Homeಫ್ಯಾಕ್ಟ್‌ಚೆಕ್FACT CHECK | ತಾಲಿಬಾನ್ ಕಾರ್ಯದರ್ಶಿ ಆರೆಸ್ಸೆಸ್‌, ಬಿಜೆಪಿಯನ್ನು ಹೊಗಳಿದ್ದಾರೆ ಎಂಬುವುದು ಸುಳ್ಳು

FACT CHECK | ತಾಲಿಬಾನ್ ಕಾರ್ಯದರ್ಶಿ ಆರೆಸ್ಸೆಸ್‌, ಬಿಜೆಪಿಯನ್ನು ಹೊಗಳಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

“ಭಾರತದಲ್ಲಿ ಆರೆಸ್ಸೆಸ್‌ ಮತ್ತು ಬಿಜೆಪಿ ಇರುವವರೆಗೂ ಯಾವುದೇ ದೇಶ ಭಾರತದ ಮೇಲೆ ದಾಳಿ ಮಾಡಲು ಸಾಧ್ಯವಿಲ್ಲ” ಎಂದು ತಾಲಿಬಾನ್ ನಾಯಕ ಹೇಳಿದ್ದಾನೆಂದು ಪ್ರತಿಪಾದಿಸಿ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿರುವ ವ್ಯಕ್ತಿಯು ಗಡ್ಡದಾರಿಯಾಗಿದ್ದು, ಟೋಪಿ ಧರಿಸಿದ್ದಾರೆ. ಅವರ ವೇಷ ಭೂಷಣ ನೋಡಿದರೆ ಅವರು ಮುಸ್ಲಿಂ ವ್ಯಕ್ತಿ ಎಂದು ಹೇಳಬಹುದಾಗಿದೆ.

ANU ANITHA(@Ani_Sanatani) ಎಂಬವರು ಅಕ್ಟೋಬರ್ 13, 2024ರಂದು ಎಕ್ಸ್‌ನಲ್ಲಿ ವೈರಲ್ ವಿಡಿಯೋ ಹಂಚಿಕೊಂಡಿದ್ದಾರೆ. ಈ ಹಿಂದೆ Karnataka BJP Supporters ಎಂಬ ಫೇಸ್‌ಬುಕ್ ಪೇಜ್ ಸೇರಿದಂತೆ ಹಲವೆಡೆ ಈ ವಿಡಿಯೋ ಹಂಚಿಕೊಳ್ಳಲಾಗಿತ್ತು.

“ಭಾರತದಲ್ಲಿ ಬಿಜೆಪಿ ಇರುವವರೆಗೂ ಯಾವುದೇ ದೇಶ ಭಾರತದ ಮೇಲೆ ದಾಳಿ ಮಾಡಲು ಸಾಧ್ಯವಿಲ್ಲ. ಆರೆಸ್ಸೆಸ್‌ ಮತ್ತು ಬಿಜೆಪಿ ಅತ್ಯಂತ ಶಕ್ತಿಶಾಲಿ. ಮೊದಲು ಬಿಜೆಪಿಯನ್ನು ತೊಡೆದುಹಾಕಿ ನಂತರ ಮಾತ್ರ ಭಾರತದ ಮೇಲೆ ಜಯ ಸಿಗುತ್ತದೆ…ಭಯೋತ್ಪಾದಕ ಸಂಘಟನೆ ತಾಲಿಬಾನ್‌ನ ಮುಖ್ಯ ಕಾರ್ಯದರ್ಶಿ ಅಲ್ ಬೇಡರ್ ಇಲ್ಯಾಸಿ ಹೇಳಿಕೆ” ಎಂಬ ಪ್ರತಿಪಾದನೆಯೊಂದಿಗೆ ಅಕ್ಟೋಬರ್ 9, 2023ರಂದು Karnataka BJP Supporters ಫೇಸ್‌ಬುಕ್ ಪೇಜ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಲಾಗಿತ್ತು.

ಇದೇ ಪ್ರತಿಪಾದನೆಯೊಂದಿಗೆ ಹಲವಾರು ಜನರು ಬೇರೆ ಬೇರೆ ಭಾಷೆಯಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಅವುಗಳನ್ನು ಇಲ್ಲಿಇಲ್ಲಿಇಲ್ಲಿಇಲ್ಲಿಇಲ್ಲಿ ನೋಡಬಹುದಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ವಿಡಿಯೋ ಕುರಿತು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ ವಿಡಿಯೋದಲ್ಲಿರುವ ವ್ಯಕ್ತಿ ಪಾಕಿಸ್ತಾನದ ಇಸ್ಲಾಮಾಬಾದ್‌ನ ಖಾಲಿದ್ ಮೆಹಮೂದ್ ಅಬ್ಬಾಸಿ ಎಂಬ ಮುಸ್ಲಿಂ ಧಾರ್ಮಿಕ ವಿದ್ವಾಂಸ ಎಂದು ತಿಳಿದು ಬಂದಿದೆ. ಅವರು ತಾಲಿಬಾನ್‌ನ ಜೊತೆಗೆ ಸಂಬಂಧ ಹೊಂದಿಲ್ಲ.

ಅವರ ಬಗ್ಗೆ ಮತ್ತಷ್ಟು ಮಾಹಿತಿ ಹುಡುಕಾಡಿದಾಗ Khalid Mehmood Abbasi Official ಎಂಬ ಯೂಟ್ಯೂಬ್ ಚಾನೆಲ್‌ ಅವರ ಹೆಸರಿನಲ್ಲಿ ಇರುವುದು ಕಂಡು ಬಂದಿದೆ. ಈ ಚಾನೆಲ್‌ನಲ್ಲಿ ಬಿಜೆಪಿ ಬೆಂಬಲಿಗರು ವೈರಲ್ ಮಾಡಿರುವ ಕ್ಲಿಪ್‌ ಇರುವ ವಿಡಿಯೋ ಕೂಡ ನಮಗೆ ಲಭ್ಯವಾಗಿದೆ. ಈ ವಿಡಿಯೋದಲ್ಲಿ 0.53 ಸೆಕೆಂಡ್‌ನಿಂದ ಕ್ಲಿಪ್ ಕಟ್‌ ಮಾಡಿ ವೈರಲ್ ಮಾಡಲಾಗಿದೆ.

ಈ ವಿಡಿಯೋ 3 ಆಗಸ್ಟ್ 2021ರಂದು ಅಪ್‌ಲೋಡ್ ಮಾಡಲಾಗಿದ್ದು, ಅದನ್ನು 1 ಮಾರ್ಚ್ 2019 ರಂದು ರೆಕಾರ್ಡ್ ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಜೊತೆಗೆ ವಿಡಿಯೋ ಶೀರ್ಷಿಕೆಯು ಮಾತನಾಡುತ್ತಿರುವವರು ಖಾಲಿದ್ ಮೆಹಮೂದ್ ಅಬ್ಬಾಸಿ ಎಂದು ಉಲ್ಲೇಖಿಸಿದೆ.

ಅವರ ಅಧಿಕೃತ ಫೇಸ್‌ಬುಕ್ ಪೇಜ್‌ನಲ್ಲಿ, ಅವರು ಇಸ್ಲಾಮಿಕ್ ವಿದ್ವಾಂಸ ಎಂದು ಹೇಳಿಕೊಂಡಿದ್ದು, ತಂಝೀಮ್-ಎ-ಇಸ್ಲಾಮಿ ಎಂಬ ಸಂಘಟನೆಯೊಂದಿಗೆ 30 ವರ್ಷಗಳ ಕಾಲ ಕೆಲಸ ಮಾಡಿದ ಅವರು 2018ರಲ್ಲಿ ತಂಝೀಮ್-ಎ-ಇಸ್ಲಾಮಿ ತೊರೆದು ಶುಬ್ಬನ್-ಉಲ್-ಮುಸ್ಲಿಮೀನ್ ಅನ್ನು ಸ್ಥಾಪಿಸಿದ್ದಾರೆ ಎಂದು ಫೇಸ್‌ಬುಕ್‌ನಲ್ಲಿ ಉಲ್ಲೇಖವಿದೆ.

ದಿ ಕ್ವಿಂಟ್ ಮಾಧ್ಯಮದ ಜೊತೆಗೆ ಈ ಹಿಂದೆ ಮಾತನಾಡಿದ್ದ ಅಬ್ಬಾಸಿ ಅವರು, ತಾಲಿಬಾನ್‌ ಜೊತೆಗೆ ತನಗೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದರು. ವೈರಲ್ ಆಗಿರುವ ವಿಡಿಯೊ ಹಳೆಯದು ಎಂದಿದ್ದರು. ಅಲ್ಲದೆ, ಖಾಲಿದ್ ಅಬ್ಬಾಸಿ ಅವರು “ಶುಬ್ಬನ್ ಉಲ್ ಮುಸ್ಲಿಮೀನ್” ಹೆಸರಿನ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಾರೆಯಾದರೂ, ಅದು ರಾಜಕೀಯ ಪಕ್ಷವಲ್ಲ ಎಂದು ಅವರು ಸ್ಪಷ್ಟಪಡಿಸಿದ್ದರು.

“ನಾನು ತಾಲಿಬಾನ್‌ನ ಮುಖ್ಯ ಕಾರ್ಯದರ್ಶಿ ಎಂಬುವುದು ಸಂಪೂರ್ಣ ಸುಳ್ಳು ಹೇಳಿಕೆಯಾಗಿದೆ. ತಾಲಿಬಾನ್ ಈಗ ಅಫ್ಘಾನಿಸ್ತಾನದಲ್ಲಿ ಅಧಿಕಾರಕ್ಕೆ ಬಂದಿದೆ, ಆದರೆ ವೈರಲ್ ಕ್ಲಿಪ್‌ನ ಭಾಗವು ಸುಮಾರು 1.5 ವರ್ಷಗಳ ಹಿಂದಿನ ವಿಡಿಯೋ ಆಗಿದೆ. ತಾಲಿಬಾನ್ ಅಥವಾ ಯಾವುದೇ ರಾಜಕೀಯ ಪಕ್ಷದೊಂದಿಗೆ ನನಗೆ ಯಾವುದೇ ಸಂಬಂಧ ಇಲ್ಲ” ಎಂದು ಖಾಲಿದ್ ಮೆಹಮೂದ್ ಅಬ್ಬಾಸಿ ಹೇಳಿದ್ದಾಗಿ ದಿ ಕ್ವಿಂಟ್ ವರದಿ ಹೇಳಿತ್ತು.

ಒಟ್ಟಿನಲ್ಲಿ, ವೈರಲ್ ವಿಡಿಯೋ 1 ಮಾರ್ಚ್ 2019 ರಂದು ರೆಕಾರ್ಡ್ ಮಾಡಲಾದ ಕ್ಲಿಪ್‌ನ ಸಣ್ಣ ಭಾಗವಾಗಿದೆ. ಇದರಲ್ಲಿ ಕಾಣಿಸಿಕೊಂಡಿರುವ ವ್ಯಕ್ತಿ ಖಾಲಿದ್ ಮೆಹಮೂದ್ ಅಬ್ಬಾಸಿ. ಖಾಲಿದ್ ಅವರು ಪಾಕಿಸ್ತಾನದ ಇಸ್ಲಾಮಾಬಾದ್ ಮೂಲದ ಮುಸ್ಲಿಂ ಧಾರ್ಮಿಕ ಬೋಧಕರಾಗಿದ್ದಾರೆ. ಅವರು ಶುಬ್ಬನ್-ಉಲ್-ಮುಸ್ಲಿಮೀನ್ ಎಂಬ ಸಂಘಟನೆ 2018ರಲ್ಲಿ ಸ್ಥಾಪಿಸಿ ಅದರಲ್ಲಿ ಕೆಲಸ ಮಾಡುತ್ತಿದ್ದಾರೆ. ತನಗೂ ತಾಲಿಬಾನ್ ಅಥವಾ ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಬಂಧ ಇಲ್ಲ ಎಂದು ಸ್ವತಃ ಅವರೇ ಈ ಹಿಂದೆಯೇ ಹೇಳಿದ್ದರು. ಆದ್ದರಿಂದ ವೈರಲ್ ವಿಡಿಯೋದಲ್ಲಿ ಖಾಲಿದ್ ಮೆಹಮೂದ್ ಅಬ್ಬಾಸಿ ಅವರನ್ನು ತಾಲಿಬಾನ್‌ನ ಮುಖ್ಯ ಕಾರ್ಯದರ್ಶಿ ಎಂಬಂತೆ ತಪ್ಪಾಗಿ ಬಿಂಬಿಸಿ ಸುಳ್ಳು ಸುದ್ದಿ ಹಬ್ಬಿಸಲಾಗಿದೆ.

ಇದನ್ನೂ ಓದಿ : FACT CHECK : ವೈರಲ್ ಫೋಟೋ ಎಪಿಜೆ ಅಬ್ದುಲ್ ಕಲಾಂ ಅವರ ಬಾಲ್ಯದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...