Homeಫ್ಯಾಕ್ಟ್‌ಚೆಕ್FACT CHECK : ಪಪ್ಪಾಯಿ ಎಲೆಯ ರಸವು ಡೆಂಗ್ಯೂ ಖಾಯಿಲೆ ಗುಣಪಡಿಸುತ್ತದೆ ಎಂಬುವುದು ಸುಳ್ಳು

FACT CHECK : ಪಪ್ಪಾಯಿ ಎಲೆಯ ರಸವು ಡೆಂಗ್ಯೂ ಖಾಯಿಲೆ ಗುಣಪಡಿಸುತ್ತದೆ ಎಂಬುವುದು ಸುಳ್ಳು

- Advertisement -
- Advertisement -

“ತುರ್ತು ಮಾಹಿತಿ.. ಪಪ್ಪಾಯಿ ಎಲೆಯ ರಸವು ಜೇನು ತುಪ್ಪದೊಂದಿಗೆ ಪವಾಡದಂತೆ ಕೆಲಸ ಮಾಡುತ್ತದೆ. ಪ್ಲೆಟ್ಲೆಟ್‌ ಎಣಿಕೆ 12 ಗಂಟೆಗಳಲ್ಲಿ 68,000 ದಿಂದ 200,000 ದವರೆಗೆ ಏರುತ್ತದೆ. ಮಾನವೀಯತೆಯ ಸೇವೆ ಮಾಡಲು ಈ ಸಂದೇಶವನ್ನು ಇತರರೊಂದಿಗೆ ಹಂಚಿಕೊಳ್ಳಿ.. ಭಾರತದಾದ್ಯಂತ ಡೆಂಗ್ಯೂ ಜ್ವರ ವಿಪರೀತವಾಗಿ ಹರಡುತ್ತಿದೆ. ದಯವಿಟ್ಟು ಈ ವಿಷಯವನ್ನು ಹಂಚಿಕೊಳ್ಳುವ ಮೂಲಕ, ಹಲವಾರು ಜೀವಗಳನ್ನು ಉಳಿಸಿದ ಪುಣ್ಯ ನಿಮಗೆ ಸಿಗುತ್ತದೆ ” ಎಂದು ಬರೆದಿರುವ ಪೋಸ್ಟರ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

 

ಈ ಪೋಸ್ಟರ್‌ ಮಾತ್ರವಲ್ಲದೆ ಅನೇಕ ಜನರಲ್ಲಿ ಪಪ್ಪಾಯಿ ಎಲೆಯ ರಸವು ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂಬ ನಂಬಿಕೆಯಿದೆ. ಡೆಂಗ್ಯೂ ರೋಗ ಭಾದಿತರು ಪಪ್ಪಾಯಿ ಎಲೆಯ ರಸ ಕುಡಿಯುತ್ತಲೂ ಇದ್ದಾರೆ. ಪ್ರತಿ ಬಾರಿಯೂ ಡೆಂಗ್ಯೂ ಖಾಯಿಲೆ ಹೆಚ್ಚಾದಾಗ ಪಪ್ಪಾಯಿ ಎಲೆಯ ಕುರಿತ ಸಂದೇಶ ಹರಿದಾಡುತ್ತದೆ.

ಮೇಲಿನ ಪೋಸ್ಟರ್‌ ಅನ್ನು ಹಲವರು ಇದು ಆರ್ಯುವೇದ ಔಷಧಿ ಪದ್ಧತಿ ಇರಬಹುದು ಎಂದು ವ್ಯಾಪಕವಾಗಿ ಶೇರ್‌ ಮಾಡುತ್ತಿದ್ದಾರೆ. ಇನ್ನು ಕೆಲವರು ತಮಗೆ ಪಪ್ಪಾಯಿ ಎಲೆಯಿಂದ ಉಪಯೋಗ ಆಗಿದೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಹಾಗಾಗಿ, ಈ ವೈರಲ್‌ ವಿಷಯದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ.

ಫ್ಯಾಕ್ಟ್‌ ಚೆಕ್ : ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಸುದ್ದಿಯ ಕುರಿತು ಪರಿಶೀಲನೆ ನಡೆಸಲು ಗೂಗಲ್‌ನಲ್ಲಿ ನಾವು ಸಂಬಂಧಿತ ಮಾಹಿತಿ ಹುಡುಕಿದ್ದೇವೆ. ಈ ವೇಳೆ 29 ಸೆಪ್ಟೆಂಬರ್‌ 2023 ರಂದು ಅನ್‌ಲೈನ್‌ ಸುದ್ದಿತಾಣ ಬೂಮ್‌ ಪ್ರಕಟಿಸಿದ “Dragonfruit To Papaya Leaves: Common Dengue Myths Debunked“ಎಂಬ ವರದಿಯೊಂದು ಕಂಡು ಬಂದಿದೆ. ಈ ವರದಿಯಲ್ಲಿ ಡ್ರ್ಯಾಗನ್‌ಪ್ರೂಟ್‌, ಪಪ್ಪಾಯಿ ಎಲೆ, ಹೆಚ್ಚು ನೀರು ಕುಡಿಯುವುದರಿಂದ ಡೆಂಗ್ಯೂ ನಿವಾರಣೆ ಆಗುತ್ತದೆ ಎಂಬ ಸುದ್ದಿಗಳು ಸುಳ್ಳು ಎನ್ನಲಾಗಿದ್ದು. ಈ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ.

ಪಪ್ಪಾಯಿ ಎಲೆಯ ಜ್ಯೂಸ್‌ನಿಂದ ಡೆಂಗ್ಯೂ ನಿವಾರಣೆಯಾಗುತ್ತದೆ ಎಂಬ ಸುದ್ದಿಗೆ ಸಂಬಂಧಿಸಿದಂತೆ 28 ನವೆಂಬರ್ 2019 ರಂದು ದಿ ನ್ಯೂಸ್‌ ಮಿನಿಟ್‌ ಆನ್‌ಲೈನ್‌ ಸುದ್ದಿ ತಾಣ ಕೂಡ ವರದಿ ಪ್ರಕಟಿಸಿತ್ತು. ವರದಿಯಲ್ಲಿ ಡಾಕ್ಟರ್ಸ್ ಅಸೋಸಿಯೇಷನ್ ಫಾರ್ ಸೋಶಿಯಲ್ ಇಕ್ವಾಲಿಟಿ ಕಾರ್ಯದರ್ಶಿ ಡಾ. ಶಾಂತಿ ರವೀಂದ್ರನಾಥ್‌ ಅವರನ್ನು ಸಂಪರ್ಕಿಸಿ ಮಾಹಿತಿ ಪಡೆದ ಬಗ್ಗೆ ಉಲ್ಲೇಖಿಸಲಾಗಿತ್ತು.

ಡಾ. ಶಾಂತಿ ರವೀಂದ್ರನಾಥ್‌ ಅವರು, “ಡೆಂಗ್ಯೂ ರೋಗಕ್ಕೆ ವೈಜ್ಞಾನಿಕ ತಳಹದಿಯ ಆಧಾರಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಹೊಸ ಹೊಸ ಸಂಶೋಧನೆಗಳು ಸಹ ನಡೆಯುತ್ತಿರುತ್ತವೆ. ಆದರೆ, ಪಪ್ಪಾಯಿ ಎಲೆಯ ರಸವು ಡೆಂಗ್ಯೂವನ್ನು ಗುಣಪಡಿಸುತ್ತದೆ ಎಂಬ ಸಮರ್ಥನೆಯನ್ನು ಬೆಂಬಲಿಸಲು ಯಾವುದೇ ವೈದ್ಯಕೀಯ ಆಧಾರವಿಲ್ಲ. ಸಿದ್ಧ ವೈದ್ಯರು ಕೂಡ ಡೆಂಗ್ಯೂಗೆ ಪಪ್ಪಾಯಿ ಎಲೆಯ ರಸವನ್ನು ಶಿಫಾರಸು ಮಾಡಿಲ್ಲ” ಎಂಬುದನ್ನು ಸ್ಪಷ್ಟಪಡಿಸಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿತ್ತು.

ಪಪ್ಪಾಯಿ ಎಲೆಯ ರಸದಿಂದ ರೋಗ ನಿರೋಧಕ ಹೆಚ್ಚಾಗಿ ಡೆಂಗ್ಯೂ ಬಾರದಂತೆ ತಡೆಯುತ್ತದೆ ಎಂಬುವುದರ ಬಗ್ಗೆ ಆರೋಗ್ಯ ಇಲಾಖೆ ಕೂಡ ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ. ಒಂದು ವೇಳೆ ಪಪ್ಪಾಯಿ ಎಲೆ ಸಂಪೂರ್ಣವಾಗಿ ಡೆಂಗ್ಯೂ ಖಾಯಿಲೆಯನ್ನು ನಿರ್ನಾಮ ಮಾಡುತ್ತದೆ ಎಂದರೆ ಈ ಕುರಿತು ಅಧಿಕತ ಸಲಹೆ ಸೂಚನೆಗಳಾದರೂ ಆರೋಗ್ಯ ಇಲಾಖೆಯಿಂದ ಬರುತ್ತಿದ್ದವು. ಹಾಗಾಗಿ, ಪಪ್ಪಾಯಿ ಎಲೆಯ ರಸದಿಂದ ಡೆಂಗ್ಯೂ ಗುಣಪಡಿಸಬಹುದು ಅಥವಾ ಬರದಂತೆ ತಡೆಯಬಹುದು ಎಂಬುವುದು ಜನರಲ್ಲಿರುವ ಒಂದು ಕಲ್ಪನೆ ಮಾತ್ರ ಎನ್ನಬಹುದು.

ಇದನ್ನೂ ಓದಿ : FACT CHECK : ಪೆಟ್ರೋಲ್, ಡೀಸೆಲ್ ಮೇಲೆ ಕೇಂದ್ರ ಸರ್ಕಾರಕ್ಕಿಂತ ರಾಜ್ಯ ಸರ್ಕಾರ ಹೆಚ್ಚಿನ ತೆರಿಗೆ ವಿಧಿಸುತ್ತಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...