Homeಫ್ಯಾಕ್ಟ್‌ಚೆಕ್Fact Check: ಮೋದಿ ಗೆಲ್ತಾರೆ ಎಂದಿದ್ದಕ್ಕೆ ತಮಿಳುನಾಡಿನಲ್ಲಿ ಗಿಣಿ ಶಾಸ್ತ್ರದವರನ್ನು ಬಂಧಿಸಲಾಗಿದೆ ಎಂಬುವುದು ಸುಳ್ಳು

Fact Check: ಮೋದಿ ಗೆಲ್ತಾರೆ ಎಂದಿದ್ದಕ್ಕೆ ತಮಿಳುನಾಡಿನಲ್ಲಿ ಗಿಣಿ ಶಾಸ್ತ್ರದವರನ್ನು ಬಂಧಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

“ತಮಿಳುನಾಡಿನಲ್ಲಿ ಮೋದಿ (ಬಿಜೆಪಿ) ಗೆಲ್ತಾರೆ ಎಂದು ಭವಿಷ್ಯ ಹೇಳಿದ್ದಕ್ಕೆ ಗಿಣಿ ಶಾಸ್ತ್ರದವನನ್ನು ಪೊಲೀಸರು ಬಂಧಿಸಿದ್ದಾರೆ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗ್ತಿದೆ.

ಹಿಂದುತ್ವ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಈ ವಿಡಿಯೋ ಹಂಚಿಕೊಂಡಿದ್ದು, “ಮೋದಿ ಗೆಲ್ತಾರೆ ಅಂದಿದ್ದಕ್ಕೆ ಬಡಪಾಯಿ ಗಿಣಿ ಶಾಸ್ತ್ರದವನನ್ನು ಜೈಲಿಗಟ್ಟಿದ ತಮಿಳುನಾಡು ಸರ್ಕಾರ! ಆದರೆ ಸರ್ವಾಧಿಕಾರಿ ಮಾತ್ರ ಮೋದಿಯೇ!!” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋಗೆ ಸಂಬಂಧಿಸಿದಂತೆ ನಾನುಗೌರಿ.ಕಾಂ ಸತ್ಯಾಸತ್ಯತೆಯನ್ನು ಪರಿಶೀಲನೆ ನಡೆಸಿದೆ.

ವಿಡಿಯೋಗೆ ಸಂಬಂಧಿಸಿಂತೆ ಏಪ್ರಿಲ್ 10, 2024ರಂದು ಎಬಿಪಿ ನ್ಯೂಸ್ ಸುದ್ದಿಯೊಂದನ್ನು ಪ್ರಕಟಿಸಿದ್ದು, ಸುದ್ದಿಯಲ್ಲಿ “ರಾಜ್ಯದ ಕಡಲೂರು (ಗುಡಲ್ಲೂರು) ಜಿಲ್ಲೆಯಲ್ಲಿ ಗಿಳಿಯನ್ನು ಬಂಧಿಸಿದಟ್ಟಿದ್ದ ಸೆಲ್ವರಾಜ್ ಎಂಬ ಗಿಣಿ ಶಾಸ್ತ್ರ ಹೇಳುವ ವ್ಯಕ್ತಿಯನ್ನು ಮಂಗಳವಾರ ಬಂಧಿಸಲಾಗಿದೆ. ಬಳಿಕ ಎಚ್ಚರಿಕೆ ನೀಡಿ ಬಿಡುಗಡೆಗೊಳಿಸಲಾಗಿದೆ” ಎಂದು ಹೇಳಲಾಗಿದೆ.

“ಗಿಣಿ ಶಾಸ್ತ್ರದ ಸೆಲ್ವರಾಜ್ ಅವರು ಕಡಲೂರು ಕ್ಷೇತ್ರದಲ್ಲಿ ಎನ್‌ಡಿಎ ಮೈತ್ರಿಕೂಟದ ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ಪಕ್ಷದ ಅಭ್ಯರ್ಥಿ ಥಂಗರ್ ಬಾಚನ್ ಅವರು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಗೆಲುವು ದಾಖಲಿಸಲಿದ್ದಾರೆ ಎಂದು ಹೇಳಿದ್ದರು. ಈ ಕುರಿತ ವಿಡಿಯೋ ವೈರಲ್ ಆದ ಬಳಿಕ, ಗಿಳಿಯನ್ನು ಬಂಧಿಸಿಟ್ಟಿದ್ದ ಸೆಲ್ವರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.

“ವಿಡಿಯೋ ವೈರಲ್ ಆದ ನಂತರ ಕಡಲೂರು ಜಿಲ್ಲಾ ಅರಣ್ಯ ಇಲಾಖೆಯು ಹಸಿರು ಗಿಣಿಯನ್ನು ಪಂಜರದಲ್ಲಿ ಬಂಧಿಸಿಟ್ಟಿದ್ದ ಭವಿಷ್ಯ ಹೇಳುವ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಂಡಿದೆ” ಎಂದು ಸ್ಪಷ್ಟವಾಗಿ ತಿಳಿಸಿದೆ.

ಸುದ್ದಿ ಲಿಂಕ್ ಇಲ್ಲಿದೆ 

ಏಪ್ರಿಲ್ 10, 2024ರಂದು ಇಂಡಿಯಾ ಟುಡೇ ಪ್ರಕಟಿಸಿದ ಸುದ್ದಿಯಲ್ಲೂ “ಗಿಳಿಗಳನ್ನು ಸೆರೆಯಲ್ಲಿಟ್ಟಿದ್ದಕ್ಕಾಗಿ ತಮಿಳುನಾಡಿನ ಕಡಲೂರಿನಲ್ಲಿ ಭವಿಷ್ಯ ಹೇಳುವವರನ್ನು ಬಂಧಿಸಲಾಗಿದೆ. ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ಕಡಲೂರು ಕ್ಷೇತ್ರದ ಅಭ್ಯರ್ಥಿ ಥಂಗರ್ ಬಾಚನ್ ಅವರ ಚುನಾವಣಾ ಗೆಲುವಿನ ಭವಿಷ್ಯ ನುಡಿದ ಸೆಲ್ವರಾಜ್ ಎಂಬ ಭವಿಷ್ಯಕಾರನ ವಿಡಿಯೋ ವೈರಲ್ ಆಗಿತ್ತು. ವಿಡಿಯೋ ನೋಡಿದ ಜಿಲ್ಲಾ ಅರಣ್ಯ ಇಲಾಖೆ ಕ್ರಮ ಕೈಗೊಂಡಿದೆ ಎಂದು ಹೇಳಿದೆ.

ಸುದ್ದಿ ಲಿಂಕ್ ಇಲ್ಲಿದೆ 

ವರದಿಗಳ ಪ್ರಕಾರ, ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸಿದ ಕಾರಣ ಎರಡು ಪಂಜರಗಳಲ್ಲಿ ಇರಿಸಲಾಗಿದ್ದ ನಾಲ್ಕು ಗಿಳಿಗಳನ್ನು ಅರಣ್ಯ ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಇಬ್ಬರು ಜ್ಯೋತಿಷಿ ಸಹೋದರರಿಗೆ ಇಂಥ ತಪ್ಪು ಮುಂದೆ ಮಾಡದಿರಿ ಎಂದು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

ಇವಿಷ್ಟು ಮಾತ್ರವಲ್ಲದೆ, ಇನ್ನಿತರ ಎಲ್ಲಾ ಮಾಧ್ಯಮಗಳ ಸುದ್ದಿಗಳಲ್ಲೂ ಗಿಳಿಯನ್ನು ಬಂಧಿಸಿಟ್ಟಿದ್ದಕ್ಕಾಗಿ ಗಿಣಿ ಶಾಸ್ತ್ರದವನನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ. ಎಲ್ಲಿಯೂ ಎನ್‌ಡಿಎ ಅಭ್ಯರ್ಥಿ ಗೆಲುವು ದಾಖಲಿಸಿದ್ದಾರೆ ಎಂದಿದ್ದಕ್ಕೆ ಬಂಧಿಸಿದ್ದಾರೆ ಎಂದಿಲ್ಲ. ಹಾಗಾಗಿ. ಚಕ್ರವರ್ತಿ ಸೂಲಿಬೆಲೆ ಸೇರಿದಂತೆ ಅನೇಕರು ಹೇಳಿದಂತೆ ರಾಜಕೀಯ ಭವಿಷ್ಯ ಹೇಳಿದ್ದಕ್ಕೆ ತಮಿಳುನಾಡಿ ಡಿಎಂಕೆ ಸರ್ಕಾರ ಗಿಣಿ ಶಾಸ್ತ್ರದವರನ್ನೇ ಬಂಧಿಸಿದೆ ಎಂಬುವುದು ಸುಳ್ಳು

ಇದನ್ನೂ ಓದಿ : Fact Check: ರಾಹುಲ್‌ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಪಾಕಿಸ್ತಾನದ ಧ್ವಜ ಪ್ರದರ್ಶಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ್ಯ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...