Homeಫ್ಯಾಕ್ಟ್‌ಚೆಕ್FACT CHECK : ಸಂಸತ್‌ನಲ್ಲಿ ರಾಷ್ಟ್ರಗೀತೆ ನುಡಿಸುವ ವೇಳೆ ರಾಹುಲ್ ಗಾಂಧಿ ಹಾಜರಿರಲಿಲ್ಲ ಎಂಬುವುದು ಸುಳ್ಳು

FACT CHECK : ಸಂಸತ್‌ನಲ್ಲಿ ರಾಷ್ಟ್ರಗೀತೆ ನುಡಿಸುವ ವೇಳೆ ರಾಹುಲ್ ಗಾಂಧಿ ಹಾಜರಿರಲಿಲ್ಲ ಎಂಬುವುದು ಸುಳ್ಳು

- Advertisement -
- Advertisement -

ಹೊಸದಾಗಿ ಚುನಾಯಿತರಾದ ಸಂಸತ್ತಿನ ಸದಸ್ಯರು ಜೂನ್ 24 ಮತ್ತು 26 ರ ನಡುವೆ ದೆಹಲಿಯ ನೂತನ ಸಂಸತ್ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಂಸದರು ಪ್ರಮಾಣ ವಚನ ಸ್ವೀಕರಿಸುವ ಮುನ್ನ ಲೋಕಸಭೆಯಲ್ಲಿ ರಾಷ್ಟ್ರಗೀತೆಯನ್ನು ನುಡಿಸಲಾಗಿದೆ. ಈ ವೇಳೆ ಕಾಂಗ್ರೆಸ್ ಸಂಸದ ಹಾಗೂ ಪ್ರಸ್ತುತ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ ಸದನದಲ್ಲಿ ಹಾಜರಿರಲಿಲ್ಲ ಎಂದು 56 ಸೆಕೆಂಡುಗಳ ವಿಡಿಯೋ ಕ್ಲಿಪ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ.

ರಾಷ್ಟ್ರಗೀತೆ ಪೂರ್ಣಗೊಂಡ ಬಳಿಕ ರಾಹುಲ್ ಗಾಂಧಿ ತಡವಾಗಿ ಸದನ ಪ್ರವೇಶಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಬಿಜೆಪಿ ಆಂಧ್ರ ಪ್ರದೇಶದ ರಾಜ್ಯ ಉಪಾಧ್ಯಕ್ಷ ವಿಷ್ಣು ವರ್ಧನ್ ರೆಡ್ಡಿ (@SVishnuReddy) ಜೂನ್ 24 ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದು, “ಶೆಹಝಾದ (ರಾಜಕುಮಾರ) ರಾಹುಲ್ ಗಾಂಧಿಯವರು ತಾನು ರಾಷ್ಟ್ರಗೀತೆಗಿಂತ ದೊಡ್ಡವನು ಎಂದು ಭಾವಿಸಿದ್ದಾರೆ. ಅವರು ತಡವಾಗಿ ಬಂದು ರಾಷ್ಟ್ರಗೀತೆ ಮುಗಿಯುತ್ತಿದ್ದಂತೆ ಸಂಸತ್ತಿಗೆ ಪ್ರವೇಶಿಸಿದ್ದಾರೆ” ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್ 2.5 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ ಮತ್ತು 1,000 ಕ್ಕೂ ಹೆಚ್ಚು ಬಾರಿ ರೀಟ್ವೀಟ್ ಆಗಿದೆ.

ರಾಷ್ಟ್ರಗೀತೆ ಮುಗಿದ ನಂತರ ರಾಹುಲ್ ಗಾಂಧಿ ಸಂಸತ್ತಿಗೆ ಬಂದರು ಎಂದು ಬರೆದುಕೊಳ್ಳುವ ಮೂಲಕ ಎಕ್ಸ್‌ನಲ್ಲಿ ಹಲವಾರು ಇತರ ಬಳಕೆದಾರರು ಅದೇ ವಿಡಿಯೋ ಕ್ಲಿಪ್ ಅನ್ನು ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಇದಕ್ಕಾಗಿ 18ನೇ ಲೋಕಸಭೆಯ ಅಧಿವೇಶನ ಆರಂಭದ ಸಂಪೂರ್ಣ ವಿಡಿಯೋವನ್ನು ಸಂಸದ್ ಟಿವಿಯ ಯೂಟ್ಯೂಬ್ ಚಾನೆಲ್‌ನಲ್ಲಿ ವೀಕ್ಷಿಸಿದ್ದೇವೆ.

ಜೂನ್ 24ರಂದು ಅಪ್ಲೋಡ್ ಮಾಡಲಾದ 9 ನಿಮಿಷ 40 ಸೆಕೆಂಡ್‌ನ ವಿಡಿಯೋವೊಂದರಲ್ಲಿ 3 ನಿಮಿಷ 7 ಸೆಕೆಂಡ್‌ನಿಂದ ರಾಷ್ಟ್ರಗೀತೆ ಆರಂಭವಾಗುತ್ತದೆ. 3 ನಿಮಿಷ 18 ಸೆಕೆಂಡ್‌ನಲ್ಲಿ ಇಂಡಿಯಾ ಮೈತ್ರಿಕೂಟದ ಸಂಸದರು ಫ್ರೇಮ್‌ನಲ್ಲಿ ಗೋಚರಿಸುತ್ತಾರೆ. ಈ ವೇಳೆ ಹಿಂಭಾಗದ ಎಡ ಮೂಲೆಯಲ್ಲಿ, ಸಂಸದ್ ಟಿವಿ ಲೋಗೋದ ಹಿಂದೆ ರಾಹುಲ್ ಗಾಂಧಿಯಂತೆಯೇ ಬಿಳಿ ಟಿ-ಶರ್ಟ್ ಮತ್ತು ಕಪ್ಪು ಪ್ಯಾಂಟ್ ಧರಿಸಿರುವ ವ್ಯಕ್ತಿಯನ್ನು ಕಾಣಬಹುದು.

ವಿಡಿಯೋದಲ್ಲಿ 4 ನಿಮಿಷ 13 ಸೆಕೆಂಡ್‌ನಲ್ಲಿ ರಾಹುಲ್ ಗಾಂಧಿ ಸ್ಪೀಕರ್ ಪೀಠದ ಬಲ ಭಾಗದಲ್ಲಿ ಆಗಮಿಸುವುದು ಇದೆ. ಸಂಸದ್ ಟಿವಿಯ ಲೋಗೋ ಇರುವ ಬದಿಯಿಂದಲೇ ರಾಹುಲ್ ಮುಂಭಾಗಕ್ಕೆ ಬಂದಿರುವುದು ಸ್ಪಷ್ಟವಾಗಿ ವಿಡಿಯೋದಲ್ಲಿ ಗೊತ್ತಾಗುತ್ತದೆ.

ಅಂದರೆ, ರಾಹುಲ್ ಗಾಂಧಿ ರಾಷ್ಟ್ರಗೀತೆ ನುಡಿಸುವ ವೇಳೆ ಸ್ಪೀಕರ್ ಪೀಠದಿಂದ ನೋಡಿದರೆ ಎಡಭಾಗ ಮತ್ತು ಕೆಳಗಿನಿಂದ ನೋಡಿದರೆ ಬಲಭಾಗದಲ್ಲಿ ಹಿಂಬಂದಿ ನಿಂತಿದ್ದರು. ಸಂಸದ್ ಟಿವಿಯ ಲೋಗೋದ ಹಿಂದೆ ಬಿಳಿ ಟಿ-ಶರ್ಟ್ ಮತ್ತು ಕಪ್ಪು ಪ್ಯಾಂಟ್ ಧರಿಸಿ ನಿಂತಿದ್ದ ವ್ಯಕ್ತಿ ಅವರೇ. ರಾಷ್ಟ್ರಗೀತೆ ಮುಗಿದ ಬಳಿಕ ರಾಹುಲ್ ತನ್ನ ಆಸನಕ್ಕೆ ಆಗಮಿಸಿದ್ದಾರೆ.

ವಿಷ್ಣು ವರ್ಧನ್ ರೆಡ್ಡಿಯ ಪೋಸ್ಟ್‌ಗೆ ಪ್ರತಿಕ್ರಿಯೆ ಕೊಟ್ಟಿರುವ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿವಿ “ಸುಳ್ಳುಗಳನ್ನು ಹರಡುವುದನ್ನು ನಿಲ್ಲಿಸಿ. ರಾಹುಲ್ ಗಾಂಧಿಯವರು ರಾಷ್ಟ್ರಗೀತೆ ನುಡಿಸುವ ವೇಳೆ ಸಂಪೂರ್ಣವಾಗಿ ಹಾಜರಿದ್ದರು. ವಿಡಿಯೋದ ಆರಂಭದಲ್ಲಿ ಸದನದ ಕೊನೆಯಲ್ಲಿ ಎಡ ಮೂಲೆಯಲ್ಲಿ ಅವರು ನಿಂತಿರುವುದನ್ನು ಕಾಣಬಹುದು.” ಸ್ಪಷ್ಟಪಡಿಸಿದ್ದಾರೆ.

ನಾವು ನಡೆಸಿದ ಪರಿಶೀಲನೆಯಲ್ಲಿ ರಾಹುಲ್ ಗಾಂಧಿ ರಾಷ್ಟ್ರಗೀತೆ ನುಡಿಸುವ ವೇಳೆ ಸಂಸತ್‌ನಲ್ಲಿಯೇ ಇದ್ದರು. ಅವರು ತನ್ನ ಆಸನಕ್ಕೆ ರಾಷ್ಟ್ರಗೀತೆ ಮುಗಿದ ಬಳಿಕ ಆಗಮಿಸಿದ್ದಾರೆ. ಅದನ್ನೇ ತಪ್ಪಾಗಿ ತಿಳಿದುಕೊಂಡು ರಾಹುಲ್ ಗಾಂಧಿ ರಾಷ್ಟ್ರಗೀತೆ ನುಡಿಸುವ ವೇಳೆ ಸಂಸತ್‌ನಲ್ಲೇ ಇರಲಿಲ್ಲ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿದೆ ಎಂದು ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಕೇರಳದ ಮುಸ್ಲಿಂ ಮಹಿಳೆ ಮಗನನ್ನೇ ಮದುವೆಯಾಗಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...