Homeಫ್ಯಾಕ್ಟ್‌ಚೆಕ್FACT CHECK : ಬಾಂಗ್ಲಾದಲ್ಲಿ ಮುಸ್ಲಿಮರು ಹಿಂದೂ ವ್ಯಕ್ತಿಯನ್ನು ಹತ್ಯೆ ಮಾಡಿ ನೇತು ಹಾಕಿದ್ದಾರೆ ಎಂಬುವುದು...

FACT CHECK : ಬಾಂಗ್ಲಾದಲ್ಲಿ ಮುಸ್ಲಿಮರು ಹಿಂದೂ ವ್ಯಕ್ತಿಯನ್ನು ಹತ್ಯೆ ಮಾಡಿ ನೇತು ಹಾಕಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಬಾಂಗ್ಲಾದೇಶದಲ್ಲಿ ರಾಜಕೀಯ ಅರಾಜಕತೆಯ ನಡುವೆ, ಅಲ್ಲಿನ ಅಲ್ಪ ಸಂಖ್ಯಾತ ಹಿಂದೂಗಳನ್ನು ಗುರಿಯಾಗಿಸಿ ಮುಸ್ಲಿಮರು ದಾಳಿ ಮಾಡುತ್ತಿದ್ದಾರೆ ಎಂದು ಪ್ರತಿಪಾದಿಸಿ ಅನೇಕ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಇತ್ತೀಚಿನ ವೈರಲ್ ವಿಡಿಯೋವೊಂದರಲ್ಲಿ “ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ, ಮೃತದೇಹವನ್ನು ಪ್ರತಿಮೆಯೊಂದಕ್ಕೆ ನೇತುಹಾಕಿ ಘೋಷಣೆಗಳನ್ನು ಕೂಗುವ ದೃಶ್ಯವಿದೆ. ಇದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಅನೇಕರು “ಬಾಂಗ್ಲಾದೇಶದಲ್ಲಿ ಹಿಂದೂ ವೃದ್ದರೊಬ್ಬರನ್ನು ಹತ್ಯೆ ಮಾಡಿ ಪ್ರತಿಮೆಗೆ ನೇತು ಹಾಕಿದ ಇಸ್ಲಾಮಿಸ್ಟ್‌ಗಳು ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಈ ಹಿಂದೆ ನಾವು ಅನೇಕ ಬಾರಿ ಉಲ್ಲೇಖಿಸಿರುವ ಸುಳ್ಳು ಮತ್ತು ಕೋಮು ವೈಷಮ್ಯದ ಸುದ್ದಿಗಳನ್ನು ಹರಡುವ ಎಕ್ಸ್‌ ಬಳಕೆದಾರ ಮಿ.ಸಿನ್ಹಾ(MrSinha_) ವಿಡಿಯೋ ಹಂಚಿಕೊಂಡು ಮೇಲಿನಂತೆ ಬರೆದುಕೊಂಡಿದ್ದಾರೆ.

ದೀಪಕ್ ಶರ್ಮಾ (@SonOfBharat7) ಎಂಬ ಮತ್ತೋರ್ವ ಎಕ್ಸ್ ಪ್ರೀಮಿಯಂ ಬಳಕೆದಾರ ಕೂಡ ವಿಡಿಯೋ ಹಂಚಿಕೊಂಡು ಅದೇ ರೀತಿ ಬರೆದುಕೊಂಡಿದ್ದಾರೆ.

ಇವರಿಬ್ಬರೇ ಅಲ್ಲದೆ, ಇನ್ನೂ ಅನೇಕ ಎಕ್ಸ್ ಬಳಕೆದಾರರು ವಿಡಿಯೋ ಹಂಚಿಕೊಂಡು “ಹಿಂದೂ ವ್ಯಕ್ತಿಯನ್ನು ಮುಸ್ಲಿಮರು ಹತ್ಯೆ ಮಾಡಿ ನೇತು ಹಾಕಿದ್ದಾಗಿ” ಆರೋಪಿಸಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣದ ಪೋಸ್ಟ್‌ಗಳ ಸತ್ಯಾಸತ್ಯತೆ ತಿಳಿಯಲು ವೈರಲ್ ವಿಡಿಯೋ ಕುರಿತ ಮಾಹಿತಿಯನ್ನು ನಾವು ಹುಡುಕಾಡಿದ್ದೇವೆ. ಈ ವೇಳೆ ಖ್ಯಾತ ಫ್ಯಾಕ್ಟ್‌ಚೆಕ್ ವೆಬ್‌ಸೈಟ್ ಆಲ್ಟ್ ನ್ಯೂಸ್ ಈ ಕುರಿತು ಸುದ್ದಿ ಪ್ರಕಟಿಸಿರುವುದು ಕಂಡು ಬಂದಿದೆ.

ಆಲ್ಟ್‌ ನ್ಯೂಸ್ ಸುದ್ದಿಯಲ್ಲಿ “ನಾವು ವೈರಲ್ ವಿಡಿಯೋ ಕುರಿತು ಬಾಂಗ್ಲಾದೇಶದ ಪತ್ರಕರ್ತರ ಜೊತೆ ಮಾತನಾಡಿದ್ದೇವೆ. ಅವರು ವಿಡಿಯೋದಲ್ಲಿರುವ ವ್ಯಕ್ತಿ ‘ಶಾಹಿದುಲ್ ಇಸ್ಲಾಂ ಹಿರಾನ್’ ಎಂದು ತಿಳಿಸಿದ್ದಾಗಿ ಹೇಳಲಾಗಿದೆ.

ವರದಿ ಆಧರಿಸಿ ನಾವು ಶಾಹಿದುಲ್ ಇಸ್ಲಾಂ ಕುರಿತು ಮಾಹಿತಿ ಹುಡುಕಿದ್ದೇವೆ. ಈ ವೇಳೆ “75 ವರ್ಷ ವಯಸ್ಸಿನ ಶಾಹಿದುಲ್ ಇಸ್ಲಾಂ ಅವರು ನೈಋತ್ಯ ಬಾಂಗ್ಲಾದೇಶದ ಜೆನೈದಾ ಪ್ರದೇಶದ ಅವಾಮಿ ಲೀಗ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದು, ಅವರನ್ನು ಮತ್ತು ಅವರ ಚಾಲಕ ಅಖ್ತರ್ ಹುಸೈನ್ ಅನ್ನು ಇರಿದು ಹತ್ಯೆ ಮಾಡಿ ಬಳಿಕ ಸುಟ್ಟು ಹಾಕಲಾಗಿದೆ ಎಂಬ ವರದಿಗಳು ಲಭ್ಯವಾಗಿದೆ.

ಢಾಕಾ ಪೋಸ್ಟ್ ಸುದ್ದಿ ವೆಬ್‌ಸೈಟ್‌ನ ವರದಿಯ ಪ್ರಕಾರ, ಆಗಸ್ಟ್ 5ರಂದು ಪ್ರತಿಭಟನಾಕಾರರು ಶಾಹಿದುಲ್ ಇಸ್ಲಾಂ ಹಿರಾನ್ ಅವರ ಮನೆಗೆ ದಾಳಿ ನಡೆಸಿದ್ದರು. ಈ ವೇಳೆ ಆತ್ಮರಕ್ಷಣೆಗೆ ಹಿರಾನ್ ಅವರು ಜನರ ಗುಂಪಿನ ಮೇಲೆ ಗುಂಡು ಹಾರಿಸಿದ್ದಾರೆ. ಇದರಿಂದ ಕೆಲವರು ಗಾಯಗೊಂಡಿದ್ದರು. ಬಳಿಕ ಜನರ ಗುಂಪು ಹಿರಾನ್ ಅವರ ಮನೆಗೆ ಬೆಂಕಿ ಹಚ್ಚಿದೆ ಮತ್ತು ಹಿರಾನ್ ಅವರ ಚಾಲಕ ಅಖ್ತರ್ ಅವರನ್ನು ಗಾಯಗೊಳಿಸಿದೆ. ಅಖ್ತರ್ ಅವರನ್ನು ಬಳಿಕ ಆಸ್ಪತ್ರೆಗೆ ಕರೆದೊಯ್ದರೂ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಇನ್ನು ಗುಂಪು ದಾಳಿಯ ವೇಳೆ ಹಿರಾನ್ ಅವರು ಮನೆಯ ಮೂರನೇ ಮಹಡಿಯಲ್ಲಿ ಸಿಲುಕಿಕೊಂಡಿದ್ದರು. ಮನೆಗೆ ಬೆಂಕಿ ಹಚ್ಚಿದ್ದರಿಂದ ಅವರು ಅಲ್ಲೇ ಸಜೀವ ದಹನವಾಗಿದ್ದಾರೆ. ಬಳಿಕ ಗುಂಪು ಮನೆಯ ಬಾಗಿಲು ಒಡೆದು ಹಿರಾನ್ ಅವರ ಮೃತದೇಹವನ್ನು ಹೊರತಂದಿದೆ. ಅದನ್ನು ಢಾಕಾ ನಗರ ಹೃದಯ ಭಾಗದ ಪೈರಾ ಚತ್ತರ್ ಎಂಬಲ್ಲಿ ಪ್ರತಿಮೆಗೆ ನೇತುಹಾಕಿ ಘೋಷಣೆಗಳನ್ನು ಕೂಗಿದೆ.

ಯೂಟ್ಯೂಬ್ ಚಾನೆಲ್‌ವೊಂದರಲ್ಲಿ ಈ ಕುರಿತು ವಿಡಿಯೋ ಅಪ್ಲೋಡ್ ಮಾಡಲಾಗಿದೆ. ಅದರಲ್ಲಿ ಹತ್ಯೆ ಮಾಡಿ ನೇತುಹಾಕಿರುವುದು ಅವಾಮಿ ಲೀಗ್ ಪಕ್ಷದ ಶಾಹಿದುಲ್ ಇಸ್ಲಾಂ ಹಿರಾನ್ ಅವರನ್ನು ಎಂದು ಹೇಳಲಾಗಿದೆ. ವಿಡಿಯೋ ಲಿಂಕ್ ಇಲ್ಲಿದೆ.

ನಮ್ಮ ಪರಿಶೀಲನೆಯಲ್ಲಿ ಲಭ್ಯವಾದ ಮಾಹಿತಿ ಪ್ರಕಾರ, ಬಾಂಗ್ಲಾದಲ್ಲಿ ಪ್ರತಿಭಟನಾಕಾರರು ಹತ್ಯೆ ಮಾಡಿ ನೇತು ಹಾಕಿರುವುದು ಅವಾಮಿ ಲೀಗ್ ನಾಯಕ ಶಾಹಿದುಲ್ ಇಸ್ಲಾಂ ಹಿರಾನ್ ಅವರನ್ನೇ ಹೊರತು, ಯಾವುದೇ ಹಿಂದೂ ವ್ಯಕ್ತಿಯನ್ನಲ್ಲ. ಇದೊಂದು ರಾಜಕೀಯ ವೈಷಮ್ಯದ ಕೃತ್ಯವಾಗಿದೆ. ಅಲ್ಲದೆ ಹಿಂದೂ ವ್ಯಕ್ತಿಯನ್ನು ಮುಸ್ಲಿಮರು ಹತ್ಯೆ ಮಾಡಿರುವ ಕೋಮು ಘಟನೆಯಲ್ಲ. ಹಾಗಾಗಿ, ಸಾಮಾಜಿಕ ಜಾಲತಾಣದ ಪೋಸ್ಟ್‌ಗಳ ಪ್ರತಿಪಾದನೆ ಸುಳ್ಳಾಗಿದೆ.

ಇದನ್ನೂ ಓದಿ : FACT CHECK : ಬಾಂಗ್ಲಾದಲ್ಲಿ ಹಿಂದೂ ಕ್ರಿಕೆಟಿಗನ ಮನೆಗೆ ಬೆಂಕಿ ಹಚ್ಚಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...