Homeಫ್ಯಾಕ್ಟ್‌ಚೆಕ್FACT CHECK : ಬಾಂಗ್ಲಾದಲ್ಲಿ ಮುಸ್ಲಿಮರು ಹಿಂದೂ ವ್ಯಕ್ತಿಯನ್ನು ಹತ್ಯೆ ಮಾಡಿ ನೇತು ಹಾಕಿದ್ದಾರೆ ಎಂಬುವುದು...

FACT CHECK : ಬಾಂಗ್ಲಾದಲ್ಲಿ ಮುಸ್ಲಿಮರು ಹಿಂದೂ ವ್ಯಕ್ತಿಯನ್ನು ಹತ್ಯೆ ಮಾಡಿ ನೇತು ಹಾಕಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಬಾಂಗ್ಲಾದೇಶದಲ್ಲಿ ರಾಜಕೀಯ ಅರಾಜಕತೆಯ ನಡುವೆ, ಅಲ್ಲಿನ ಅಲ್ಪ ಸಂಖ್ಯಾತ ಹಿಂದೂಗಳನ್ನು ಗುರಿಯಾಗಿಸಿ ಮುಸ್ಲಿಮರು ದಾಳಿ ಮಾಡುತ್ತಿದ್ದಾರೆ ಎಂದು ಪ್ರತಿಪಾದಿಸಿ ಅನೇಕ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಇತ್ತೀಚಿನ ವೈರಲ್ ವಿಡಿಯೋವೊಂದರಲ್ಲಿ “ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ, ಮೃತದೇಹವನ್ನು ಪ್ರತಿಮೆಯೊಂದಕ್ಕೆ ನೇತುಹಾಕಿ ಘೋಷಣೆಗಳನ್ನು ಕೂಗುವ ದೃಶ್ಯವಿದೆ. ಇದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಅನೇಕರು “ಬಾಂಗ್ಲಾದೇಶದಲ್ಲಿ ಹಿಂದೂ ವೃದ್ದರೊಬ್ಬರನ್ನು ಹತ್ಯೆ ಮಾಡಿ ಪ್ರತಿಮೆಗೆ ನೇತು ಹಾಕಿದ ಇಸ್ಲಾಮಿಸ್ಟ್‌ಗಳು ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಈ ಹಿಂದೆ ನಾವು ಅನೇಕ ಬಾರಿ ಉಲ್ಲೇಖಿಸಿರುವ ಸುಳ್ಳು ಮತ್ತು ಕೋಮು ವೈಷಮ್ಯದ ಸುದ್ದಿಗಳನ್ನು ಹರಡುವ ಎಕ್ಸ್‌ ಬಳಕೆದಾರ ಮಿ.ಸಿನ್ಹಾ(MrSinha_) ವಿಡಿಯೋ ಹಂಚಿಕೊಂಡು ಮೇಲಿನಂತೆ ಬರೆದುಕೊಂಡಿದ್ದಾರೆ.

ದೀಪಕ್ ಶರ್ಮಾ (@SonOfBharat7) ಎಂಬ ಮತ್ತೋರ್ವ ಎಕ್ಸ್ ಪ್ರೀಮಿಯಂ ಬಳಕೆದಾರ ಕೂಡ ವಿಡಿಯೋ ಹಂಚಿಕೊಂಡು ಅದೇ ರೀತಿ ಬರೆದುಕೊಂಡಿದ್ದಾರೆ.

ಇವರಿಬ್ಬರೇ ಅಲ್ಲದೆ, ಇನ್ನೂ ಅನೇಕ ಎಕ್ಸ್ ಬಳಕೆದಾರರು ವಿಡಿಯೋ ಹಂಚಿಕೊಂಡು “ಹಿಂದೂ ವ್ಯಕ್ತಿಯನ್ನು ಮುಸ್ಲಿಮರು ಹತ್ಯೆ ಮಾಡಿ ನೇತು ಹಾಕಿದ್ದಾಗಿ” ಆರೋಪಿಸಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣದ ಪೋಸ್ಟ್‌ಗಳ ಸತ್ಯಾಸತ್ಯತೆ ತಿಳಿಯಲು ವೈರಲ್ ವಿಡಿಯೋ ಕುರಿತ ಮಾಹಿತಿಯನ್ನು ನಾವು ಹುಡುಕಾಡಿದ್ದೇವೆ. ಈ ವೇಳೆ ಖ್ಯಾತ ಫ್ಯಾಕ್ಟ್‌ಚೆಕ್ ವೆಬ್‌ಸೈಟ್ ಆಲ್ಟ್ ನ್ಯೂಸ್ ಈ ಕುರಿತು ಸುದ್ದಿ ಪ್ರಕಟಿಸಿರುವುದು ಕಂಡು ಬಂದಿದೆ.

ಆಲ್ಟ್‌ ನ್ಯೂಸ್ ಸುದ್ದಿಯಲ್ಲಿ “ನಾವು ವೈರಲ್ ವಿಡಿಯೋ ಕುರಿತು ಬಾಂಗ್ಲಾದೇಶದ ಪತ್ರಕರ್ತರ ಜೊತೆ ಮಾತನಾಡಿದ್ದೇವೆ. ಅವರು ವಿಡಿಯೋದಲ್ಲಿರುವ ವ್ಯಕ್ತಿ ‘ಶಾಹಿದುಲ್ ಇಸ್ಲಾಂ ಹಿರಾನ್’ ಎಂದು ತಿಳಿಸಿದ್ದಾಗಿ ಹೇಳಲಾಗಿದೆ.

ವರದಿ ಆಧರಿಸಿ ನಾವು ಶಾಹಿದುಲ್ ಇಸ್ಲಾಂ ಕುರಿತು ಮಾಹಿತಿ ಹುಡುಕಿದ್ದೇವೆ. ಈ ವೇಳೆ “75 ವರ್ಷ ವಯಸ್ಸಿನ ಶಾಹಿದುಲ್ ಇಸ್ಲಾಂ ಅವರು ನೈಋತ್ಯ ಬಾಂಗ್ಲಾದೇಶದ ಜೆನೈದಾ ಪ್ರದೇಶದ ಅವಾಮಿ ಲೀಗ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದು, ಅವರನ್ನು ಮತ್ತು ಅವರ ಚಾಲಕ ಅಖ್ತರ್ ಹುಸೈನ್ ಅನ್ನು ಇರಿದು ಹತ್ಯೆ ಮಾಡಿ ಬಳಿಕ ಸುಟ್ಟು ಹಾಕಲಾಗಿದೆ ಎಂಬ ವರದಿಗಳು ಲಭ್ಯವಾಗಿದೆ.

ಢಾಕಾ ಪೋಸ್ಟ್ ಸುದ್ದಿ ವೆಬ್‌ಸೈಟ್‌ನ ವರದಿಯ ಪ್ರಕಾರ, ಆಗಸ್ಟ್ 5ರಂದು ಪ್ರತಿಭಟನಾಕಾರರು ಶಾಹಿದುಲ್ ಇಸ್ಲಾಂ ಹಿರಾನ್ ಅವರ ಮನೆಗೆ ದಾಳಿ ನಡೆಸಿದ್ದರು. ಈ ವೇಳೆ ಆತ್ಮರಕ್ಷಣೆಗೆ ಹಿರಾನ್ ಅವರು ಜನರ ಗುಂಪಿನ ಮೇಲೆ ಗುಂಡು ಹಾರಿಸಿದ್ದಾರೆ. ಇದರಿಂದ ಕೆಲವರು ಗಾಯಗೊಂಡಿದ್ದರು. ಬಳಿಕ ಜನರ ಗುಂಪು ಹಿರಾನ್ ಅವರ ಮನೆಗೆ ಬೆಂಕಿ ಹಚ್ಚಿದೆ ಮತ್ತು ಹಿರಾನ್ ಅವರ ಚಾಲಕ ಅಖ್ತರ್ ಅವರನ್ನು ಗಾಯಗೊಳಿಸಿದೆ. ಅಖ್ತರ್ ಅವರನ್ನು ಬಳಿಕ ಆಸ್ಪತ್ರೆಗೆ ಕರೆದೊಯ್ದರೂ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಇನ್ನು ಗುಂಪು ದಾಳಿಯ ವೇಳೆ ಹಿರಾನ್ ಅವರು ಮನೆಯ ಮೂರನೇ ಮಹಡಿಯಲ್ಲಿ ಸಿಲುಕಿಕೊಂಡಿದ್ದರು. ಮನೆಗೆ ಬೆಂಕಿ ಹಚ್ಚಿದ್ದರಿಂದ ಅವರು ಅಲ್ಲೇ ಸಜೀವ ದಹನವಾಗಿದ್ದಾರೆ. ಬಳಿಕ ಗುಂಪು ಮನೆಯ ಬಾಗಿಲು ಒಡೆದು ಹಿರಾನ್ ಅವರ ಮೃತದೇಹವನ್ನು ಹೊರತಂದಿದೆ. ಅದನ್ನು ಢಾಕಾ ನಗರ ಹೃದಯ ಭಾಗದ ಪೈರಾ ಚತ್ತರ್ ಎಂಬಲ್ಲಿ ಪ್ರತಿಮೆಗೆ ನೇತುಹಾಕಿ ಘೋಷಣೆಗಳನ್ನು ಕೂಗಿದೆ.

ಯೂಟ್ಯೂಬ್ ಚಾನೆಲ್‌ವೊಂದರಲ್ಲಿ ಈ ಕುರಿತು ವಿಡಿಯೋ ಅಪ್ಲೋಡ್ ಮಾಡಲಾಗಿದೆ. ಅದರಲ್ಲಿ ಹತ್ಯೆ ಮಾಡಿ ನೇತುಹಾಕಿರುವುದು ಅವಾಮಿ ಲೀಗ್ ಪಕ್ಷದ ಶಾಹಿದುಲ್ ಇಸ್ಲಾಂ ಹಿರಾನ್ ಅವರನ್ನು ಎಂದು ಹೇಳಲಾಗಿದೆ. ವಿಡಿಯೋ ಲಿಂಕ್ ಇಲ್ಲಿದೆ.

ನಮ್ಮ ಪರಿಶೀಲನೆಯಲ್ಲಿ ಲಭ್ಯವಾದ ಮಾಹಿತಿ ಪ್ರಕಾರ, ಬಾಂಗ್ಲಾದಲ್ಲಿ ಪ್ರತಿಭಟನಾಕಾರರು ಹತ್ಯೆ ಮಾಡಿ ನೇತು ಹಾಕಿರುವುದು ಅವಾಮಿ ಲೀಗ್ ನಾಯಕ ಶಾಹಿದುಲ್ ಇಸ್ಲಾಂ ಹಿರಾನ್ ಅವರನ್ನೇ ಹೊರತು, ಯಾವುದೇ ಹಿಂದೂ ವ್ಯಕ್ತಿಯನ್ನಲ್ಲ. ಇದೊಂದು ರಾಜಕೀಯ ವೈಷಮ್ಯದ ಕೃತ್ಯವಾಗಿದೆ. ಅಲ್ಲದೆ ಹಿಂದೂ ವ್ಯಕ್ತಿಯನ್ನು ಮುಸ್ಲಿಮರು ಹತ್ಯೆ ಮಾಡಿರುವ ಕೋಮು ಘಟನೆಯಲ್ಲ. ಹಾಗಾಗಿ, ಸಾಮಾಜಿಕ ಜಾಲತಾಣದ ಪೋಸ್ಟ್‌ಗಳ ಪ್ರತಿಪಾದನೆ ಸುಳ್ಳಾಗಿದೆ.

ಇದನ್ನೂ ಓದಿ : FACT CHECK : ಬಾಂಗ್ಲಾದಲ್ಲಿ ಹಿಂದೂ ಕ್ರಿಕೆಟಿಗನ ಮನೆಗೆ ಬೆಂಕಿ ಹಚ್ಚಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...