Homeಫ್ಯಾಕ್ಟ್‌ಚೆಕ್FACT CHECK : ಪಪ್ಪಾಯಿ ಎಲೆಯ ರಸವು ಡೆಂಗ್ಯೂ ಖಾಯಿಲೆ ಗುಣಪಡಿಸುತ್ತದೆ ಎಂಬುವುದು ಸುಳ್ಳು

FACT CHECK : ಪಪ್ಪಾಯಿ ಎಲೆಯ ರಸವು ಡೆಂಗ್ಯೂ ಖಾಯಿಲೆ ಗುಣಪಡಿಸುತ್ತದೆ ಎಂಬುವುದು ಸುಳ್ಳು

- Advertisement -
- Advertisement -

“ತುರ್ತು ಮಾಹಿತಿ.. ಪಪ್ಪಾಯಿ ಎಲೆಯ ರಸವು ಜೇನು ತುಪ್ಪದೊಂದಿಗೆ ಪವಾಡದಂತೆ ಕೆಲಸ ಮಾಡುತ್ತದೆ. ಪ್ಲೆಟ್ಲೆಟ್‌ ಎಣಿಕೆ 12 ಗಂಟೆಗಳಲ್ಲಿ 68,000 ದಿಂದ 200,000 ದವರೆಗೆ ಏರುತ್ತದೆ. ಮಾನವೀಯತೆಯ ಸೇವೆ ಮಾಡಲು ಈ ಸಂದೇಶವನ್ನು ಇತರರೊಂದಿಗೆ ಹಂಚಿಕೊಳ್ಳಿ.. ಭಾರತದಾದ್ಯಂತ ಡೆಂಗ್ಯೂ ಜ್ವರ ವಿಪರೀತವಾಗಿ ಹರಡುತ್ತಿದೆ. ದಯವಿಟ್ಟು ಈ ವಿಷಯವನ್ನು ಹಂಚಿಕೊಳ್ಳುವ ಮೂಲಕ, ಹಲವಾರು ಜೀವಗಳನ್ನು ಉಳಿಸಿದ ಪುಣ್ಯ ನಿಮಗೆ ಸಿಗುತ್ತದೆ ” ಎಂದು ಬರೆದಿರುವ ಪೋಸ್ಟರ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

 

ಈ ಪೋಸ್ಟರ್‌ ಮಾತ್ರವಲ್ಲದೆ ಅನೇಕ ಜನರಲ್ಲಿ ಪಪ್ಪಾಯಿ ಎಲೆಯ ರಸವು ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂಬ ನಂಬಿಕೆಯಿದೆ. ಡೆಂಗ್ಯೂ ರೋಗ ಭಾದಿತರು ಪಪ್ಪಾಯಿ ಎಲೆಯ ರಸ ಕುಡಿಯುತ್ತಲೂ ಇದ್ದಾರೆ. ಪ್ರತಿ ಬಾರಿಯೂ ಡೆಂಗ್ಯೂ ಖಾಯಿಲೆ ಹೆಚ್ಚಾದಾಗ ಪಪ್ಪಾಯಿ ಎಲೆಯ ಕುರಿತ ಸಂದೇಶ ಹರಿದಾಡುತ್ತದೆ.

ಮೇಲಿನ ಪೋಸ್ಟರ್‌ ಅನ್ನು ಹಲವರು ಇದು ಆರ್ಯುವೇದ ಔಷಧಿ ಪದ್ಧತಿ ಇರಬಹುದು ಎಂದು ವ್ಯಾಪಕವಾಗಿ ಶೇರ್‌ ಮಾಡುತ್ತಿದ್ದಾರೆ. ಇನ್ನು ಕೆಲವರು ತಮಗೆ ಪಪ್ಪಾಯಿ ಎಲೆಯಿಂದ ಉಪಯೋಗ ಆಗಿದೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಹಾಗಾಗಿ, ಈ ವೈರಲ್‌ ವಿಷಯದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ.

ಫ್ಯಾಕ್ಟ್‌ ಚೆಕ್ : ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಸುದ್ದಿಯ ಕುರಿತು ಪರಿಶೀಲನೆ ನಡೆಸಲು ಗೂಗಲ್‌ನಲ್ಲಿ ನಾವು ಸಂಬಂಧಿತ ಮಾಹಿತಿ ಹುಡುಕಿದ್ದೇವೆ. ಈ ವೇಳೆ 29 ಸೆಪ್ಟೆಂಬರ್‌ 2023 ರಂದು ಅನ್‌ಲೈನ್‌ ಸುದ್ದಿತಾಣ ಬೂಮ್‌ ಪ್ರಕಟಿಸಿದ “Dragonfruit To Papaya Leaves: Common Dengue Myths Debunked“ಎಂಬ ವರದಿಯೊಂದು ಕಂಡು ಬಂದಿದೆ. ಈ ವರದಿಯಲ್ಲಿ ಡ್ರ್ಯಾಗನ್‌ಪ್ರೂಟ್‌, ಪಪ್ಪಾಯಿ ಎಲೆ, ಹೆಚ್ಚು ನೀರು ಕುಡಿಯುವುದರಿಂದ ಡೆಂಗ್ಯೂ ನಿವಾರಣೆ ಆಗುತ್ತದೆ ಎಂಬ ಸುದ್ದಿಗಳು ಸುಳ್ಳು ಎನ್ನಲಾಗಿದ್ದು. ಈ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ.

ಪಪ್ಪಾಯಿ ಎಲೆಯ ಜ್ಯೂಸ್‌ನಿಂದ ಡೆಂಗ್ಯೂ ನಿವಾರಣೆಯಾಗುತ್ತದೆ ಎಂಬ ಸುದ್ದಿಗೆ ಸಂಬಂಧಿಸಿದಂತೆ 28 ನವೆಂಬರ್ 2019 ರಂದು ದಿ ನ್ಯೂಸ್‌ ಮಿನಿಟ್‌ ಆನ್‌ಲೈನ್‌ ಸುದ್ದಿ ತಾಣ ಕೂಡ ವರದಿ ಪ್ರಕಟಿಸಿತ್ತು. ವರದಿಯಲ್ಲಿ ಡಾಕ್ಟರ್ಸ್ ಅಸೋಸಿಯೇಷನ್ ಫಾರ್ ಸೋಶಿಯಲ್ ಇಕ್ವಾಲಿಟಿ ಕಾರ್ಯದರ್ಶಿ ಡಾ. ಶಾಂತಿ ರವೀಂದ್ರನಾಥ್‌ ಅವರನ್ನು ಸಂಪರ್ಕಿಸಿ ಮಾಹಿತಿ ಪಡೆದ ಬಗ್ಗೆ ಉಲ್ಲೇಖಿಸಲಾಗಿತ್ತು.

ಡಾ. ಶಾಂತಿ ರವೀಂದ್ರನಾಥ್‌ ಅವರು, “ಡೆಂಗ್ಯೂ ರೋಗಕ್ಕೆ ವೈಜ್ಞಾನಿಕ ತಳಹದಿಯ ಆಧಾರಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಹೊಸ ಹೊಸ ಸಂಶೋಧನೆಗಳು ಸಹ ನಡೆಯುತ್ತಿರುತ್ತವೆ. ಆದರೆ, ಪಪ್ಪಾಯಿ ಎಲೆಯ ರಸವು ಡೆಂಗ್ಯೂವನ್ನು ಗುಣಪಡಿಸುತ್ತದೆ ಎಂಬ ಸಮರ್ಥನೆಯನ್ನು ಬೆಂಬಲಿಸಲು ಯಾವುದೇ ವೈದ್ಯಕೀಯ ಆಧಾರವಿಲ್ಲ. ಸಿದ್ಧ ವೈದ್ಯರು ಕೂಡ ಡೆಂಗ್ಯೂಗೆ ಪಪ್ಪಾಯಿ ಎಲೆಯ ರಸವನ್ನು ಶಿಫಾರಸು ಮಾಡಿಲ್ಲ” ಎಂಬುದನ್ನು ಸ್ಪಷ್ಟಪಡಿಸಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿತ್ತು.

ಪಪ್ಪಾಯಿ ಎಲೆಯ ರಸದಿಂದ ರೋಗ ನಿರೋಧಕ ಹೆಚ್ಚಾಗಿ ಡೆಂಗ್ಯೂ ಬಾರದಂತೆ ತಡೆಯುತ್ತದೆ ಎಂಬುವುದರ ಬಗ್ಗೆ ಆರೋಗ್ಯ ಇಲಾಖೆ ಕೂಡ ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ. ಒಂದು ವೇಳೆ ಪಪ್ಪಾಯಿ ಎಲೆ ಸಂಪೂರ್ಣವಾಗಿ ಡೆಂಗ್ಯೂ ಖಾಯಿಲೆಯನ್ನು ನಿರ್ನಾಮ ಮಾಡುತ್ತದೆ ಎಂದರೆ ಈ ಕುರಿತು ಅಧಿಕತ ಸಲಹೆ ಸೂಚನೆಗಳಾದರೂ ಆರೋಗ್ಯ ಇಲಾಖೆಯಿಂದ ಬರುತ್ತಿದ್ದವು. ಹಾಗಾಗಿ, ಪಪ್ಪಾಯಿ ಎಲೆಯ ರಸದಿಂದ ಡೆಂಗ್ಯೂ ಗುಣಪಡಿಸಬಹುದು ಅಥವಾ ಬರದಂತೆ ತಡೆಯಬಹುದು ಎಂಬುವುದು ಜನರಲ್ಲಿರುವ ಒಂದು ಕಲ್ಪನೆ ಮಾತ್ರ ಎನ್ನಬಹುದು.

ಇದನ್ನೂ ಓದಿ : FACT CHECK : ಪೆಟ್ರೋಲ್, ಡೀಸೆಲ್ ಮೇಲೆ ಕೇಂದ್ರ ಸರ್ಕಾರಕ್ಕಿಂತ ರಾಜ್ಯ ಸರ್ಕಾರ ಹೆಚ್ಚಿನ ತೆರಿಗೆ ವಿಧಿಸುತ್ತಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...