Homeಫ್ಯಾಕ್ಟ್‌ಚೆಕ್Fact Check: ರಾಹುಲ್ ಗಾಂಧಿ ರಹಸ್ಯವಾಗಿ ಮದುವೆಯಾಗಿದ್ದಾರೆ ಎಂಬುದು ಸುಳ್ಳು

Fact Check: ರಾಹುಲ್ ಗಾಂಧಿ ರಹಸ್ಯವಾಗಿ ಮದುವೆಯಾಗಿದ್ದಾರೆ ಎಂಬುದು ಸುಳ್ಳು

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಲ್ವರು ಮಕ್ಕಳೊಂದಿಗೆ ನಿಂತಿರುವ ಫೋಟೋವೊಂದು ಕಳೆದ ಕೆಲ ದಿನಗಳಿಂದ ಹರಿದಾಡುತ್ತಿದ್ದು, “ರಾಹುಲ್ ಗಾಂಧಿ ರಹಸ್ಯವಾಗಿ ಮದುವೆಯಾಗಿದ್ದಾರೆ. ಫೋಟೊದಲ್ಲಿರುವ ಮಕ್ಕಳು ಅವರದ್ದೇ” ಎಂದು ಸುದ್ದಿ ಹರಿದಾಡಿದೆ.

ಕೆಲ ಸಾಮಾಜಿಕ ಜಾಲತಾಣ ಬಳಕೆದಾರರು ಫೋಟೋ ಪೋಸ್ಟ್‌ ಮಾಡಿದ್ದು, “ರಾಹುಲ್ ಗಾಂಧಿಗೆ ಮದುವೆಯಾಗಿದೆ ಮಕ್ಕಳಿದೆ” ಎಂಬರ್ಥದಲ್ಲಿ ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಮೇಲಿನ ಫೋಟೋ ಕುರಿತು ನಾವು ಸತ್ಯಾಸತ್ಯತೆ ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ‘ರಾಹುಲ್ ಗಾಂಧಿ ಜೊತೆಯಲ್ಲಿರುವ ನಾಲ್ವರು ಮಕ್ಕಳು ರಾಜಸ್ಥಾನದ ಬರಾನ್ ಜಿಲ್ಲೆಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪ್ರಿಯಾಂಕಾ ನಂದ್ವಾನಾ ಅವರ ಮಕ್ಕಳಾಗಿದ್ದಾರೆ. ರಾಹುಲ್ ಗಾಂಧಿಯನ್ನು ಭೇಟಿಯಾಗಬೇಕೆಂಬ ಪ್ರಿಯಾಂಕಾ ಅವರ ಬಯಕೆಯ ಬಗ್ಗೆ ತಿಳಿದುಕೊಂಡ ನಂತರ ರಾಹುಲ್, 2022ರಲ್ಲಿ ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಅವರ ಮಕ್ಕಳನ್ನು ಹೆಲಿಕಾಪ್ಟರ್ ರೈಡ್‌ಗೆ ಕರೆದೊಯ್ದಿದ್ದರು’ ಎಂದು ತಿಳಿದು ಬಂದಿದೆ.

ಈ ಕುರಿತು ಒಂದು ವರ್ಷದ ಹಿಂದೆ ‘FirstKhaber’ಎಂಬ ಹಿಂದಿ ಯೂಟ್ಯೂಬ್ ಚಾನೆಲ್ ಸ್ಪಷ್ಟವಾದ ಸುದ್ದಿ ಪ್ರಕಟಿಸಿದೆ. ವರದಿಯ ಪ್ರಕಾರ, ರಾಹುಲ್ ಗಾಂಧಿಯವರು ತಮ್ಮ ತಾಯಿ ಸೋನಿಯಾ ಗಾಂಧಿಯವರ ಜನ್ಮದಿನ ಆಚರಿಸಲು ರಾಜಸ್ತಾನದ ಬುಂದಿಯಲ್ಲಿರುವ ನೈನಾನಿ ಫಾರ್ಮ್‌ನಿಂದ ಸವಾಯಿ ಮಾಧೋಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪ್ರಿಯಾಂಕಾ ನಂದ್ವಾನಾ ಭೇಟಿಗೆ ಕಾಯುತ್ತಿದ್ದ ವಿಷಯ ಅವರಿಗೆ ಗೊತ್ತಾಗಿದೆ. ಹಾಗಾಗಿ, ರಾಹುಲ್ ಪ್ರಿಯಾಂಕಾ ನಂದ್ವಾನಾ ಅವರನ್ನು ಭೇಟಿಯಾಗಿ, ಅವರ ನಾಲ್ವರು ಮಕ್ಕಳನ್ನು ಹೆಲಿಕಾಫ್ಟರ್ ರೈಡ್ ಕರೆದುಕೊಂಡು ಹೋಗಿದ್ದಾರೆ. ರಾಹುಲ್ ಜೊತೆ ಹೆಲಿಕಾಫ್ಟರ್ ಪ್ರಯಾಣ ಮಾಡಿದ ದಿನ ಪ್ರಿಯಾಂಕಾ ಅವರ ಮಗಳು ಕಾಮಾಕ್ಷಿ ನಂದ್ವಾನಾ ಅವರ 14 ನೇ ಹುಟ್ಟು ಹಬ್ಬವಾಗಿತ್ತು.

ಯೂಟ್ಯೂಬ್ ಲಿಂಕ್ ಇಲ್ಲಿದೆ

ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದ ವಿಚಾರವೇನೆಂದರೆ, ರಾಹುಲ್ ಗಾಂಧಿ ಜೊತೆ ನಿಂತಿರುವುದು ಅವರ ಪತ್ನಿ ಮತ್ತು ಮೂವರು ಮಕ್ಕಳು ಅಲ್ಲ. ಅದು ರಾಜಸ್ಥಾನದ ಬರಾನ್ ಜಿಲ್ಲೆಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪ್ರಿಯಾಂಕಾ ನಂದ್ವಾನಾ ಅವರ ನಾಲ್ವರು ಮಕ್ಕಳು. ಫೋಟೋದಲ್ಲಿ ರಾಹುಲ್ ಜೊತೆ ನಿಂತಿರವ ಹುಡುಗಿ ಪ್ರಿಯಾಂಕಾ ನಂದ್ವಾನಾ ಅವರ 14 ವರ್ಷದ ಮಗಳು ಕಾಮಾಕ್ಷಿ ನಂದ್ವಾನಾ ಆಗಿದ್ದಾರೆ. ಹಾಗಾಗಿ ರಾಹುಲ್ ಗಾಂಧಿಗೆ ರಸಹ್ಯವಾಗಿ ಮದುವೆಯಾಗಿದೆ. ಮಕ್ಕಳಿದೆ ಎಂಬುವುದು ಎಲ್ಲವೂ ಸುಳ್ಳು ಸುದ್ದಿ.

ಇದನ್ನೂ ಓದಿ: Fact Check: ಅಧಿಕಾರಕ್ಕೆ ಬಂದರೆ 50% ಮೀಸಲಾತಿಯನ್ನು ರದ್ದುಪಡಿಸುವುದಾಗಿ ರಾಹುಲ್ ಗಾಂಧಿ ಹೇಳಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...