Homeಫ್ಯಾಕ್ಟ್‌ಚೆಕ್FACT CHECK : ನೇಹಾ ಹಿರೇಮಠ್ ಮನೆಗೆ ಯಾವುದೇ ಕಾಂಗ್ರೆಸ್ ನಾಯಕರು ಭೇಟಿ ಕೊಟ್ಟಿಲ್ಲ ಎನ್ನುವುದು...

FACT CHECK : ನೇಹಾ ಹಿರೇಮಠ್ ಮನೆಗೆ ಯಾವುದೇ ಕಾಂಗ್ರೆಸ್ ನಾಯಕರು ಭೇಟಿ ಕೊಟ್ಟಿಲ್ಲ ಎನ್ನುವುದು ಸುಳ್ಳು

- Advertisement -
- Advertisement -

ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಕೊಲೆಯಾದ ವಿದ್ಯಾರ್ಥಿನಿ ನೇಹಾ ಹಿರೇಮಠ್ ಮನೆಗೆ ಯಾವುದೇ ಕಾಂಗ್ರೆಸ್ ನಾಯಕರು ಭೇಟಿ ಕೊಟ್ಟಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಲಾಗಿದೆ.

Amitabh Chaudhary (@MithilaWaala) ಎಂಬ ಎಕ್ಸ್ ಬಳಕೆದಾರ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ನೇಹಾ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿರುವ ವಿಡಿಯೋ ಹಂಚಿಕೊಂಡಿದ್ದು, “ಜೆಪಿ ನಡ್ಡಾ ಅವರ ಬಳಿಕ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಅವರು ನೇಹಾ ಮನೆಗೆ ಭೇಟಿ ನೀಡಿ, ಕಾಂಗ್ರೆಸ್ ಕೌನ್ಸಿಲರ್ ಆಗಿರುವ ನೇಹಾಳ ತಂದೆ ನಿರಂಜನ್ ಹಿರೇಮಠ್ ಅವರನ್ನು ಭೇಟಿಯಾಗಿದ್ದಾರೆ.”

“ಆದರೆ, ಕಾಂಗ್ರೆಸ್‌ನ ಒಬ್ಬನೇ ಒಬ್ಬ ವ್ಯಕ್ತಿ ನೇಹಾ ಮನೆಗೆ ಭೇಟಿ ನೀಡಿಲ್ಲ. ಪ್ರಿಯಾಂಕಾ ಗಾಂಧಿ ರಾಜಕೀಯ ರ್‍ಯಾಲಿಗಾಗಿ ಕರ್ನಾಟಕಕ್ಕೆ ಬಂದಿದ್ದರು. ಆದರೆ ತಮ್ಮದೇ ಪಕ್ಷದ ನಾಯಕರಾಗಿರುವ ದುಃಖತಪ್ತ ತಂದೆಯನ್ನು ಭೇಟಿ ಮಾಡಲು ಅವರು ಮುಂದಾಗಿಲ್ಲ”

“ಮುಸ್ಲಿಂ ಓಲೈಕೆಗಾಗಿ ಕಾಂಗ್ರೆಸ್ ಅತ್ಯಂತ ಕೆಳಮಟ್ಟಕ್ಕೆ ಇಳಿದಿದೆ” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

Politicspedia(@Politicspedia23) ಮತ್ತೊಂದು ಎಕ್ಸ್ ಖಾತೆಯಲ್ಲೂ ಅದೇ ವಿಡಿಯೋ ಮತ್ತು ಬರಹ ಹಂಚಿಕೊಳ್ಳಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

Sunanda Roy(@SaffronSunanda)ಎಂಬ 63,200 ಫಾಲೋವರ್ಸ್‌ ಇರುವ ಎಕ್ಸ್ ಖಾತೆಯಲ್ಲೂ ಮೇಲ್ಗಡೆ ಉಲ್ಲೇಖಿಸಿದ ವಿಡಿಯೋ ಮತ್ತು ಬರಹ ಹಂಚಿಕೊಳ್ಳಲಾಗಿದೆ. ಈ ಪೋಸ್ಟ್ ಬರೋಬ್ಬರಿ 1,13, 000 ಜನರಿಗೆ ತಲುಪಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್ : ಎಕ್ಸ್ ಪೋಸ್ಟ್‌ನಲ್ಲಿ ಉಲ್ಲೇಖಿಸಿದ ವಿಷಯ ಸಂಪೂರ್ಣ ಸುಳ್ಳಾಗಿದೆ. ನೇಹಾ ಹಿರೇಮಠ್ ಮನೆಗೆ ಸಿಎಂ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಸಚಿವರಾದ ಹೆಚ್‌.ಕೆ ಪಾಟೀಲ್, ಲಕ್ಷೀ ಹೆಬ್ಬಾಳ್ಕರ್ ಸೇರಿದಂತೆ ಅನೇಕರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಸಚಿವ ಸಂತೋಷ್ ಲಾಡ್ ಅವರು ನೇಹಾ ಹತ್ಯೆಯಾದ ಮರುದಿನ ಕಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ ಕುಟಂಬಸ್ಥರಿಗೆ ಸಮಾಧಾನ ಹೇಳಿದ್ದರು.

ನೇಹಾ ಹತ್ಯೆಯಾಗಿರುವುದು ಏಪ್ರಿಲ್ 18ರಂದು ಸಂಜೆಯ ಹೊತ್ತಿಗೆ. ಮರುದಿನ ಬೆಳಿಗ್ಗೆ ನೇಹಾಳ ಮೃತದೇಹವಿದ್ದ ಕಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಸಚಿವ ಸಂತೋಷ್ ಲಾಡ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅವರು “ನೇಹಾಳ ಹತ್ಯೆಯಂತಹ ಪ್ರಕರಣಗಳಲ್ಲಿ ಅಪರಾಧಿಯನ್ನು ಎನ್‌ಕೌಂಟರ್ ಮಾಡುವಂತಹ ಕಾನೂನು ತರಬೇಕು” ಎಂದು ಹೇಳಿದ್ದರು.

ಏಪ್ರಿಲ್ 20ರಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷೀ ಹೆಬ್ಬಾಳ್ಕರ್ ಅವರು ನೇಹಾ ಮನೆಗೆ ಭೇಟಿ ಕೊಟ್ಟು ಪೋಷಕರಿಗೆ ಸಾಂತ್ವನ ಹೇಳಿದ್ದರು.

ಏಪ್ರಿಲ್ 23ರಂದು ಸಚಿವ ಹೆಚ್‌.ಕೆ ಪಾಟೀಲ್ ಅವರು ಭೇಟಿ ನೀಡಿ ತಂದೆ-ತಾಯಿಗೆ ಸಾಂತ್ವನ ಹೇಳಿದ್ದರು.

ಏಪ್ರಿಲ್ 24ರಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ನೇಹಾ ಮನೆಗೆ ಭೇಟಿ ಕೊಟ್ಟು ಪೋಷಕರಿಗೆ ಸಾಂತ್ವನ ಹೇಳಿದ್ದರು.

ಏಪ್ರಿಲ್ 25ರಂದು ಸಿಎಂ ಸಿದ್ದರಾಮಯ್ಯ ಅವರು ನೇಹಾ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅವರು, “ನೇಹಾ ಹಿರೇಮಠ್ ಕೊಲೆ ಅತ್ಯಂತ ದುರದೃಷ್ಟಕರ. ತ್ವರಿತ ವಿಚಾರಣೆಗಾಗಿ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ ಜೊತೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸಿ, ಪ್ರತ್ಯೇಕ ವಿಚಾರಣೆ ಮಾಡಿ ಅಪರಾಧಿಗೆ ಕಠಿಣ ಶಿಕ್ಷೆ ಕೊಡಿಸಲು ಸರ್ಕಾರ ಬದ್ದವಾಗಿದೆ” ಎಂದಿದ್ದರು.

ಇವಿಷ್ಟೇ ಅಲ್ಲದೆ, ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಆನಂದ್ ಅಸೂಟಿ, ಹುಬ್ಬಳ್ಳಿ-ಧಾರವಾಡ ಜಿಲ್ಲಾ ಕಾಂಗ್ರೆಸ್ ಮುಖಂಡರು ಸೇರಿದಂತೆ ಅನೇಕರು ನೇಹಾ ಹಿರೇಮಠ್ ಮನೆಗೆ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದ್ದಾರೆ.

ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದೆ. ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸುವುದಾಗಿ ಹೇಳಿದೆ. ಹಾಗಾಗಿ, ಯಾವುದೇ ಕಾಂಗ್ರೆಸ್ ನಾಯಕರು ನೇಹಾ ಹಿರೇಮಠ್ ಮನೆಗೆ ಭೇಟಿ ನೀಡಿಲ್ಲ ಎಂಬುವುದು ಸುಳ್ಳು.

ಇದನ್ನೂ ಓದಿ : FACT CHECK : ಕರ್ನಾಟಕದಲ್ಲಿ ಇವಿಎಂ ಕಂಟ್ರೋಲ್ ಯೂನಿಟ್‌ಗೆ ಹಾನಿ ಮಾಡಿರುವ ವಿಡಿಯೋ ಹಳೆಯದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...