕ್ತಿ ದೊರೆಯಿತು” ಎಂದು ಬರೆಯಲಾಗಿದೆ.

ಆಗಾಗ ಸುಳ್ಳು ಸುದ್ದಿಗಳನ್ನು ಹಂಚಿಕೊಳ್ಳುವ ಜಿತೇಂದ್ರ ಪ್ರತಾಪ್ ಸಿಂಗ್ (@jpsin1) ಎಂಬ ಎಕ್ಸ್‌ ಬಳಕೆದಾರ ಆಗಸ್ಟ್ 30ರಂದು ವಿಡಿಯೋ ಹಂಚಿಕೊಂಡು “ಬಾಂಗ್ಲಾದೇಶದ ಹೊಸ ಸರ್ಕಾರ ಹಿಂದೂಗಳನ್ನು ಹೇಗೆ ನಾಶ ಮಾಡುತ್ತಿದೆ ಎಂಬುವುದನ್ನು ನೋಡಿ. ನೊಖಾಲಿಯಲ್ಲಿ ಪ್ರವಾಹದಲ್ಲಿ ದಿನಗಟ್ಟಲೆ ಸಿಲುಕಿ ಹಸಿದಿದ್ದ ಹಿಂದೂ ಮಗುವನ್ನು ಜಮಾತ್-ಎ-ಇಸ್ಲಾಮಿಯ ಮೌಲ್ವಿಯೊಬ್ಬರು ಸಹಾಯ ಪಡೆಯುವ ಮೊದಲು ಕಲಿಮಾವನ್ನು ಪಠಿಸುವಂತೆ ಒತ್ತಾಯಿಸಿದರು. ನಂತರ ಮೌಲ್ವಿಯು ಮಗುವಿನ ಹಿಂದೂ ಸಂಕೇತವಾದ ತುಳಸಿ ಮಾಲೆಯನ್ನು ಬಲವಂತವಾಗಿ ತೆಗೆದು ಹಾಕಿದರು. ಅವನು ಇನ್ನು ಮುಂದೆ ಹಿಂದೂ ಅಲ್ಲ ಎಂದು ಮಗುವಿಗೆ ಹೇಳಿದರು. ಮಗು ಮಾಲೆಯನ್ನು ಹಿಂದಕ್ಕೆ ಕೇಳಿದಾಗ, ಅವರು ಇನ್ನು ಮುಂದೆ ಯಾವುದೇ ಪರಿಹಾರ ಸಾಮಗ್ರಿಗಳನ್ನು ಸಿಗುವುದಿಲ್ಲ ಎಂದು ಹೇಳಿದ್ದಾರೆ” ಎಂದು ಬರೆದುಕೊಂಡಿದ್ದರು.

ಬಲಪಂಥೀಯ ಸುದ್ದಿ ವೆಬ್‌ಸೈಟ್ ‘ಓಪ್ಇಂಡಿಯಾ’ ಕೂಡ ವಿಡಿಯೋ ಕುರಿತು ಆಗಸ್ಟ್ 30ರಂದು ವರದಿ ಪ್ರಕಟಿಸಿತ್ತು. ವರದಿಯಲ್ಲಿ ಹಿಂದೂ ಮಗುವಿನಿಂದ ಮೌಲ್ವಿ ತುಳಸಿ ಮಾಲೆಯನ್ನು ತೆಗೆದಿದ್ದಾರೆ ಎಂದು ಆರೋಪಿಸಿತ್ತು. ಬಳಿಕ, ಮಗುವಿನ ಧರ್ಮವನ್ನು ಖಚಿತವಾಗಿ ದೃಢೀಕರಿಸಲು ಸಾಧ್ಯವಿಲ್ಲ ಎಂದು ಸುದ್ದಿಯಲ್ಲಿ ತಿದ್ದುಪಡಿ ಮಾಡಿತ್ತು. ಆದರೆ, ಸುದ್ದಿಯ ಯುಆರ್‌ಎಲ್‌ ಲಿಂಕ್‌ನಲ್ಲಿ ಇನ್ನೂ ಕೂಡ ಹಿಂದೂ ಮಗು ಎಂದೇ ಇದೆ.

ಬಲಪಂಥೀಯ ಎಕ್ಸ್‌ ಬಳಕೆದಾರ ರೌಶನ್ ಸಿನ್ಹಾ ಅಥವಾ ಮಿ. ಸಿನ್ಹಾ  ಆಗಸ್ಟ್ 30ರಂದು ವಿಡಿಯೋ ಹಂಚಿಕೊಂಡು ” ಬಾಂಗ್ಲಾದೇಶದಲ್ಲಿ ಇಸ್ಲಾಮಿಸ್ಟ್‌ಗಳು ಪರಿಹಾರ ಸಾಮಾಗ್ರಿ ನೀಡಲು ಹಿಂದೂ ಮಕ್ಕಳ ಕುತ್ತಿಗೆಯಿಂದ ಧಾರ್ಮಿಕ ದಾರವನ್ನು ತೆಗೆದಿದ್ದಾರೆ. ಭಾರತದಲ್ಲಿ ಯಾವುದಾದರೂ ಸಹಾಯಕ್ಕೆ ಬದಲಾಗಿ ಯಾವುದೇ ಹಿಂದೂ ಸ್ವಾಮಿ ಮುಸ್ಲಿಂ ವ್ಯಕ್ತಿಗೆ ಇದೇ ರೀತಿ ಮಾಡಿದರೆ ಏನಾಗುತ್ತಿತ್ತು ಊಹಿಸಿ” ಎಂದು ಬರೆದಕೊಂಡಿದ್ದರು.

ಮತ್ತೊಂದು ಬಲಪಂಥೀಯ ಎಕ್ಸ್‌ ಖಾತೆ ಫ್ರಂಟಲ್ ಫೋರ್ಸ್ (@FrontalForce) ಕೂಡ ಮಿ. ಸಿನ್ಹಾನಂತೆ ಬರೆದುಕೊಂಡು ಆಗಸ್ಟ್ 30ರಂದು ವಿಡಿಯೋ ಹಂಚಿಕೊಂಡಿತ್ತು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ಆ ಕುರಿತು ಮಾಹಿತಿ ಹುಡುಕಿದ್ದೇವೆ. ಈ ವೇಳೆ ಖ್ಯಾತ ಫ್ಯಾಕ್ಟ್‌ಚೆಕ್ ಸಂಸ್ಥೆ ಆಲ್ಟ್‌ ನ್ಯೂಸ್ ವಿಡಿಯೋ ಕುರಿತು ಸುದ್ದಿ ಮಾಡಿರುವುದು ಕಂಡು ಬಂದಿದೆ.

ಆಲ್ಟ್ ನ್ಯೂಸ್ ಸುದ್ದಿಯಲ್ಲಿ “ನಾವು ಬಾಂಗ್ಲಾದೇಶದ ಫ್ಯಾಕ್ಟ್‌ಚೆಕ್ಕರ್ ಸೊಹಾನುರ್ಹ್ಮಾನ್ ಅವರೊಂದಿಗೆ ಮಾತನಾಡಿದ್ದೇವೆ. ಅವರು ವಿಡಿಯೋದಲ್ಲಿರುವ ಬಾಲಕ ಹಿಂದೂ ಧರ್ಮವದನಲ್ಲ, ಮುಸ್ಲಿಂ. ಅಲ್ಲದೆ, ಆತನ ಕತ್ತಿನಿಂದ ತುಳಸಿ ಮಾಲೆಯನ್ನಲ್ಲ ತೆಗೆದಿರುವುದು. ಅದು ತಲಿಸ್ಮನ್ (ಮುಸ್ಲಿಮರು ಧರಿಸುವ ತಾಯತ) ಎಂದು ಹೇಳಿದ್ದಾರೆ ಎಂದು ತಿಳಿಸಲಾಗಿದೆ.

ನಾವು ಸೊಹಾನುರ್ಹ್ಮಾನ್ ಅವರ ಎಕ್ಸ್‌ ಖಾತೆಯನ್ನು ಪರಿಶೀಲಿಸಿದಾಗ, ಆಗಸ್ಟ್ 30ರಂದು ಅವರು ವಿಡಿಯೋ ಕುರಿತು ಸ್ಪಷ್ಟನೆ ಕೊಟ್ಟಿರುವುದು ಕಂಡು ಬಂದಿದೆ.

ಸೊಹಾನುರ್ಹ್ಮಾನ್ ಹೇಳಿರುವಂತೆ “ವೈರಲ್ ವಿಡಿಯೋವನ್ನು ಆಗಸ್ಟ್ 26ರಂದ ರಸೇಲ್ ಖಾನ್ ಎಂಬವರು ಮೊದಲು ಫೇಸ್‌ಬುಕ್‌ನಲ್ಲಿ ಅಪ್ಲೋಡ್ ಮಾಡಿದ್ದರು. ವಿಡಿಯೋದಲ್ಲಿ ಘಟನೆ ನಡೆದಿರುವುದು ನೊಖಾಲಿ  ಪ್ರದೇಶದಲ್ಲಿ ಎಂದಿದೆ. ಆ ಪ್ರದೇಶದಲ್ಲಿ ಚಂದ್‌ಪುರದ ‘ತೌಹಿದ್ ಅಕಾಡೆಮಿ ಮತ್ತು ಇಸ್ಲಾಮಿಕ್ ಸೆಂಟರ್’ ಎಂಬ ಹೆಸರಿನ ಸಲಫಿ ಇಸ್ಲಾಮಿಕ್ ಶಾಲೆಯು ಜನರಿಗೆ ಪರಿಹಾರ ಸಾಮಾಗ್ರಿಗಳನ್ನು ವಿತರಿಸಿತ್ತು. ಸಲಫಿ/ಅಹ್ಲೆ ಹದೀಸ್ ಅನುಯಾಯಿಗಳು ತವೀಜ್ (ತಾಯತ) ಧರಿಸುವುದನ್ನು ವಿರೋಧಿಸುತ್ತಾರೆ. ಸಲಫಿಗಳು ಅನೇಕ ಕಡೆಗಳಲ್ಲಿ ಜನರ ಕತ್ತಿನಿಂದ ತಾಯತ ಕತ್ತರಿಸಿದ ವಿಡಿಯೋಗಳು ಲಭ್ಯವಿದೆ”

“ಹಿಂದೂ ಬಾಲಕನ ತಾಯತ ಕತ್ತರಿಸಿ ಆತನನ್ನು ಶಿರ್ಕ್‌ನಿಂದ ಹೊರತರಲು ಸಾಧ್ಯವಿಲ್ಲ. ಈ ಶಿರ್ಕ್‌ ಅನ್ನುವುದು ಅಲ್ಲಾಹನನ್ನು ಆರಾಧಿಸುವ ಮುಸ್ಲಿಮರಿಗೆ ಸಂಬಂಧಿಸಿದ್ದಾಗಿದೆ. ಇಸ್ಲಾಮಿನಲ್ಲಿ ಬಹು ದೈವಾರಾಧನೆ ಶಿರ್ಕ್‌ ಎಂದು ಪರಿಗಣಿಸಲಾಗುತ್ತದೆ. ಸಲಫಿಗಳು ತಾಯತ ಧರಿಸುವುದನ್ನೂ ಬಹು ದೈವಾರಾಧನೆ ಎಂದು ಹೇಳುತ್ತಾರೆ. ಹಾಗಾಗಿ, ಮುಸ್ಲಿಂ ಬಾಲಕನ ಕತ್ತಿನಿಂದ ತಾಯತ ತೆಗೆದಿದ್ದಾರೆ” ಎಂದು ಸೊಹಾನುರ್ಹ್ಮಾನ್ ವಿವರಿಸಿದ್ದಾರೆ.

ವೈರಲ್ ವಿಡಿಯೋದಲ್ಲಿರುವ ಮೌಲ್ವಿಯ ಹೆಸರು ಅಬ್ದುಲ್ ಮಲೆಕ್ ಮಿಯಾಜಿ. ತೌಹೀದ್ ಅಕಾಡೆಮಿ ಮತ್ತು ಇಸ್ಲಾಮಿಕ್ ಸೆಂಟರ್ ನಿರ್ವಹಿಸುತ್ತಿರುವ ಜಾಮಿಯಾ ದಾರುತೌಹೀದ್‌ನ ಸಹಾಯಕ ಪ್ರಾಂಶುಪಾಲರಾಗಿದ್ದಾರೆ. ಅವರೊಂದಿಗೆ ಸೊಹಾನುರ್ಹ್ಮಾನ್ ಮಾತನಾಡಿದ್ದು,” ವಿಡಿಯೋದಲ್ಲಿ ಬಾಲಕನ ಕತ್ತಿನಿಂದ ತಾಯತ ಕತ್ತರಿಸಿದ್ದು ನಾನೆ. ನೊವಾಖಾಲಿಯಲ್ಲಿ ಪರಿಹಾರ ಸಾಮಾಗ್ರಿಗಳನ್ನು ವಿತರಿಸುತ್ತಿದ್ದಾಗ ಆ ವಿಡಿಯೋ ಚಿತ್ರೀಕರಿಸಲಾಗಿದೆ. ವಿಡಿಯೋದಲ್ಲಿರುವ ಮಗುವಿನ ಹೆಸರು ಸೊಹೈಲ್ ಎಂದಾಗಿದ್ದು, ಆತ ಸ್ಥಳೀಯ ಮದ್ರಾಸದಲ್ಲಿ ಮೂರನೇ ತರಗತಿಯಲ್ಲಿ ಓದುತ್ತಿದ್ದಾನೆ. ಆತನ ತಂದೆಯ ಹೆಸರು ಅಬ್ದುಲ್ ಹಕ್, ಮತ್ತು ತಾಯಿ ರಜಿಯಾ ಖಾತುನ್ ಎಂದಾಗಿದೆ. ಇಬ್ಬರೂ ನೌಖಾಲಿಯ ಚಾರ್ ಅಲಗಿ ಗ್ರಾಮದವರು” ಎಂದು ವಿವರಿಸಿದ್ದಾರೆ.

ಒಟ್ಟಿನಲ್ಲಿ, ಬಾಂಗ್ಲಾದೇಶದ ನೊವಾಖಾಲಿಯಲ್ಲಿ ಪ್ರವಾಹ ಬಂದಾಗ, ಅಲ್ಲಿನ ಸ್ಥಳೀಯ ಸಲಫಿ ಸಂಸ್ಥೆ ತೌಹೀದ್ ಅಕಾಡೆಮಿ ಜನರಿಗೆ ಪರಿಹಾರ ಸಾಮಾಗ್ರಿಗಳನ್ನು ವಿತರಿಸಿತ್ತು. ಈ ವೇಳೆ ಪರಿಹಾರ ಸ್ವೀಕರಿಸಲು ಬಂದ ಸೊಹೈಲ್ ಎಂಬ ಬಾಲಕನ ಕತ್ತಿನಲ್ಲಿ ತಾಯತ ಕಂಡು, ಅದನ್ನು ಮೌಲ್ವಿ ಕತ್ತರಿಸಿ ತೆಗೆದಿದ್ದಾರೆ. ಆ ವಿಡಿಯೋವನ್ನು ಹಿಂದೂ ಬಾಲಕನ ತುಳಸಿ ಮಾಲೆಯನ್ನು ಮುಸ್ಲಿಮರು ಕತ್ತರಿಸಿದ್ದಾರೆ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : FACT CHECK : ತಂದೆ ಇಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 24 ಸಾವಿರ ರೂ. ಸ್ಕಾಲರ್‌ಶಿಪ್…ವೈರಲ್ ಸಂದೇಶದ ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...