Homeಫ್ಯಾಕ್ಟ್‌ಚೆಕ್FACT CHECK: ರಾಹುಲ್ ಗಾಂಧಿ ನಕಲಿ ಲೋಕೋ ಪೈಲಟ್‌ಗಳ ಜೊತೆಗೆ ಸಂವಾದ ನಡೆಸಿದ್ದಾರೆ ಎಂಬುವುದು ಸುಳ್ಳು

FACT CHECK: ರಾಹುಲ್ ಗಾಂಧಿ ನಕಲಿ ಲೋಕೋ ಪೈಲಟ್‌ಗಳ ಜೊತೆಗೆ ಸಂವಾದ ನಡೆಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಸಿಬ್ಬಂದಿ ಕೊರತೆಯಿಂದಾಗಿ ಅಸಮರ್ಪಕ ವಿಶ್ರಾಂತಿ ವ್ಯವಸ್ಥೆಯಿದೆ ಎಂದು ಹೇಳಿಕೊಂಡಿದ್ದ ರೈಲ್ವೆ ಲೋಕೋ ಪೈಲಟ್‌ಗಳನ್ನು ಜುಲೈ 5,2024ರಂದು ಭೇಟಿಯಾಗಿದ್ದ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಅವರ ಸಮಸ್ಯೆ ಆಲಿಸಿದ್ದರು. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯೊಂದು ಹರಿದಾಡುತ್ತಿದೆ.

“ಲೋಕೋ ಪೈಲಟ್‌ಗಳು ಎಂದು ಹೇಳಿ ರಾಹುಲ್ ಗಾಂಧಿ ಎಕ್ಸ್‌ನಲ್ಲಿ ಹಾಕಿರುವ ಫೋಟೋ ಪರಿಶೀಲಿಸಿದಾಗ ಅದರಲ್ಲಿ ರೈಲ್ವೆ ನೌಕರರು ಮತ್ತು ಲೋಕೋ ಪೈಲಟ್‌ಗಳು ಇಲ್ಲ ಎಂದು ರೈಲ್ವೆ ದೃಢಪಡಿಸಿದೆ. ಎಲ್ಲರೂ ವೇಷ ಹಾಕಿ ಬಂದವರು. ಅವರ ವಿರುದ್ದ ಪ್ರಕರಣ ದಾಖಲಾಗಿದೆ. ಭಾರತವನ್ನು ಯಾವ ರೀತಿಯಲ್ಲಾದರೂ ನಾಶಪಡಿಸುವುದು ರಾಹುಲ್ ಗಾಂಧಿಯ ಉದ್ದೇಶ ಎಂಬುವುದು ಇದರಿಂದ ಸ್ಪಷ್ಟವಾಗಿದೆ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಳ್ಳಲಾಗಿದೆ.


ಹಾಗಾದರೆ, ರಾಹುಲ್ ಗಾಂಧಿಯವರು ಭೇಟಿಯಾಗಿ ಮಾತುಕತೆ ನಡೆಸಿರುವುದು ನಕಲಿ ಲೋಕೋ ಪೈಲಟ್‌ಗಳ ಜೊತೆಯಾ? ಎಂಬುವುದನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ನಮ್ಮ ಪರಿಶೀಲನೆಯಲ್ಲಿ ರಾಹುಲ್ ಗಾಂಧಿಯವರು ಭೇಟಿಯಾಗಿ ಮಾತುಕತೆ ನಡೆಸಿರುವುದು ನಿಜವಾದ ಲೋಕೋ ಪೈಲಟ್‌ಗಳ ಜೊತೆಯೇ ಎಂಬುವುದು ಗೊತ್ತಾಗಿದೆ.

ರಾಹುಲ್ ಗಾಂಧಿ ದೆಹಲಿಯಲ್ಲಿ ಲೋಕೋ ಪೈಲಟ್‌ಗಳನ್ನು ಭೇಟಿಯಾಗಿದ್ದರು. ಆದರೆ, ಅವರಲ್ಲಿ ದೆಹಲಿ ವಿಭಾಗದವರು ಮಾತ್ರ ಇರಲಿಲ್ಲ. ದೇಶದ ವಿವಿಧ ಭಾಗಗಳಿಂದ ಆಗಮಿಸಿದವರು ಇದ್ದರು. ಈ ಕುರಿತು ಕಾಂಗ್ರೆಸ್ ಮೂಲಗಳನ್ನು ಉಲ್ಲೇಖಿಸಿ ನಾನುಗೌರಿ.ಕಾಂ ಜುಲೈ 6ರಂದು ಸುದ್ದಿ ಪ್ರಕಟಿಸಿತ್ತು.

ರಾಹುಲ್ ಗಾಂಧಿ ಲೋಕೋ ಪೈಲಟ್‌ಗಳನ್ನು ಭೇಟಿಯಾಗಿದ್ದ ಬಗ್ಗೆ ಉತ್ತರ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ (CPRO) ದೀಪಕ್ ಕುಮಾರ್ ಅವರು “ರಾಹುಲ್ ಗಾಂಧಿ ಜೊತೆ ಸಂವಹನ ನಡೆಸಿದ ಲೋಕೋ ಪೈಲಟ್‌ಗಳು ‘ಹೊರಗಿನವರು’ ದೆಹಲಿ ವಿಭಾಗದವರಲ್ಲ ಎಂದು ಹೇಳಿದ್ದರು. ಈ ಹೇಳಿಕೆಯಿಂದ ರಾಹುಲ್ ಗಾಂಧಿ ಭೇಟಿಯಾಗಿದ್ದು ಲೋಕೋ ಪೈಲಟ್‌ಗಳನ್ನೇ ಎಂಬುವುದು ದೃಢಪಟ್ಟಿದೆ.

“ರಾಹುಲ್ ಗಾಂಧಿ ದೆಹಲಿಯಿಂದ ಬಂದವರೊಂದಿಗೆ ಮಾತ್ರವಲ್ಲದೆ ವಿವಿಧ ರೈಲು ವಿಭಾಗಗಳ ಲೋಕೋ ಪೈಲಟ್‌ಗಳೊಂದಿಗೆ ಸಂವಾದ ನಡೆಸಿದ್ದಾರೆ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ” ಎಂದು ಅಖಿಲ ಭಾರತ ಲೊಕೋ ರನ್ನಿಂಗ್ ಸ್ಟಾಫ್ ಅಸೋಸಿಯೇಶನ್‌ನ ದಕ್ಷಿಣ ವಲಯದ ಅಧ್ಯಕ್ಷ ಆರ್ ಕುಮರೇಶನ್ ಸುದ್ಧಿ ಸಂಸ್ಥೆಯಾದ ಪಿಟಿಐಗೆ ತಿಳಿಸಿದ್ದರು. ಇದು ಕೂಡ ರಾಹುಲ್ ಗಾಂಧಿ ಭೇಟಿಯಾಗಿದ್ದು ನಿಜವಾದ ಲೋಕೋ ಪೈಲಟ್‌ಗಳನ್ನು ಎಂಬುವುದು ಖಚಿತಪಡಿಸಿದೆ.

ರಾಹುಲ್ ಗಾಂಧಿಯವರು ಲೋಕೋ ಪೈಲೆಟ್‌ಗಳ ಜೊತೆಗೆ ನಡೆಸಿದ ಸಂವಾದವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ಅದನ್ನು ಈ ಕೆಳಗೆ ನೋಡಬಹುದಾಗಿದೆ.

ಇನ್ನು ರಾಹುಲ್ ಗಾಂಧಿಯವರ ಜೊತೆ ಸಂವಾದ ನಡೆಸಲು ಲೋಕೋ ಪೈಲಟ್‌ಗಳ ರೀತಿ ವೇಷ ಹಾಕಿ ಬಂದವರ ವಿರುದ್ದ ಪ್ರಕರಣ ದಾಖಲಾಗಿದೆ ಎಂಬುವುದು ಸುಳ್ಳು. ಈ ಕುರಿತು ಎಲ್ಲಿಯೂ ವರದಿಯಾಗಿಲ್ಲ. ರಾಹುಲ್ ಗಾಂಧಿ ನಿಜವಾದ ಲೋಕೋ ಪೈಲಟ್‌ಗಳ ಜೊತೆ ಸಂವಾದ ನಡೆಸಿರುವಾಗ ಲೋಕೋ ಪೈಲಟ್‌ಗಳು ವೇಷ ಹಾಕಿ ಬರುವುದು, ಪ್ರಕರಣ ದಾಖಲಿಸುವ ಪ್ರಮೇಯವೇ ಬರುವುದಿಲ್ಲ.

ಒಟ್ಟಿನಲ್ಲಿ ರಾಹುಲ್ ಗಾಂಧಿ ನಕಲಿ ಲೋಕೋ ಪೈಲಟ್‌ಗಳನ್ನು ಭೇಟಿಯಾಗಿದ್ದಾರೆ. ಪೈಲಟ್‌ಗಳಂತೆ ವೇಷ ಹಾಕಿ ಬಂದವರ ವಿರುದ್ದ ಪ್ರಕರಣ ದಾಖಲಾಗಿದೆ ಎಂಬುವುದು ಸುಳ್ಳು. ರಾಹುಲ್ ಗಾಂಧಿ ಲೋಕೋ ಪೈಲಟ್‌ಗಳನ್ನು ಭೇಟಿಯಾಗಿರುವ ಕುರಿತು ನಾನುಗೌರಿ.ಕಾಂ ಪ್ರಕಟಿಸಿದ ವರದಿಯ ಲಿಂಕ್ ಕೆಳಗಿದೆ.

ರೈಲ್ವೆ ಲೋಕೋ ಪೈಲಟ್‌ಗಳನ್ನು ಭೇಟಿಯಾಗಿ ಸಮಸ್ಯೆ ಆಲಿಸಿದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...