Homeಫ್ಯಾಕ್ಟ್‌ಚೆಕ್Fact Check: 2014ರ ಬಳಿಕ ಯಾವುದೇ ರಾಜ್ಯದಲ್ಲೂ ರಾಷ್ಟ್ರಪತಿ ಆಳ್ವಿಕೆ ಹೇರಿಲ್ಲ ಎಂಬುವುದು ಸುಳ್ಳು

Fact Check: 2014ರ ಬಳಿಕ ಯಾವುದೇ ರಾಜ್ಯದಲ್ಲೂ ರಾಷ್ಟ್ರಪತಿ ಆಳ್ವಿಕೆ ಹೇರಿಲ್ಲ ಎಂಬುವುದು ಸುಳ್ಳು

- Advertisement -
- Advertisement -

ದೇಶದಲ್ಲಿ ಕಾಂಗ್ರೆಸ್ ಆಡಳಿತವಿದ್ದಾಗ ಹಲವು ಬಾರಿ ವಿವಿಧ ರಾಜ್ಯಗಳಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿತ್ತು. ಆದರೆ, 2014ರ ಬಳಿಕ, ಅಂದರೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಯಾವುದೇ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿಲ್ಲ ಎಂಬ ಪ್ರತಿಪಾದನೆಯೊಂದಿಗೆ ಪೋಸ್ಟ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

“ನೆಹರೂ ಅವರು 7 ಬಾರಿ ರಾಜ್ಯ ಸರ್ಕಾರಗಳನ್ನು ವಜಾ ಮಾಡಿದ್ದಾರೆ.
ಇಂದಿರಾ ಗಾಂಧಿ 49 ಬಾರಿ ರಾಜ್ಯ ಸರ್ಕಾರಗಳನ್ನು ವಜಾಗೊಳಿಸಿದ್ದರು.
ರಾಜೀವ್ ಗಾಂಧಿ 6 ಬಾರಿ ರಾಜ್ಯ ಸರ್ಕಾರಗಳನ್ನು ವಜಾಗೊಳಿಸಿದ್ದರು.
ನರಸಿಂಹರಾವ್ 11 ಬಾರಿ ರಾಜ್ಯ ಸರ್ಕಾರಗಳನ್ನು ವಜಾಗೊಳಿಸಿದ್ದಾರೆ.
ಮನಮೋಹನ್ ಸಿಂಗ್ 11 ಬಾರಿ ರಾಜ್ಯ ಸರ್ಕಾರಗಳನ್ನು ವಜಾಗೊಳಿಸಿದ್ದಾರೆ”.

“ಆದರೆ 2014ರ ನಂತರ ಒಂದೇ ಒಂದು ರಾಜ್ಯ ಸರ್ಕಾರವನ್ನು ವಜಾ ಮಾಡಿಲ್ಲ. ಆದರೂ, ಮೋದಿ ಸರ್ವಾಧಿಕಾರಿ” ಎಂದು ವೈರಲ್ ಸಂದೇಶದಲ್ಲಿ ಹೇಳಲಾಗಿದೆ.

ಹಾಗಿದ್ದರೆ, 2014 ನಂತರ, ನರೇಂದ್ರ ಮೋದಿ ಆಡಳಿತದಲ್ಲಿ ಒಮ್ಮೆಯೂ, ಯಾವುದೇ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿಲ್ಲವೇ? ಎಂದು ನೋಡೋಣ

ಫ್ಯಾಕ್ಟ್‌ಚೆಕ್ : ವೈರಲ್‌ ಪೋಸ್ಟ್ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ. 1947 ರಿಂದ 2016 ರವರೆಗೆ ವಿವಿಧ ಸಂದರ್ಭಗಳಲ್ಲಿ ರಾಜ್ಯಗಳಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಘೋಷಿಸಿದ ಘಟನೆಗಳನ್ನು ವಿವರಿಸುವ ಸಂಸತ್ತಿನ ಗ್ರಂಥಾಲಯದಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ 2014-16 ರ ನಡುವೆ ಮಹಾರಾಷ್ಟ್ರದ, ಅರುಣಾಚಲ ಪ್ರದೇಶದಲ್ಲಿ, ಉತ್ತರಾಖಂಡದಲ್ಲಿ ಮತ್ತು ಜಮ್ಮು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ.

2019ರಲ್ಲಿ ಆರ್‌ಟಿಐನಲ್ಲಿ ನೀಡಿರುವ ವಿವರಣೆಯ ಪ್ರಕಾರ, ರಾಜಕೀಯ ಅಸ್ಥಿರತೆಯ ಕಾರಣದಿಂದಾಗಿ 25-01-16ರಿಂದ 19-02-16ರ ವರೆಗೆ ಅರುಣಾಚಲ ಪ್ರದೇಶದಲ್ಲಿ, 27-03-2016ರಿಂದ 11-05-2016ರ ವರೆಗೆ ಉತ್ತರಾಖಂಡದಲ್ಲಿ, 12-11-2019ರಿಂದ 23-11-2019ರ ವರೆಗೆ ಮಹಾರಾಷ್ಟ್ರದಲ್ಲಿ ಮತ್ತು 19-12-2018 ರಿಂದ 31-10-2019ರ ವರೆಗೆ ಜಮ್ಮು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲಾಗಿದೆ.


ಭಾರತದ ವಿವಿಧ ರಾಜ್ಯಗಳಲ್ಲಿ ವಿವಿಧ ಸಂದರ್ಭಗಳಲ್ಲಿ ರಾಷ್ಟ್ರಪತಿ ಆಳ್ವಿಕೆಯ ಹೇರಿಕೆಯ ಕುರಿತು ಮಾಧ್ಯಮ ಸುದ್ದಿ, ಲೇಖನಗಳನ್ನು ಇಲ್ಲಿ ಮತ್ತು ಇಲ್ಲಿ ಓದಬಹುದು .

ಸ್ವಾತಂತ್ರ್ಯದ ನಂತರ, ವಿವಿಧ ರಾಜ್ಯಗಳಲ್ಲಿ ಹಲವಾರು ಸಂದರ್ಭಗಳಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲಾಗಿದೆ. 1951ರಲ್ಲಿ ಜವಾಹರಲಾಲ್ ನೆಹರು ಅವರ ಅಧಿಕಾರಾವಧಿಯಲ್ಲಿ ಮೊದಲ ಬಾರಿಗೆ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲಾಯಿತು. ಒಟ್ಟಾರೆಯಾಗಿ ಅವರ ಅಧಿಕಾರಾವಧಿಯಲ್ಲಿ, 7 ಬಾರಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ. ಇಂದಿರಾ ಗಾಂಧಿಯವರು ಪ್ರಧಾನಿಯಾಗಿದ್ದಾಗ, 48 ಸಂದರ್ಭಗಳಲ್ಲಿ ರಾಜ್ಯಗಳಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲಾಗಿದೆ. ಇದು ಒಬ್ಬರು ಪ್ರಧಾನಿಯ ಅವಧಿಯಲ್ಲಿ ಅತಿ ಹೆಚ್ಚು ಬಾರಿ ರಾಷ್ಟ್ರಪತಿ ಆಳ್ವಿಕೆ ಹೇರಿರುವುದಾಗಿದೆ. ರಾಜೀವ್ ಗಾಂಧಿ, ಪಿವಿ ನರಸಿಂಹ ರಾವ್ ಮತ್ತು ಮನಮೋಹನ್ ಸಿಂಗ್ ಅವರ ಅಧಿಕಾರಾವಧಿಯಲ್ಲಿ ಕ್ರಮವಾಗಿ 6, 11 ಮತ್ತು 10 ಸಂದರ್ಭಗಳಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ. ನರೇಂದ್ರ ಮೋದಿಯವರ ಅಧಿಕಾರಾವಧಿಯಲ್ಲಿಯೂ 5 ಬಾರಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ.

ವೈರಲ್ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಅನೇಕ ಎಕ್ಸ್‌ ಬಳಕೆದಾರರು, 2014 ರ ನಂತರ ಕೇಂದ್ರ ಸರ್ಕಾರ ರಾಜ್ಯ ಸರ್ಕಾರವನ್ನು ವಜಾಗೊಳಿಸಿಲ್ಲ. ಬದಲಿಗೆ ನೇರವಾಗಿ ಶಾಸಕರನ್ನು ಖರೀದಿಸುವುದು ಮತ್ತು 24 ಗಂಟೆಗಳಲ್ಲಿ ಸರ್ಕಾರ ರಚಿಸುವುದು ಮಾತ್ರ ನಡೆಯುತ್ತಿದೆ. ಇಡಿ ಮತ್ತು ಐಟಿ ಇಲಾಖೆಗಳ ಅಧಿಕಾರಿಗಳನ್ನು ಬಳಸಿಕೊಂಡು ರಾಜ್ಯ ಸರ್ಕಾರಗಳನ್ನು ಅಸ್ತಿರಗೊಳಿಸಿ ಬಿಜೆಪಿ ಸರ್ಕಾರ ಬರುವಂತೆ ನೋಡಿಕೊಳ್ಳಲಾಗುತ್ತಿದೆ ಎಂದಿದ್ದಾರೆ. 

ನಾವು ನಡೆಸಿದ ಪರಿಶೀಲನೆಯಲ್ಲಿ ಲಭ್ಯವಾದ ಮಾಹಿತಿ ಪ್ರಕಾರ, ನರೇಂದ್ರ ಮೋದಿ ದೇಶದ ಪ್ರಧಾನಿಯಾದ ಬಳಿಕ ಅಥವಾ 2014ರ ನಂತರ ಯಾವುದೇ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿಲ್ಲ ಎನ್ನುವುದು ಸುಳ್ಳು.

ಇದನ್ನೂ ಓದಿ : Fact Check: ಈ ಬಾರಿಯ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಸಲಾಗುತ್ತದೆ ಎನ್ನುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...