Homeಫ್ಯಾಕ್ಟ್‌ಚೆಕ್FACT CHECK : ಬಾಂಗ್ಲಾದಲ್ಲಿ ಮುಸ್ಲಿಮರು ಹಿಂದೂ ವ್ಯಕ್ತಿಯನ್ನು ಹತ್ಯೆ ಮಾಡಿ ನೇತು ಹಾಕಿದ್ದಾರೆ ಎಂಬುವುದು...

FACT CHECK : ಬಾಂಗ್ಲಾದಲ್ಲಿ ಮುಸ್ಲಿಮರು ಹಿಂದೂ ವ್ಯಕ್ತಿಯನ್ನು ಹತ್ಯೆ ಮಾಡಿ ನೇತು ಹಾಕಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಬಾಂಗ್ಲಾದೇಶದಲ್ಲಿ ರಾಜಕೀಯ ಅರಾಜಕತೆಯ ನಡುವೆ, ಅಲ್ಲಿನ ಅಲ್ಪ ಸಂಖ್ಯಾತ ಹಿಂದೂಗಳನ್ನು ಗುರಿಯಾಗಿಸಿ ಮುಸ್ಲಿಮರು ದಾಳಿ ಮಾಡುತ್ತಿದ್ದಾರೆ ಎಂದು ಪ್ರತಿಪಾದಿಸಿ ಅನೇಕ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಇತ್ತೀಚಿನ ವೈರಲ್ ವಿಡಿಯೋವೊಂದರಲ್ಲಿ “ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ, ಮೃತದೇಹವನ್ನು ಪ್ರತಿಮೆಯೊಂದಕ್ಕೆ ನೇತುಹಾಕಿ ಘೋಷಣೆಗಳನ್ನು ಕೂಗುವ ದೃಶ್ಯವಿದೆ. ಇದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಅನೇಕರು “ಬಾಂಗ್ಲಾದೇಶದಲ್ಲಿ ಹಿಂದೂ ವೃದ್ದರೊಬ್ಬರನ್ನು ಹತ್ಯೆ ಮಾಡಿ ಪ್ರತಿಮೆಗೆ ನೇತು ಹಾಕಿದ ಇಸ್ಲಾಮಿಸ್ಟ್‌ಗಳು ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಈ ಹಿಂದೆ ನಾವು ಅನೇಕ ಬಾರಿ ಉಲ್ಲೇಖಿಸಿರುವ ಸುಳ್ಳು ಮತ್ತು ಕೋಮು ವೈಷಮ್ಯದ ಸುದ್ದಿಗಳನ್ನು ಹರಡುವ ಎಕ್ಸ್‌ ಬಳಕೆದಾರ ಮಿ.ಸಿನ್ಹಾ(MrSinha_) ವಿಡಿಯೋ ಹಂಚಿಕೊಂಡು ಮೇಲಿನಂತೆ ಬರೆದುಕೊಂಡಿದ್ದಾರೆ.

ದೀಪಕ್ ಶರ್ಮಾ (@SonOfBharat7) ಎಂಬ ಮತ್ತೋರ್ವ ಎಕ್ಸ್ ಪ್ರೀಮಿಯಂ ಬಳಕೆದಾರ ಕೂಡ ವಿಡಿಯೋ ಹಂಚಿಕೊಂಡು ಅದೇ ರೀತಿ ಬರೆದುಕೊಂಡಿದ್ದಾರೆ.

ಇವರಿಬ್ಬರೇ ಅಲ್ಲದೆ, ಇನ್ನೂ ಅನೇಕ ಎಕ್ಸ್ ಬಳಕೆದಾರರು ವಿಡಿಯೋ ಹಂಚಿಕೊಂಡು “ಹಿಂದೂ ವ್ಯಕ್ತಿಯನ್ನು ಮುಸ್ಲಿಮರು ಹತ್ಯೆ ಮಾಡಿ ನೇತು ಹಾಕಿದ್ದಾಗಿ” ಆರೋಪಿಸಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣದ ಪೋಸ್ಟ್‌ಗಳ ಸತ್ಯಾಸತ್ಯತೆ ತಿಳಿಯಲು ವೈರಲ್ ವಿಡಿಯೋ ಕುರಿತ ಮಾಹಿತಿಯನ್ನು ನಾವು ಹುಡುಕಾಡಿದ್ದೇವೆ. ಈ ವೇಳೆ ಖ್ಯಾತ ಫ್ಯಾಕ್ಟ್‌ಚೆಕ್ ವೆಬ್‌ಸೈಟ್ ಆಲ್ಟ್ ನ್ಯೂಸ್ ಈ ಕುರಿತು ಸುದ್ದಿ ಪ್ರಕಟಿಸಿರುವುದು ಕಂಡು ಬಂದಿದೆ.

ಆಲ್ಟ್‌ ನ್ಯೂಸ್ ಸುದ್ದಿಯಲ್ಲಿ “ನಾವು ವೈರಲ್ ವಿಡಿಯೋ ಕುರಿತು ಬಾಂಗ್ಲಾದೇಶದ ಪತ್ರಕರ್ತರ ಜೊತೆ ಮಾತನಾಡಿದ್ದೇವೆ. ಅವರು ವಿಡಿಯೋದಲ್ಲಿರುವ ವ್ಯಕ್ತಿ ‘ಶಾಹಿದುಲ್ ಇಸ್ಲಾಂ ಹಿರಾನ್’ ಎಂದು ತಿಳಿಸಿದ್ದಾಗಿ ಹೇಳಲಾಗಿದೆ.

ವರದಿ ಆಧರಿಸಿ ನಾವು ಶಾಹಿದುಲ್ ಇಸ್ಲಾಂ ಕುರಿತು ಮಾಹಿತಿ ಹುಡುಕಿದ್ದೇವೆ. ಈ ವೇಳೆ “75 ವರ್ಷ ವಯಸ್ಸಿನ ಶಾಹಿದುಲ್ ಇಸ್ಲಾಂ ಅವರು ನೈಋತ್ಯ ಬಾಂಗ್ಲಾದೇಶದ ಜೆನೈದಾ ಪ್ರದೇಶದ ಅವಾಮಿ ಲೀಗ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದು, ಅವರನ್ನು ಮತ್ತು ಅವರ ಚಾಲಕ ಅಖ್ತರ್ ಹುಸೈನ್ ಅನ್ನು ಇರಿದು ಹತ್ಯೆ ಮಾಡಿ ಬಳಿಕ ಸುಟ್ಟು ಹಾಕಲಾಗಿದೆ ಎಂಬ ವರದಿಗಳು ಲಭ್ಯವಾಗಿದೆ.

ಢಾಕಾ ಪೋಸ್ಟ್ ಸುದ್ದಿ ವೆಬ್‌ಸೈಟ್‌ನ ವರದಿಯ ಪ್ರಕಾರ, ಆಗಸ್ಟ್ 5ರಂದು ಪ್ರತಿಭಟನಾಕಾರರು ಶಾಹಿದುಲ್ ಇಸ್ಲಾಂ ಹಿರಾನ್ ಅವರ ಮನೆಗೆ ದಾಳಿ ನಡೆಸಿದ್ದರು. ಈ ವೇಳೆ ಆತ್ಮರಕ್ಷಣೆಗೆ ಹಿರಾನ್ ಅವರು ಜನರ ಗುಂಪಿನ ಮೇಲೆ ಗುಂಡು ಹಾರಿಸಿದ್ದಾರೆ. ಇದರಿಂದ ಕೆಲವರು ಗಾಯಗೊಂಡಿದ್ದರು. ಬಳಿಕ ಜನರ ಗುಂಪು ಹಿರಾನ್ ಅವರ ಮನೆಗೆ ಬೆಂಕಿ ಹಚ್ಚಿದೆ ಮತ್ತು ಹಿರಾನ್ ಅವರ ಚಾಲಕ ಅಖ್ತರ್ ಅವರನ್ನು ಗಾಯಗೊಳಿಸಿದೆ. ಅಖ್ತರ್ ಅವರನ್ನು ಬಳಿಕ ಆಸ್ಪತ್ರೆಗೆ ಕರೆದೊಯ್ದರೂ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಇನ್ನು ಗುಂಪು ದಾಳಿಯ ವೇಳೆ ಹಿರಾನ್ ಅವರು ಮನೆಯ ಮೂರನೇ ಮಹಡಿಯಲ್ಲಿ ಸಿಲುಕಿಕೊಂಡಿದ್ದರು. ಮನೆಗೆ ಬೆಂಕಿ ಹಚ್ಚಿದ್ದರಿಂದ ಅವರು ಅಲ್ಲೇ ಸಜೀವ ದಹನವಾಗಿದ್ದಾರೆ. ಬಳಿಕ ಗುಂಪು ಮನೆಯ ಬಾಗಿಲು ಒಡೆದು ಹಿರಾನ್ ಅವರ ಮೃತದೇಹವನ್ನು ಹೊರತಂದಿದೆ. ಅದನ್ನು ಢಾಕಾ ನಗರ ಹೃದಯ ಭಾಗದ ಪೈರಾ ಚತ್ತರ್ ಎಂಬಲ್ಲಿ ಪ್ರತಿಮೆಗೆ ನೇತುಹಾಕಿ ಘೋಷಣೆಗಳನ್ನು ಕೂಗಿದೆ.

ಯೂಟ್ಯೂಬ್ ಚಾನೆಲ್‌ವೊಂದರಲ್ಲಿ ಈ ಕುರಿತು ವಿಡಿಯೋ ಅಪ್ಲೋಡ್ ಮಾಡಲಾಗಿದೆ. ಅದರಲ್ಲಿ ಹತ್ಯೆ ಮಾಡಿ ನೇತುಹಾಕಿರುವುದು ಅವಾಮಿ ಲೀಗ್ ಪಕ್ಷದ ಶಾಹಿದುಲ್ ಇಸ್ಲಾಂ ಹಿರಾನ್ ಅವರನ್ನು ಎಂದು ಹೇಳಲಾಗಿದೆ. ವಿಡಿಯೋ ಲಿಂಕ್ ಇಲ್ಲಿದೆ.

ನಮ್ಮ ಪರಿಶೀಲನೆಯಲ್ಲಿ ಲಭ್ಯವಾದ ಮಾಹಿತಿ ಪ್ರಕಾರ, ಬಾಂಗ್ಲಾದಲ್ಲಿ ಪ್ರತಿಭಟನಾಕಾರರು ಹತ್ಯೆ ಮಾಡಿ ನೇತು ಹಾಕಿರುವುದು ಅವಾಮಿ ಲೀಗ್ ನಾಯಕ ಶಾಹಿದುಲ್ ಇಸ್ಲಾಂ ಹಿರಾನ್ ಅವರನ್ನೇ ಹೊರತು, ಯಾವುದೇ ಹಿಂದೂ ವ್ಯಕ್ತಿಯನ್ನಲ್ಲ. ಇದೊಂದು ರಾಜಕೀಯ ವೈಷಮ್ಯದ ಕೃತ್ಯವಾಗಿದೆ. ಅಲ್ಲದೆ ಹಿಂದೂ ವ್ಯಕ್ತಿಯನ್ನು ಮುಸ್ಲಿಮರು ಹತ್ಯೆ ಮಾಡಿರುವ ಕೋಮು ಘಟನೆಯಲ್ಲ. ಹಾಗಾಗಿ, ಸಾಮಾಜಿಕ ಜಾಲತಾಣದ ಪೋಸ್ಟ್‌ಗಳ ಪ್ರತಿಪಾದನೆ ಸುಳ್ಳಾಗಿದೆ.

ಇದನ್ನೂ ಓದಿ : FACT CHECK : ಬಾಂಗ್ಲಾದಲ್ಲಿ ಹಿಂದೂ ಕ್ರಿಕೆಟಿಗನ ಮನೆಗೆ ಬೆಂಕಿ ಹಚ್ಚಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...