Homeಫ್ಯಾಕ್ಟ್‌ಚೆಕ್FACT CHECK : ಸಂಸತ್‌ನಲ್ಲಿ ರಾಷ್ಟ್ರಗೀತೆ ನುಡಿಸುವ ವೇಳೆ ರಾಹುಲ್ ಗಾಂಧಿ ಹಾಜರಿರಲಿಲ್ಲ ಎಂಬುವುದು ಸುಳ್ಳು

FACT CHECK : ಸಂಸತ್‌ನಲ್ಲಿ ರಾಷ್ಟ್ರಗೀತೆ ನುಡಿಸುವ ವೇಳೆ ರಾಹುಲ್ ಗಾಂಧಿ ಹಾಜರಿರಲಿಲ್ಲ ಎಂಬುವುದು ಸುಳ್ಳು

- Advertisement -
- Advertisement -

ಹೊಸದಾಗಿ ಚುನಾಯಿತರಾದ ಸಂಸತ್ತಿನ ಸದಸ್ಯರು ಜೂನ್ 24 ಮತ್ತು 26 ರ ನಡುವೆ ದೆಹಲಿಯ ನೂತನ ಸಂಸತ್ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಂಸದರು ಪ್ರಮಾಣ ವಚನ ಸ್ವೀಕರಿಸುವ ಮುನ್ನ ಲೋಕಸಭೆಯಲ್ಲಿ ರಾಷ್ಟ್ರಗೀತೆಯನ್ನು ನುಡಿಸಲಾಗಿದೆ. ಈ ವೇಳೆ ಕಾಂಗ್ರೆಸ್ ಸಂಸದ ಹಾಗೂ ಪ್ರಸ್ತುತ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ ಸದನದಲ್ಲಿ ಹಾಜರಿರಲಿಲ್ಲ ಎಂದು 56 ಸೆಕೆಂಡುಗಳ ವಿಡಿಯೋ ಕ್ಲಿಪ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ.

ರಾಷ್ಟ್ರಗೀತೆ ಪೂರ್ಣಗೊಂಡ ಬಳಿಕ ರಾಹುಲ್ ಗಾಂಧಿ ತಡವಾಗಿ ಸದನ ಪ್ರವೇಶಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಬಿಜೆಪಿ ಆಂಧ್ರ ಪ್ರದೇಶದ ರಾಜ್ಯ ಉಪಾಧ್ಯಕ್ಷ ವಿಷ್ಣು ವರ್ಧನ್ ರೆಡ್ಡಿ (@SVishnuReddy) ಜೂನ್ 24 ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದು, “ಶೆಹಝಾದ (ರಾಜಕುಮಾರ) ರಾಹುಲ್ ಗಾಂಧಿಯವರು ತಾನು ರಾಷ್ಟ್ರಗೀತೆಗಿಂತ ದೊಡ್ಡವನು ಎಂದು ಭಾವಿಸಿದ್ದಾರೆ. ಅವರು ತಡವಾಗಿ ಬಂದು ರಾಷ್ಟ್ರಗೀತೆ ಮುಗಿಯುತ್ತಿದ್ದಂತೆ ಸಂಸತ್ತಿಗೆ ಪ್ರವೇಶಿಸಿದ್ದಾರೆ” ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್ 2.5 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ ಮತ್ತು 1,000 ಕ್ಕೂ ಹೆಚ್ಚು ಬಾರಿ ರೀಟ್ವೀಟ್ ಆಗಿದೆ.

ರಾಷ್ಟ್ರಗೀತೆ ಮುಗಿದ ನಂತರ ರಾಹುಲ್ ಗಾಂಧಿ ಸಂಸತ್ತಿಗೆ ಬಂದರು ಎಂದು ಬರೆದುಕೊಳ್ಳುವ ಮೂಲಕ ಎಕ್ಸ್‌ನಲ್ಲಿ ಹಲವಾರು ಇತರ ಬಳಕೆದಾರರು ಅದೇ ವಿಡಿಯೋ ಕ್ಲಿಪ್ ಅನ್ನು ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಇದಕ್ಕಾಗಿ 18ನೇ ಲೋಕಸಭೆಯ ಅಧಿವೇಶನ ಆರಂಭದ ಸಂಪೂರ್ಣ ವಿಡಿಯೋವನ್ನು ಸಂಸದ್ ಟಿವಿಯ ಯೂಟ್ಯೂಬ್ ಚಾನೆಲ್‌ನಲ್ಲಿ ವೀಕ್ಷಿಸಿದ್ದೇವೆ.

ಜೂನ್ 24ರಂದು ಅಪ್ಲೋಡ್ ಮಾಡಲಾದ 9 ನಿಮಿಷ 40 ಸೆಕೆಂಡ್‌ನ ವಿಡಿಯೋವೊಂದರಲ್ಲಿ 3 ನಿಮಿಷ 7 ಸೆಕೆಂಡ್‌ನಿಂದ ರಾಷ್ಟ್ರಗೀತೆ ಆರಂಭವಾಗುತ್ತದೆ. 3 ನಿಮಿಷ 18 ಸೆಕೆಂಡ್‌ನಲ್ಲಿ ಇಂಡಿಯಾ ಮೈತ್ರಿಕೂಟದ ಸಂಸದರು ಫ್ರೇಮ್‌ನಲ್ಲಿ ಗೋಚರಿಸುತ್ತಾರೆ. ಈ ವೇಳೆ ಹಿಂಭಾಗದ ಎಡ ಮೂಲೆಯಲ್ಲಿ, ಸಂಸದ್ ಟಿವಿ ಲೋಗೋದ ಹಿಂದೆ ರಾಹುಲ್ ಗಾಂಧಿಯಂತೆಯೇ ಬಿಳಿ ಟಿ-ಶರ್ಟ್ ಮತ್ತು ಕಪ್ಪು ಪ್ಯಾಂಟ್ ಧರಿಸಿರುವ ವ್ಯಕ್ತಿಯನ್ನು ಕಾಣಬಹುದು.

ವಿಡಿಯೋದಲ್ಲಿ 4 ನಿಮಿಷ 13 ಸೆಕೆಂಡ್‌ನಲ್ಲಿ ರಾಹುಲ್ ಗಾಂಧಿ ಸ್ಪೀಕರ್ ಪೀಠದ ಬಲ ಭಾಗದಲ್ಲಿ ಆಗಮಿಸುವುದು ಇದೆ. ಸಂಸದ್ ಟಿವಿಯ ಲೋಗೋ ಇರುವ ಬದಿಯಿಂದಲೇ ರಾಹುಲ್ ಮುಂಭಾಗಕ್ಕೆ ಬಂದಿರುವುದು ಸ್ಪಷ್ಟವಾಗಿ ವಿಡಿಯೋದಲ್ಲಿ ಗೊತ್ತಾಗುತ್ತದೆ.

ಅಂದರೆ, ರಾಹುಲ್ ಗಾಂಧಿ ರಾಷ್ಟ್ರಗೀತೆ ನುಡಿಸುವ ವೇಳೆ ಸ್ಪೀಕರ್ ಪೀಠದಿಂದ ನೋಡಿದರೆ ಎಡಭಾಗ ಮತ್ತು ಕೆಳಗಿನಿಂದ ನೋಡಿದರೆ ಬಲಭಾಗದಲ್ಲಿ ಹಿಂಬಂದಿ ನಿಂತಿದ್ದರು. ಸಂಸದ್ ಟಿವಿಯ ಲೋಗೋದ ಹಿಂದೆ ಬಿಳಿ ಟಿ-ಶರ್ಟ್ ಮತ್ತು ಕಪ್ಪು ಪ್ಯಾಂಟ್ ಧರಿಸಿ ನಿಂತಿದ್ದ ವ್ಯಕ್ತಿ ಅವರೇ. ರಾಷ್ಟ್ರಗೀತೆ ಮುಗಿದ ಬಳಿಕ ರಾಹುಲ್ ತನ್ನ ಆಸನಕ್ಕೆ ಆಗಮಿಸಿದ್ದಾರೆ.

ವಿಷ್ಣು ವರ್ಧನ್ ರೆಡ್ಡಿಯ ಪೋಸ್ಟ್‌ಗೆ ಪ್ರತಿಕ್ರಿಯೆ ಕೊಟ್ಟಿರುವ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿವಿ “ಸುಳ್ಳುಗಳನ್ನು ಹರಡುವುದನ್ನು ನಿಲ್ಲಿಸಿ. ರಾಹುಲ್ ಗಾಂಧಿಯವರು ರಾಷ್ಟ್ರಗೀತೆ ನುಡಿಸುವ ವೇಳೆ ಸಂಪೂರ್ಣವಾಗಿ ಹಾಜರಿದ್ದರು. ವಿಡಿಯೋದ ಆರಂಭದಲ್ಲಿ ಸದನದ ಕೊನೆಯಲ್ಲಿ ಎಡ ಮೂಲೆಯಲ್ಲಿ ಅವರು ನಿಂತಿರುವುದನ್ನು ಕಾಣಬಹುದು.” ಸ್ಪಷ್ಟಪಡಿಸಿದ್ದಾರೆ.

ನಾವು ನಡೆಸಿದ ಪರಿಶೀಲನೆಯಲ್ಲಿ ರಾಹುಲ್ ಗಾಂಧಿ ರಾಷ್ಟ್ರಗೀತೆ ನುಡಿಸುವ ವೇಳೆ ಸಂಸತ್‌ನಲ್ಲಿಯೇ ಇದ್ದರು. ಅವರು ತನ್ನ ಆಸನಕ್ಕೆ ರಾಷ್ಟ್ರಗೀತೆ ಮುಗಿದ ಬಳಿಕ ಆಗಮಿಸಿದ್ದಾರೆ. ಅದನ್ನೇ ತಪ್ಪಾಗಿ ತಿಳಿದುಕೊಂಡು ರಾಹುಲ್ ಗಾಂಧಿ ರಾಷ್ಟ್ರಗೀತೆ ನುಡಿಸುವ ವೇಳೆ ಸಂಸತ್‌ನಲ್ಲೇ ಇರಲಿಲ್ಲ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿದೆ ಎಂದು ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಕೇರಳದ ಮುಸ್ಲಿಂ ಮಹಿಳೆ ಮಗನನ್ನೇ ಮದುವೆಯಾಗಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...