Homeಫ್ಯಾಕ್ಟ್‌ಚೆಕ್Fact Check : ಏಪ್ರಿಲ್ 1ರಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಾಗಲಿದೆ ಎನ್ನುವುದು ಸುಳ್ಳು

Fact Check : ಏಪ್ರಿಲ್ 1ರಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಾಗಲಿದೆ ಎನ್ನುವುದು ಸುಳ್ಳು

- Advertisement -
- Advertisement -

ಏಪ್ರಿಲ್ 1, 2024ರಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳವಾಗಲಿದೆ ಎಂದು ಹೇಳಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

‘Index.daily’ ಎಂಬ ಇನ್‌ಸ್ಟಾಗ್ರಾಂ ಖಾತೆಯಲ್ಲಿ ‘ ಕರ್ನಾಟಕದಲ್ಲಿ ಆಸ್ತಿ ಹೆಚ್ಚಳ’ ಎಂಬ ಹೆಸರಿನಲ್ಲಿ ಅಪ್ಲೋಡ್ ಮಾಡಲಾದ ವಿಡಿಯೋ ವೈರಲ್ ಆಗಿದ್ದು, ಆ ವಿಡಿಯೋದಲ್ಲಿ ಅನುರಾಗ್ ಸಿಂಗ್ ಎಂಬವರು “ಬಿಬಿಎಂಪಿ ವ್ಯಾಪ್ತಿಯಲ್ಲಿ ಮನೆ ತೆರಿಗೆ ಎರಡು ಪಟ್ಟು, ವಾಣಿಜ್ಯ ಸಂಸ್ಥೆಗಳ ತೆರಿಗೆ ಮೂರು ಪಟ್ಟು ಹೆಚ್ಚಾಗಲಿದೆ. ಎಲೆಕ್ಟ್ರಿಕ್ ವಾಹನಗಳ ಲೈಫ್ ಟೈಮ್ ತೆರಿಗೆ ಶೇ.10ರಷ್ಟು ಮತ್ತು ಹೊಸ ವಾಹನಗಳ ನೋಂದಣಿ ತೆರಿಗೆ ಶೇ.3ರಷ್ಟು ಹೆಚ್ಚಳ ಮಾಡಲಾಗುತ್ತದೆ. ಸರ್ಕಾರ ಈ ಹಿಂದೆ ಹಾಲು, ಪೆಟ್ರೋಲ್ ಮತ್ತು ಮದ್ಯದ ಮೇಲಿನ ತೆರಿಗೆ ಹೆಚ್ಚಿಸಿತ್ತು” ಎಂದು ಹೇಳಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ

“ಕರ್ನಾಟಕ ಸರ್ಕಾರ 5 ಬಿಟ್ಟಿ ಭಾಗ್ಯಗಳಿಗೆ 52 ಸಾವಿರ ಕೋಟಿ ಖರ್ಚು ಮಾಡುತ್ತಿದೆ. ಪರಿಣಾಮ ಬಜೆಟ್ ಗಾತ್ರ ಶೇ 17ರಷ್ಟು ಹೆಚ್ಚಾಗಿದೆ. ಸರ್ಕಾರ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಶೇ.10, ನಗರಾಭಿವೃದ್ದಿ ಇಲಾಖೆಯ ಶೇ.25 ಅನುದಾನ ಕಡಿತಗೊಳಿಸಿದೆ. ವಿತ್ತೀಯ ಕೊರೆತ ನೀಗಿಸಲು ಸರ್ಕಾರ 1 ಲಕ್ಷ ಕೋಟಿ ಸಾಲ ಪಡೆಯುತ್ತಿದೆ “ಇತ್ಯಾದಿ ವಿಡಿಯೋದಲ್ಲಿ ಹೇಳಲಾಗಿದೆ.

ಹಾಗಿದ್ದರೆ ವಿಡಿಯೋದಲ್ಲಿ ಹೇಳಿರುವಂತೆ ನಿಜವಾಗಿಯೂ ಕರ್ನಾಟಕ ಸರ್ಕಾರ ಬಿಬಿಎಂಪಿ ವ್ಯಾಪ್ತಿಯಲ್ಲಿ ತೆರಿಗೆ ಹೆಚ್ಚಳಕ್ಕೆ ಮುಂದಾಗಿದೆಯಾ? ಎಂಬುವುದನ್ನು ಪರಿಶೀಲಿಸೋಣ

ಫ್ಯಾಕ್ಟ್‌ಚೆಕ್‌ : ನಾನುಗೌರಿ.ಕಾಂ ಅನುರಾಗ್ ಸಿಂಗ್ ಎಂಬವರು ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ಅಪ್ಲೋಡ್ ಮಾಡಿರುವ ವಿಡಿಯೋದ ಸತ್ಯಾಸತ್ಯತೆ ಪರಿಶೀಲಿಸಿದಾಗ ಅದೊಂದು ಸುಳ್ಳು ಪ್ರತಿಪಾದನೆ ಎಂಬುವುದು ಗೊತ್ತಾಗಿದೆ.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಸ್ಪಷ್ಟನೆ ನೀಡಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, “ಆತ್ಮೀಯ ನಾಗರಿಕರೇ, 1ನೇ ಏಪ್ರಿಲ್ 2024 ರಿಂದ ಬಿಬಿಎಂಪಿಯಲ್ಲಿ ಆಸ್ತಿ ತೆರಿಗೆಯನ್ನು ಹೆಚ್ಚಿಸಲಾಗುತ್ತಿದೆ ಎಂದು ಕೆಲವು ಸುಳ್ಳು ಸುದ್ದಿಯ ವೀಡಿಯೊಗಳು ಹರಿದಾಡುತ್ತಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆಯಲ್ಲಿ ಯಾವುದೇ ಹೆಚ್ಚಳ ಮಾಡುತ್ತಿಲ್ಲ” ಎಂದು ತಿಳಿಸಿದ್ದಾರೆ. ಜೊತೆಗೆ ಅನುರಾಗ್‌ ಸಿಂಗ್ ಅವರು ಸುಳ್ಳು ಮಾಹಿತಿ ಹರಡಿರುವ ವಿಡಿಯೋ ಹಂಚಿಕೊಂಡಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಕೂಡ ಈ ಕುರಿತು ಎಕ್ಸ್‌ನಲ್ಲಿ ಸ್ಪಷ್ಟನೆ ನೀಡಿದ್ದು, “ಏಪ್ರಿಲ್‌ 1ರಿಂದ ಅನ್ವಯವಾಗುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ದರ ಏರಿಕೆಯಾಗಲಿದೆ ಎನ್ನುವ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. BBMP ಯಾವುದೇ ಆಸ್ತಿ ತೆರಿಗೆಯನ್ನು ಏರಿಕೆ ಮಾಡಿಲ್ಲ 2016ರಲ್ಲಿ ಸೂಚಿಸಿರುವ ದರದಂತೆಯೇ ಪ್ರಸ್ತುತ ಆಸ್ತಿ ತೆರಿಗೆ ದರಗಳು ಚಾಲ್ತಿಯಲ್ಲಿರುತ್ತವೆ ಹಾಗೂ ಮುಂದುವರಿಯಲಿವೆ. ಬೆಂಗಳೂರಿನ ನಿವಾಸಿಗಳು ಆತಂಕಪಡುವ ಅವಶ್ಯಕತೆಯಿಲ್ಲ” ಎಂದಿದ್ದಾರೆ.

ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಬಿಬಿಎಂಪಿ ಆಯುಕ್ತರು ನೀಡಿರುವ ಸ್ಪಷ್ಟನೆ ಪ್ರಕಾರ, ‘Index.daily’ಎಂಬ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಅಪ್ಲೋಡ್ ಮಾಡಿರುವ ವಿಡಿಯೋದಲ್ಲಿ ಹೇಳಿರುವ ಸುದ್ದಿ ಸುಳ್ಳು ಮಾಹಿತಿಯಾಗಿದೆ.

ಇದನ್ನೂ ಓದಿ : Fact Check : ಬೆಂಗಳೂರಿನಲ್ಲಿ ನಡೆದಿರುವುದು ಪಾರ್ಕಿಂಗ್ ಜಗಳವೇ ಹೊರತು ‘ಕೋಮು ಗಲಾಟೆಯಲ್ಲ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...