Homeಫ್ಯಾಕ್ಟ್‌ಚೆಕ್FACT CHECK : ಪಪ್ಪಾಯಿ ಎಲೆಯ ರಸವು ಡೆಂಗ್ಯೂ ಖಾಯಿಲೆ ಗುಣಪಡಿಸುತ್ತದೆ ಎಂಬುವುದು ಸುಳ್ಳು

FACT CHECK : ಪಪ್ಪಾಯಿ ಎಲೆಯ ರಸವು ಡೆಂಗ್ಯೂ ಖಾಯಿಲೆ ಗುಣಪಡಿಸುತ್ತದೆ ಎಂಬುವುದು ಸುಳ್ಳು

- Advertisement -
- Advertisement -

“ತುರ್ತು ಮಾಹಿತಿ.. ಪಪ್ಪಾಯಿ ಎಲೆಯ ರಸವು ಜೇನು ತುಪ್ಪದೊಂದಿಗೆ ಪವಾಡದಂತೆ ಕೆಲಸ ಮಾಡುತ್ತದೆ. ಪ್ಲೆಟ್ಲೆಟ್‌ ಎಣಿಕೆ 12 ಗಂಟೆಗಳಲ್ಲಿ 68,000 ದಿಂದ 200,000 ದವರೆಗೆ ಏರುತ್ತದೆ. ಮಾನವೀಯತೆಯ ಸೇವೆ ಮಾಡಲು ಈ ಸಂದೇಶವನ್ನು ಇತರರೊಂದಿಗೆ ಹಂಚಿಕೊಳ್ಳಿ.. ಭಾರತದಾದ್ಯಂತ ಡೆಂಗ್ಯೂ ಜ್ವರ ವಿಪರೀತವಾಗಿ ಹರಡುತ್ತಿದೆ. ದಯವಿಟ್ಟು ಈ ವಿಷಯವನ್ನು ಹಂಚಿಕೊಳ್ಳುವ ಮೂಲಕ, ಹಲವಾರು ಜೀವಗಳನ್ನು ಉಳಿಸಿದ ಪುಣ್ಯ ನಿಮಗೆ ಸಿಗುತ್ತದೆ ” ಎಂದು ಬರೆದಿರುವ ಪೋಸ್ಟರ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

 

ಈ ಪೋಸ್ಟರ್‌ ಮಾತ್ರವಲ್ಲದೆ ಅನೇಕ ಜನರಲ್ಲಿ ಪಪ್ಪಾಯಿ ಎಲೆಯ ರಸವು ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂಬ ನಂಬಿಕೆಯಿದೆ. ಡೆಂಗ್ಯೂ ರೋಗ ಭಾದಿತರು ಪಪ್ಪಾಯಿ ಎಲೆಯ ರಸ ಕುಡಿಯುತ್ತಲೂ ಇದ್ದಾರೆ. ಪ್ರತಿ ಬಾರಿಯೂ ಡೆಂಗ್ಯೂ ಖಾಯಿಲೆ ಹೆಚ್ಚಾದಾಗ ಪಪ್ಪಾಯಿ ಎಲೆಯ ಕುರಿತ ಸಂದೇಶ ಹರಿದಾಡುತ್ತದೆ.

ಮೇಲಿನ ಪೋಸ್ಟರ್‌ ಅನ್ನು ಹಲವರು ಇದು ಆರ್ಯುವೇದ ಔಷಧಿ ಪದ್ಧತಿ ಇರಬಹುದು ಎಂದು ವ್ಯಾಪಕವಾಗಿ ಶೇರ್‌ ಮಾಡುತ್ತಿದ್ದಾರೆ. ಇನ್ನು ಕೆಲವರು ತಮಗೆ ಪಪ್ಪಾಯಿ ಎಲೆಯಿಂದ ಉಪಯೋಗ ಆಗಿದೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಹಾಗಾಗಿ, ಈ ವೈರಲ್‌ ವಿಷಯದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ.

ಫ್ಯಾಕ್ಟ್‌ ಚೆಕ್ : ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಸುದ್ದಿಯ ಕುರಿತು ಪರಿಶೀಲನೆ ನಡೆಸಲು ಗೂಗಲ್‌ನಲ್ಲಿ ನಾವು ಸಂಬಂಧಿತ ಮಾಹಿತಿ ಹುಡುಕಿದ್ದೇವೆ. ಈ ವೇಳೆ 29 ಸೆಪ್ಟೆಂಬರ್‌ 2023 ರಂದು ಅನ್‌ಲೈನ್‌ ಸುದ್ದಿತಾಣ ಬೂಮ್‌ ಪ್ರಕಟಿಸಿದ “Dragonfruit To Papaya Leaves: Common Dengue Myths Debunked“ಎಂಬ ವರದಿಯೊಂದು ಕಂಡು ಬಂದಿದೆ. ಈ ವರದಿಯಲ್ಲಿ ಡ್ರ್ಯಾಗನ್‌ಪ್ರೂಟ್‌, ಪಪ್ಪಾಯಿ ಎಲೆ, ಹೆಚ್ಚು ನೀರು ಕುಡಿಯುವುದರಿಂದ ಡೆಂಗ್ಯೂ ನಿವಾರಣೆ ಆಗುತ್ತದೆ ಎಂಬ ಸುದ್ದಿಗಳು ಸುಳ್ಳು ಎನ್ನಲಾಗಿದ್ದು. ಈ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ.

ಪಪ್ಪಾಯಿ ಎಲೆಯ ಜ್ಯೂಸ್‌ನಿಂದ ಡೆಂಗ್ಯೂ ನಿವಾರಣೆಯಾಗುತ್ತದೆ ಎಂಬ ಸುದ್ದಿಗೆ ಸಂಬಂಧಿಸಿದಂತೆ 28 ನವೆಂಬರ್ 2019 ರಂದು ದಿ ನ್ಯೂಸ್‌ ಮಿನಿಟ್‌ ಆನ್‌ಲೈನ್‌ ಸುದ್ದಿ ತಾಣ ಕೂಡ ವರದಿ ಪ್ರಕಟಿಸಿತ್ತು. ವರದಿಯಲ್ಲಿ ಡಾಕ್ಟರ್ಸ್ ಅಸೋಸಿಯೇಷನ್ ಫಾರ್ ಸೋಶಿಯಲ್ ಇಕ್ವಾಲಿಟಿ ಕಾರ್ಯದರ್ಶಿ ಡಾ. ಶಾಂತಿ ರವೀಂದ್ರನಾಥ್‌ ಅವರನ್ನು ಸಂಪರ್ಕಿಸಿ ಮಾಹಿತಿ ಪಡೆದ ಬಗ್ಗೆ ಉಲ್ಲೇಖಿಸಲಾಗಿತ್ತು.

ಡಾ. ಶಾಂತಿ ರವೀಂದ್ರನಾಥ್‌ ಅವರು, “ಡೆಂಗ್ಯೂ ರೋಗಕ್ಕೆ ವೈಜ್ಞಾನಿಕ ತಳಹದಿಯ ಆಧಾರಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಹೊಸ ಹೊಸ ಸಂಶೋಧನೆಗಳು ಸಹ ನಡೆಯುತ್ತಿರುತ್ತವೆ. ಆದರೆ, ಪಪ್ಪಾಯಿ ಎಲೆಯ ರಸವು ಡೆಂಗ್ಯೂವನ್ನು ಗುಣಪಡಿಸುತ್ತದೆ ಎಂಬ ಸಮರ್ಥನೆಯನ್ನು ಬೆಂಬಲಿಸಲು ಯಾವುದೇ ವೈದ್ಯಕೀಯ ಆಧಾರವಿಲ್ಲ. ಸಿದ್ಧ ವೈದ್ಯರು ಕೂಡ ಡೆಂಗ್ಯೂಗೆ ಪಪ್ಪಾಯಿ ಎಲೆಯ ರಸವನ್ನು ಶಿಫಾರಸು ಮಾಡಿಲ್ಲ” ಎಂಬುದನ್ನು ಸ್ಪಷ್ಟಪಡಿಸಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿತ್ತು.

ಪಪ್ಪಾಯಿ ಎಲೆಯ ರಸದಿಂದ ರೋಗ ನಿರೋಧಕ ಹೆಚ್ಚಾಗಿ ಡೆಂಗ್ಯೂ ಬಾರದಂತೆ ತಡೆಯುತ್ತದೆ ಎಂಬುವುದರ ಬಗ್ಗೆ ಆರೋಗ್ಯ ಇಲಾಖೆ ಕೂಡ ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ. ಒಂದು ವೇಳೆ ಪಪ್ಪಾಯಿ ಎಲೆ ಸಂಪೂರ್ಣವಾಗಿ ಡೆಂಗ್ಯೂ ಖಾಯಿಲೆಯನ್ನು ನಿರ್ನಾಮ ಮಾಡುತ್ತದೆ ಎಂದರೆ ಈ ಕುರಿತು ಅಧಿಕತ ಸಲಹೆ ಸೂಚನೆಗಳಾದರೂ ಆರೋಗ್ಯ ಇಲಾಖೆಯಿಂದ ಬರುತ್ತಿದ್ದವು. ಹಾಗಾಗಿ, ಪಪ್ಪಾಯಿ ಎಲೆಯ ರಸದಿಂದ ಡೆಂಗ್ಯೂ ಗುಣಪಡಿಸಬಹುದು ಅಥವಾ ಬರದಂತೆ ತಡೆಯಬಹುದು ಎಂಬುವುದು ಜನರಲ್ಲಿರುವ ಒಂದು ಕಲ್ಪನೆ ಮಾತ್ರ ಎನ್ನಬಹುದು.

ಇದನ್ನೂ ಓದಿ : FACT CHECK : ಪೆಟ್ರೋಲ್, ಡೀಸೆಲ್ ಮೇಲೆ ಕೇಂದ್ರ ಸರ್ಕಾರಕ್ಕಿಂತ ರಾಜ್ಯ ಸರ್ಕಾರ ಹೆಚ್ಚಿನ ತೆರಿಗೆ ವಿಧಿಸುತ್ತಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...