Homeಫ್ಯಾಕ್ಟ್‌ಚೆಕ್FACT CHECK : ಕರ್ನಾಟಕದಲ್ಲಿ ಮುಸ್ಲಿಮರು ರಸ್ತೆ ಮಧ್ಯೆ ಗೋಹತ್ಯೆ ಮಾಡಿದ್ದಾರೆ ಎಂಬುವುದು ಸುಳ್ಳು

FACT CHECK : ಕರ್ನಾಟಕದಲ್ಲಿ ಮುಸ್ಲಿಮರು ರಸ್ತೆ ಮಧ್ಯೆ ಗೋಹತ್ಯೆ ಮಾಡಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

“ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯದವರು ರಸ್ತೆ ಮಧ್ಯೆಯೇ ಬಹಿರಂಗವಾಗಿ ಗೋಹತ್ಯೆ ಮಾಡಿದ್ದಾರೆ” ಎಂದು ಎಕ್ಸ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ. ವಿಡಿಯೋದಲ್ಲಿ ಜೀಪ್‌ ಒಂದರ ಮುಂಭಾಗದಲ್ಲಿ ಹಸುವಿನ ಕಳೇಬರ ಕಟ್ಟಿದಂತೆ ಕಾಣುತ್ತಿದೆ.

ಫ್ಯಾಕ್ಟ್‌ಚೆಕ್ : ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಅದಕ್ಕೂ ಮುನ್ನ ವಿಡಿಯೋವನ್ನು ಸರಿಯಾಗಿ ಗಮನಿಸಿದ್ದೇವೆ. ಈ ವೇಳೆ ಜೀಪ್ ಮುಂಭಾಗ ಫಾರೆಸ್ಟ್‌ ಎಂದು ಬರೆದಿರುವುದು ಮತ್ತು ಹಸುವಿನ ಕಳೇಬರದ ಮೇಲೆ ಶ್ರದ್ದಾಂಜಲಿ ಅರ್ಪಿಸಿದಂತೆ ಹೂವು ಹಾಕಿರುವುದು ಮತ್ತು ಜೀಪ್‌ ಹಿಂಭಾಗದ ಕಟ್ಟಡದ ಮೇಲೆ ಮಳಯಾಲಂ ಭಾಷೆಯಲ್ಲಿ ಬೋರ್ಡ್ ಹಾಕಿರುವುದು ನಾವು ನೋಡಿದ್ದೇವೆ.

ಈ ಅಂಶಗಳ ಆಧಾರದಲ್ಲಿ ಗೂಗಲ್‌ನಲ್ಲಿ ಮಾಹಿತಿ ಹುಡುಕಿದಾಗ 17 ಫೆಬ್ರವರಿ 2024ರಂದು ಆಂಗ್ಲ ಭಾಷೆಯ ಫ್ರೀ ಪ್ರೆಸ್ ಜರ್ನಲ್ ಪ್ರಕಟಿಸಿದ್ದ ಸುದ್ದಿಯೊಂದು ದೊರೆತಿದೆ. “Video: Angry Mob Ties Dead Cow Over Forest Department Jeep In Protest Against Wild Animal Attacks In Kerala’s Wayanad” ಎಂಬ ಶೀರ್ಷಿಕೆಯ ಸುದ್ದಿಯಲ್ಲಿ, ‘ಕೇರಳದ ವಯನಾಡಿನಲ್ಲಿ ಮಾನವ-ಪ್ರಾಣಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ನೀಡುವಂತೆ ಆಗ್ರಹಿಸಿ ಆಡಳಿತಾರೂಢ ಎಲ್‌ಡಿಎಫ್, ಪ್ರತಿಪಕ್ಷ ಯುಡಿಎಫ್ ಮತ್ತು ಬಿಜೆಪಿ ಜಿಲ್ಲಾದ್ಯಂತ ಕರೆ ನೀಡಿರುವ ಹರತಾಳ ಶನಿವಾರ ಪುಲ್ಪಲ್ಲಿಯಲ್ಲಿ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ಅರಣ್ಯ ಇಲಾಖೆಯ ವಾಹನಕ್ಕೆ ಹಾನಿ ಮಾಡಿ, ಹುಲಿ ದಾಳಿಯಿಂದ ಮೃತಪಟ್ಟಿದೆ ಎನ್ನಲಾದ ಹಸುವಿನ ಕಳೇಬರವನ್ನು ಅದಕ್ಕೆ ಕಟ್ಟಿದ್ದಾರೆ’ ಎಂದು ಹೇಳಲಾಗಿದೆ.

ಫೆಬ್ರವರಿ 17,2024ರಂದು ಆನ್‌ ಮನೋರಮಾ ಈ ಕುರಿತು ವರದಿ ಪ್ರಕಟಿಸಿತ್ತು, ವರದಿಯಲ್ಲಿ “ಪ್ರತಿಭಟನಾಕಾರರು ಅರಣ್ಯ ಇಲಾಖೆ ವಾಹನದ ಮೇಲೆ ದಾಳಿ ನಡೆಸಿದ್ದು, ಅದರ ಚಕ್ರದ ಗಾಳಿಯನ್ನು ತೆಗೆದು ಟಾಪ್‌ ಹರಿದಿದ್ದಾರೆ. ಹುಲಿ ದಾಳಿಗೆ ಬಲಿಯಾದ ಹಸುವಿನ ಕಳೇಬರವನ್ನು ಜೀಪಿನ ಬಾನೆಟ್‌ ಮೇಲೆ ಕಟ್ಟಿದ್ದರು. ಈ ಘಟನೆಯಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಸಂಘರ್ಷ ಉಂಟಾದ ಕಾರಣ ಪೋಲಿಸರು ಎರಡು ಬಾರಿ ಲಾಠಿ ಚಾರ್ಜ್ ನಡೆಸಿದ್ದು, ಉದ್ರಿಕ್ತರ ಗುಂಪು ಅಂಗಡಿಗಳ ಮೇಲೆ ದಾಳಿ ನಡೆಸಿದೆ. ಪುಲ್ಪಲ್ಲಿ ನಗರದಲ್ಲಿ ಅಧಿಕಾರಿಗಳ ಮೇಲೆ ಹಲ್ಲೆಗೆ ಮುಂದಾಗಿದೆ” ಎಂದು ಹೇಳಲಾಗಿದೆ.

ಫೆಬ್ರವರಿ 18,2024ರಂದು ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‘ Wayanad human-wildlife conflict: Anger boils over as protests spill onto streets in Pulpally ಎಂಬ ಶೀರ್ಷಿಕೆಯಲ್ಲಿ ಪ್ರಕಟಿಸಿದ “ಶುಕ್ರವಾರ ಕಾಡಾನೆ ದಾಳಿಯಲ್ಲಿ ಅರಣ್ಯ ಇಲಾಖೆ ವೀಕ್ಷಕ ವಿ ಪಿ ಪೌಲ್ ಸಾವನ್ನಪ್ಪಿದ್ದನ್ನು ಖಂಡಿಸಿ ರಾಜಕೀಯ ಬೇಧವಿಲ್ಲದೆ ನೂರಾರು ಜನರು ಶನಿವಾರ ಪುಲ್ಪಲ್ಲಿಯಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಆಕ್ರೋಶಗೊಂಡ ಗುಂಪೊಂದು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ದೃಶ್ಯಗಳಿಗೆ ಪುಲ್ಪಲ್ಲಿ ಪಟ್ಟಣ ಸಾಕ್ಷಿಯಾಯಿತು. ಜನಸಂದಣಿಯು ಅರಣ್ಯ ಇಲಾಖೆಯ ಜೀಪ್ ಅನ್ನು ಅಡ್ಡಗಟ್ಟಿ ಹಾನಿಗೊಳಿಸಿದಾಗ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಯಿತು. ಮೂಡನಕೊಲ್ಲಿಯಲ್ಲಿ ಹುಲಿ ದಾಳಿಯಿಂದ ಹತ್ಯೆಯಾದ ಹಸುವಿನ ಕಳೇಬರವನ್ನು ತಂದು ಜೀಪಿನ ಬಾನೆಟ್ ಮೇಲೆ ಕಟ್ಟಿದ್ದರು ಎಂದಿದೆ.

ನಾವು ನಡೆಸಿದ ಪರಿಶೀಲನೆಯಲ್ಲಿ, ‘ಕೇರಳದ ವಯನಾಡಿನಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ವಿವಿಧ ರಾಜಕೀಯ ಪಕ್ಷಗಳ ನೇತೃತ್ವದಲ್ಲಿ ಸಾರ್ವಜನಿಕರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ವೇಳೆ ಹುಲಿ ದಾಳಿಯಿಂದ ಸಾವನ್ನಪ್ಪಿದ್ದ ಹಸುವಿನ ಕಳೇಬರವನ್ನು ಅರಣ್ಯ ಇಲಾಖೆಯ ಜೀಪಿನ ಬಾನೆಟ್‌ಗೆ ಕಟ್ಟಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ, ಇದು ಕರ್ನಾಟಕದಲ್ಲಿ ಮುಸ್ಲಿಮರು ರಸ್ತೆ ಮಧ್ಯೆ ಗೋಹತ್ಯೆ ನಡೆಸಿದ ವಿಡಿಯೋ ಅಲ್ಲ.

ಇದನ್ನೂ ಓದಿ : FACT CHECK : ಬಸವಣ್ಣ ಪ್ರತಿಮೆ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಅನುದಾನ ಕಡಿತಗೊಳಿಸಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...