Homeಫ್ಯಾಕ್ಟ್‌ಚೆಕ್Fact Check: ಮೋದಿ ಗೆಲ್ತಾರೆ ಎಂದಿದ್ದಕ್ಕೆ ತಮಿಳುನಾಡಿನಲ್ಲಿ ಗಿಣಿ ಶಾಸ್ತ್ರದವರನ್ನು ಬಂಧಿಸಲಾಗಿದೆ ಎಂಬುವುದು ಸುಳ್ಳು

Fact Check: ಮೋದಿ ಗೆಲ್ತಾರೆ ಎಂದಿದ್ದಕ್ಕೆ ತಮಿಳುನಾಡಿನಲ್ಲಿ ಗಿಣಿ ಶಾಸ್ತ್ರದವರನ್ನು ಬಂಧಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

“ತಮಿಳುನಾಡಿನಲ್ಲಿ ಮೋದಿ (ಬಿಜೆಪಿ) ಗೆಲ್ತಾರೆ ಎಂದು ಭವಿಷ್ಯ ಹೇಳಿದ್ದಕ್ಕೆ ಗಿಣಿ ಶಾಸ್ತ್ರದವನನ್ನು ಪೊಲೀಸರು ಬಂಧಿಸಿದ್ದಾರೆ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗ್ತಿದೆ.

ಹಿಂದುತ್ವ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಈ ವಿಡಿಯೋ ಹಂಚಿಕೊಂಡಿದ್ದು, “ಮೋದಿ ಗೆಲ್ತಾರೆ ಅಂದಿದ್ದಕ್ಕೆ ಬಡಪಾಯಿ ಗಿಣಿ ಶಾಸ್ತ್ರದವನನ್ನು ಜೈಲಿಗಟ್ಟಿದ ತಮಿಳುನಾಡು ಸರ್ಕಾರ! ಆದರೆ ಸರ್ವಾಧಿಕಾರಿ ಮಾತ್ರ ಮೋದಿಯೇ!!” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋಗೆ ಸಂಬಂಧಿಸಿದಂತೆ ನಾನುಗೌರಿ.ಕಾಂ ಸತ್ಯಾಸತ್ಯತೆಯನ್ನು ಪರಿಶೀಲನೆ ನಡೆಸಿದೆ.

ವಿಡಿಯೋಗೆ ಸಂಬಂಧಿಸಿಂತೆ ಏಪ್ರಿಲ್ 10, 2024ರಂದು ಎಬಿಪಿ ನ್ಯೂಸ್ ಸುದ್ದಿಯೊಂದನ್ನು ಪ್ರಕಟಿಸಿದ್ದು, ಸುದ್ದಿಯಲ್ಲಿ “ರಾಜ್ಯದ ಕಡಲೂರು (ಗುಡಲ್ಲೂರು) ಜಿಲ್ಲೆಯಲ್ಲಿ ಗಿಳಿಯನ್ನು ಬಂಧಿಸಿದಟ್ಟಿದ್ದ ಸೆಲ್ವರಾಜ್ ಎಂಬ ಗಿಣಿ ಶಾಸ್ತ್ರ ಹೇಳುವ ವ್ಯಕ್ತಿಯನ್ನು ಮಂಗಳವಾರ ಬಂಧಿಸಲಾಗಿದೆ. ಬಳಿಕ ಎಚ್ಚರಿಕೆ ನೀಡಿ ಬಿಡುಗಡೆಗೊಳಿಸಲಾಗಿದೆ” ಎಂದು ಹೇಳಲಾಗಿದೆ.

“ಗಿಣಿ ಶಾಸ್ತ್ರದ ಸೆಲ್ವರಾಜ್ ಅವರು ಕಡಲೂರು ಕ್ಷೇತ್ರದಲ್ಲಿ ಎನ್‌ಡಿಎ ಮೈತ್ರಿಕೂಟದ ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ಪಕ್ಷದ ಅಭ್ಯರ್ಥಿ ಥಂಗರ್ ಬಾಚನ್ ಅವರು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಗೆಲುವು ದಾಖಲಿಸಲಿದ್ದಾರೆ ಎಂದು ಹೇಳಿದ್ದರು. ಈ ಕುರಿತ ವಿಡಿಯೋ ವೈರಲ್ ಆದ ಬಳಿಕ, ಗಿಳಿಯನ್ನು ಬಂಧಿಸಿಟ್ಟಿದ್ದ ಸೆಲ್ವರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.

“ವಿಡಿಯೋ ವೈರಲ್ ಆದ ನಂತರ ಕಡಲೂರು ಜಿಲ್ಲಾ ಅರಣ್ಯ ಇಲಾಖೆಯು ಹಸಿರು ಗಿಣಿಯನ್ನು ಪಂಜರದಲ್ಲಿ ಬಂಧಿಸಿಟ್ಟಿದ್ದ ಭವಿಷ್ಯ ಹೇಳುವ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಂಡಿದೆ” ಎಂದು ಸ್ಪಷ್ಟವಾಗಿ ತಿಳಿಸಿದೆ.

ಸುದ್ದಿ ಲಿಂಕ್ ಇಲ್ಲಿದೆ 

ಏಪ್ರಿಲ್ 10, 2024ರಂದು ಇಂಡಿಯಾ ಟುಡೇ ಪ್ರಕಟಿಸಿದ ಸುದ್ದಿಯಲ್ಲೂ “ಗಿಳಿಗಳನ್ನು ಸೆರೆಯಲ್ಲಿಟ್ಟಿದ್ದಕ್ಕಾಗಿ ತಮಿಳುನಾಡಿನ ಕಡಲೂರಿನಲ್ಲಿ ಭವಿಷ್ಯ ಹೇಳುವವರನ್ನು ಬಂಧಿಸಲಾಗಿದೆ. ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ಕಡಲೂರು ಕ್ಷೇತ್ರದ ಅಭ್ಯರ್ಥಿ ಥಂಗರ್ ಬಾಚನ್ ಅವರ ಚುನಾವಣಾ ಗೆಲುವಿನ ಭವಿಷ್ಯ ನುಡಿದ ಸೆಲ್ವರಾಜ್ ಎಂಬ ಭವಿಷ್ಯಕಾರನ ವಿಡಿಯೋ ವೈರಲ್ ಆಗಿತ್ತು. ವಿಡಿಯೋ ನೋಡಿದ ಜಿಲ್ಲಾ ಅರಣ್ಯ ಇಲಾಖೆ ಕ್ರಮ ಕೈಗೊಂಡಿದೆ ಎಂದು ಹೇಳಿದೆ.

ಸುದ್ದಿ ಲಿಂಕ್ ಇಲ್ಲಿದೆ 

ವರದಿಗಳ ಪ್ರಕಾರ, ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸಿದ ಕಾರಣ ಎರಡು ಪಂಜರಗಳಲ್ಲಿ ಇರಿಸಲಾಗಿದ್ದ ನಾಲ್ಕು ಗಿಳಿಗಳನ್ನು ಅರಣ್ಯ ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಇಬ್ಬರು ಜ್ಯೋತಿಷಿ ಸಹೋದರರಿಗೆ ಇಂಥ ತಪ್ಪು ಮುಂದೆ ಮಾಡದಿರಿ ಎಂದು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

ಇವಿಷ್ಟು ಮಾತ್ರವಲ್ಲದೆ, ಇನ್ನಿತರ ಎಲ್ಲಾ ಮಾಧ್ಯಮಗಳ ಸುದ್ದಿಗಳಲ್ಲೂ ಗಿಳಿಯನ್ನು ಬಂಧಿಸಿಟ್ಟಿದ್ದಕ್ಕಾಗಿ ಗಿಣಿ ಶಾಸ್ತ್ರದವನನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ. ಎಲ್ಲಿಯೂ ಎನ್‌ಡಿಎ ಅಭ್ಯರ್ಥಿ ಗೆಲುವು ದಾಖಲಿಸಿದ್ದಾರೆ ಎಂದಿದ್ದಕ್ಕೆ ಬಂಧಿಸಿದ್ದಾರೆ ಎಂದಿಲ್ಲ. ಹಾಗಾಗಿ. ಚಕ್ರವರ್ತಿ ಸೂಲಿಬೆಲೆ ಸೇರಿದಂತೆ ಅನೇಕರು ಹೇಳಿದಂತೆ ರಾಜಕೀಯ ಭವಿಷ್ಯ ಹೇಳಿದ್ದಕ್ಕೆ ತಮಿಳುನಾಡಿ ಡಿಎಂಕೆ ಸರ್ಕಾರ ಗಿಣಿ ಶಾಸ್ತ್ರದವರನ್ನೇ ಬಂಧಿಸಿದೆ ಎಂಬುವುದು ಸುಳ್ಳು

ಇದನ್ನೂ ಓದಿ : Fact Check: ರಾಹುಲ್‌ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಪಾಕಿಸ್ತಾನದ ಧ್ವಜ ಪ್ರದರ್ಶಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...