Homeಫ್ಯಾಕ್ಟ್‌ಚೆಕ್Fact Check: ಸದಾ ಜೈ ಶ್ರೀರಾಮ್ ಎನ್ನುವ ಹಿಂದೂಗಳ ಮೇಲೆ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ ಎಂಬುದು...

Fact Check: ಸದಾ ಜೈ ಶ್ರೀರಾಮ್ ಎನ್ನುವ ಹಿಂದೂಗಳ ಮೇಲೆ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ ಎಂಬುದು ಸುಳ್ಳು

- Advertisement -
- Advertisement -

“ಹಿಂದೂಗಳು ಸದಾ ಜೈ ಶ್ರೀರಾಮ್ ಎಂದು ಜಪಿಸುತ್ತಲೇ ಇರುತ್ತಾರೆ ಎಂದು ರಾಹುಲ ಕಿಡಿಕಾರುತಿದ್ದಾನೆ. ಇದರಿಂದ ಈ ಮನುಷ್ಯನಿಗೆ ಏನು ಸಮಸ್ಯೆ ಅಂತ ಗೊತ್ತಿಲ್ಲ” ಎಂದು ‘Sanju Appannavara’ಎಂಬ ಫೇಸ್‌ಬುಕ್ ಖಾತೆಯೊಂದರಲ್ಲಿ ಫೆ.16,2024ರಂದು ರಾತ್ರಿ 9 ಗಂಟೆ 58 ನಿಮಿಷಕ್ಕೆ ರಾಹುಲ್ ಗಾಂಧಿಯವರ ಭಾಷಣದ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ

ಫ್ಯಾಕ್ಟ್‌ಚೆಕ್ : ರಾಹುಲ್ ಗಾಂಧಿಯವರು ಹಿಂದೂ ವಿರೋಧಿ ಹೇಳಿಕೆ ನೀಡಿದ್ದಾರೆ ಎಂಬರ್ಥದಲ್ಲಿ ಹಂಚಿಕೊಂಡಿರುವ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಪ್ರಯತ್ನವನ್ನು ನಾನುಗೌರಿ.ಕಾಂ ಮಾಡಿದೆ.

ಗೂಗಲ್ ಮೂಲಕ ಈ ವಿಡಿಯೋವನ್ನು ನಾವು ಹುಡುಕಾಡಿದಾಗ, ಇದು ಫೆ.13,2024ರಂದು ಚತ್ತೀಸ್‌ಗಢದ ಕೊರ್ಬಾದಲ್ಲಿ ‘ಭಾರತ್ ಜೋಡೋ ನ್ಯಾಯ ಯಾತ್ರೆ’ಯ ಭಾಗವಾಗಿ ಜನರನ್ನು ಉದ್ದೇಶಿಸಿ ರಾಹುಲ್ ಗಾಂಧಿ ಮಾಡಿರುವ ಭಾಷಣದ ತುಣುಕು ಎಂದು ತಿಳಿದು ಬಂದಿದೆ.

ದಲಿತರು, ಆದಿವಾಸಿಗಳನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ” ದೇಶದ ದೊಡ್ಡ ದೊಡ್ಡ ಸಂಸ್ಥೆಗಳು ಯಾವುದೂ ದಲಿತರು, ಆದಿವಾಸಿಗಳು ಮತ್ತು ಒಬಿಸಿಗಳ ಮಾಲೀಕತ್ವದಲ್ಲಿ ಇಲ್ಲ. ಅಪೋಲೋ, ವೇದಾಂತ, ಮ್ಯಾಕ್ಸ್‌ನಂತ ಯಾವುದೇ ಸಂಸ್ಥೆಗಳ ಮಾಲೀಕರು ದಲಿತರು, ಆದಿವಾಸಿಗಳಲ್ಲ. ಕರ್ನಾಟಕದ ಪ್ರಸಿದ್ಧ ಖಾಸಗಿ ವಿಶ್ವವಿದ್ಯಾನಿಲಯ ಮಣಿಪಾಲ್‌ನಲ್ಲಿ ಓದುತ್ತಿರುವರನ್ನು ನೋಡಿದರೆ ಒಬ್ಬರೂ ದಲಿತರು ಸಿಗುವುದಿಲ್ಲ. ಈ ಕುರಿತು ನೀವು ಯಾಕೆ ನೀವು ಚಿಂತಿಸುತ್ತಿಲ್ಲ ಎಂದೇ ನನಗೆ ಅರ್ಥವಾಗುತ್ತಿಲ್ಲ. ನೀವು ಮಲಗಿದ್ದೀರಿ. ದಿನದ ಇಪ್ಪತ್ತನಾಲ್ಕು ಗಂಟೆ ಜೈ ಶ್ರೀ ರಾಮ್ ಜೈ ಶ್ರೀರಾಮ್ ಎಂದು ಹೇಳುತ್ತಿದ್ದೀರಿ. ನೀವು ಹೇಳಿ ನನಗೆ ತೊಂದರೆ ಇಲ್ಲ. ಆದರೆ, ನಿಮ್ಮ ಜೇಬಿನಿಂದ ಹಣ ಕೀಳುತ್ತಿದ್ದಾರೆ ಅದನ್ನು ಯೋಚಿಸಿ” ಎಂದಿದ್ದಾರೆ.

ಒಬಿಸಿ, ದಲಿತರು ಮತ್ತು ಆದಿವಾಸಿಗಳ ಸಮಸ್ಯೆಗಳನ್ನು ಧರ್ಮವನ್ನು ಮುಂದಿಟ್ಟು ಯಾವ ರೀತಿ ಮರೆಗೆ ಸರಿಲಾಗ್ತಿದೆ. ಹಿಂದುಳಿದ ವರ್ಗದ ಜನರು ಧರ್ಮದ ಅಮಲಿನಲ್ಲಿ ತಮ್ಮ ಅವಕಾಶಗಳನ್ನು ಯಾವ ರೀತಿ ಕಳೆದುಕೊಳ್ಳುತ್ತಿದ್ದಾರೆ ಎಂಬಿತ್ಯಾದಿ ವಿಚಾರಗಳ ಬಗ್ಗೆ ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಸಂಪೂರ್ಣ ಭಾಷಣದ ವಿಡಿಯೋ ರಾಹುಲ್ ಗಾಂಧಿಯವರ ಅಧಿಕೃತ ಯೂಟ್ಯೂಬ್ ಖಾತೆಯಲ್ಲೂ ಹಂಚಿಕೊಳ್ಳಲಾಗಿದೆ.


ಯೂಟ್ಯೂಬ್ ವಿಡಿಯೋ ಲಿಂಕ್ 

ಅಧಿಕೃತ ಮೂಲಗಳ ಮೂಲಕ ನಾವು ನಡೆಸಿದ ಪರಿಶೀಲನೆಯಲ್ಲಿ “ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳಲಾದ ರಾಹುಲ್ ಗಾಂಧಿಯವರ ಭಾಷಣದ ವಿಡಿಯೋವನ್ನು ಎಡಿಟ್ ಮಾಡಿ ತಪ್ಪಾದ ರೀತಿಯಲ್ಲಿ ಹಂಚಿಕೊಳ್ಳಲಾಗ್ತಿದೆ. ಅಲ್ಲದೆ, ರಾಹುಲ್ ಗಾಂಧಿ ‘ಜೈ ಶ್ರೀರಾಮ್ ಜೈ ಶ್ರಿರಾಮ್’ ಎಂದು ಹೇಳುತ್ತಿದ್ದೀರಿ ಎಂದಿರುವುದು ತಮ್ಮ ಅವಕಾಶಗಳನ್ನು ಮತ್ತು ಹಕ್ಕುಗಳನ್ನು ಮರೆತು ಧರ್ಮದ ಅಮಲಿನಲ್ಲಿ ಮುಳುಗಿರುವ ಜನರಿಗೆ ಎಂಬುವುದು ಖಚಿತವಾಗಿದೆ.

ಇಲ್ಲಿ ‘ಹಿಂದೂಗಳು ಸದಾ ಜೈಶ್ರೀರಾಮ್ ಜೈ ಶ್ರೀರಾಮ್’ ಎಂದು ಹೇಳುತ್ತಿರುತ್ತಾರೆ’ ಎಂದು ರಾಹುಲ್ ಗಾಂಧಿ ಹಿಂದೂ ವಿರೋಧಿ ಹೇಳಿಕೆ ನೀಡಿಲ್ಲ. ಬದಲಾಗಿ, ತಮ್ಮ ಅವಕಾಶಗಳನ್ನು ಮರೆತು ಅಥವಾ ನಿಜವಾದ ಸಮಸ್ಯೆಗಳನ್ನು ಮರೆತು ಧರ್ಮದ ಅಮಲಿನಲ್ಲಿ ಮುಳುಗಬೇಡಿ, ನಿಮ್ಮ ಅವಕಾಶ ಇನ್ನೊಬ್ಬರ ಪಾಲಾಗುತ್ತಿದೆ ಎಚ್ಚೆತ್ತುಕೊಳ್ಳಿ ಎಂದು ದಲಿತರು ಮತ್ತು ಆದಿವಾಸಿಗಳಿಗೆ ಹೇಳಿರುವುದಾಗಿದೆ.

ಇದನ್ನೂ ಓದಿ: Fact Check: ನಮಾಝ್‌ಗಾಗಿ ಹಮೀದ್ ಅನ್ಸಾರಿ ರಾಜ್ಯಸಭೆ ಕಲಾಪ ಮುಂದೂಡುತ್ತಿದ್ದರು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...