Homeಫ್ಯಾಕ್ಟ್‌ಚೆಕ್Fact Check: ಸದಾ ಜೈ ಶ್ರೀರಾಮ್ ಎನ್ನುವ ಹಿಂದೂಗಳ ಮೇಲೆ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ ಎಂಬುದು...

Fact Check: ಸದಾ ಜೈ ಶ್ರೀರಾಮ್ ಎನ್ನುವ ಹಿಂದೂಗಳ ಮೇಲೆ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ ಎಂಬುದು ಸುಳ್ಳು

- Advertisement -
- Advertisement -

“ಹಿಂದೂಗಳು ಸದಾ ಜೈ ಶ್ರೀರಾಮ್ ಎಂದು ಜಪಿಸುತ್ತಲೇ ಇರುತ್ತಾರೆ ಎಂದು ರಾಹುಲ ಕಿಡಿಕಾರುತಿದ್ದಾನೆ. ಇದರಿಂದ ಈ ಮನುಷ್ಯನಿಗೆ ಏನು ಸಮಸ್ಯೆ ಅಂತ ಗೊತ್ತಿಲ್ಲ” ಎಂದು ‘Sanju Appannavara’ಎಂಬ ಫೇಸ್‌ಬುಕ್ ಖಾತೆಯೊಂದರಲ್ಲಿ ಫೆ.16,2024ರಂದು ರಾತ್ರಿ 9 ಗಂಟೆ 58 ನಿಮಿಷಕ್ಕೆ ರಾಹುಲ್ ಗಾಂಧಿಯವರ ಭಾಷಣದ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ

ಫ್ಯಾಕ್ಟ್‌ಚೆಕ್ : ರಾಹುಲ್ ಗಾಂಧಿಯವರು ಹಿಂದೂ ವಿರೋಧಿ ಹೇಳಿಕೆ ನೀಡಿದ್ದಾರೆ ಎಂಬರ್ಥದಲ್ಲಿ ಹಂಚಿಕೊಂಡಿರುವ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಪ್ರಯತ್ನವನ್ನು ನಾನುಗೌರಿ.ಕಾಂ ಮಾಡಿದೆ.

ಗೂಗಲ್ ಮೂಲಕ ಈ ವಿಡಿಯೋವನ್ನು ನಾವು ಹುಡುಕಾಡಿದಾಗ, ಇದು ಫೆ.13,2024ರಂದು ಚತ್ತೀಸ್‌ಗಢದ ಕೊರ್ಬಾದಲ್ಲಿ ‘ಭಾರತ್ ಜೋಡೋ ನ್ಯಾಯ ಯಾತ್ರೆ’ಯ ಭಾಗವಾಗಿ ಜನರನ್ನು ಉದ್ದೇಶಿಸಿ ರಾಹುಲ್ ಗಾಂಧಿ ಮಾಡಿರುವ ಭಾಷಣದ ತುಣುಕು ಎಂದು ತಿಳಿದು ಬಂದಿದೆ.

ದಲಿತರು, ಆದಿವಾಸಿಗಳನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ” ದೇಶದ ದೊಡ್ಡ ದೊಡ್ಡ ಸಂಸ್ಥೆಗಳು ಯಾವುದೂ ದಲಿತರು, ಆದಿವಾಸಿಗಳು ಮತ್ತು ಒಬಿಸಿಗಳ ಮಾಲೀಕತ್ವದಲ್ಲಿ ಇಲ್ಲ. ಅಪೋಲೋ, ವೇದಾಂತ, ಮ್ಯಾಕ್ಸ್‌ನಂತ ಯಾವುದೇ ಸಂಸ್ಥೆಗಳ ಮಾಲೀಕರು ದಲಿತರು, ಆದಿವಾಸಿಗಳಲ್ಲ. ಕರ್ನಾಟಕದ ಪ್ರಸಿದ್ಧ ಖಾಸಗಿ ವಿಶ್ವವಿದ್ಯಾನಿಲಯ ಮಣಿಪಾಲ್‌ನಲ್ಲಿ ಓದುತ್ತಿರುವರನ್ನು ನೋಡಿದರೆ ಒಬ್ಬರೂ ದಲಿತರು ಸಿಗುವುದಿಲ್ಲ. ಈ ಕುರಿತು ನೀವು ಯಾಕೆ ನೀವು ಚಿಂತಿಸುತ್ತಿಲ್ಲ ಎಂದೇ ನನಗೆ ಅರ್ಥವಾಗುತ್ತಿಲ್ಲ. ನೀವು ಮಲಗಿದ್ದೀರಿ. ದಿನದ ಇಪ್ಪತ್ತನಾಲ್ಕು ಗಂಟೆ ಜೈ ಶ್ರೀ ರಾಮ್ ಜೈ ಶ್ರೀರಾಮ್ ಎಂದು ಹೇಳುತ್ತಿದ್ದೀರಿ. ನೀವು ಹೇಳಿ ನನಗೆ ತೊಂದರೆ ಇಲ್ಲ. ಆದರೆ, ನಿಮ್ಮ ಜೇಬಿನಿಂದ ಹಣ ಕೀಳುತ್ತಿದ್ದಾರೆ ಅದನ್ನು ಯೋಚಿಸಿ” ಎಂದಿದ್ದಾರೆ.

ಒಬಿಸಿ, ದಲಿತರು ಮತ್ತು ಆದಿವಾಸಿಗಳ ಸಮಸ್ಯೆಗಳನ್ನು ಧರ್ಮವನ್ನು ಮುಂದಿಟ್ಟು ಯಾವ ರೀತಿ ಮರೆಗೆ ಸರಿಲಾಗ್ತಿದೆ. ಹಿಂದುಳಿದ ವರ್ಗದ ಜನರು ಧರ್ಮದ ಅಮಲಿನಲ್ಲಿ ತಮ್ಮ ಅವಕಾಶಗಳನ್ನು ಯಾವ ರೀತಿ ಕಳೆದುಕೊಳ್ಳುತ್ತಿದ್ದಾರೆ ಎಂಬಿತ್ಯಾದಿ ವಿಚಾರಗಳ ಬಗ್ಗೆ ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಸಂಪೂರ್ಣ ಭಾಷಣದ ವಿಡಿಯೋ ರಾಹುಲ್ ಗಾಂಧಿಯವರ ಅಧಿಕೃತ ಯೂಟ್ಯೂಬ್ ಖಾತೆಯಲ್ಲೂ ಹಂಚಿಕೊಳ್ಳಲಾಗಿದೆ.


ಯೂಟ್ಯೂಬ್ ವಿಡಿಯೋ ಲಿಂಕ್ 

ಅಧಿಕೃತ ಮೂಲಗಳ ಮೂಲಕ ನಾವು ನಡೆಸಿದ ಪರಿಶೀಲನೆಯಲ್ಲಿ “ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳಲಾದ ರಾಹುಲ್ ಗಾಂಧಿಯವರ ಭಾಷಣದ ವಿಡಿಯೋವನ್ನು ಎಡಿಟ್ ಮಾಡಿ ತಪ್ಪಾದ ರೀತಿಯಲ್ಲಿ ಹಂಚಿಕೊಳ್ಳಲಾಗ್ತಿದೆ. ಅಲ್ಲದೆ, ರಾಹುಲ್ ಗಾಂಧಿ ‘ಜೈ ಶ್ರೀರಾಮ್ ಜೈ ಶ್ರಿರಾಮ್’ ಎಂದು ಹೇಳುತ್ತಿದ್ದೀರಿ ಎಂದಿರುವುದು ತಮ್ಮ ಅವಕಾಶಗಳನ್ನು ಮತ್ತು ಹಕ್ಕುಗಳನ್ನು ಮರೆತು ಧರ್ಮದ ಅಮಲಿನಲ್ಲಿ ಮುಳುಗಿರುವ ಜನರಿಗೆ ಎಂಬುವುದು ಖಚಿತವಾಗಿದೆ.

ಇಲ್ಲಿ ‘ಹಿಂದೂಗಳು ಸದಾ ಜೈಶ್ರೀರಾಮ್ ಜೈ ಶ್ರೀರಾಮ್’ ಎಂದು ಹೇಳುತ್ತಿರುತ್ತಾರೆ’ ಎಂದು ರಾಹುಲ್ ಗಾಂಧಿ ಹಿಂದೂ ವಿರೋಧಿ ಹೇಳಿಕೆ ನೀಡಿಲ್ಲ. ಬದಲಾಗಿ, ತಮ್ಮ ಅವಕಾಶಗಳನ್ನು ಮರೆತು ಅಥವಾ ನಿಜವಾದ ಸಮಸ್ಯೆಗಳನ್ನು ಮರೆತು ಧರ್ಮದ ಅಮಲಿನಲ್ಲಿ ಮುಳುಗಬೇಡಿ, ನಿಮ್ಮ ಅವಕಾಶ ಇನ್ನೊಬ್ಬರ ಪಾಲಾಗುತ್ತಿದೆ ಎಚ್ಚೆತ್ತುಕೊಳ್ಳಿ ಎಂದು ದಲಿತರು ಮತ್ತು ಆದಿವಾಸಿಗಳಿಗೆ ಹೇಳಿರುವುದಾಗಿದೆ.

ಇದನ್ನೂ ಓದಿ: Fact Check: ನಮಾಝ್‌ಗಾಗಿ ಹಮೀದ್ ಅನ್ಸಾರಿ ರಾಜ್ಯಸಭೆ ಕಲಾಪ ಮುಂದೂಡುತ್ತಿದ್ದರು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...