Homeಫ್ಯಾಕ್ಟ್‌ಚೆಕ್FACT CHECK : ಬಾಂಗ್ಲಾದೇಶದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ರವೀಂದ್ರನಾಥ ಟ್ಯಾಗೋರ್ ಪ್ರತಿಮೆ ಧ್ವಂಸಗೊಳಿಸಲಾಗಿದೆ ಎಂಬುವುದು ಸುಳ್ಳು

FACT CHECK : ಬಾಂಗ್ಲಾದೇಶದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ರವೀಂದ್ರನಾಥ ಟ್ಯಾಗೋರ್ ಪ್ರತಿಮೆ ಧ್ವಂಸಗೊಳಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ಬಾಂಗ್ಲಾದೇಶದಲ್ಲಿ ರಾಜಕೀಯ ಅರಾಜಕತೆಯ ನಡುವೆ, ರವೀಂದ್ರನಾಥ ಟ್ಯಾಗೋರ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ ಎಂದು ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ನರೇಶ್ ಪಾಂಡೆ (@ITechVision360)ಎಂಬ ಎಕ್ಸ್ ಬಳಕೆದಾರ ರವೀಂದ್ರನಾಥ ಟ್ಯಾಗೋರ್ ಅವರ ಭಗ್ನಗೊಂಡ ಪ್ರತಿಮೆಯ ತಲೆಯ ಭಾಗದ ಫೋಟೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದು ” ಬಾಂಗ್ಲಾದೇಶದಲ್ಲಿ ರವೀಂದ್ರನಾಥ ಟ್ಯಾಗೋರ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ. ಬಾಂಗ್ಲಾದೇಶದಲ್ಲಿ ಹಿಂದೂಗಳಿಗೆ ಕಿರುಕುಳ ನೀಡಲಾಗುತ್ತಿದೆ. ಅವರ ದೇವಸ್ಥಾನ ಮತ್ತು ಮನೆಗಳನ್ನು ಧ್ವಂಸಗೊಳಿಸಲಾಗಿದೆ. ಬೆಂಕಿ ಹಚ್ಚಿ ಸುಡಲಾಗುತ್ತಿದೆ. ಹಿಂದೂಗಳ ಮನೆಗಳನ್ನು ದೋಚಲಾಗಿದೆ” ಎಂದು ಬರೆದುಕೊಂಡಿದ್ದಾರೆ.

ಇದೇ ರೀತಿಯ ಪ್ರತಿಪಾದನೆಯೊಂದಿಗೆ ಇನ್ನೂ ಕೆಲವರು ಎಕ್ಸ್‌ನಲ್ಲಿ ಪೋಸ್ಟ್‌ಗಳನ್ನು ಹಾಕಿದ್ದಾರೆ. ಹಾಗಾದರೆ, ಈ ವಿಚಾರ ನಿಜಾನಾ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ರವೀಂದ್ರನಾಥ ಟ್ಯಾಗೋರ್ ಅವರ ಪ್ರತಿಮೆಯ ತಲೆಯನ್ನು ಕಸದ ರಾಶಿಯಲ್ಲಿ ಎಸೆಯಲಾಗಿದೆ. ಇದು ಪ್ರಸ್ತುತ ಬಾಂಗ್ಲಾದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಯ ಭಾಗವಾಗಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನ ಫೋಟೊವನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಸರ್ಚ್ ಮಾಡಿದಾಗ, ಈ ಫೋಟೋ 2023ರಲ್ಲಿ ಢಾಕಾ ವಿಶ್ವವಿದ್ಯಾಲಯದಲ್ಲಿ ನಡೆದ ಘಟನೆಗೆ ಸಂಬಂಧಿಸಿದ್ದು ಎಂದು ತಿಳಿದು ಬಂದಿದೆ,

ಢಾಕಾ ಮೂಲದ ಬಂಗಾಳಿ ಸುದ್ದಿ ಸಂಸ್ಥೆ ಪ್ರೋಥೋಮ್ ಅಲೋ ಫೆಬ್ರವರಿ 17, 2023ರಂದು ಪ್ರಕಟಿಸಿದ ವರದಿಯ ಪ್ರಕಾರ, “ಢಾಕಾ ವಿಶ್ವವಿದ್ಯಾನಿಲಯದ ಫೈನ್ ಆರ್ಟ್ಸ್ ವಿಭಾಗದ ವಿದ್ಯಾರ್ಥಿಗಳು ಶಿಲ್ಪ ಕಲಾ ಪ್ರದರ್ಶನದ ಅಂಗವಾಗಿ 19 ಅಡಿ ಎತ್ತರದ ರವೀಂದ್ರನಾಥ ಟ್ಯಾಗೋರ್ ಅವರ ಪ್ರತಿಮೆಯನ್ನು ಸ್ಥಾಪಿಸಿದ್ದರು. ಎರಡು ದಿನಗಳ ನಂತರ, ಪ್ರತಿಮೆಯು ಕಾಣೆಯಾಗಿತ್ತು. ಬಳಿಕ ಅದರ ಮುರಿದ ತಲೆ ಮತ್ತು ಇತರ ಭಾಗಗಳು ಢಾಕಾದ ಸುಹ್ರವರ್ದಿ ಗಾರ್ಡನ್ಸ್‌ನಲ್ಲಿ ಕಂಡು ಬಂದಿತ್ತು”.

‘ಹಿಂದೂಸ್ತಾನ್ ಟೈಮ್ಸ್’ ವರದಿಯ ಪ್ರಕಾರ, ಟ್ಯಾಗೋರ್ ಅವರ ಪ್ರತಿಮೆ ಧ್ವಂಸಗೊಂಡ ರೀತಿಯಲ್ಲಿ ಪತ್ತೆಯಾದ ನಂತರ, ಅದನ್ನು ಸ್ಥಾಪಿಸಿದ್ದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಢಾಕಾ ವಿಶ್ವವಿದ್ಯಾನಿಲಯದ ಅಧಿಕಾರಿಗಳು ತಮಗೆ ತಿಳಿಸದೆ ಪ್ರತಿಮೆ ತೆರವುಗೊಳಿಸಿದ್ದಾರೆ ಎಂದು ಆರೋಪಿಸಿದ್ದರು. ಆರಂಭದಲ್ಲಿ, ವಿವಿ ಆರೋಪವನ್ನು ನಿರಾಕರಿಸಿತ್ತು. ನಂತರ ಪ್ರತಿಮೆ ತೆರವುಗೊಳಿಸಿರುವುದನ್ನು ಒಪ್ಪಿಕೊಂಡಿತ್ತು. ಅನುಮತಿಯಿಲ್ಲದೆ ಸ್ಥಾಪಿಸಿದ್ದ ಕಾರಣ ಪ್ರತಿಮೆ ತೆರವುಗೊಳಿಸಲಾಗಿದೆ” ಎಂದು ಹೇಳಿತ್ತು.

ನಾವು ಮೇಲೆ ಉಲ್ಲೇಖಿಸಿದ ವರದಿಗಳ ಪ್ರಕಾರ, ರವೀಂದ್ರನಾಥ ಟ್ಯಾಗೋರ್ ಅವರ ಪ್ರತಿಮೆ ಧ್ವಂಸಗೊಳಿಸಿರುವುದಕ್ಕೂ ಪ್ರಸ್ತುತ ನಡೆಯುತ್ತಿರುವ ಪ್ರತಿಭಟನೆಗೂ ಯಾವುದೇ ಸಂಬಂಧವಿಲ್ಲ. ಅದು ಢಾಕಾ ವಿವಿಯಲ್ಲಿ ಈ ಹಿಂದೆ ನಡೆದ ಘಟನೆಗೆ ಸಂಬಂಧಿಸಿದ್ದಾಗಿದೆ. ಆದ್ದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಮಾಡಿರುವ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಬಾಂಗ್ಲಾದಲ್ಲಿ ಹಿಂದೂ ಮಹಿಳೆಯರ ಮೇಲೆ ದಾಳಿ ಎಂದು ವಿದ್ಯಾರ್ಥಿ ಪ್ರತಿಭಟನೆಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...