Homeಫ್ಯಾಕ್ಟ್‌ಚೆಕ್Fact Check: ಸದಾ ಜೈ ಶ್ರೀರಾಮ್ ಎನ್ನುವ ಹಿಂದೂಗಳ ಮೇಲೆ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ ಎಂಬುದು...

Fact Check: ಸದಾ ಜೈ ಶ್ರೀರಾಮ್ ಎನ್ನುವ ಹಿಂದೂಗಳ ಮೇಲೆ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ ಎಂಬುದು ಸುಳ್ಳು

- Advertisement -
- Advertisement -

“ಹಿಂದೂಗಳು ಸದಾ ಜೈ ಶ್ರೀರಾಮ್ ಎಂದು ಜಪಿಸುತ್ತಲೇ ಇರುತ್ತಾರೆ ಎಂದು ರಾಹುಲ ಕಿಡಿಕಾರುತಿದ್ದಾನೆ. ಇದರಿಂದ ಈ ಮನುಷ್ಯನಿಗೆ ಏನು ಸಮಸ್ಯೆ ಅಂತ ಗೊತ್ತಿಲ್ಲ” ಎಂದು ‘Sanju Appannavara’ಎಂಬ ಫೇಸ್‌ಬುಕ್ ಖಾತೆಯೊಂದರಲ್ಲಿ ಫೆ.16,2024ರಂದು ರಾತ್ರಿ 9 ಗಂಟೆ 58 ನಿಮಿಷಕ್ಕೆ ರಾಹುಲ್ ಗಾಂಧಿಯವರ ಭಾಷಣದ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ

ಫ್ಯಾಕ್ಟ್‌ಚೆಕ್ : ರಾಹುಲ್ ಗಾಂಧಿಯವರು ಹಿಂದೂ ವಿರೋಧಿ ಹೇಳಿಕೆ ನೀಡಿದ್ದಾರೆ ಎಂಬರ್ಥದಲ್ಲಿ ಹಂಚಿಕೊಂಡಿರುವ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಪ್ರಯತ್ನವನ್ನು ನಾನುಗೌರಿ.ಕಾಂ ಮಾಡಿದೆ.

ಗೂಗಲ್ ಮೂಲಕ ಈ ವಿಡಿಯೋವನ್ನು ನಾವು ಹುಡುಕಾಡಿದಾಗ, ಇದು ಫೆ.13,2024ರಂದು ಚತ್ತೀಸ್‌ಗಢದ ಕೊರ್ಬಾದಲ್ಲಿ ‘ಭಾರತ್ ಜೋಡೋ ನ್ಯಾಯ ಯಾತ್ರೆ’ಯ ಭಾಗವಾಗಿ ಜನರನ್ನು ಉದ್ದೇಶಿಸಿ ರಾಹುಲ್ ಗಾಂಧಿ ಮಾಡಿರುವ ಭಾಷಣದ ತುಣುಕು ಎಂದು ತಿಳಿದು ಬಂದಿದೆ.

ದಲಿತರು, ಆದಿವಾಸಿಗಳನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ” ದೇಶದ ದೊಡ್ಡ ದೊಡ್ಡ ಸಂಸ್ಥೆಗಳು ಯಾವುದೂ ದಲಿತರು, ಆದಿವಾಸಿಗಳು ಮತ್ತು ಒಬಿಸಿಗಳ ಮಾಲೀಕತ್ವದಲ್ಲಿ ಇಲ್ಲ. ಅಪೋಲೋ, ವೇದಾಂತ, ಮ್ಯಾಕ್ಸ್‌ನಂತ ಯಾವುದೇ ಸಂಸ್ಥೆಗಳ ಮಾಲೀಕರು ದಲಿತರು, ಆದಿವಾಸಿಗಳಲ್ಲ. ಕರ್ನಾಟಕದ ಪ್ರಸಿದ್ಧ ಖಾಸಗಿ ವಿಶ್ವವಿದ್ಯಾನಿಲಯ ಮಣಿಪಾಲ್‌ನಲ್ಲಿ ಓದುತ್ತಿರುವರನ್ನು ನೋಡಿದರೆ ಒಬ್ಬರೂ ದಲಿತರು ಸಿಗುವುದಿಲ್ಲ. ಈ ಕುರಿತು ನೀವು ಯಾಕೆ ನೀವು ಚಿಂತಿಸುತ್ತಿಲ್ಲ ಎಂದೇ ನನಗೆ ಅರ್ಥವಾಗುತ್ತಿಲ್ಲ. ನೀವು ಮಲಗಿದ್ದೀರಿ. ದಿನದ ಇಪ್ಪತ್ತನಾಲ್ಕು ಗಂಟೆ ಜೈ ಶ್ರೀ ರಾಮ್ ಜೈ ಶ್ರೀರಾಮ್ ಎಂದು ಹೇಳುತ್ತಿದ್ದೀರಿ. ನೀವು ಹೇಳಿ ನನಗೆ ತೊಂದರೆ ಇಲ್ಲ. ಆದರೆ, ನಿಮ್ಮ ಜೇಬಿನಿಂದ ಹಣ ಕೀಳುತ್ತಿದ್ದಾರೆ ಅದನ್ನು ಯೋಚಿಸಿ” ಎಂದಿದ್ದಾರೆ.

ಒಬಿಸಿ, ದಲಿತರು ಮತ್ತು ಆದಿವಾಸಿಗಳ ಸಮಸ್ಯೆಗಳನ್ನು ಧರ್ಮವನ್ನು ಮುಂದಿಟ್ಟು ಯಾವ ರೀತಿ ಮರೆಗೆ ಸರಿಲಾಗ್ತಿದೆ. ಹಿಂದುಳಿದ ವರ್ಗದ ಜನರು ಧರ್ಮದ ಅಮಲಿನಲ್ಲಿ ತಮ್ಮ ಅವಕಾಶಗಳನ್ನು ಯಾವ ರೀತಿ ಕಳೆದುಕೊಳ್ಳುತ್ತಿದ್ದಾರೆ ಎಂಬಿತ್ಯಾದಿ ವಿಚಾರಗಳ ಬಗ್ಗೆ ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಸಂಪೂರ್ಣ ಭಾಷಣದ ವಿಡಿಯೋ ರಾಹುಲ್ ಗಾಂಧಿಯವರ ಅಧಿಕೃತ ಯೂಟ್ಯೂಬ್ ಖಾತೆಯಲ್ಲೂ ಹಂಚಿಕೊಳ್ಳಲಾಗಿದೆ.


ಯೂಟ್ಯೂಬ್ ವಿಡಿಯೋ ಲಿಂಕ್ 

ಅಧಿಕೃತ ಮೂಲಗಳ ಮೂಲಕ ನಾವು ನಡೆಸಿದ ಪರಿಶೀಲನೆಯಲ್ಲಿ “ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳಲಾದ ರಾಹುಲ್ ಗಾಂಧಿಯವರ ಭಾಷಣದ ವಿಡಿಯೋವನ್ನು ಎಡಿಟ್ ಮಾಡಿ ತಪ್ಪಾದ ರೀತಿಯಲ್ಲಿ ಹಂಚಿಕೊಳ್ಳಲಾಗ್ತಿದೆ. ಅಲ್ಲದೆ, ರಾಹುಲ್ ಗಾಂಧಿ ‘ಜೈ ಶ್ರೀರಾಮ್ ಜೈ ಶ್ರಿರಾಮ್’ ಎಂದು ಹೇಳುತ್ತಿದ್ದೀರಿ ಎಂದಿರುವುದು ತಮ್ಮ ಅವಕಾಶಗಳನ್ನು ಮತ್ತು ಹಕ್ಕುಗಳನ್ನು ಮರೆತು ಧರ್ಮದ ಅಮಲಿನಲ್ಲಿ ಮುಳುಗಿರುವ ಜನರಿಗೆ ಎಂಬುವುದು ಖಚಿತವಾಗಿದೆ.

ಇಲ್ಲಿ ‘ಹಿಂದೂಗಳು ಸದಾ ಜೈಶ್ರೀರಾಮ್ ಜೈ ಶ್ರೀರಾಮ್’ ಎಂದು ಹೇಳುತ್ತಿರುತ್ತಾರೆ’ ಎಂದು ರಾಹುಲ್ ಗಾಂಧಿ ಹಿಂದೂ ವಿರೋಧಿ ಹೇಳಿಕೆ ನೀಡಿಲ್ಲ. ಬದಲಾಗಿ, ತಮ್ಮ ಅವಕಾಶಗಳನ್ನು ಮರೆತು ಅಥವಾ ನಿಜವಾದ ಸಮಸ್ಯೆಗಳನ್ನು ಮರೆತು ಧರ್ಮದ ಅಮಲಿನಲ್ಲಿ ಮುಳುಗಬೇಡಿ, ನಿಮ್ಮ ಅವಕಾಶ ಇನ್ನೊಬ್ಬರ ಪಾಲಾಗುತ್ತಿದೆ ಎಚ್ಚೆತ್ತುಕೊಳ್ಳಿ ಎಂದು ದಲಿತರು ಮತ್ತು ಆದಿವಾಸಿಗಳಿಗೆ ಹೇಳಿರುವುದಾಗಿದೆ.

ಇದನ್ನೂ ಓದಿ: Fact Check: ನಮಾಝ್‌ಗಾಗಿ ಹಮೀದ್ ಅನ್ಸಾರಿ ರಾಜ್ಯಸಭೆ ಕಲಾಪ ಮುಂದೂಡುತ್ತಿದ್ದರು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...