Homeಫ್ಯಾಕ್ಟ್‌ಚೆಕ್FACT CHECK : ರಾಹುಲ್ ಗಾಂಧಿಗೆ ಕಾಶ್ಮೀರಿ ಪಂಡಿತ ಮಹಿಳೆಯರು ಮುತ್ತಿಗೆ ಹಾಕಿದ್ದಾರೆ ಎನ್ನುವುದು ಸುಳ್ಳು

FACT CHECK : ರಾಹುಲ್ ಗಾಂಧಿಗೆ ಕಾಶ್ಮೀರಿ ಪಂಡಿತ ಮಹಿಳೆಯರು ಮುತ್ತಿಗೆ ಹಾಕಿದ್ದಾರೆ ಎನ್ನುವುದು ಸುಳ್ಳು

- Advertisement -
- Advertisement -

ಜಮ್ಮು ಕಾಶ್ಮೀರ ವಿಧಾನಸಭೆಗೆ ಚುನಾವಣೆ ನಡೆಯುತ್ತಿದೆ. ಈಗಾಗಲೇ ಎರಡು ಹಂತಗಳ ಮತದಾನ ಮುಕ್ತಾಯಗೊಂಡಿದ್ದು, ಮೂರನೇ ಹಂತದ ಮತದಾನ ನಾಳೆ (ಅಕ್ಟೋಬರ್ 1) ನಡೆಯಲಿದೆ.

ಈ ನಡುವೆ ಲೋಕಸಭೆಯ ಪ್ರತಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರಿಗೆ ಕಾಶ್ಮೀರಿ ಪಂಡಿತ ಸಮುದಾಯದ ಜನರು ಮುತ್ತಿಗೆ ಹಾಕಿದ್ದಾರೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವೈರಲ್ ವಿಡಿಯೋದಲ್ಲಿ ವಿಮಾನದೊಳಗೆ ಇತರ ನಾಯಕರೊಂದಿಗೆ ಕುಳಿತಿರುವ ರಾಹುಲ್ ಗಾಂಧಿಯವರನ್ನು ಒಂದಷ್ಟು ಜನರು, ವಿಶೇಷವಾಗಿ ಮಹಿಳೆಯರು ಸುತ್ತುವರಿದಿರುವ ಮತ್ತು ಒಬ್ಬರು ಮಹಿಳೆ “ಪುಟ್ಟ ಮಕ್ಕಳು ಹೊರಗೆ ಹೋಗಲು ಸಾಧ್ಯವಾಗುತ್ತಿಲ್ಲ. ನನ್ನ ಸಹೋದರ ಹೃದಯ ರೋಗಿ, ಅವನು ತನ್ನ ಮಕ್ಕಳನ್ನು ಹುಡುಕಲು ಹೋದವ ವಾಪಸ್ ಬಂದಿಲ್ಲ. ಅವನ ಕುಟುಂಬ ಸದಸ್ಯರಿಗೆ ಕಳೆದ 10 ದಿನಗಳಿಂದ ಅವನು ಎಲ್ಲಿದ್ದಾನೆಂದು ತಿಳಿದಿಲ್ಲ. ನಾವು ತೊಂದರೆಯಲ್ಲಿದ್ದೇವೆ” ಎಂದು ಅಳುತ್ತಾ ಹೇಳುವುದು ನೋಡಬಹುದು.

ಸೆಪ್ಟೆಂಬರ್ 26ರಂದು ಎಕ್ಸ್‌ನಲ್ಲಿ ಈ ವಿಡಿಯೋ ಹಂಚಿಕೊಂಡಿರುವ ‘ವಿಭೋರ್ ಆನಂದ್’ ಎಂಬ ಎಕ್ಸ್ ಬಳಕೆದಾರ “ಮಾರಾಟಗೊಂಡ ಭಾರತದ ಮಾಧ್ಯಮಗಳು ಈ ವಿಡಿಯೋ ತೋರಿಸುವುದಿಲ್ಲ. ಭಾರತ ವಿರೋಧಿ ನಿಲುವು ಮತ್ತು ಕಾಶ್ಮೀರಿ ಹಿಂದೂಗಳ ಸಮಸ್ಯೆಗಳ ಬಗ್ಗೆ ಗಮನ ಹರಿಸದ ರಾಹುಲ್ ಗಾಂಧಿಯನ್ನು ಕಾಶ್ಮೀರಿ ಪಂಡಿತ ಮಹಿಳೆಯೊಬ್ಬರು ವಿಮಾನದಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. ಇದು ದೊಡ್ಡ ಮಟ್ಟದಲ್ಲಿ ವೈರಲ್ ಆಗಬೇಕು. ಹೆಚ್ಚಿನ ಸಂಖ್ಯೆಯಲ್ಲಿ ರಾಹುಲ್ ಗಾಂಧಿಗೆ ಟ್ಯಾಗ್ ಮಾಡಿ. 25 ಸಾವಿರದ ಗುರಿ” ಎಂದು ಬರೆದುಕೊಂಡಿದ್ದರು.

ಇನ್ನೂ ಕೆಲ ಎಕ್ಸ್‌ , ಫೇಸ್‌ಬುಕ್ ಬಳಕೆದಾರರು ಇದೇ ಪ್ರತಿಪಾದನೆಯೊಂದಿಗೆ ವಿಡಿಯೋ ಹಂಚಿಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಕುರಿತು ನಾವು ಸತ್ಯಾಸತ್ಯತೆ ಪರಿಶೀಲನೆ ನಡೆಸಿದ್ದೇವೆ. ಅಸಲಿಗೆ ಈ ವಿಡಿಯೋ 24 ಆಗಸ್ಟ್ 2019ರದ್ದು. ಆಗ ರಾಹುಲ್ ಗಾಂಧಿ ಮತ್ತು ಇತರ ನಾಯಕರು ಶ್ರೀನಗರಕ್ಕೆ ತೆರಳಲು ಮುಂದಾಗಿದ್ದರು. ಆದರೆ, ಅವರನ್ನು ಏರ್‌ಪೋರ್ಟ್‌ನಲ್ಲೇ ತಡೆಯಲಾಗಿತ್ತು.

ಆಗ, ಮಹಿಳೆಯೊಬ್ಬರು ವಿಮಾನದಲ್ಲೇ ರಾಹುಲ್ ಗಾಂಧಿಯನ್ನು ಭೇಟಿಯಾಗಿ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಆರ್ಟಿಕಲ್ 370ರ ರದ್ದತಿಯಿಂದ ಕಾಶ್ಮೀರ ಜನತೆ ಲಾಕ್‌ಡೌನ್‌ನಲ್ಲಿದ್ದೇವೆ ಎಂದು ಪರಿಸ್ಥಿತಿ ವಿವರಿಸಿದ್ದರು. ಆ ಕುರಿತು ವಿಡಿಯೋ ಆಗಿದೆ ವೈರಲ್ ಆಗಿರುವುದು.

ವೈರಲ್ ವಿಡಿಯೋ ಕುರಿತು ನಾವು ಮಾಹಿತಿ ಹುಡುಕಿದಾಗ ಅದಕ್ಕೆ ಸಂಬಂಧಿಸಿದ ಅನೇಕ ವರದಿಗಳು ಲಭ್ಯವಾಗಿದೆ.

ಆಗಸ್ಟ್ 25, 2019ರಂದು ಸ್ಕ್ರೋಲ್ ಪ್ರಕಟಿಸಿದ ವರದಿಯ ಪ್ರಕಾರ, ಶ್ರೀನಗರ ಪ್ರವೇಶಕ್ಕೆ ಅವಕಾಶ ನಿರಾಕರಿಸಿದ ನಂತರ ರಾಹುಲ್ ಗಾಂಧಿ ವಿಮಾನ ನಿಲ್ದಾಣದಿಂದಲೇ ಹಿಂದಿರುಗಲು ಮುಂದಾಗಿದ್ದರು. ಆಗ ಮಹಿಳೆ ಬಂದು ಅವರ ಬಳಿ ಅಳಲು ತೋಡಿಕೊಂಡಿದ್ದಾರೆ.

ಇದೇ ಘಟನೆಯ ಕುರಿತು ಇಂಡಿಯನ್ ಎಕ್ಸ್‌ಪ್ರೆಸ್ ಕೂಡ ವರದಿ ಪ್ರಕಟಿಸಿತ್ತು. ಅದರಲ್ಲಿ ರಾಹುಲ್ ಗಾಂಧಿ, ಇತ್ತೀಚೆಗೆ ನಿಧನರಾದ ಸೀತಾರಾಂ ಯೆಚೂರಿ ಮತ್ತು ಗುಲಾಂ ನಬಿ ಆಝಾದ್ ಸೇರಿದಂತೆ ಆಗಿನ ಪ್ರತಿಪಕ್ಷ ನಾಯಕರು 2019ರಲ್ಲಿ ಶ್ರೀನಗರಕ್ಕೆ ಭೇಟಿ ನೀಡಲು ತೆರಳಿದ್ದರು. ಆರ್ಟಿಕಲ್ 370ಅನ್ನು ರದ್ದುಪಡಿಸಿ ಸಮಯವಾದ್ದರಿಂದ ಪ್ರತಿಪಕ್ಷ ನಾಯಕರ ಭೇಟಿಗೆ ಅವಕಾಶ ನಿರಕಾರಿಸಲಾಗಿತ್ತು. ಆದ್ದರಿಂದ ವಿಮಾನದಿಂದ ಇಳಿಯದೆ ಅವರು ವಾಪಸ್ ಬಂದಿದ್ದರು.

ಘಟನೆಯ ವಿಡಿಯೋವನ್ನು ಆಗಸ್ಟ್ 25, 2019ರಂದು ಎಕ್ಸ್‌ನಲ್ಲಿ ರಿಟ್ವೀಟ್ ಮಾಡಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ” ಇದು ಎಷ್ಟು ದಿನ ಹೀಗೆ ಮುಂದುವರಿಯಲಿದೆ? ರಾಷ್ಟ್ರೀಯತೆ ಹೆಸರಿನಲ್ಲಿ ಧ್ವನಿ ಅಡಗಿಸಿದ ಲಕ್ಷಾಂತರ ಜನರಲ್ಲಿ ಇವರು ಒಬ್ಬರು. ಪ್ರತಿಪಕ್ಷಗಳು ವಿಷಯವನ್ನು ರಾಜಕೀಯ ಮಾಡುತ್ತಿದೆ ಎನ್ನುವವರಿಗೆ ಇದು ಅರ್ಪಣೆ” ಎಂದು ಬರೆದುಕೊಂಡಿದ್ದರು.

ಒಟ್ಟಿನಲ್ಲಿ 2019ರಲ್ಲಿ ಆರ್ಟಿಕಲ್ 370 ರದ್ದು ಮಾಡಿದ್ದ ಸಂದರ್ಭ ರಾಹುಲ್ ಗಾಂಧಿ ಸೇರಿದಂತೆ ಪ್ರತಿಪಕ್ಷ ನಾಯಕರು ಶ್ರೀನಗರ ಭೇಟಿಗೆ ತೆರಳಿದ್ದರು. ಆಗ ಅವರನ್ನು ವಿಮಾನ ನಿಲ್ದಾಣದಲ್ಲೇ ತಡೆಯಲಾಗಿತ್ತು. ಆಗ ಅಲ್ಲಿಗೆ ಆಗಮಿಸಿದ್ದ ಕೆಲ ಜನರ ಪೈಕಿ ಮಹಿಳೆಯೊಬ್ಬರು ತಮ್ಮ ಸಮಸ್ಯೆ ತೋಡಿಕೊಂಡಿದ್ದರು. ಆ ವಿಡಿಯೋವನ್ನು ರಾಹುಲ್ ಗಾಂಧಿಗೆ ಕಾಶ್ಮೀರಿ ಪಂಡಿತರು ಮುತ್ತಿಗೆ ಹಾಕಿದ್ದಾರೆ ಎಂದು ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ : FACT CHECK : ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ‘ವೀಟೋ ಅಧಿಕಾರ’ ದೊರೆತಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...