Homeಫ್ಯಾಕ್ಟ್‌ಚೆಕ್Fact Check: ಮೋದಿ ಗೆಲ್ತಾರೆ ಎಂದಿದ್ದಕ್ಕೆ ತಮಿಳುನಾಡಿನಲ್ಲಿ ಗಿಣಿ ಶಾಸ್ತ್ರದವರನ್ನು ಬಂಧಿಸಲಾಗಿದೆ ಎಂಬುವುದು ಸುಳ್ಳು

Fact Check: ಮೋದಿ ಗೆಲ್ತಾರೆ ಎಂದಿದ್ದಕ್ಕೆ ತಮಿಳುನಾಡಿನಲ್ಲಿ ಗಿಣಿ ಶಾಸ್ತ್ರದವರನ್ನು ಬಂಧಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

“ತಮಿಳುನಾಡಿನಲ್ಲಿ ಮೋದಿ (ಬಿಜೆಪಿ) ಗೆಲ್ತಾರೆ ಎಂದು ಭವಿಷ್ಯ ಹೇಳಿದ್ದಕ್ಕೆ ಗಿಣಿ ಶಾಸ್ತ್ರದವನನ್ನು ಪೊಲೀಸರು ಬಂಧಿಸಿದ್ದಾರೆ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗ್ತಿದೆ.

ಹಿಂದುತ್ವ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಈ ವಿಡಿಯೋ ಹಂಚಿಕೊಂಡಿದ್ದು, “ಮೋದಿ ಗೆಲ್ತಾರೆ ಅಂದಿದ್ದಕ್ಕೆ ಬಡಪಾಯಿ ಗಿಣಿ ಶಾಸ್ತ್ರದವನನ್ನು ಜೈಲಿಗಟ್ಟಿದ ತಮಿಳುನಾಡು ಸರ್ಕಾರ! ಆದರೆ ಸರ್ವಾಧಿಕಾರಿ ಮಾತ್ರ ಮೋದಿಯೇ!!” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋಗೆ ಸಂಬಂಧಿಸಿದಂತೆ ನಾನುಗೌರಿ.ಕಾಂ ಸತ್ಯಾಸತ್ಯತೆಯನ್ನು ಪರಿಶೀಲನೆ ನಡೆಸಿದೆ.

ವಿಡಿಯೋಗೆ ಸಂಬಂಧಿಸಿಂತೆ ಏಪ್ರಿಲ್ 10, 2024ರಂದು ಎಬಿಪಿ ನ್ಯೂಸ್ ಸುದ್ದಿಯೊಂದನ್ನು ಪ್ರಕಟಿಸಿದ್ದು, ಸುದ್ದಿಯಲ್ಲಿ “ರಾಜ್ಯದ ಕಡಲೂರು (ಗುಡಲ್ಲೂರು) ಜಿಲ್ಲೆಯಲ್ಲಿ ಗಿಳಿಯನ್ನು ಬಂಧಿಸಿದಟ್ಟಿದ್ದ ಸೆಲ್ವರಾಜ್ ಎಂಬ ಗಿಣಿ ಶಾಸ್ತ್ರ ಹೇಳುವ ವ್ಯಕ್ತಿಯನ್ನು ಮಂಗಳವಾರ ಬಂಧಿಸಲಾಗಿದೆ. ಬಳಿಕ ಎಚ್ಚರಿಕೆ ನೀಡಿ ಬಿಡುಗಡೆಗೊಳಿಸಲಾಗಿದೆ” ಎಂದು ಹೇಳಲಾಗಿದೆ.

“ಗಿಣಿ ಶಾಸ್ತ್ರದ ಸೆಲ್ವರಾಜ್ ಅವರು ಕಡಲೂರು ಕ್ಷೇತ್ರದಲ್ಲಿ ಎನ್‌ಡಿಎ ಮೈತ್ರಿಕೂಟದ ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ಪಕ್ಷದ ಅಭ್ಯರ್ಥಿ ಥಂಗರ್ ಬಾಚನ್ ಅವರು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಗೆಲುವು ದಾಖಲಿಸಲಿದ್ದಾರೆ ಎಂದು ಹೇಳಿದ್ದರು. ಈ ಕುರಿತ ವಿಡಿಯೋ ವೈರಲ್ ಆದ ಬಳಿಕ, ಗಿಳಿಯನ್ನು ಬಂಧಿಸಿಟ್ಟಿದ್ದ ಸೆಲ್ವರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.

“ವಿಡಿಯೋ ವೈರಲ್ ಆದ ನಂತರ ಕಡಲೂರು ಜಿಲ್ಲಾ ಅರಣ್ಯ ಇಲಾಖೆಯು ಹಸಿರು ಗಿಣಿಯನ್ನು ಪಂಜರದಲ್ಲಿ ಬಂಧಿಸಿಟ್ಟಿದ್ದ ಭವಿಷ್ಯ ಹೇಳುವ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಂಡಿದೆ” ಎಂದು ಸ್ಪಷ್ಟವಾಗಿ ತಿಳಿಸಿದೆ.

ಸುದ್ದಿ ಲಿಂಕ್ ಇಲ್ಲಿದೆ 

ಏಪ್ರಿಲ್ 10, 2024ರಂದು ಇಂಡಿಯಾ ಟುಡೇ ಪ್ರಕಟಿಸಿದ ಸುದ್ದಿಯಲ್ಲೂ “ಗಿಳಿಗಳನ್ನು ಸೆರೆಯಲ್ಲಿಟ್ಟಿದ್ದಕ್ಕಾಗಿ ತಮಿಳುನಾಡಿನ ಕಡಲೂರಿನಲ್ಲಿ ಭವಿಷ್ಯ ಹೇಳುವವರನ್ನು ಬಂಧಿಸಲಾಗಿದೆ. ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ಕಡಲೂರು ಕ್ಷೇತ್ರದ ಅಭ್ಯರ್ಥಿ ಥಂಗರ್ ಬಾಚನ್ ಅವರ ಚುನಾವಣಾ ಗೆಲುವಿನ ಭವಿಷ್ಯ ನುಡಿದ ಸೆಲ್ವರಾಜ್ ಎಂಬ ಭವಿಷ್ಯಕಾರನ ವಿಡಿಯೋ ವೈರಲ್ ಆಗಿತ್ತು. ವಿಡಿಯೋ ನೋಡಿದ ಜಿಲ್ಲಾ ಅರಣ್ಯ ಇಲಾಖೆ ಕ್ರಮ ಕೈಗೊಂಡಿದೆ ಎಂದು ಹೇಳಿದೆ.

ಸುದ್ದಿ ಲಿಂಕ್ ಇಲ್ಲಿದೆ 

ವರದಿಗಳ ಪ್ರಕಾರ, ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸಿದ ಕಾರಣ ಎರಡು ಪಂಜರಗಳಲ್ಲಿ ಇರಿಸಲಾಗಿದ್ದ ನಾಲ್ಕು ಗಿಳಿಗಳನ್ನು ಅರಣ್ಯ ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಇಬ್ಬರು ಜ್ಯೋತಿಷಿ ಸಹೋದರರಿಗೆ ಇಂಥ ತಪ್ಪು ಮುಂದೆ ಮಾಡದಿರಿ ಎಂದು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

ಇವಿಷ್ಟು ಮಾತ್ರವಲ್ಲದೆ, ಇನ್ನಿತರ ಎಲ್ಲಾ ಮಾಧ್ಯಮಗಳ ಸುದ್ದಿಗಳಲ್ಲೂ ಗಿಳಿಯನ್ನು ಬಂಧಿಸಿಟ್ಟಿದ್ದಕ್ಕಾಗಿ ಗಿಣಿ ಶಾಸ್ತ್ರದವನನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ. ಎಲ್ಲಿಯೂ ಎನ್‌ಡಿಎ ಅಭ್ಯರ್ಥಿ ಗೆಲುವು ದಾಖಲಿಸಿದ್ದಾರೆ ಎಂದಿದ್ದಕ್ಕೆ ಬಂಧಿಸಿದ್ದಾರೆ ಎಂದಿಲ್ಲ. ಹಾಗಾಗಿ. ಚಕ್ರವರ್ತಿ ಸೂಲಿಬೆಲೆ ಸೇರಿದಂತೆ ಅನೇಕರು ಹೇಳಿದಂತೆ ರಾಜಕೀಯ ಭವಿಷ್ಯ ಹೇಳಿದ್ದಕ್ಕೆ ತಮಿಳುನಾಡಿ ಡಿಎಂಕೆ ಸರ್ಕಾರ ಗಿಣಿ ಶಾಸ್ತ್ರದವರನ್ನೇ ಬಂಧಿಸಿದೆ ಎಂಬುವುದು ಸುಳ್ಳು

ಇದನ್ನೂ ಓದಿ : Fact Check: ರಾಹುಲ್‌ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಪಾಕಿಸ್ತಾನದ ಧ್ವಜ ಪ್ರದರ್ಶಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...