Homeಫ್ಯಾಕ್ಟ್‌ಚೆಕ್Fact Check: ರಾಹುಲ್ ಗಾಂಧಿ ರಹಸ್ಯವಾಗಿ ಮದುವೆಯಾಗಿದ್ದಾರೆ ಎಂಬುದು ಸುಳ್ಳು

Fact Check: ರಾಹುಲ್ ಗಾಂಧಿ ರಹಸ್ಯವಾಗಿ ಮದುವೆಯಾಗಿದ್ದಾರೆ ಎಂಬುದು ಸುಳ್ಳು

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಲ್ವರು ಮಕ್ಕಳೊಂದಿಗೆ ನಿಂತಿರುವ ಫೋಟೋವೊಂದು ಕಳೆದ ಕೆಲ ದಿನಗಳಿಂದ ಹರಿದಾಡುತ್ತಿದ್ದು, “ರಾಹುಲ್ ಗಾಂಧಿ ರಹಸ್ಯವಾಗಿ ಮದುವೆಯಾಗಿದ್ದಾರೆ. ಫೋಟೊದಲ್ಲಿರುವ ಮಕ್ಕಳು ಅವರದ್ದೇ” ಎಂದು ಸುದ್ದಿ ಹರಿದಾಡಿದೆ.

ಕೆಲ ಸಾಮಾಜಿಕ ಜಾಲತಾಣ ಬಳಕೆದಾರರು ಫೋಟೋ ಪೋಸ್ಟ್‌ ಮಾಡಿದ್ದು, “ರಾಹುಲ್ ಗಾಂಧಿಗೆ ಮದುವೆಯಾಗಿದೆ ಮಕ್ಕಳಿದೆ” ಎಂಬರ್ಥದಲ್ಲಿ ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಮೇಲಿನ ಫೋಟೋ ಕುರಿತು ನಾವು ಸತ್ಯಾಸತ್ಯತೆ ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ‘ರಾಹುಲ್ ಗಾಂಧಿ ಜೊತೆಯಲ್ಲಿರುವ ನಾಲ್ವರು ಮಕ್ಕಳು ರಾಜಸ್ಥಾನದ ಬರಾನ್ ಜಿಲ್ಲೆಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪ್ರಿಯಾಂಕಾ ನಂದ್ವಾನಾ ಅವರ ಮಕ್ಕಳಾಗಿದ್ದಾರೆ. ರಾಹುಲ್ ಗಾಂಧಿಯನ್ನು ಭೇಟಿಯಾಗಬೇಕೆಂಬ ಪ್ರಿಯಾಂಕಾ ಅವರ ಬಯಕೆಯ ಬಗ್ಗೆ ತಿಳಿದುಕೊಂಡ ನಂತರ ರಾಹುಲ್, 2022ರಲ್ಲಿ ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಅವರ ಮಕ್ಕಳನ್ನು ಹೆಲಿಕಾಪ್ಟರ್ ರೈಡ್‌ಗೆ ಕರೆದೊಯ್ದಿದ್ದರು’ ಎಂದು ತಿಳಿದು ಬಂದಿದೆ.

ಈ ಕುರಿತು ಒಂದು ವರ್ಷದ ಹಿಂದೆ ‘FirstKhaber’ಎಂಬ ಹಿಂದಿ ಯೂಟ್ಯೂಬ್ ಚಾನೆಲ್ ಸ್ಪಷ್ಟವಾದ ಸುದ್ದಿ ಪ್ರಕಟಿಸಿದೆ. ವರದಿಯ ಪ್ರಕಾರ, ರಾಹುಲ್ ಗಾಂಧಿಯವರು ತಮ್ಮ ತಾಯಿ ಸೋನಿಯಾ ಗಾಂಧಿಯವರ ಜನ್ಮದಿನ ಆಚರಿಸಲು ರಾಜಸ್ತಾನದ ಬುಂದಿಯಲ್ಲಿರುವ ನೈನಾನಿ ಫಾರ್ಮ್‌ನಿಂದ ಸವಾಯಿ ಮಾಧೋಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪ್ರಿಯಾಂಕಾ ನಂದ್ವಾನಾ ಭೇಟಿಗೆ ಕಾಯುತ್ತಿದ್ದ ವಿಷಯ ಅವರಿಗೆ ಗೊತ್ತಾಗಿದೆ. ಹಾಗಾಗಿ, ರಾಹುಲ್ ಪ್ರಿಯಾಂಕಾ ನಂದ್ವಾನಾ ಅವರನ್ನು ಭೇಟಿಯಾಗಿ, ಅವರ ನಾಲ್ವರು ಮಕ್ಕಳನ್ನು ಹೆಲಿಕಾಫ್ಟರ್ ರೈಡ್ ಕರೆದುಕೊಂಡು ಹೋಗಿದ್ದಾರೆ. ರಾಹುಲ್ ಜೊತೆ ಹೆಲಿಕಾಫ್ಟರ್ ಪ್ರಯಾಣ ಮಾಡಿದ ದಿನ ಪ್ರಿಯಾಂಕಾ ಅವರ ಮಗಳು ಕಾಮಾಕ್ಷಿ ನಂದ್ವಾನಾ ಅವರ 14 ನೇ ಹುಟ್ಟು ಹಬ್ಬವಾಗಿತ್ತು.

ಯೂಟ್ಯೂಬ್ ಲಿಂಕ್ ಇಲ್ಲಿದೆ

ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದ ವಿಚಾರವೇನೆಂದರೆ, ರಾಹುಲ್ ಗಾಂಧಿ ಜೊತೆ ನಿಂತಿರುವುದು ಅವರ ಪತ್ನಿ ಮತ್ತು ಮೂವರು ಮಕ್ಕಳು ಅಲ್ಲ. ಅದು ರಾಜಸ್ಥಾನದ ಬರಾನ್ ಜಿಲ್ಲೆಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪ್ರಿಯಾಂಕಾ ನಂದ್ವಾನಾ ಅವರ ನಾಲ್ವರು ಮಕ್ಕಳು. ಫೋಟೋದಲ್ಲಿ ರಾಹುಲ್ ಜೊತೆ ನಿಂತಿರವ ಹುಡುಗಿ ಪ್ರಿಯಾಂಕಾ ನಂದ್ವಾನಾ ಅವರ 14 ವರ್ಷದ ಮಗಳು ಕಾಮಾಕ್ಷಿ ನಂದ್ವಾನಾ ಆಗಿದ್ದಾರೆ. ಹಾಗಾಗಿ ರಾಹುಲ್ ಗಾಂಧಿಗೆ ರಸಹ್ಯವಾಗಿ ಮದುವೆಯಾಗಿದೆ. ಮಕ್ಕಳಿದೆ ಎಂಬುವುದು ಎಲ್ಲವೂ ಸುಳ್ಳು ಸುದ್ದಿ.

ಇದನ್ನೂ ಓದಿ: Fact Check: ಅಧಿಕಾರಕ್ಕೆ ಬಂದರೆ 50% ಮೀಸಲಾತಿಯನ್ನು ರದ್ದುಪಡಿಸುವುದಾಗಿ ರಾಹುಲ್ ಗಾಂಧಿ ಹೇಳಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...