Homeಫ್ಯಾಕ್ಟ್‌ಚೆಕ್FACT CHECK : ರಾಹುಲ್ ಗಾಂಧಿಗೆ ಕಾಶ್ಮೀರಿ ಪಂಡಿತ ಮಹಿಳೆಯರು ಮುತ್ತಿಗೆ ಹಾಕಿದ್ದಾರೆ ಎನ್ನುವುದು ಸುಳ್ಳು

FACT CHECK : ರಾಹುಲ್ ಗಾಂಧಿಗೆ ಕಾಶ್ಮೀರಿ ಪಂಡಿತ ಮಹಿಳೆಯರು ಮುತ್ತಿಗೆ ಹಾಕಿದ್ದಾರೆ ಎನ್ನುವುದು ಸುಳ್ಳು

- Advertisement -
- Advertisement -

ಜಮ್ಮು ಕಾಶ್ಮೀರ ವಿಧಾನಸಭೆಗೆ ಚುನಾವಣೆ ನಡೆಯುತ್ತಿದೆ. ಈಗಾಗಲೇ ಎರಡು ಹಂತಗಳ ಮತದಾನ ಮುಕ್ತಾಯಗೊಂಡಿದ್ದು, ಮೂರನೇ ಹಂತದ ಮತದಾನ ನಾಳೆ (ಅಕ್ಟೋಬರ್ 1) ನಡೆಯಲಿದೆ.

ಈ ನಡುವೆ ಲೋಕಸಭೆಯ ಪ್ರತಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರಿಗೆ ಕಾಶ್ಮೀರಿ ಪಂಡಿತ ಸಮುದಾಯದ ಜನರು ಮುತ್ತಿಗೆ ಹಾಕಿದ್ದಾರೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವೈರಲ್ ವಿಡಿಯೋದಲ್ಲಿ ವಿಮಾನದೊಳಗೆ ಇತರ ನಾಯಕರೊಂದಿಗೆ ಕುಳಿತಿರುವ ರಾಹುಲ್ ಗಾಂಧಿಯವರನ್ನು ಒಂದಷ್ಟು ಜನರು, ವಿಶೇಷವಾಗಿ ಮಹಿಳೆಯರು ಸುತ್ತುವರಿದಿರುವ ಮತ್ತು ಒಬ್ಬರು ಮಹಿಳೆ “ಪುಟ್ಟ ಮಕ್ಕಳು ಹೊರಗೆ ಹೋಗಲು ಸಾಧ್ಯವಾಗುತ್ತಿಲ್ಲ. ನನ್ನ ಸಹೋದರ ಹೃದಯ ರೋಗಿ, ಅವನು ತನ್ನ ಮಕ್ಕಳನ್ನು ಹುಡುಕಲು ಹೋದವ ವಾಪಸ್ ಬಂದಿಲ್ಲ. ಅವನ ಕುಟುಂಬ ಸದಸ್ಯರಿಗೆ ಕಳೆದ 10 ದಿನಗಳಿಂದ ಅವನು ಎಲ್ಲಿದ್ದಾನೆಂದು ತಿಳಿದಿಲ್ಲ. ನಾವು ತೊಂದರೆಯಲ್ಲಿದ್ದೇವೆ” ಎಂದು ಅಳುತ್ತಾ ಹೇಳುವುದು ನೋಡಬಹುದು.

ಸೆಪ್ಟೆಂಬರ್ 26ರಂದು ಎಕ್ಸ್‌ನಲ್ಲಿ ಈ ವಿಡಿಯೋ ಹಂಚಿಕೊಂಡಿರುವ ‘ವಿಭೋರ್ ಆನಂದ್’ ಎಂಬ ಎಕ್ಸ್ ಬಳಕೆದಾರ “ಮಾರಾಟಗೊಂಡ ಭಾರತದ ಮಾಧ್ಯಮಗಳು ಈ ವಿಡಿಯೋ ತೋರಿಸುವುದಿಲ್ಲ. ಭಾರತ ವಿರೋಧಿ ನಿಲುವು ಮತ್ತು ಕಾಶ್ಮೀರಿ ಹಿಂದೂಗಳ ಸಮಸ್ಯೆಗಳ ಬಗ್ಗೆ ಗಮನ ಹರಿಸದ ರಾಹುಲ್ ಗಾಂಧಿಯನ್ನು ಕಾಶ್ಮೀರಿ ಪಂಡಿತ ಮಹಿಳೆಯೊಬ್ಬರು ವಿಮಾನದಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. ಇದು ದೊಡ್ಡ ಮಟ್ಟದಲ್ಲಿ ವೈರಲ್ ಆಗಬೇಕು. ಹೆಚ್ಚಿನ ಸಂಖ್ಯೆಯಲ್ಲಿ ರಾಹುಲ್ ಗಾಂಧಿಗೆ ಟ್ಯಾಗ್ ಮಾಡಿ. 25 ಸಾವಿರದ ಗುರಿ” ಎಂದು ಬರೆದುಕೊಂಡಿದ್ದರು.

ಇನ್ನೂ ಕೆಲ ಎಕ್ಸ್‌ , ಫೇಸ್‌ಬುಕ್ ಬಳಕೆದಾರರು ಇದೇ ಪ್ರತಿಪಾದನೆಯೊಂದಿಗೆ ವಿಡಿಯೋ ಹಂಚಿಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಕುರಿತು ನಾವು ಸತ್ಯಾಸತ್ಯತೆ ಪರಿಶೀಲನೆ ನಡೆಸಿದ್ದೇವೆ. ಅಸಲಿಗೆ ಈ ವಿಡಿಯೋ 24 ಆಗಸ್ಟ್ 2019ರದ್ದು. ಆಗ ರಾಹುಲ್ ಗಾಂಧಿ ಮತ್ತು ಇತರ ನಾಯಕರು ಶ್ರೀನಗರಕ್ಕೆ ತೆರಳಲು ಮುಂದಾಗಿದ್ದರು. ಆದರೆ, ಅವರನ್ನು ಏರ್‌ಪೋರ್ಟ್‌ನಲ್ಲೇ ತಡೆಯಲಾಗಿತ್ತು.

ಆಗ, ಮಹಿಳೆಯೊಬ್ಬರು ವಿಮಾನದಲ್ಲೇ ರಾಹುಲ್ ಗಾಂಧಿಯನ್ನು ಭೇಟಿಯಾಗಿ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಆರ್ಟಿಕಲ್ 370ರ ರದ್ದತಿಯಿಂದ ಕಾಶ್ಮೀರ ಜನತೆ ಲಾಕ್‌ಡೌನ್‌ನಲ್ಲಿದ್ದೇವೆ ಎಂದು ಪರಿಸ್ಥಿತಿ ವಿವರಿಸಿದ್ದರು. ಆ ಕುರಿತು ವಿಡಿಯೋ ಆಗಿದೆ ವೈರಲ್ ಆಗಿರುವುದು.

ವೈರಲ್ ವಿಡಿಯೋ ಕುರಿತು ನಾವು ಮಾಹಿತಿ ಹುಡುಕಿದಾಗ ಅದಕ್ಕೆ ಸಂಬಂಧಿಸಿದ ಅನೇಕ ವರದಿಗಳು ಲಭ್ಯವಾಗಿದೆ.

ಆಗಸ್ಟ್ 25, 2019ರಂದು ಸ್ಕ್ರೋಲ್ ಪ್ರಕಟಿಸಿದ ವರದಿಯ ಪ್ರಕಾರ, ಶ್ರೀನಗರ ಪ್ರವೇಶಕ್ಕೆ ಅವಕಾಶ ನಿರಾಕರಿಸಿದ ನಂತರ ರಾಹುಲ್ ಗಾಂಧಿ ವಿಮಾನ ನಿಲ್ದಾಣದಿಂದಲೇ ಹಿಂದಿರುಗಲು ಮುಂದಾಗಿದ್ದರು. ಆಗ ಮಹಿಳೆ ಬಂದು ಅವರ ಬಳಿ ಅಳಲು ತೋಡಿಕೊಂಡಿದ್ದಾರೆ.

ಇದೇ ಘಟನೆಯ ಕುರಿತು ಇಂಡಿಯನ್ ಎಕ್ಸ್‌ಪ್ರೆಸ್ ಕೂಡ ವರದಿ ಪ್ರಕಟಿಸಿತ್ತು. ಅದರಲ್ಲಿ ರಾಹುಲ್ ಗಾಂಧಿ, ಇತ್ತೀಚೆಗೆ ನಿಧನರಾದ ಸೀತಾರಾಂ ಯೆಚೂರಿ ಮತ್ತು ಗುಲಾಂ ನಬಿ ಆಝಾದ್ ಸೇರಿದಂತೆ ಆಗಿನ ಪ್ರತಿಪಕ್ಷ ನಾಯಕರು 2019ರಲ್ಲಿ ಶ್ರೀನಗರಕ್ಕೆ ಭೇಟಿ ನೀಡಲು ತೆರಳಿದ್ದರು. ಆರ್ಟಿಕಲ್ 370ಅನ್ನು ರದ್ದುಪಡಿಸಿ ಸಮಯವಾದ್ದರಿಂದ ಪ್ರತಿಪಕ್ಷ ನಾಯಕರ ಭೇಟಿಗೆ ಅವಕಾಶ ನಿರಕಾರಿಸಲಾಗಿತ್ತು. ಆದ್ದರಿಂದ ವಿಮಾನದಿಂದ ಇಳಿಯದೆ ಅವರು ವಾಪಸ್ ಬಂದಿದ್ದರು.

ಘಟನೆಯ ವಿಡಿಯೋವನ್ನು ಆಗಸ್ಟ್ 25, 2019ರಂದು ಎಕ್ಸ್‌ನಲ್ಲಿ ರಿಟ್ವೀಟ್ ಮಾಡಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ” ಇದು ಎಷ್ಟು ದಿನ ಹೀಗೆ ಮುಂದುವರಿಯಲಿದೆ? ರಾಷ್ಟ್ರೀಯತೆ ಹೆಸರಿನಲ್ಲಿ ಧ್ವನಿ ಅಡಗಿಸಿದ ಲಕ್ಷಾಂತರ ಜನರಲ್ಲಿ ಇವರು ಒಬ್ಬರು. ಪ್ರತಿಪಕ್ಷಗಳು ವಿಷಯವನ್ನು ರಾಜಕೀಯ ಮಾಡುತ್ತಿದೆ ಎನ್ನುವವರಿಗೆ ಇದು ಅರ್ಪಣೆ” ಎಂದು ಬರೆದುಕೊಂಡಿದ್ದರು.

ಒಟ್ಟಿನಲ್ಲಿ 2019ರಲ್ಲಿ ಆರ್ಟಿಕಲ್ 370 ರದ್ದು ಮಾಡಿದ್ದ ಸಂದರ್ಭ ರಾಹುಲ್ ಗಾಂಧಿ ಸೇರಿದಂತೆ ಪ್ರತಿಪಕ್ಷ ನಾಯಕರು ಶ್ರೀನಗರ ಭೇಟಿಗೆ ತೆರಳಿದ್ದರು. ಆಗ ಅವರನ್ನು ವಿಮಾನ ನಿಲ್ದಾಣದಲ್ಲೇ ತಡೆಯಲಾಗಿತ್ತು. ಆಗ ಅಲ್ಲಿಗೆ ಆಗಮಿಸಿದ್ದ ಕೆಲ ಜನರ ಪೈಕಿ ಮಹಿಳೆಯೊಬ್ಬರು ತಮ್ಮ ಸಮಸ್ಯೆ ತೋಡಿಕೊಂಡಿದ್ದರು. ಆ ವಿಡಿಯೋವನ್ನು ರಾಹುಲ್ ಗಾಂಧಿಗೆ ಕಾಶ್ಮೀರಿ ಪಂಡಿತರು ಮುತ್ತಿಗೆ ಹಾಕಿದ್ದಾರೆ ಎಂದು ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ : FACT CHECK : ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ‘ವೀಟೋ ಅಧಿಕಾರ’ ದೊರೆತಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...