Homeಫ್ಯಾಕ್ಟ್‌ಚೆಕ್Fact Check: ಸದಾ ಜೈ ಶ್ರೀರಾಮ್ ಎನ್ನುವ ಹಿಂದೂಗಳ ಮೇಲೆ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ ಎಂಬುದು...

Fact Check: ಸದಾ ಜೈ ಶ್ರೀರಾಮ್ ಎನ್ನುವ ಹಿಂದೂಗಳ ಮೇಲೆ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ ಎಂಬುದು ಸುಳ್ಳು

- Advertisement -
- Advertisement -

“ಹಿಂದೂಗಳು ಸದಾ ಜೈ ಶ್ರೀರಾಮ್ ಎಂದು ಜಪಿಸುತ್ತಲೇ ಇರುತ್ತಾರೆ ಎಂದು ರಾಹುಲ ಕಿಡಿಕಾರುತಿದ್ದಾನೆ. ಇದರಿಂದ ಈ ಮನುಷ್ಯನಿಗೆ ಏನು ಸಮಸ್ಯೆ ಅಂತ ಗೊತ್ತಿಲ್ಲ” ಎಂದು ‘Sanju Appannavara’ಎಂಬ ಫೇಸ್‌ಬುಕ್ ಖಾತೆಯೊಂದರಲ್ಲಿ ಫೆ.16,2024ರಂದು ರಾತ್ರಿ 9 ಗಂಟೆ 58 ನಿಮಿಷಕ್ಕೆ ರಾಹುಲ್ ಗಾಂಧಿಯವರ ಭಾಷಣದ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ

ಫ್ಯಾಕ್ಟ್‌ಚೆಕ್ : ರಾಹುಲ್ ಗಾಂಧಿಯವರು ಹಿಂದೂ ವಿರೋಧಿ ಹೇಳಿಕೆ ನೀಡಿದ್ದಾರೆ ಎಂಬರ್ಥದಲ್ಲಿ ಹಂಚಿಕೊಂಡಿರುವ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಪ್ರಯತ್ನವನ್ನು ನಾನುಗೌರಿ.ಕಾಂ ಮಾಡಿದೆ.

ಗೂಗಲ್ ಮೂಲಕ ಈ ವಿಡಿಯೋವನ್ನು ನಾವು ಹುಡುಕಾಡಿದಾಗ, ಇದು ಫೆ.13,2024ರಂದು ಚತ್ತೀಸ್‌ಗಢದ ಕೊರ್ಬಾದಲ್ಲಿ ‘ಭಾರತ್ ಜೋಡೋ ನ್ಯಾಯ ಯಾತ್ರೆ’ಯ ಭಾಗವಾಗಿ ಜನರನ್ನು ಉದ್ದೇಶಿಸಿ ರಾಹುಲ್ ಗಾಂಧಿ ಮಾಡಿರುವ ಭಾಷಣದ ತುಣುಕು ಎಂದು ತಿಳಿದು ಬಂದಿದೆ.

ದಲಿತರು, ಆದಿವಾಸಿಗಳನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ” ದೇಶದ ದೊಡ್ಡ ದೊಡ್ಡ ಸಂಸ್ಥೆಗಳು ಯಾವುದೂ ದಲಿತರು, ಆದಿವಾಸಿಗಳು ಮತ್ತು ಒಬಿಸಿಗಳ ಮಾಲೀಕತ್ವದಲ್ಲಿ ಇಲ್ಲ. ಅಪೋಲೋ, ವೇದಾಂತ, ಮ್ಯಾಕ್ಸ್‌ನಂತ ಯಾವುದೇ ಸಂಸ್ಥೆಗಳ ಮಾಲೀಕರು ದಲಿತರು, ಆದಿವಾಸಿಗಳಲ್ಲ. ಕರ್ನಾಟಕದ ಪ್ರಸಿದ್ಧ ಖಾಸಗಿ ವಿಶ್ವವಿದ್ಯಾನಿಲಯ ಮಣಿಪಾಲ್‌ನಲ್ಲಿ ಓದುತ್ತಿರುವರನ್ನು ನೋಡಿದರೆ ಒಬ್ಬರೂ ದಲಿತರು ಸಿಗುವುದಿಲ್ಲ. ಈ ಕುರಿತು ನೀವು ಯಾಕೆ ನೀವು ಚಿಂತಿಸುತ್ತಿಲ್ಲ ಎಂದೇ ನನಗೆ ಅರ್ಥವಾಗುತ್ತಿಲ್ಲ. ನೀವು ಮಲಗಿದ್ದೀರಿ. ದಿನದ ಇಪ್ಪತ್ತನಾಲ್ಕು ಗಂಟೆ ಜೈ ಶ್ರೀ ರಾಮ್ ಜೈ ಶ್ರೀರಾಮ್ ಎಂದು ಹೇಳುತ್ತಿದ್ದೀರಿ. ನೀವು ಹೇಳಿ ನನಗೆ ತೊಂದರೆ ಇಲ್ಲ. ಆದರೆ, ನಿಮ್ಮ ಜೇಬಿನಿಂದ ಹಣ ಕೀಳುತ್ತಿದ್ದಾರೆ ಅದನ್ನು ಯೋಚಿಸಿ” ಎಂದಿದ್ದಾರೆ.

ಒಬಿಸಿ, ದಲಿತರು ಮತ್ತು ಆದಿವಾಸಿಗಳ ಸಮಸ್ಯೆಗಳನ್ನು ಧರ್ಮವನ್ನು ಮುಂದಿಟ್ಟು ಯಾವ ರೀತಿ ಮರೆಗೆ ಸರಿಲಾಗ್ತಿದೆ. ಹಿಂದುಳಿದ ವರ್ಗದ ಜನರು ಧರ್ಮದ ಅಮಲಿನಲ್ಲಿ ತಮ್ಮ ಅವಕಾಶಗಳನ್ನು ಯಾವ ರೀತಿ ಕಳೆದುಕೊಳ್ಳುತ್ತಿದ್ದಾರೆ ಎಂಬಿತ್ಯಾದಿ ವಿಚಾರಗಳ ಬಗ್ಗೆ ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಸಂಪೂರ್ಣ ಭಾಷಣದ ವಿಡಿಯೋ ರಾಹುಲ್ ಗಾಂಧಿಯವರ ಅಧಿಕೃತ ಯೂಟ್ಯೂಬ್ ಖಾತೆಯಲ್ಲೂ ಹಂಚಿಕೊಳ್ಳಲಾಗಿದೆ.


ಯೂಟ್ಯೂಬ್ ವಿಡಿಯೋ ಲಿಂಕ್ 

ಅಧಿಕೃತ ಮೂಲಗಳ ಮೂಲಕ ನಾವು ನಡೆಸಿದ ಪರಿಶೀಲನೆಯಲ್ಲಿ “ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳಲಾದ ರಾಹುಲ್ ಗಾಂಧಿಯವರ ಭಾಷಣದ ವಿಡಿಯೋವನ್ನು ಎಡಿಟ್ ಮಾಡಿ ತಪ್ಪಾದ ರೀತಿಯಲ್ಲಿ ಹಂಚಿಕೊಳ್ಳಲಾಗ್ತಿದೆ. ಅಲ್ಲದೆ, ರಾಹುಲ್ ಗಾಂಧಿ ‘ಜೈ ಶ್ರೀರಾಮ್ ಜೈ ಶ್ರಿರಾಮ್’ ಎಂದು ಹೇಳುತ್ತಿದ್ದೀರಿ ಎಂದಿರುವುದು ತಮ್ಮ ಅವಕಾಶಗಳನ್ನು ಮತ್ತು ಹಕ್ಕುಗಳನ್ನು ಮರೆತು ಧರ್ಮದ ಅಮಲಿನಲ್ಲಿ ಮುಳುಗಿರುವ ಜನರಿಗೆ ಎಂಬುವುದು ಖಚಿತವಾಗಿದೆ.

ಇಲ್ಲಿ ‘ಹಿಂದೂಗಳು ಸದಾ ಜೈಶ್ರೀರಾಮ್ ಜೈ ಶ್ರೀರಾಮ್’ ಎಂದು ಹೇಳುತ್ತಿರುತ್ತಾರೆ’ ಎಂದು ರಾಹುಲ್ ಗಾಂಧಿ ಹಿಂದೂ ವಿರೋಧಿ ಹೇಳಿಕೆ ನೀಡಿಲ್ಲ. ಬದಲಾಗಿ, ತಮ್ಮ ಅವಕಾಶಗಳನ್ನು ಮರೆತು ಅಥವಾ ನಿಜವಾದ ಸಮಸ್ಯೆಗಳನ್ನು ಮರೆತು ಧರ್ಮದ ಅಮಲಿನಲ್ಲಿ ಮುಳುಗಬೇಡಿ, ನಿಮ್ಮ ಅವಕಾಶ ಇನ್ನೊಬ್ಬರ ಪಾಲಾಗುತ್ತಿದೆ ಎಚ್ಚೆತ್ತುಕೊಳ್ಳಿ ಎಂದು ದಲಿತರು ಮತ್ತು ಆದಿವಾಸಿಗಳಿಗೆ ಹೇಳಿರುವುದಾಗಿದೆ.

ಇದನ್ನೂ ಓದಿ: Fact Check: ನಮಾಝ್‌ಗಾಗಿ ಹಮೀದ್ ಅನ್ಸಾರಿ ರಾಜ್ಯಸಭೆ ಕಲಾಪ ಮುಂದೂಡುತ್ತಿದ್ದರು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...