Homeಫ್ಯಾಕ್ಟ್‌ಚೆಕ್FACT CHECK : ಹಿಂದೂ ಬಾಲಕನ ತಾಯತವನ್ನು ಮುಸ್ಲಿಮರು ಬಲವಂತದಿಂದ ತೆಗೆದಿದ್ದಾರೆ ಎಂಬುವುದು ಸುಳ್ಳು

FACT CHECK : ಹಿಂದೂ ಬಾಲಕನ ತಾಯತವನ್ನು ಮುಸ್ಲಿಮರು ಬಲವಂತದಿಂದ ತೆಗೆದಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಬಾಂಗ್ಲಾದೇಶದಲ್ಲಿ ಹಿಂದೂ ಬಾಲಕನ ಕತ್ತಿನಿಂದ ‘ತುಳಸಿ ಮಾಲೆ’ ಅಥವಾ ತಾಯತವನ್ನು ಮುಸ್ಲಿಮರು ಬಲವಂತವಾಗಿ ಕಿತ್ತು ಹಾಕಿದ್ದಾರೆ ಎಂದು ಆರೋಪಿಸಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಡಿಯೋದಲ್ಲಿ ಮೊಣಕಾಲು ಮಟ್ಟ ನೀರಿನಲ್ಲಿ ನಿಂತಿರುವ ಬಾಲಕನಿಗೆ ಆಹಾರ ಸಾಮಗ್ರಿ ನೀಡುವ ಮುಸ್ಲಿಂ ವ್ಯಕ್ತಿಯೊಬ್ಬರು, ಆತನ ಕತ್ತಿನಲ್ಲಿರುವ ತಾಯತವನ್ನು ಹಲ್ಲಿನಿಂದ ಕಚ್ಚಿ ಕತ್ತರಿಸಿ ತೆಗೆಯುವ ದೃಶ್ಯವಿದೆ. ವಿಡಿಯೋ ಮೇಲೆ ಬಾಂಗ್ಲಾ ಭಾಷೆಯಲ್ಲಿ “ನೊಖಾಲಿಯಲ್ಲಿ ರಿಲೀಫ್ ಸಾಮಗ್ರಿಗಳ ವಿತರಣೆಯ ಸಮಯದಲ್ಲಿ ಮಗುವಿಗೆ ಶಿರ್ಕ್‌ನಿಂದ ಮುಕ್ತಿ ದೊರೆಯಿತು” ಎಂದು ಬರೆಯಲಾಗಿದೆ.

ಆಗಾಗ ಸುಳ್ಳು ಸುದ್ದಿಗಳನ್ನು ಹಂಚಿಕೊಳ್ಳುವ ಜಿತೇಂದ್ರ ಪ್ರತಾಪ್ ಸಿಂಗ್ (@jpsin1) ಎಂಬ ಎಕ್ಸ್‌ ಬಳಕೆದಾರ ಆಗಸ್ಟ್ 30ರಂದು ವಿಡಿಯೋ ಹಂಚಿಕೊಂಡು “ಬಾಂಗ್ಲಾದೇಶದ ಹೊಸ ಸರ್ಕಾರ ಹಿಂದೂಗಳನ್ನು ಹೇಗೆ ನಾಶ ಮಾಡುತ್ತಿದೆ ಎಂಬುವುದನ್ನು ನೋಡಿ. ನೊಖಾಲಿಯಲ್ಲಿ ಪ್ರವಾಹದಲ್ಲಿ ದಿನಗಟ್ಟಲೆ ಸಿಲುಕಿ ಹಸಿದಿದ್ದ ಹಿಂದೂ ಮಗುವನ್ನು ಜಮಾತ್-ಎ-ಇಸ್ಲಾಮಿಯ ಮೌಲ್ವಿಯೊಬ್ಬರು ಸಹಾಯ ಪಡೆಯುವ ಮೊದಲು ಕಲಿಮಾವನ್ನು ಪಠಿಸುವಂತೆ ಒತ್ತಾಯಿಸಿದರು. ನಂತರ ಮೌಲ್ವಿಯು ಮಗುವಿನ ಹಿಂದೂ ಸಂಕೇತವಾದ ತುಳಸಿ ಮಾಲೆಯನ್ನು ಬಲವಂತವಾಗಿ ತೆಗೆದು ಹಾಕಿದರು. ಅವನು ಇನ್ನು ಮುಂದೆ ಹಿಂದೂ ಅಲ್ಲ ಎಂದು ಮಗುವಿಗೆ ಹೇಳಿದರು. ಮಗು ಮಾಲೆಯನ್ನು ಹಿಂದಕ್ಕೆ ಕೇಳಿದಾಗ, ಅವರು ಇನ್ನು ಮುಂದೆ ಯಾವುದೇ ಪರಿಹಾರ ಸಾಮಗ್ರಿಗಳನ್ನು ಸಿಗುವುದಿಲ್ಲ ಎಂದು ಹೇಳಿದ್ದಾರೆ” ಎಂದು ಬರೆದುಕೊಂಡಿದ್ದರು.

ಬಲಪಂಥೀಯ ಸುದ್ದಿ ವೆಬ್‌ಸೈಟ್ ‘ಓಪ್ಇಂಡಿಯಾ’ ಕೂಡ ವಿಡಿಯೋ ಕುರಿತು ಆಗಸ್ಟ್ 30ರಂದು ವರದಿ ಪ್ರಕಟಿಸಿತ್ತು. ವರದಿಯಲ್ಲಿ ಹಿಂದೂ ಮಗುವಿನಿಂದ ಮೌಲ್ವಿ ತುಳಸಿ ಮಾಲೆಯನ್ನು ತೆಗೆದಿದ್ದಾರೆ ಎಂದು ಆರೋಪಿಸಿತ್ತು. ಬಳಿಕ, ಮಗುವಿನ ಧರ್ಮವನ್ನು ಖಚಿತವಾಗಿ ದೃಢೀಕರಿಸಲು ಸಾಧ್ಯವಿಲ್ಲ ಎಂದು ಸುದ್ದಿಯಲ್ಲಿ ತಿದ್ದುಪಡಿ ಮಾಡಿತ್ತು. ಆದರೆ, ಸುದ್ದಿಯ ಯುಆರ್‌ಎಲ್‌ ಲಿಂಕ್‌ನಲ್ಲಿ ಇನ್ನೂ ಕೂಡ ಹಿಂದೂ ಮಗು ಎಂದೇ ಇದೆ.

ಬಲಪಂಥೀಯ ಎಕ್ಸ್‌ ಬಳಕೆದಾರ ರೌಶನ್ ಸಿನ್ಹಾ ಅಥವಾ ಮಿ. ಸಿನ್ಹಾ  ಆಗಸ್ಟ್ 30ರಂದು ವಿಡಿಯೋ ಹಂಚಿಕೊಂಡು ” ಬಾಂಗ್ಲಾದೇಶದಲ್ಲಿ ಇಸ್ಲಾಮಿಸ್ಟ್‌ಗಳು ಪರಿಹಾರ ಸಾಮಾಗ್ರಿ ನೀಡಲು ಹಿಂದೂ ಮಕ್ಕಳ ಕುತ್ತಿಗೆಯಿಂದ ಧಾರ್ಮಿಕ ದಾರವನ್ನು ತೆಗೆದಿದ್ದಾರೆ. ಭಾರತದಲ್ಲಿ ಯಾವುದಾದರೂ ಸಹಾಯಕ್ಕೆ ಬದಲಾಗಿ ಯಾವುದೇ ಹಿಂದೂ ಸ್ವಾಮಿ ಮುಸ್ಲಿಂ ವ್ಯಕ್ತಿಗೆ ಇದೇ ರೀತಿ ಮಾಡಿದರೆ ಏನಾಗುತ್ತಿತ್ತು ಊಹಿಸಿ” ಎಂದು ಬರೆದಕೊಂಡಿದ್ದರು.

ಮತ್ತೊಂದು ಬಲಪಂಥೀಯ ಎಕ್ಸ್‌ ಖಾತೆ ಫ್ರಂಟಲ್ ಫೋರ್ಸ್ (@FrontalForce) ಕೂಡ ಮಿ. ಸಿನ್ಹಾನಂತೆ ಬರೆದುಕೊಂಡು ಆಗಸ್ಟ್ 30ರಂದು ವಿಡಿಯೋ ಹಂಚಿಕೊಂಡಿತ್ತು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ಆ ಕುರಿತು ಮಾಹಿತಿ ಹುಡುಕಿದ್ದೇವೆ. ಈ ವೇಳೆ ಖ್ಯಾತ ಫ್ಯಾಕ್ಟ್‌ಚೆಕ್ ಸಂಸ್ಥೆ ಆಲ್ಟ್‌ ನ್ಯೂಸ್ ವಿಡಿಯೋ ಕುರಿತು ಸುದ್ದಿ ಮಾಡಿರುವುದು ಕಂಡು ಬಂದಿದೆ.

ಆಲ್ಟ್ ನ್ಯೂಸ್ ಸುದ್ದಿಯಲ್ಲಿ “ನಾವು ಬಾಂಗ್ಲಾದೇಶದ ಫ್ಯಾಕ್ಟ್‌ಚೆಕ್ಕರ್ ಸೊಹಾನುರ್ಹ್ಮಾನ್ ಅವರೊಂದಿಗೆ ಮಾತನಾಡಿದ್ದೇವೆ. ಅವರು ವಿಡಿಯೋದಲ್ಲಿರುವ ಬಾಲಕ ಹಿಂದೂ ಧರ್ಮವದನಲ್ಲ, ಮುಸ್ಲಿಂ. ಅಲ್ಲದೆ, ಆತನ ಕತ್ತಿನಿಂದ ತುಳಸಿ ಮಾಲೆಯನ್ನಲ್ಲ ತೆಗೆದಿರುವುದು. ಅದು ತಲಿಸ್ಮನ್ (ಮುಸ್ಲಿಮರು ಧರಿಸುವ ತಾಯತ) ಎಂದು ಹೇಳಿದ್ದಾರೆ ಎಂದು ತಿಳಿಸಲಾಗಿದೆ.

ನಾವು ಸೊಹಾನುರ್ಹ್ಮಾನ್ ಅವರ ಎಕ್ಸ್‌ ಖಾತೆಯನ್ನು ಪರಿಶೀಲಿಸಿದಾಗ, ಆಗಸ್ಟ್ 30ರಂದು ಅವರು ವಿಡಿಯೋ ಕುರಿತು ಸ್ಪಷ್ಟನೆ ಕೊಟ್ಟಿರುವುದು ಕಂಡು ಬಂದಿದೆ.

ಸೊಹಾನುರ್ಹ್ಮಾನ್ ಹೇಳಿರುವಂತೆ “ವೈರಲ್ ವಿಡಿಯೋವನ್ನು ಆಗಸ್ಟ್ 26ರಂದ ರಸೇಲ್ ಖಾನ್ ಎಂಬವರು ಮೊದಲು ಫೇಸ್‌ಬುಕ್‌ನಲ್ಲಿ ಅಪ್ಲೋಡ್ ಮಾಡಿದ್ದರು. ವಿಡಿಯೋದಲ್ಲಿ ಘಟನೆ ನಡೆದಿರುವುದು ನೊಖಾಲಿ  ಪ್ರದೇಶದಲ್ಲಿ ಎಂದಿದೆ. ಆ ಪ್ರದೇಶದಲ್ಲಿ ಚಂದ್‌ಪುರದ ‘ತೌಹಿದ್ ಅಕಾಡೆಮಿ ಮತ್ತು ಇಸ್ಲಾಮಿಕ್ ಸೆಂಟರ್’ ಎಂಬ ಹೆಸರಿನ ಸಲಫಿ ಇಸ್ಲಾಮಿಕ್ ಶಾಲೆಯು ಜನರಿಗೆ ಪರಿಹಾರ ಸಾಮಾಗ್ರಿಗಳನ್ನು ವಿತರಿಸಿತ್ತು. ಸಲಫಿ/ಅಹ್ಲೆ ಹದೀಸ್ ಅನುಯಾಯಿಗಳು ತವೀಜ್ (ತಾಯತ) ಧರಿಸುವುದನ್ನು ವಿರೋಧಿಸುತ್ತಾರೆ. ಸಲಫಿಗಳು ಅನೇಕ ಕಡೆಗಳಲ್ಲಿ ಜನರ ಕತ್ತಿನಿಂದ ತಾಯತ ಕತ್ತರಿಸಿದ ವಿಡಿಯೋಗಳು ಲಭ್ಯವಿದೆ”

“ಹಿಂದೂ ಬಾಲಕನ ತಾಯತ ಕತ್ತರಿಸಿ ಆತನನ್ನು ಶಿರ್ಕ್‌ನಿಂದ ಹೊರತರಲು ಸಾಧ್ಯವಿಲ್ಲ. ಈ ಶಿರ್ಕ್‌ ಅನ್ನುವುದು ಅಲ್ಲಾಹನನ್ನು ಆರಾಧಿಸುವ ಮುಸ್ಲಿಮರಿಗೆ ಸಂಬಂಧಿಸಿದ್ದಾಗಿದೆ. ಇಸ್ಲಾಮಿನಲ್ಲಿ ಬಹು ದೈವಾರಾಧನೆ ಶಿರ್ಕ್‌ ಎಂದು ಪರಿಗಣಿಸಲಾಗುತ್ತದೆ. ಸಲಫಿಗಳು ತಾಯತ ಧರಿಸುವುದನ್ನೂ ಬಹು ದೈವಾರಾಧನೆ ಎಂದು ಹೇಳುತ್ತಾರೆ. ಹಾಗಾಗಿ, ಮುಸ್ಲಿಂ ಬಾಲಕನ ಕತ್ತಿನಿಂದ ತಾಯತ ತೆಗೆದಿದ್ದಾರೆ” ಎಂದು ಸೊಹಾನುರ್ಹ್ಮಾನ್ ವಿವರಿಸಿದ್ದಾರೆ.

ವೈರಲ್ ವಿಡಿಯೋದಲ್ಲಿರುವ ಮೌಲ್ವಿಯ ಹೆಸರು ಅಬ್ದುಲ್ ಮಲೆಕ್ ಮಿಯಾಜಿ. ತೌಹೀದ್ ಅಕಾಡೆಮಿ ಮತ್ತು ಇಸ್ಲಾಮಿಕ್ ಸೆಂಟರ್ ನಿರ್ವಹಿಸುತ್ತಿರುವ ಜಾಮಿಯಾ ದಾರುತೌಹೀದ್‌ನ ಸಹಾಯಕ ಪ್ರಾಂಶುಪಾಲರಾಗಿದ್ದಾರೆ. ಅವರೊಂದಿಗೆ ಸೊಹಾನುರ್ಹ್ಮಾನ್ ಮಾತನಾಡಿದ್ದು,” ವಿಡಿಯೋದಲ್ಲಿ ಬಾಲಕನ ಕತ್ತಿನಿಂದ ತಾಯತ ಕತ್ತರಿಸಿದ್ದು ನಾನೆ. ನೊವಾಖಾಲಿಯಲ್ಲಿ ಪರಿಹಾರ ಸಾಮಾಗ್ರಿಗಳನ್ನು ವಿತರಿಸುತ್ತಿದ್ದಾಗ ಆ ವಿಡಿಯೋ ಚಿತ್ರೀಕರಿಸಲಾಗಿದೆ. ವಿಡಿಯೋದಲ್ಲಿರುವ ಮಗುವಿನ ಹೆಸರು ಸೊಹೈಲ್ ಎಂದಾಗಿದ್ದು, ಆತ ಸ್ಥಳೀಯ ಮದ್ರಾಸದಲ್ಲಿ ಮೂರನೇ ತರಗತಿಯಲ್ಲಿ ಓದುತ್ತಿದ್ದಾನೆ. ಆತನ ತಂದೆಯ ಹೆಸರು ಅಬ್ದುಲ್ ಹಕ್, ಮತ್ತು ತಾಯಿ ರಜಿಯಾ ಖಾತುನ್ ಎಂದಾಗಿದೆ. ಇಬ್ಬರೂ ನೌಖಾಲಿಯ ಚಾರ್ ಅಲಗಿ ಗ್ರಾಮದವರು” ಎಂದು ವಿವರಿಸಿದ್ದಾರೆ.

ಒಟ್ಟಿನಲ್ಲಿ, ಬಾಂಗ್ಲಾದೇಶದ ನೊವಾಖಾಲಿಯಲ್ಲಿ ಪ್ರವಾಹ ಬಂದಾಗ, ಅಲ್ಲಿನ ಸ್ಥಳೀಯ ಸಲಫಿ ಸಂಸ್ಥೆ ತೌಹೀದ್ ಅಕಾಡೆಮಿ ಜನರಿಗೆ ಪರಿಹಾರ ಸಾಮಾಗ್ರಿಗಳನ್ನು ವಿತರಿಸಿತ್ತು. ಈ ವೇಳೆ ಪರಿಹಾರ ಸ್ವೀಕರಿಸಲು ಬಂದ ಸೊಹೈಲ್ ಎಂಬ ಬಾಲಕನ ಕತ್ತಿನಲ್ಲಿ ತಾಯತ ಕಂಡು, ಅದನ್ನು ಮೌಲ್ವಿ ಕತ್ತರಿಸಿ ತೆಗೆದಿದ್ದಾರೆ. ಆ ವಿಡಿಯೋವನ್ನು ಹಿಂದೂ ಬಾಲಕನ ತುಳಸಿ ಮಾಲೆಯನ್ನು ಮುಸ್ಲಿಮರು ಕತ್ತರಿಸಿದ್ದಾರೆ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : FACT CHECK : ತಂದೆ ಇಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 24 ಸಾವಿರ ರೂ. ಸ್ಕಾಲರ್‌ಶಿಪ್…ವೈರಲ್ ಸಂದೇಶದ ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...