Homeಫ್ಯಾಕ್ಟ್‌ಚೆಕ್FACT CHECK: ರಾಹುಲ್ ಗಾಂಧಿ ನಕಲಿ ಲೋಕೋ ಪೈಲಟ್‌ಗಳ ಜೊತೆಗೆ ಸಂವಾದ ನಡೆಸಿದ್ದಾರೆ ಎಂಬುವುದು ಸುಳ್ಳು

FACT CHECK: ರಾಹುಲ್ ಗಾಂಧಿ ನಕಲಿ ಲೋಕೋ ಪೈಲಟ್‌ಗಳ ಜೊತೆಗೆ ಸಂವಾದ ನಡೆಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಸಿಬ್ಬಂದಿ ಕೊರತೆಯಿಂದಾಗಿ ಅಸಮರ್ಪಕ ವಿಶ್ರಾಂತಿ ವ್ಯವಸ್ಥೆಯಿದೆ ಎಂದು ಹೇಳಿಕೊಂಡಿದ್ದ ರೈಲ್ವೆ ಲೋಕೋ ಪೈಲಟ್‌ಗಳನ್ನು ಜುಲೈ 5,2024ರಂದು ಭೇಟಿಯಾಗಿದ್ದ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಅವರ ಸಮಸ್ಯೆ ಆಲಿಸಿದ್ದರು. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯೊಂದು ಹರಿದಾಡುತ್ತಿದೆ.

“ಲೋಕೋ ಪೈಲಟ್‌ಗಳು ಎಂದು ಹೇಳಿ ರಾಹುಲ್ ಗಾಂಧಿ ಎಕ್ಸ್‌ನಲ್ಲಿ ಹಾಕಿರುವ ಫೋಟೋ ಪರಿಶೀಲಿಸಿದಾಗ ಅದರಲ್ಲಿ ರೈಲ್ವೆ ನೌಕರರು ಮತ್ತು ಲೋಕೋ ಪೈಲಟ್‌ಗಳು ಇಲ್ಲ ಎಂದು ರೈಲ್ವೆ ದೃಢಪಡಿಸಿದೆ. ಎಲ್ಲರೂ ವೇಷ ಹಾಕಿ ಬಂದವರು. ಅವರ ವಿರುದ್ದ ಪ್ರಕರಣ ದಾಖಲಾಗಿದೆ. ಭಾರತವನ್ನು ಯಾವ ರೀತಿಯಲ್ಲಾದರೂ ನಾಶಪಡಿಸುವುದು ರಾಹುಲ್ ಗಾಂಧಿಯ ಉದ್ದೇಶ ಎಂಬುವುದು ಇದರಿಂದ ಸ್ಪಷ್ಟವಾಗಿದೆ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಳ್ಳಲಾಗಿದೆ.


ಹಾಗಾದರೆ, ರಾಹುಲ್ ಗಾಂಧಿಯವರು ಭೇಟಿಯಾಗಿ ಮಾತುಕತೆ ನಡೆಸಿರುವುದು ನಕಲಿ ಲೋಕೋ ಪೈಲಟ್‌ಗಳ ಜೊತೆಯಾ? ಎಂಬುವುದನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ನಮ್ಮ ಪರಿಶೀಲನೆಯಲ್ಲಿ ರಾಹುಲ್ ಗಾಂಧಿಯವರು ಭೇಟಿಯಾಗಿ ಮಾತುಕತೆ ನಡೆಸಿರುವುದು ನಿಜವಾದ ಲೋಕೋ ಪೈಲಟ್‌ಗಳ ಜೊತೆಯೇ ಎಂಬುವುದು ಗೊತ್ತಾಗಿದೆ.

ರಾಹುಲ್ ಗಾಂಧಿ ದೆಹಲಿಯಲ್ಲಿ ಲೋಕೋ ಪೈಲಟ್‌ಗಳನ್ನು ಭೇಟಿಯಾಗಿದ್ದರು. ಆದರೆ, ಅವರಲ್ಲಿ ದೆಹಲಿ ವಿಭಾಗದವರು ಮಾತ್ರ ಇರಲಿಲ್ಲ. ದೇಶದ ವಿವಿಧ ಭಾಗಗಳಿಂದ ಆಗಮಿಸಿದವರು ಇದ್ದರು. ಈ ಕುರಿತು ಕಾಂಗ್ರೆಸ್ ಮೂಲಗಳನ್ನು ಉಲ್ಲೇಖಿಸಿ ನಾನುಗೌರಿ.ಕಾಂ ಜುಲೈ 6ರಂದು ಸುದ್ದಿ ಪ್ರಕಟಿಸಿತ್ತು.

ರಾಹುಲ್ ಗಾಂಧಿ ಲೋಕೋ ಪೈಲಟ್‌ಗಳನ್ನು ಭೇಟಿಯಾಗಿದ್ದ ಬಗ್ಗೆ ಉತ್ತರ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ (CPRO) ದೀಪಕ್ ಕುಮಾರ್ ಅವರು “ರಾಹುಲ್ ಗಾಂಧಿ ಜೊತೆ ಸಂವಹನ ನಡೆಸಿದ ಲೋಕೋ ಪೈಲಟ್‌ಗಳು ‘ಹೊರಗಿನವರು’ ದೆಹಲಿ ವಿಭಾಗದವರಲ್ಲ ಎಂದು ಹೇಳಿದ್ದರು. ಈ ಹೇಳಿಕೆಯಿಂದ ರಾಹುಲ್ ಗಾಂಧಿ ಭೇಟಿಯಾಗಿದ್ದು ಲೋಕೋ ಪೈಲಟ್‌ಗಳನ್ನೇ ಎಂಬುವುದು ದೃಢಪಟ್ಟಿದೆ.

“ರಾಹುಲ್ ಗಾಂಧಿ ದೆಹಲಿಯಿಂದ ಬಂದವರೊಂದಿಗೆ ಮಾತ್ರವಲ್ಲದೆ ವಿವಿಧ ರೈಲು ವಿಭಾಗಗಳ ಲೋಕೋ ಪೈಲಟ್‌ಗಳೊಂದಿಗೆ ಸಂವಾದ ನಡೆಸಿದ್ದಾರೆ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ” ಎಂದು ಅಖಿಲ ಭಾರತ ಲೊಕೋ ರನ್ನಿಂಗ್ ಸ್ಟಾಫ್ ಅಸೋಸಿಯೇಶನ್‌ನ ದಕ್ಷಿಣ ವಲಯದ ಅಧ್ಯಕ್ಷ ಆರ್ ಕುಮರೇಶನ್ ಸುದ್ಧಿ ಸಂಸ್ಥೆಯಾದ ಪಿಟಿಐಗೆ ತಿಳಿಸಿದ್ದರು. ಇದು ಕೂಡ ರಾಹುಲ್ ಗಾಂಧಿ ಭೇಟಿಯಾಗಿದ್ದು ನಿಜವಾದ ಲೋಕೋ ಪೈಲಟ್‌ಗಳನ್ನು ಎಂಬುವುದು ಖಚಿತಪಡಿಸಿದೆ.

ರಾಹುಲ್ ಗಾಂಧಿಯವರು ಲೋಕೋ ಪೈಲೆಟ್‌ಗಳ ಜೊತೆಗೆ ನಡೆಸಿದ ಸಂವಾದವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ಅದನ್ನು ಈ ಕೆಳಗೆ ನೋಡಬಹುದಾಗಿದೆ.

ಇನ್ನು ರಾಹುಲ್ ಗಾಂಧಿಯವರ ಜೊತೆ ಸಂವಾದ ನಡೆಸಲು ಲೋಕೋ ಪೈಲಟ್‌ಗಳ ರೀತಿ ವೇಷ ಹಾಕಿ ಬಂದವರ ವಿರುದ್ದ ಪ್ರಕರಣ ದಾಖಲಾಗಿದೆ ಎಂಬುವುದು ಸುಳ್ಳು. ಈ ಕುರಿತು ಎಲ್ಲಿಯೂ ವರದಿಯಾಗಿಲ್ಲ. ರಾಹುಲ್ ಗಾಂಧಿ ನಿಜವಾದ ಲೋಕೋ ಪೈಲಟ್‌ಗಳ ಜೊತೆ ಸಂವಾದ ನಡೆಸಿರುವಾಗ ಲೋಕೋ ಪೈಲಟ್‌ಗಳು ವೇಷ ಹಾಕಿ ಬರುವುದು, ಪ್ರಕರಣ ದಾಖಲಿಸುವ ಪ್ರಮೇಯವೇ ಬರುವುದಿಲ್ಲ.

ಒಟ್ಟಿನಲ್ಲಿ ರಾಹುಲ್ ಗಾಂಧಿ ನಕಲಿ ಲೋಕೋ ಪೈಲಟ್‌ಗಳನ್ನು ಭೇಟಿಯಾಗಿದ್ದಾರೆ. ಪೈಲಟ್‌ಗಳಂತೆ ವೇಷ ಹಾಕಿ ಬಂದವರ ವಿರುದ್ದ ಪ್ರಕರಣ ದಾಖಲಾಗಿದೆ ಎಂಬುವುದು ಸುಳ್ಳು. ರಾಹುಲ್ ಗಾಂಧಿ ಲೋಕೋ ಪೈಲಟ್‌ಗಳನ್ನು ಭೇಟಿಯಾಗಿರುವ ಕುರಿತು ನಾನುಗೌರಿ.ಕಾಂ ಪ್ರಕಟಿಸಿದ ವರದಿಯ ಲಿಂಕ್ ಕೆಳಗಿದೆ.

ರೈಲ್ವೆ ಲೋಕೋ ಪೈಲಟ್‌ಗಳನ್ನು ಭೇಟಿಯಾಗಿ ಸಮಸ್ಯೆ ಆಲಿಸಿದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...