Homeಫ್ಯಾಕ್ಟ್‌ಚೆಕ್FACT CHECK: ರಾಹುಲ್ ಗಾಂಧಿ ನಕಲಿ ಲೋಕೋ ಪೈಲಟ್‌ಗಳ ಜೊತೆಗೆ ಸಂವಾದ ನಡೆಸಿದ್ದಾರೆ ಎಂಬುವುದು ಸುಳ್ಳು

FACT CHECK: ರಾಹುಲ್ ಗಾಂಧಿ ನಕಲಿ ಲೋಕೋ ಪೈಲಟ್‌ಗಳ ಜೊತೆಗೆ ಸಂವಾದ ನಡೆಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಸಿಬ್ಬಂದಿ ಕೊರತೆಯಿಂದಾಗಿ ಅಸಮರ್ಪಕ ವಿಶ್ರಾಂತಿ ವ್ಯವಸ್ಥೆಯಿದೆ ಎಂದು ಹೇಳಿಕೊಂಡಿದ್ದ ರೈಲ್ವೆ ಲೋಕೋ ಪೈಲಟ್‌ಗಳನ್ನು ಜುಲೈ 5,2024ರಂದು ಭೇಟಿಯಾಗಿದ್ದ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಅವರ ಸಮಸ್ಯೆ ಆಲಿಸಿದ್ದರು. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯೊಂದು ಹರಿದಾಡುತ್ತಿದೆ.

“ಲೋಕೋ ಪೈಲಟ್‌ಗಳು ಎಂದು ಹೇಳಿ ರಾಹುಲ್ ಗಾಂಧಿ ಎಕ್ಸ್‌ನಲ್ಲಿ ಹಾಕಿರುವ ಫೋಟೋ ಪರಿಶೀಲಿಸಿದಾಗ ಅದರಲ್ಲಿ ರೈಲ್ವೆ ನೌಕರರು ಮತ್ತು ಲೋಕೋ ಪೈಲಟ್‌ಗಳು ಇಲ್ಲ ಎಂದು ರೈಲ್ವೆ ದೃಢಪಡಿಸಿದೆ. ಎಲ್ಲರೂ ವೇಷ ಹಾಕಿ ಬಂದವರು. ಅವರ ವಿರುದ್ದ ಪ್ರಕರಣ ದಾಖಲಾಗಿದೆ. ಭಾರತವನ್ನು ಯಾವ ರೀತಿಯಲ್ಲಾದರೂ ನಾಶಪಡಿಸುವುದು ರಾಹುಲ್ ಗಾಂಧಿಯ ಉದ್ದೇಶ ಎಂಬುವುದು ಇದರಿಂದ ಸ್ಪಷ್ಟವಾಗಿದೆ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಳ್ಳಲಾಗಿದೆ.


ಹಾಗಾದರೆ, ರಾಹುಲ್ ಗಾಂಧಿಯವರು ಭೇಟಿಯಾಗಿ ಮಾತುಕತೆ ನಡೆಸಿರುವುದು ನಕಲಿ ಲೋಕೋ ಪೈಲಟ್‌ಗಳ ಜೊತೆಯಾ? ಎಂಬುವುದನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ನಮ್ಮ ಪರಿಶೀಲನೆಯಲ್ಲಿ ರಾಹುಲ್ ಗಾಂಧಿಯವರು ಭೇಟಿಯಾಗಿ ಮಾತುಕತೆ ನಡೆಸಿರುವುದು ನಿಜವಾದ ಲೋಕೋ ಪೈಲಟ್‌ಗಳ ಜೊತೆಯೇ ಎಂಬುವುದು ಗೊತ್ತಾಗಿದೆ.

ರಾಹುಲ್ ಗಾಂಧಿ ದೆಹಲಿಯಲ್ಲಿ ಲೋಕೋ ಪೈಲಟ್‌ಗಳನ್ನು ಭೇಟಿಯಾಗಿದ್ದರು. ಆದರೆ, ಅವರಲ್ಲಿ ದೆಹಲಿ ವಿಭಾಗದವರು ಮಾತ್ರ ಇರಲಿಲ್ಲ. ದೇಶದ ವಿವಿಧ ಭಾಗಗಳಿಂದ ಆಗಮಿಸಿದವರು ಇದ್ದರು. ಈ ಕುರಿತು ಕಾಂಗ್ರೆಸ್ ಮೂಲಗಳನ್ನು ಉಲ್ಲೇಖಿಸಿ ನಾನುಗೌರಿ.ಕಾಂ ಜುಲೈ 6ರಂದು ಸುದ್ದಿ ಪ್ರಕಟಿಸಿತ್ತು.

ರಾಹುಲ್ ಗಾಂಧಿ ಲೋಕೋ ಪೈಲಟ್‌ಗಳನ್ನು ಭೇಟಿಯಾಗಿದ್ದ ಬಗ್ಗೆ ಉತ್ತರ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ (CPRO) ದೀಪಕ್ ಕುಮಾರ್ ಅವರು “ರಾಹುಲ್ ಗಾಂಧಿ ಜೊತೆ ಸಂವಹನ ನಡೆಸಿದ ಲೋಕೋ ಪೈಲಟ್‌ಗಳು ‘ಹೊರಗಿನವರು’ ದೆಹಲಿ ವಿಭಾಗದವರಲ್ಲ ಎಂದು ಹೇಳಿದ್ದರು. ಈ ಹೇಳಿಕೆಯಿಂದ ರಾಹುಲ್ ಗಾಂಧಿ ಭೇಟಿಯಾಗಿದ್ದು ಲೋಕೋ ಪೈಲಟ್‌ಗಳನ್ನೇ ಎಂಬುವುದು ದೃಢಪಟ್ಟಿದೆ.

“ರಾಹುಲ್ ಗಾಂಧಿ ದೆಹಲಿಯಿಂದ ಬಂದವರೊಂದಿಗೆ ಮಾತ್ರವಲ್ಲದೆ ವಿವಿಧ ರೈಲು ವಿಭಾಗಗಳ ಲೋಕೋ ಪೈಲಟ್‌ಗಳೊಂದಿಗೆ ಸಂವಾದ ನಡೆಸಿದ್ದಾರೆ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ” ಎಂದು ಅಖಿಲ ಭಾರತ ಲೊಕೋ ರನ್ನಿಂಗ್ ಸ್ಟಾಫ್ ಅಸೋಸಿಯೇಶನ್‌ನ ದಕ್ಷಿಣ ವಲಯದ ಅಧ್ಯಕ್ಷ ಆರ್ ಕುಮರೇಶನ್ ಸುದ್ಧಿ ಸಂಸ್ಥೆಯಾದ ಪಿಟಿಐಗೆ ತಿಳಿಸಿದ್ದರು. ಇದು ಕೂಡ ರಾಹುಲ್ ಗಾಂಧಿ ಭೇಟಿಯಾಗಿದ್ದು ನಿಜವಾದ ಲೋಕೋ ಪೈಲಟ್‌ಗಳನ್ನು ಎಂಬುವುದು ಖಚಿತಪಡಿಸಿದೆ.

ರಾಹುಲ್ ಗಾಂಧಿಯವರು ಲೋಕೋ ಪೈಲೆಟ್‌ಗಳ ಜೊತೆಗೆ ನಡೆಸಿದ ಸಂವಾದವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ಅದನ್ನು ಈ ಕೆಳಗೆ ನೋಡಬಹುದಾಗಿದೆ.

ಇನ್ನು ರಾಹುಲ್ ಗಾಂಧಿಯವರ ಜೊತೆ ಸಂವಾದ ನಡೆಸಲು ಲೋಕೋ ಪೈಲಟ್‌ಗಳ ರೀತಿ ವೇಷ ಹಾಕಿ ಬಂದವರ ವಿರುದ್ದ ಪ್ರಕರಣ ದಾಖಲಾಗಿದೆ ಎಂಬುವುದು ಸುಳ್ಳು. ಈ ಕುರಿತು ಎಲ್ಲಿಯೂ ವರದಿಯಾಗಿಲ್ಲ. ರಾಹುಲ್ ಗಾಂಧಿ ನಿಜವಾದ ಲೋಕೋ ಪೈಲಟ್‌ಗಳ ಜೊತೆ ಸಂವಾದ ನಡೆಸಿರುವಾಗ ಲೋಕೋ ಪೈಲಟ್‌ಗಳು ವೇಷ ಹಾಕಿ ಬರುವುದು, ಪ್ರಕರಣ ದಾಖಲಿಸುವ ಪ್ರಮೇಯವೇ ಬರುವುದಿಲ್ಲ.

ಒಟ್ಟಿನಲ್ಲಿ ರಾಹುಲ್ ಗಾಂಧಿ ನಕಲಿ ಲೋಕೋ ಪೈಲಟ್‌ಗಳನ್ನು ಭೇಟಿಯಾಗಿದ್ದಾರೆ. ಪೈಲಟ್‌ಗಳಂತೆ ವೇಷ ಹಾಕಿ ಬಂದವರ ವಿರುದ್ದ ಪ್ರಕರಣ ದಾಖಲಾಗಿದೆ ಎಂಬುವುದು ಸುಳ್ಳು. ರಾಹುಲ್ ಗಾಂಧಿ ಲೋಕೋ ಪೈಲಟ್‌ಗಳನ್ನು ಭೇಟಿಯಾಗಿರುವ ಕುರಿತು ನಾನುಗೌರಿ.ಕಾಂ ಪ್ರಕಟಿಸಿದ ವರದಿಯ ಲಿಂಕ್ ಕೆಳಗಿದೆ.

ರೈಲ್ವೆ ಲೋಕೋ ಪೈಲಟ್‌ಗಳನ್ನು ಭೇಟಿಯಾಗಿ ಸಮಸ್ಯೆ ಆಲಿಸಿದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...