Homeಫ್ಯಾಕ್ಟ್‌ಚೆಕ್FACT CHECK : ಪಪ್ಪಾಯಿ ಎಲೆಯ ರಸವು ಡೆಂಗ್ಯೂ ಖಾಯಿಲೆ ಗುಣಪಡಿಸುತ್ತದೆ ಎಂಬುವುದು ಸುಳ್ಳು

FACT CHECK : ಪಪ್ಪಾಯಿ ಎಲೆಯ ರಸವು ಡೆಂಗ್ಯೂ ಖಾಯಿಲೆ ಗುಣಪಡಿಸುತ್ತದೆ ಎಂಬುವುದು ಸುಳ್ಳು

- Advertisement -
- Advertisement -

“ತುರ್ತು ಮಾಹಿತಿ.. ಪಪ್ಪಾಯಿ ಎಲೆಯ ರಸವು ಜೇನು ತುಪ್ಪದೊಂದಿಗೆ ಪವಾಡದಂತೆ ಕೆಲಸ ಮಾಡುತ್ತದೆ. ಪ್ಲೆಟ್ಲೆಟ್‌ ಎಣಿಕೆ 12 ಗಂಟೆಗಳಲ್ಲಿ 68,000 ದಿಂದ 200,000 ದವರೆಗೆ ಏರುತ್ತದೆ. ಮಾನವೀಯತೆಯ ಸೇವೆ ಮಾಡಲು ಈ ಸಂದೇಶವನ್ನು ಇತರರೊಂದಿಗೆ ಹಂಚಿಕೊಳ್ಳಿ.. ಭಾರತದಾದ್ಯಂತ ಡೆಂಗ್ಯೂ ಜ್ವರ ವಿಪರೀತವಾಗಿ ಹರಡುತ್ತಿದೆ. ದಯವಿಟ್ಟು ಈ ವಿಷಯವನ್ನು ಹಂಚಿಕೊಳ್ಳುವ ಮೂಲಕ, ಹಲವಾರು ಜೀವಗಳನ್ನು ಉಳಿಸಿದ ಪುಣ್ಯ ನಿಮಗೆ ಸಿಗುತ್ತದೆ ” ಎಂದು ಬರೆದಿರುವ ಪೋಸ್ಟರ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

 

ಈ ಪೋಸ್ಟರ್‌ ಮಾತ್ರವಲ್ಲದೆ ಅನೇಕ ಜನರಲ್ಲಿ ಪಪ್ಪಾಯಿ ಎಲೆಯ ರಸವು ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂಬ ನಂಬಿಕೆಯಿದೆ. ಡೆಂಗ್ಯೂ ರೋಗ ಭಾದಿತರು ಪಪ್ಪಾಯಿ ಎಲೆಯ ರಸ ಕುಡಿಯುತ್ತಲೂ ಇದ್ದಾರೆ. ಪ್ರತಿ ಬಾರಿಯೂ ಡೆಂಗ್ಯೂ ಖಾಯಿಲೆ ಹೆಚ್ಚಾದಾಗ ಪಪ್ಪಾಯಿ ಎಲೆಯ ಕುರಿತ ಸಂದೇಶ ಹರಿದಾಡುತ್ತದೆ.

ಮೇಲಿನ ಪೋಸ್ಟರ್‌ ಅನ್ನು ಹಲವರು ಇದು ಆರ್ಯುವೇದ ಔಷಧಿ ಪದ್ಧತಿ ಇರಬಹುದು ಎಂದು ವ್ಯಾಪಕವಾಗಿ ಶೇರ್‌ ಮಾಡುತ್ತಿದ್ದಾರೆ. ಇನ್ನು ಕೆಲವರು ತಮಗೆ ಪಪ್ಪಾಯಿ ಎಲೆಯಿಂದ ಉಪಯೋಗ ಆಗಿದೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಹಾಗಾಗಿ, ಈ ವೈರಲ್‌ ವಿಷಯದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ.

ಫ್ಯಾಕ್ಟ್‌ ಚೆಕ್ : ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಸುದ್ದಿಯ ಕುರಿತು ಪರಿಶೀಲನೆ ನಡೆಸಲು ಗೂಗಲ್‌ನಲ್ಲಿ ನಾವು ಸಂಬಂಧಿತ ಮಾಹಿತಿ ಹುಡುಕಿದ್ದೇವೆ. ಈ ವೇಳೆ 29 ಸೆಪ್ಟೆಂಬರ್‌ 2023 ರಂದು ಅನ್‌ಲೈನ್‌ ಸುದ್ದಿತಾಣ ಬೂಮ್‌ ಪ್ರಕಟಿಸಿದ “Dragonfruit To Papaya Leaves: Common Dengue Myths Debunked“ಎಂಬ ವರದಿಯೊಂದು ಕಂಡು ಬಂದಿದೆ. ಈ ವರದಿಯಲ್ಲಿ ಡ್ರ್ಯಾಗನ್‌ಪ್ರೂಟ್‌, ಪಪ್ಪಾಯಿ ಎಲೆ, ಹೆಚ್ಚು ನೀರು ಕುಡಿಯುವುದರಿಂದ ಡೆಂಗ್ಯೂ ನಿವಾರಣೆ ಆಗುತ್ತದೆ ಎಂಬ ಸುದ್ದಿಗಳು ಸುಳ್ಳು ಎನ್ನಲಾಗಿದ್ದು. ಈ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ.

ಪಪ್ಪಾಯಿ ಎಲೆಯ ಜ್ಯೂಸ್‌ನಿಂದ ಡೆಂಗ್ಯೂ ನಿವಾರಣೆಯಾಗುತ್ತದೆ ಎಂಬ ಸುದ್ದಿಗೆ ಸಂಬಂಧಿಸಿದಂತೆ 28 ನವೆಂಬರ್ 2019 ರಂದು ದಿ ನ್ಯೂಸ್‌ ಮಿನಿಟ್‌ ಆನ್‌ಲೈನ್‌ ಸುದ್ದಿ ತಾಣ ಕೂಡ ವರದಿ ಪ್ರಕಟಿಸಿತ್ತು. ವರದಿಯಲ್ಲಿ ಡಾಕ್ಟರ್ಸ್ ಅಸೋಸಿಯೇಷನ್ ಫಾರ್ ಸೋಶಿಯಲ್ ಇಕ್ವಾಲಿಟಿ ಕಾರ್ಯದರ್ಶಿ ಡಾ. ಶಾಂತಿ ರವೀಂದ್ರನಾಥ್‌ ಅವರನ್ನು ಸಂಪರ್ಕಿಸಿ ಮಾಹಿತಿ ಪಡೆದ ಬಗ್ಗೆ ಉಲ್ಲೇಖಿಸಲಾಗಿತ್ತು.

ಡಾ. ಶಾಂತಿ ರವೀಂದ್ರನಾಥ್‌ ಅವರು, “ಡೆಂಗ್ಯೂ ರೋಗಕ್ಕೆ ವೈಜ್ಞಾನಿಕ ತಳಹದಿಯ ಆಧಾರಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಹೊಸ ಹೊಸ ಸಂಶೋಧನೆಗಳು ಸಹ ನಡೆಯುತ್ತಿರುತ್ತವೆ. ಆದರೆ, ಪಪ್ಪಾಯಿ ಎಲೆಯ ರಸವು ಡೆಂಗ್ಯೂವನ್ನು ಗುಣಪಡಿಸುತ್ತದೆ ಎಂಬ ಸಮರ್ಥನೆಯನ್ನು ಬೆಂಬಲಿಸಲು ಯಾವುದೇ ವೈದ್ಯಕೀಯ ಆಧಾರವಿಲ್ಲ. ಸಿದ್ಧ ವೈದ್ಯರು ಕೂಡ ಡೆಂಗ್ಯೂಗೆ ಪಪ್ಪಾಯಿ ಎಲೆಯ ರಸವನ್ನು ಶಿಫಾರಸು ಮಾಡಿಲ್ಲ” ಎಂಬುದನ್ನು ಸ್ಪಷ್ಟಪಡಿಸಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿತ್ತು.

ಪಪ್ಪಾಯಿ ಎಲೆಯ ರಸದಿಂದ ರೋಗ ನಿರೋಧಕ ಹೆಚ್ಚಾಗಿ ಡೆಂಗ್ಯೂ ಬಾರದಂತೆ ತಡೆಯುತ್ತದೆ ಎಂಬುವುದರ ಬಗ್ಗೆ ಆರೋಗ್ಯ ಇಲಾಖೆ ಕೂಡ ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ. ಒಂದು ವೇಳೆ ಪಪ್ಪಾಯಿ ಎಲೆ ಸಂಪೂರ್ಣವಾಗಿ ಡೆಂಗ್ಯೂ ಖಾಯಿಲೆಯನ್ನು ನಿರ್ನಾಮ ಮಾಡುತ್ತದೆ ಎಂದರೆ ಈ ಕುರಿತು ಅಧಿಕತ ಸಲಹೆ ಸೂಚನೆಗಳಾದರೂ ಆರೋಗ್ಯ ಇಲಾಖೆಯಿಂದ ಬರುತ್ತಿದ್ದವು. ಹಾಗಾಗಿ, ಪಪ್ಪಾಯಿ ಎಲೆಯ ರಸದಿಂದ ಡೆಂಗ್ಯೂ ಗುಣಪಡಿಸಬಹುದು ಅಥವಾ ಬರದಂತೆ ತಡೆಯಬಹುದು ಎಂಬುವುದು ಜನರಲ್ಲಿರುವ ಒಂದು ಕಲ್ಪನೆ ಮಾತ್ರ ಎನ್ನಬಹುದು.

ಇದನ್ನೂ ಓದಿ : FACT CHECK : ಪೆಟ್ರೋಲ್, ಡೀಸೆಲ್ ಮೇಲೆ ಕೇಂದ್ರ ಸರ್ಕಾರಕ್ಕಿಂತ ರಾಜ್ಯ ಸರ್ಕಾರ ಹೆಚ್ಚಿನ ತೆರಿಗೆ ವಿಧಿಸುತ್ತಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...