Homeಫ್ಯಾಕ್ಟ್‌ಚೆಕ್FACT CHECK: ರಾಹುಲ್ ಗಾಂಧಿ ನಕಲಿ ಲೋಕೋ ಪೈಲಟ್‌ಗಳ ಜೊತೆಗೆ ಸಂವಾದ ನಡೆಸಿದ್ದಾರೆ ಎಂಬುವುದು ಸುಳ್ಳು

FACT CHECK: ರಾಹುಲ್ ಗಾಂಧಿ ನಕಲಿ ಲೋಕೋ ಪೈಲಟ್‌ಗಳ ಜೊತೆಗೆ ಸಂವಾದ ನಡೆಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಸಿಬ್ಬಂದಿ ಕೊರತೆಯಿಂದಾಗಿ ಅಸಮರ್ಪಕ ವಿಶ್ರಾಂತಿ ವ್ಯವಸ್ಥೆಯಿದೆ ಎಂದು ಹೇಳಿಕೊಂಡಿದ್ದ ರೈಲ್ವೆ ಲೋಕೋ ಪೈಲಟ್‌ಗಳನ್ನು ಜುಲೈ 5,2024ರಂದು ಭೇಟಿಯಾಗಿದ್ದ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಅವರ ಸಮಸ್ಯೆ ಆಲಿಸಿದ್ದರು. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯೊಂದು ಹರಿದಾಡುತ್ತಿದೆ.

“ಲೋಕೋ ಪೈಲಟ್‌ಗಳು ಎಂದು ಹೇಳಿ ರಾಹುಲ್ ಗಾಂಧಿ ಎಕ್ಸ್‌ನಲ್ಲಿ ಹಾಕಿರುವ ಫೋಟೋ ಪರಿಶೀಲಿಸಿದಾಗ ಅದರಲ್ಲಿ ರೈಲ್ವೆ ನೌಕರರು ಮತ್ತು ಲೋಕೋ ಪೈಲಟ್‌ಗಳು ಇಲ್ಲ ಎಂದು ರೈಲ್ವೆ ದೃಢಪಡಿಸಿದೆ. ಎಲ್ಲರೂ ವೇಷ ಹಾಕಿ ಬಂದವರು. ಅವರ ವಿರುದ್ದ ಪ್ರಕರಣ ದಾಖಲಾಗಿದೆ. ಭಾರತವನ್ನು ಯಾವ ರೀತಿಯಲ್ಲಾದರೂ ನಾಶಪಡಿಸುವುದು ರಾಹುಲ್ ಗಾಂಧಿಯ ಉದ್ದೇಶ ಎಂಬುವುದು ಇದರಿಂದ ಸ್ಪಷ್ಟವಾಗಿದೆ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಳ್ಳಲಾಗಿದೆ.


ಹಾಗಾದರೆ, ರಾಹುಲ್ ಗಾಂಧಿಯವರು ಭೇಟಿಯಾಗಿ ಮಾತುಕತೆ ನಡೆಸಿರುವುದು ನಕಲಿ ಲೋಕೋ ಪೈಲಟ್‌ಗಳ ಜೊತೆಯಾ? ಎಂಬುವುದನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ನಮ್ಮ ಪರಿಶೀಲನೆಯಲ್ಲಿ ರಾಹುಲ್ ಗಾಂಧಿಯವರು ಭೇಟಿಯಾಗಿ ಮಾತುಕತೆ ನಡೆಸಿರುವುದು ನಿಜವಾದ ಲೋಕೋ ಪೈಲಟ್‌ಗಳ ಜೊತೆಯೇ ಎಂಬುವುದು ಗೊತ್ತಾಗಿದೆ.

ರಾಹುಲ್ ಗಾಂಧಿ ದೆಹಲಿಯಲ್ಲಿ ಲೋಕೋ ಪೈಲಟ್‌ಗಳನ್ನು ಭೇಟಿಯಾಗಿದ್ದರು. ಆದರೆ, ಅವರಲ್ಲಿ ದೆಹಲಿ ವಿಭಾಗದವರು ಮಾತ್ರ ಇರಲಿಲ್ಲ. ದೇಶದ ವಿವಿಧ ಭಾಗಗಳಿಂದ ಆಗಮಿಸಿದವರು ಇದ್ದರು. ಈ ಕುರಿತು ಕಾಂಗ್ರೆಸ್ ಮೂಲಗಳನ್ನು ಉಲ್ಲೇಖಿಸಿ ನಾನುಗೌರಿ.ಕಾಂ ಜುಲೈ 6ರಂದು ಸುದ್ದಿ ಪ್ರಕಟಿಸಿತ್ತು.

ರಾಹುಲ್ ಗಾಂಧಿ ಲೋಕೋ ಪೈಲಟ್‌ಗಳನ್ನು ಭೇಟಿಯಾಗಿದ್ದ ಬಗ್ಗೆ ಉತ್ತರ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ (CPRO) ದೀಪಕ್ ಕುಮಾರ್ ಅವರು “ರಾಹುಲ್ ಗಾಂಧಿ ಜೊತೆ ಸಂವಹನ ನಡೆಸಿದ ಲೋಕೋ ಪೈಲಟ್‌ಗಳು ‘ಹೊರಗಿನವರು’ ದೆಹಲಿ ವಿಭಾಗದವರಲ್ಲ ಎಂದು ಹೇಳಿದ್ದರು. ಈ ಹೇಳಿಕೆಯಿಂದ ರಾಹುಲ್ ಗಾಂಧಿ ಭೇಟಿಯಾಗಿದ್ದು ಲೋಕೋ ಪೈಲಟ್‌ಗಳನ್ನೇ ಎಂಬುವುದು ದೃಢಪಟ್ಟಿದೆ.

“ರಾಹುಲ್ ಗಾಂಧಿ ದೆಹಲಿಯಿಂದ ಬಂದವರೊಂದಿಗೆ ಮಾತ್ರವಲ್ಲದೆ ವಿವಿಧ ರೈಲು ವಿಭಾಗಗಳ ಲೋಕೋ ಪೈಲಟ್‌ಗಳೊಂದಿಗೆ ಸಂವಾದ ನಡೆಸಿದ್ದಾರೆ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ” ಎಂದು ಅಖಿಲ ಭಾರತ ಲೊಕೋ ರನ್ನಿಂಗ್ ಸ್ಟಾಫ್ ಅಸೋಸಿಯೇಶನ್‌ನ ದಕ್ಷಿಣ ವಲಯದ ಅಧ್ಯಕ್ಷ ಆರ್ ಕುಮರೇಶನ್ ಸುದ್ಧಿ ಸಂಸ್ಥೆಯಾದ ಪಿಟಿಐಗೆ ತಿಳಿಸಿದ್ದರು. ಇದು ಕೂಡ ರಾಹುಲ್ ಗಾಂಧಿ ಭೇಟಿಯಾಗಿದ್ದು ನಿಜವಾದ ಲೋಕೋ ಪೈಲಟ್‌ಗಳನ್ನು ಎಂಬುವುದು ಖಚಿತಪಡಿಸಿದೆ.

ರಾಹುಲ್ ಗಾಂಧಿಯವರು ಲೋಕೋ ಪೈಲೆಟ್‌ಗಳ ಜೊತೆಗೆ ನಡೆಸಿದ ಸಂವಾದವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ಅದನ್ನು ಈ ಕೆಳಗೆ ನೋಡಬಹುದಾಗಿದೆ.

ಇನ್ನು ರಾಹುಲ್ ಗಾಂಧಿಯವರ ಜೊತೆ ಸಂವಾದ ನಡೆಸಲು ಲೋಕೋ ಪೈಲಟ್‌ಗಳ ರೀತಿ ವೇಷ ಹಾಕಿ ಬಂದವರ ವಿರುದ್ದ ಪ್ರಕರಣ ದಾಖಲಾಗಿದೆ ಎಂಬುವುದು ಸುಳ್ಳು. ಈ ಕುರಿತು ಎಲ್ಲಿಯೂ ವರದಿಯಾಗಿಲ್ಲ. ರಾಹುಲ್ ಗಾಂಧಿ ನಿಜವಾದ ಲೋಕೋ ಪೈಲಟ್‌ಗಳ ಜೊತೆ ಸಂವಾದ ನಡೆಸಿರುವಾಗ ಲೋಕೋ ಪೈಲಟ್‌ಗಳು ವೇಷ ಹಾಕಿ ಬರುವುದು, ಪ್ರಕರಣ ದಾಖಲಿಸುವ ಪ್ರಮೇಯವೇ ಬರುವುದಿಲ್ಲ.

ಒಟ್ಟಿನಲ್ಲಿ ರಾಹುಲ್ ಗಾಂಧಿ ನಕಲಿ ಲೋಕೋ ಪೈಲಟ್‌ಗಳನ್ನು ಭೇಟಿಯಾಗಿದ್ದಾರೆ. ಪೈಲಟ್‌ಗಳಂತೆ ವೇಷ ಹಾಕಿ ಬಂದವರ ವಿರುದ್ದ ಪ್ರಕರಣ ದಾಖಲಾಗಿದೆ ಎಂಬುವುದು ಸುಳ್ಳು. ರಾಹುಲ್ ಗಾಂಧಿ ಲೋಕೋ ಪೈಲಟ್‌ಗಳನ್ನು ಭೇಟಿಯಾಗಿರುವ ಕುರಿತು ನಾನುಗೌರಿ.ಕಾಂ ಪ್ರಕಟಿಸಿದ ವರದಿಯ ಲಿಂಕ್ ಕೆಳಗಿದೆ.

ರೈಲ್ವೆ ಲೋಕೋ ಪೈಲಟ್‌ಗಳನ್ನು ಭೇಟಿಯಾಗಿ ಸಮಸ್ಯೆ ಆಲಿಸಿದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...