Homeಫ್ಯಾಕ್ಟ್‌ಚೆಕ್FACT CHECK : ರಾಹುಲ್ ಗಾಂಧಿಗೆ ಕಾಶ್ಮೀರಿ ಪಂಡಿತ ಮಹಿಳೆಯರು ಮುತ್ತಿಗೆ ಹಾಕಿದ್ದಾರೆ ಎನ್ನುವುದು ಸುಳ್ಳು

FACT CHECK : ರಾಹುಲ್ ಗಾಂಧಿಗೆ ಕಾಶ್ಮೀರಿ ಪಂಡಿತ ಮಹಿಳೆಯರು ಮುತ್ತಿಗೆ ಹಾಕಿದ್ದಾರೆ ಎನ್ನುವುದು ಸುಳ್ಳು

- Advertisement -
- Advertisement -

ಜಮ್ಮು ಕಾಶ್ಮೀರ ವಿಧಾನಸಭೆಗೆ ಚುನಾವಣೆ ನಡೆಯುತ್ತಿದೆ. ಈಗಾಗಲೇ ಎರಡು ಹಂತಗಳ ಮತದಾನ ಮುಕ್ತಾಯಗೊಂಡಿದ್ದು, ಮೂರನೇ ಹಂತದ ಮತದಾನ ನಾಳೆ (ಅಕ್ಟೋಬರ್ 1) ನಡೆಯಲಿದೆ.

ಈ ನಡುವೆ ಲೋಕಸಭೆಯ ಪ್ರತಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರಿಗೆ ಕಾಶ್ಮೀರಿ ಪಂಡಿತ ಸಮುದಾಯದ ಜನರು ಮುತ್ತಿಗೆ ಹಾಕಿದ್ದಾರೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವೈರಲ್ ವಿಡಿಯೋದಲ್ಲಿ ವಿಮಾನದೊಳಗೆ ಇತರ ನಾಯಕರೊಂದಿಗೆ ಕುಳಿತಿರುವ ರಾಹುಲ್ ಗಾಂಧಿಯವರನ್ನು ಒಂದಷ್ಟು ಜನರು, ವಿಶೇಷವಾಗಿ ಮಹಿಳೆಯರು ಸುತ್ತುವರಿದಿರುವ ಮತ್ತು ಒಬ್ಬರು ಮಹಿಳೆ “ಪುಟ್ಟ ಮಕ್ಕಳು ಹೊರಗೆ ಹೋಗಲು ಸಾಧ್ಯವಾಗುತ್ತಿಲ್ಲ. ನನ್ನ ಸಹೋದರ ಹೃದಯ ರೋಗಿ, ಅವನು ತನ್ನ ಮಕ್ಕಳನ್ನು ಹುಡುಕಲು ಹೋದವ ವಾಪಸ್ ಬಂದಿಲ್ಲ. ಅವನ ಕುಟುಂಬ ಸದಸ್ಯರಿಗೆ ಕಳೆದ 10 ದಿನಗಳಿಂದ ಅವನು ಎಲ್ಲಿದ್ದಾನೆಂದು ತಿಳಿದಿಲ್ಲ. ನಾವು ತೊಂದರೆಯಲ್ಲಿದ್ದೇವೆ” ಎಂದು ಅಳುತ್ತಾ ಹೇಳುವುದು ನೋಡಬಹುದು.

ಸೆಪ್ಟೆಂಬರ್ 26ರಂದು ಎಕ್ಸ್‌ನಲ್ಲಿ ಈ ವಿಡಿಯೋ ಹಂಚಿಕೊಂಡಿರುವ ‘ವಿಭೋರ್ ಆನಂದ್’ ಎಂಬ ಎಕ್ಸ್ ಬಳಕೆದಾರ “ಮಾರಾಟಗೊಂಡ ಭಾರತದ ಮಾಧ್ಯಮಗಳು ಈ ವಿಡಿಯೋ ತೋರಿಸುವುದಿಲ್ಲ. ಭಾರತ ವಿರೋಧಿ ನಿಲುವು ಮತ್ತು ಕಾಶ್ಮೀರಿ ಹಿಂದೂಗಳ ಸಮಸ್ಯೆಗಳ ಬಗ್ಗೆ ಗಮನ ಹರಿಸದ ರಾಹುಲ್ ಗಾಂಧಿಯನ್ನು ಕಾಶ್ಮೀರಿ ಪಂಡಿತ ಮಹಿಳೆಯೊಬ್ಬರು ವಿಮಾನದಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. ಇದು ದೊಡ್ಡ ಮಟ್ಟದಲ್ಲಿ ವೈರಲ್ ಆಗಬೇಕು. ಹೆಚ್ಚಿನ ಸಂಖ್ಯೆಯಲ್ಲಿ ರಾಹುಲ್ ಗಾಂಧಿಗೆ ಟ್ಯಾಗ್ ಮಾಡಿ. 25 ಸಾವಿರದ ಗುರಿ” ಎಂದು ಬರೆದುಕೊಂಡಿದ್ದರು.

ಇನ್ನೂ ಕೆಲ ಎಕ್ಸ್‌ , ಫೇಸ್‌ಬುಕ್ ಬಳಕೆದಾರರು ಇದೇ ಪ್ರತಿಪಾದನೆಯೊಂದಿಗೆ ವಿಡಿಯೋ ಹಂಚಿಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಕುರಿತು ನಾವು ಸತ್ಯಾಸತ್ಯತೆ ಪರಿಶೀಲನೆ ನಡೆಸಿದ್ದೇವೆ. ಅಸಲಿಗೆ ಈ ವಿಡಿಯೋ 24 ಆಗಸ್ಟ್ 2019ರದ್ದು. ಆಗ ರಾಹುಲ್ ಗಾಂಧಿ ಮತ್ತು ಇತರ ನಾಯಕರು ಶ್ರೀನಗರಕ್ಕೆ ತೆರಳಲು ಮುಂದಾಗಿದ್ದರು. ಆದರೆ, ಅವರನ್ನು ಏರ್‌ಪೋರ್ಟ್‌ನಲ್ಲೇ ತಡೆಯಲಾಗಿತ್ತು.

ಆಗ, ಮಹಿಳೆಯೊಬ್ಬರು ವಿಮಾನದಲ್ಲೇ ರಾಹುಲ್ ಗಾಂಧಿಯನ್ನು ಭೇಟಿಯಾಗಿ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಆರ್ಟಿಕಲ್ 370ರ ರದ್ದತಿಯಿಂದ ಕಾಶ್ಮೀರ ಜನತೆ ಲಾಕ್‌ಡೌನ್‌ನಲ್ಲಿದ್ದೇವೆ ಎಂದು ಪರಿಸ್ಥಿತಿ ವಿವರಿಸಿದ್ದರು. ಆ ಕುರಿತು ವಿಡಿಯೋ ಆಗಿದೆ ವೈರಲ್ ಆಗಿರುವುದು.

ವೈರಲ್ ವಿಡಿಯೋ ಕುರಿತು ನಾವು ಮಾಹಿತಿ ಹುಡುಕಿದಾಗ ಅದಕ್ಕೆ ಸಂಬಂಧಿಸಿದ ಅನೇಕ ವರದಿಗಳು ಲಭ್ಯವಾಗಿದೆ.

ಆಗಸ್ಟ್ 25, 2019ರಂದು ಸ್ಕ್ರೋಲ್ ಪ್ರಕಟಿಸಿದ ವರದಿಯ ಪ್ರಕಾರ, ಶ್ರೀನಗರ ಪ್ರವೇಶಕ್ಕೆ ಅವಕಾಶ ನಿರಾಕರಿಸಿದ ನಂತರ ರಾಹುಲ್ ಗಾಂಧಿ ವಿಮಾನ ನಿಲ್ದಾಣದಿಂದಲೇ ಹಿಂದಿರುಗಲು ಮುಂದಾಗಿದ್ದರು. ಆಗ ಮಹಿಳೆ ಬಂದು ಅವರ ಬಳಿ ಅಳಲು ತೋಡಿಕೊಂಡಿದ್ದಾರೆ.

ಇದೇ ಘಟನೆಯ ಕುರಿತು ಇಂಡಿಯನ್ ಎಕ್ಸ್‌ಪ್ರೆಸ್ ಕೂಡ ವರದಿ ಪ್ರಕಟಿಸಿತ್ತು. ಅದರಲ್ಲಿ ರಾಹುಲ್ ಗಾಂಧಿ, ಇತ್ತೀಚೆಗೆ ನಿಧನರಾದ ಸೀತಾರಾಂ ಯೆಚೂರಿ ಮತ್ತು ಗುಲಾಂ ನಬಿ ಆಝಾದ್ ಸೇರಿದಂತೆ ಆಗಿನ ಪ್ರತಿಪಕ್ಷ ನಾಯಕರು 2019ರಲ್ಲಿ ಶ್ರೀನಗರಕ್ಕೆ ಭೇಟಿ ನೀಡಲು ತೆರಳಿದ್ದರು. ಆರ್ಟಿಕಲ್ 370ಅನ್ನು ರದ್ದುಪಡಿಸಿ ಸಮಯವಾದ್ದರಿಂದ ಪ್ರತಿಪಕ್ಷ ನಾಯಕರ ಭೇಟಿಗೆ ಅವಕಾಶ ನಿರಕಾರಿಸಲಾಗಿತ್ತು. ಆದ್ದರಿಂದ ವಿಮಾನದಿಂದ ಇಳಿಯದೆ ಅವರು ವಾಪಸ್ ಬಂದಿದ್ದರು.

ಘಟನೆಯ ವಿಡಿಯೋವನ್ನು ಆಗಸ್ಟ್ 25, 2019ರಂದು ಎಕ್ಸ್‌ನಲ್ಲಿ ರಿಟ್ವೀಟ್ ಮಾಡಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ” ಇದು ಎಷ್ಟು ದಿನ ಹೀಗೆ ಮುಂದುವರಿಯಲಿದೆ? ರಾಷ್ಟ್ರೀಯತೆ ಹೆಸರಿನಲ್ಲಿ ಧ್ವನಿ ಅಡಗಿಸಿದ ಲಕ್ಷಾಂತರ ಜನರಲ್ಲಿ ಇವರು ಒಬ್ಬರು. ಪ್ರತಿಪಕ್ಷಗಳು ವಿಷಯವನ್ನು ರಾಜಕೀಯ ಮಾಡುತ್ತಿದೆ ಎನ್ನುವವರಿಗೆ ಇದು ಅರ್ಪಣೆ” ಎಂದು ಬರೆದುಕೊಂಡಿದ್ದರು.

ಒಟ್ಟಿನಲ್ಲಿ 2019ರಲ್ಲಿ ಆರ್ಟಿಕಲ್ 370 ರದ್ದು ಮಾಡಿದ್ದ ಸಂದರ್ಭ ರಾಹುಲ್ ಗಾಂಧಿ ಸೇರಿದಂತೆ ಪ್ರತಿಪಕ್ಷ ನಾಯಕರು ಶ್ರೀನಗರ ಭೇಟಿಗೆ ತೆರಳಿದ್ದರು. ಆಗ ಅವರನ್ನು ವಿಮಾನ ನಿಲ್ದಾಣದಲ್ಲೇ ತಡೆಯಲಾಗಿತ್ತು. ಆಗ ಅಲ್ಲಿಗೆ ಆಗಮಿಸಿದ್ದ ಕೆಲ ಜನರ ಪೈಕಿ ಮಹಿಳೆಯೊಬ್ಬರು ತಮ್ಮ ಸಮಸ್ಯೆ ತೋಡಿಕೊಂಡಿದ್ದರು. ಆ ವಿಡಿಯೋವನ್ನು ರಾಹುಲ್ ಗಾಂಧಿಗೆ ಕಾಶ್ಮೀರಿ ಪಂಡಿತರು ಮುತ್ತಿಗೆ ಹಾಕಿದ್ದಾರೆ ಎಂದು ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ : FACT CHECK : ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ‘ವೀಟೋ ಅಧಿಕಾರ’ ದೊರೆತಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...