Homeಫ್ಯಾಕ್ಟ್‌ಚೆಕ್FACT CHECK : ಪಪ್ಪಾಯಿ ಎಲೆಯ ರಸವು ಡೆಂಗ್ಯೂ ಖಾಯಿಲೆ ಗುಣಪಡಿಸುತ್ತದೆ ಎಂಬುವುದು ಸುಳ್ಳು

FACT CHECK : ಪಪ್ಪಾಯಿ ಎಲೆಯ ರಸವು ಡೆಂಗ್ಯೂ ಖಾಯಿಲೆ ಗುಣಪಡಿಸುತ್ತದೆ ಎಂಬುವುದು ಸುಳ್ಳು

- Advertisement -
- Advertisement -

“ತುರ್ತು ಮಾಹಿತಿ.. ಪಪ್ಪಾಯಿ ಎಲೆಯ ರಸವು ಜೇನು ತುಪ್ಪದೊಂದಿಗೆ ಪವಾಡದಂತೆ ಕೆಲಸ ಮಾಡುತ್ತದೆ. ಪ್ಲೆಟ್ಲೆಟ್‌ ಎಣಿಕೆ 12 ಗಂಟೆಗಳಲ್ಲಿ 68,000 ದಿಂದ 200,000 ದವರೆಗೆ ಏರುತ್ತದೆ. ಮಾನವೀಯತೆಯ ಸೇವೆ ಮಾಡಲು ಈ ಸಂದೇಶವನ್ನು ಇತರರೊಂದಿಗೆ ಹಂಚಿಕೊಳ್ಳಿ.. ಭಾರತದಾದ್ಯಂತ ಡೆಂಗ್ಯೂ ಜ್ವರ ವಿಪರೀತವಾಗಿ ಹರಡುತ್ತಿದೆ. ದಯವಿಟ್ಟು ಈ ವಿಷಯವನ್ನು ಹಂಚಿಕೊಳ್ಳುವ ಮೂಲಕ, ಹಲವಾರು ಜೀವಗಳನ್ನು ಉಳಿಸಿದ ಪುಣ್ಯ ನಿಮಗೆ ಸಿಗುತ್ತದೆ ” ಎಂದು ಬರೆದಿರುವ ಪೋಸ್ಟರ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

 

ಈ ಪೋಸ್ಟರ್‌ ಮಾತ್ರವಲ್ಲದೆ ಅನೇಕ ಜನರಲ್ಲಿ ಪಪ್ಪಾಯಿ ಎಲೆಯ ರಸವು ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂಬ ನಂಬಿಕೆಯಿದೆ. ಡೆಂಗ್ಯೂ ರೋಗ ಭಾದಿತರು ಪಪ್ಪಾಯಿ ಎಲೆಯ ರಸ ಕುಡಿಯುತ್ತಲೂ ಇದ್ದಾರೆ. ಪ್ರತಿ ಬಾರಿಯೂ ಡೆಂಗ್ಯೂ ಖಾಯಿಲೆ ಹೆಚ್ಚಾದಾಗ ಪಪ್ಪಾಯಿ ಎಲೆಯ ಕುರಿತ ಸಂದೇಶ ಹರಿದಾಡುತ್ತದೆ.

ಮೇಲಿನ ಪೋಸ್ಟರ್‌ ಅನ್ನು ಹಲವರು ಇದು ಆರ್ಯುವೇದ ಔಷಧಿ ಪದ್ಧತಿ ಇರಬಹುದು ಎಂದು ವ್ಯಾಪಕವಾಗಿ ಶೇರ್‌ ಮಾಡುತ್ತಿದ್ದಾರೆ. ಇನ್ನು ಕೆಲವರು ತಮಗೆ ಪಪ್ಪಾಯಿ ಎಲೆಯಿಂದ ಉಪಯೋಗ ಆಗಿದೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಹಾಗಾಗಿ, ಈ ವೈರಲ್‌ ವಿಷಯದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ.

ಫ್ಯಾಕ್ಟ್‌ ಚೆಕ್ : ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಸುದ್ದಿಯ ಕುರಿತು ಪರಿಶೀಲನೆ ನಡೆಸಲು ಗೂಗಲ್‌ನಲ್ಲಿ ನಾವು ಸಂಬಂಧಿತ ಮಾಹಿತಿ ಹುಡುಕಿದ್ದೇವೆ. ಈ ವೇಳೆ 29 ಸೆಪ್ಟೆಂಬರ್‌ 2023 ರಂದು ಅನ್‌ಲೈನ್‌ ಸುದ್ದಿತಾಣ ಬೂಮ್‌ ಪ್ರಕಟಿಸಿದ “Dragonfruit To Papaya Leaves: Common Dengue Myths Debunked“ಎಂಬ ವರದಿಯೊಂದು ಕಂಡು ಬಂದಿದೆ. ಈ ವರದಿಯಲ್ಲಿ ಡ್ರ್ಯಾಗನ್‌ಪ್ರೂಟ್‌, ಪಪ್ಪಾಯಿ ಎಲೆ, ಹೆಚ್ಚು ನೀರು ಕುಡಿಯುವುದರಿಂದ ಡೆಂಗ್ಯೂ ನಿವಾರಣೆ ಆಗುತ್ತದೆ ಎಂಬ ಸುದ್ದಿಗಳು ಸುಳ್ಳು ಎನ್ನಲಾಗಿದ್ದು. ಈ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ.

ಪಪ್ಪಾಯಿ ಎಲೆಯ ಜ್ಯೂಸ್‌ನಿಂದ ಡೆಂಗ್ಯೂ ನಿವಾರಣೆಯಾಗುತ್ತದೆ ಎಂಬ ಸುದ್ದಿಗೆ ಸಂಬಂಧಿಸಿದಂತೆ 28 ನವೆಂಬರ್ 2019 ರಂದು ದಿ ನ್ಯೂಸ್‌ ಮಿನಿಟ್‌ ಆನ್‌ಲೈನ್‌ ಸುದ್ದಿ ತಾಣ ಕೂಡ ವರದಿ ಪ್ರಕಟಿಸಿತ್ತು. ವರದಿಯಲ್ಲಿ ಡಾಕ್ಟರ್ಸ್ ಅಸೋಸಿಯೇಷನ್ ಫಾರ್ ಸೋಶಿಯಲ್ ಇಕ್ವಾಲಿಟಿ ಕಾರ್ಯದರ್ಶಿ ಡಾ. ಶಾಂತಿ ರವೀಂದ್ರನಾಥ್‌ ಅವರನ್ನು ಸಂಪರ್ಕಿಸಿ ಮಾಹಿತಿ ಪಡೆದ ಬಗ್ಗೆ ಉಲ್ಲೇಖಿಸಲಾಗಿತ್ತು.

ಡಾ. ಶಾಂತಿ ರವೀಂದ್ರನಾಥ್‌ ಅವರು, “ಡೆಂಗ್ಯೂ ರೋಗಕ್ಕೆ ವೈಜ್ಞಾನಿಕ ತಳಹದಿಯ ಆಧಾರಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಹೊಸ ಹೊಸ ಸಂಶೋಧನೆಗಳು ಸಹ ನಡೆಯುತ್ತಿರುತ್ತವೆ. ಆದರೆ, ಪಪ್ಪಾಯಿ ಎಲೆಯ ರಸವು ಡೆಂಗ್ಯೂವನ್ನು ಗುಣಪಡಿಸುತ್ತದೆ ಎಂಬ ಸಮರ್ಥನೆಯನ್ನು ಬೆಂಬಲಿಸಲು ಯಾವುದೇ ವೈದ್ಯಕೀಯ ಆಧಾರವಿಲ್ಲ. ಸಿದ್ಧ ವೈದ್ಯರು ಕೂಡ ಡೆಂಗ್ಯೂಗೆ ಪಪ್ಪಾಯಿ ಎಲೆಯ ರಸವನ್ನು ಶಿಫಾರಸು ಮಾಡಿಲ್ಲ” ಎಂಬುದನ್ನು ಸ್ಪಷ್ಟಪಡಿಸಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿತ್ತು.

ಪಪ್ಪಾಯಿ ಎಲೆಯ ರಸದಿಂದ ರೋಗ ನಿರೋಧಕ ಹೆಚ್ಚಾಗಿ ಡೆಂಗ್ಯೂ ಬಾರದಂತೆ ತಡೆಯುತ್ತದೆ ಎಂಬುವುದರ ಬಗ್ಗೆ ಆರೋಗ್ಯ ಇಲಾಖೆ ಕೂಡ ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ. ಒಂದು ವೇಳೆ ಪಪ್ಪಾಯಿ ಎಲೆ ಸಂಪೂರ್ಣವಾಗಿ ಡೆಂಗ್ಯೂ ಖಾಯಿಲೆಯನ್ನು ನಿರ್ನಾಮ ಮಾಡುತ್ತದೆ ಎಂದರೆ ಈ ಕುರಿತು ಅಧಿಕತ ಸಲಹೆ ಸೂಚನೆಗಳಾದರೂ ಆರೋಗ್ಯ ಇಲಾಖೆಯಿಂದ ಬರುತ್ತಿದ್ದವು. ಹಾಗಾಗಿ, ಪಪ್ಪಾಯಿ ಎಲೆಯ ರಸದಿಂದ ಡೆಂಗ್ಯೂ ಗುಣಪಡಿಸಬಹುದು ಅಥವಾ ಬರದಂತೆ ತಡೆಯಬಹುದು ಎಂಬುವುದು ಜನರಲ್ಲಿರುವ ಒಂದು ಕಲ್ಪನೆ ಮಾತ್ರ ಎನ್ನಬಹುದು.

ಇದನ್ನೂ ಓದಿ : FACT CHECK : ಪೆಟ್ರೋಲ್, ಡೀಸೆಲ್ ಮೇಲೆ ಕೇಂದ್ರ ಸರ್ಕಾರಕ್ಕಿಂತ ರಾಜ್ಯ ಸರ್ಕಾರ ಹೆಚ್ಚಿನ ತೆರಿಗೆ ವಿಧಿಸುತ್ತಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...