Homeಫ್ಯಾಕ್ಟ್‌ಚೆಕ್FACT CHECK | ತಾಲಿಬಾನ್ ಕಾರ್ಯದರ್ಶಿ ಆರೆಸ್ಸೆಸ್‌, ಬಿಜೆಪಿಯನ್ನು ಹೊಗಳಿದ್ದಾರೆ ಎಂಬುವುದು ಸುಳ್ಳು

FACT CHECK | ತಾಲಿಬಾನ್ ಕಾರ್ಯದರ್ಶಿ ಆರೆಸ್ಸೆಸ್‌, ಬಿಜೆಪಿಯನ್ನು ಹೊಗಳಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

“ಭಾರತದಲ್ಲಿ ಆರೆಸ್ಸೆಸ್‌ ಮತ್ತು ಬಿಜೆಪಿ ಇರುವವರೆಗೂ ಯಾವುದೇ ದೇಶ ಭಾರತದ ಮೇಲೆ ದಾಳಿ ಮಾಡಲು ಸಾಧ್ಯವಿಲ್ಲ” ಎಂದು ತಾಲಿಬಾನ್ ನಾಯಕ ಹೇಳಿದ್ದಾನೆಂದು ಪ್ರತಿಪಾದಿಸಿ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿರುವ ವ್ಯಕ್ತಿಯು ಗಡ್ಡದಾರಿಯಾಗಿದ್ದು, ಟೋಪಿ ಧರಿಸಿದ್ದಾರೆ. ಅವರ ವೇಷ ಭೂಷಣ ನೋಡಿದರೆ ಅವರು ಮುಸ್ಲಿಂ ವ್ಯಕ್ತಿ ಎಂದು ಹೇಳಬಹುದಾಗಿದೆ.

ANU ANITHA(@Ani_Sanatani) ಎಂಬವರು ಅಕ್ಟೋಬರ್ 13, 2024ರಂದು ಎಕ್ಸ್‌ನಲ್ಲಿ ವೈರಲ್ ವಿಡಿಯೋ ಹಂಚಿಕೊಂಡಿದ್ದಾರೆ. ಈ ಹಿಂದೆ Karnataka BJP Supporters ಎಂಬ ಫೇಸ್‌ಬುಕ್ ಪೇಜ್ ಸೇರಿದಂತೆ ಹಲವೆಡೆ ಈ ವಿಡಿಯೋ ಹಂಚಿಕೊಳ್ಳಲಾಗಿತ್ತು.

“ಭಾರತದಲ್ಲಿ ಬಿಜೆಪಿ ಇರುವವರೆಗೂ ಯಾವುದೇ ದೇಶ ಭಾರತದ ಮೇಲೆ ದಾಳಿ ಮಾಡಲು ಸಾಧ್ಯವಿಲ್ಲ. ಆರೆಸ್ಸೆಸ್‌ ಮತ್ತು ಬಿಜೆಪಿ ಅತ್ಯಂತ ಶಕ್ತಿಶಾಲಿ. ಮೊದಲು ಬಿಜೆಪಿಯನ್ನು ತೊಡೆದುಹಾಕಿ ನಂತರ ಮಾತ್ರ ಭಾರತದ ಮೇಲೆ ಜಯ ಸಿಗುತ್ತದೆ…ಭಯೋತ್ಪಾದಕ ಸಂಘಟನೆ ತಾಲಿಬಾನ್‌ನ ಮುಖ್ಯ ಕಾರ್ಯದರ್ಶಿ ಅಲ್ ಬೇಡರ್ ಇಲ್ಯಾಸಿ ಹೇಳಿಕೆ” ಎಂಬ ಪ್ರತಿಪಾದನೆಯೊಂದಿಗೆ ಅಕ್ಟೋಬರ್ 9, 2023ರಂದು Karnataka BJP Supporters ಫೇಸ್‌ಬುಕ್ ಪೇಜ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಲಾಗಿತ್ತು.

ಇದೇ ಪ್ರತಿಪಾದನೆಯೊಂದಿಗೆ ಹಲವಾರು ಜನರು ಬೇರೆ ಬೇರೆ ಭಾಷೆಯಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಅವುಗಳನ್ನು ಇಲ್ಲಿಇಲ್ಲಿಇಲ್ಲಿಇಲ್ಲಿಇಲ್ಲಿ ನೋಡಬಹುದಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ವಿಡಿಯೋ ಕುರಿತು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ ವಿಡಿಯೋದಲ್ಲಿರುವ ವ್ಯಕ್ತಿ ಪಾಕಿಸ್ತಾನದ ಇಸ್ಲಾಮಾಬಾದ್‌ನ ಖಾಲಿದ್ ಮೆಹಮೂದ್ ಅಬ್ಬಾಸಿ ಎಂಬ ಮುಸ್ಲಿಂ ಧಾರ್ಮಿಕ ವಿದ್ವಾಂಸ ಎಂದು ತಿಳಿದು ಬಂದಿದೆ. ಅವರು ತಾಲಿಬಾನ್‌ನ ಜೊತೆಗೆ ಸಂಬಂಧ ಹೊಂದಿಲ್ಲ.

ಅವರ ಬಗ್ಗೆ ಮತ್ತಷ್ಟು ಮಾಹಿತಿ ಹುಡುಕಾಡಿದಾಗ Khalid Mehmood Abbasi Official ಎಂಬ ಯೂಟ್ಯೂಬ್ ಚಾನೆಲ್‌ ಅವರ ಹೆಸರಿನಲ್ಲಿ ಇರುವುದು ಕಂಡು ಬಂದಿದೆ. ಈ ಚಾನೆಲ್‌ನಲ್ಲಿ ಬಿಜೆಪಿ ಬೆಂಬಲಿಗರು ವೈರಲ್ ಮಾಡಿರುವ ಕ್ಲಿಪ್‌ ಇರುವ ವಿಡಿಯೋ ಕೂಡ ನಮಗೆ ಲಭ್ಯವಾಗಿದೆ. ಈ ವಿಡಿಯೋದಲ್ಲಿ 0.53 ಸೆಕೆಂಡ್‌ನಿಂದ ಕ್ಲಿಪ್ ಕಟ್‌ ಮಾಡಿ ವೈರಲ್ ಮಾಡಲಾಗಿದೆ.

ಈ ವಿಡಿಯೋ 3 ಆಗಸ್ಟ್ 2021ರಂದು ಅಪ್‌ಲೋಡ್ ಮಾಡಲಾಗಿದ್ದು, ಅದನ್ನು 1 ಮಾರ್ಚ್ 2019 ರಂದು ರೆಕಾರ್ಡ್ ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಜೊತೆಗೆ ವಿಡಿಯೋ ಶೀರ್ಷಿಕೆಯು ಮಾತನಾಡುತ್ತಿರುವವರು ಖಾಲಿದ್ ಮೆಹಮೂದ್ ಅಬ್ಬಾಸಿ ಎಂದು ಉಲ್ಲೇಖಿಸಿದೆ.

ಅವರ ಅಧಿಕೃತ ಫೇಸ್‌ಬುಕ್ ಪೇಜ್‌ನಲ್ಲಿ, ಅವರು ಇಸ್ಲಾಮಿಕ್ ವಿದ್ವಾಂಸ ಎಂದು ಹೇಳಿಕೊಂಡಿದ್ದು, ತಂಝೀಮ್-ಎ-ಇಸ್ಲಾಮಿ ಎಂಬ ಸಂಘಟನೆಯೊಂದಿಗೆ 30 ವರ್ಷಗಳ ಕಾಲ ಕೆಲಸ ಮಾಡಿದ ಅವರು 2018ರಲ್ಲಿ ತಂಝೀಮ್-ಎ-ಇಸ್ಲಾಮಿ ತೊರೆದು ಶುಬ್ಬನ್-ಉಲ್-ಮುಸ್ಲಿಮೀನ್ ಅನ್ನು ಸ್ಥಾಪಿಸಿದ್ದಾರೆ ಎಂದು ಫೇಸ್‌ಬುಕ್‌ನಲ್ಲಿ ಉಲ್ಲೇಖವಿದೆ.

ದಿ ಕ್ವಿಂಟ್ ಮಾಧ್ಯಮದ ಜೊತೆಗೆ ಈ ಹಿಂದೆ ಮಾತನಾಡಿದ್ದ ಅಬ್ಬಾಸಿ ಅವರು, ತಾಲಿಬಾನ್‌ ಜೊತೆಗೆ ತನಗೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದರು. ವೈರಲ್ ಆಗಿರುವ ವಿಡಿಯೊ ಹಳೆಯದು ಎಂದಿದ್ದರು. ಅಲ್ಲದೆ, ಖಾಲಿದ್ ಅಬ್ಬಾಸಿ ಅವರು “ಶುಬ್ಬನ್ ಉಲ್ ಮುಸ್ಲಿಮೀನ್” ಹೆಸರಿನ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಾರೆಯಾದರೂ, ಅದು ರಾಜಕೀಯ ಪಕ್ಷವಲ್ಲ ಎಂದು ಅವರು ಸ್ಪಷ್ಟಪಡಿಸಿದ್ದರು.

“ನಾನು ತಾಲಿಬಾನ್‌ನ ಮುಖ್ಯ ಕಾರ್ಯದರ್ಶಿ ಎಂಬುವುದು ಸಂಪೂರ್ಣ ಸುಳ್ಳು ಹೇಳಿಕೆಯಾಗಿದೆ. ತಾಲಿಬಾನ್ ಈಗ ಅಫ್ಘಾನಿಸ್ತಾನದಲ್ಲಿ ಅಧಿಕಾರಕ್ಕೆ ಬಂದಿದೆ, ಆದರೆ ವೈರಲ್ ಕ್ಲಿಪ್‌ನ ಭಾಗವು ಸುಮಾರು 1.5 ವರ್ಷಗಳ ಹಿಂದಿನ ವಿಡಿಯೋ ಆಗಿದೆ. ತಾಲಿಬಾನ್ ಅಥವಾ ಯಾವುದೇ ರಾಜಕೀಯ ಪಕ್ಷದೊಂದಿಗೆ ನನಗೆ ಯಾವುದೇ ಸಂಬಂಧ ಇಲ್ಲ” ಎಂದು ಖಾಲಿದ್ ಮೆಹಮೂದ್ ಅಬ್ಬಾಸಿ ಹೇಳಿದ್ದಾಗಿ ದಿ ಕ್ವಿಂಟ್ ವರದಿ ಹೇಳಿತ್ತು.

ಒಟ್ಟಿನಲ್ಲಿ, ವೈರಲ್ ವಿಡಿಯೋ 1 ಮಾರ್ಚ್ 2019 ರಂದು ರೆಕಾರ್ಡ್ ಮಾಡಲಾದ ಕ್ಲಿಪ್‌ನ ಸಣ್ಣ ಭಾಗವಾಗಿದೆ. ಇದರಲ್ಲಿ ಕಾಣಿಸಿಕೊಂಡಿರುವ ವ್ಯಕ್ತಿ ಖಾಲಿದ್ ಮೆಹಮೂದ್ ಅಬ್ಬಾಸಿ. ಖಾಲಿದ್ ಅವರು ಪಾಕಿಸ್ತಾನದ ಇಸ್ಲಾಮಾಬಾದ್ ಮೂಲದ ಮುಸ್ಲಿಂ ಧಾರ್ಮಿಕ ಬೋಧಕರಾಗಿದ್ದಾರೆ. ಅವರು ಶುಬ್ಬನ್-ಉಲ್-ಮುಸ್ಲಿಮೀನ್ ಎಂಬ ಸಂಘಟನೆ 2018ರಲ್ಲಿ ಸ್ಥಾಪಿಸಿ ಅದರಲ್ಲಿ ಕೆಲಸ ಮಾಡುತ್ತಿದ್ದಾರೆ. ತನಗೂ ತಾಲಿಬಾನ್ ಅಥವಾ ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಬಂಧ ಇಲ್ಲ ಎಂದು ಸ್ವತಃ ಅವರೇ ಈ ಹಿಂದೆಯೇ ಹೇಳಿದ್ದರು. ಆದ್ದರಿಂದ ವೈರಲ್ ವಿಡಿಯೋದಲ್ಲಿ ಖಾಲಿದ್ ಮೆಹಮೂದ್ ಅಬ್ಬಾಸಿ ಅವರನ್ನು ತಾಲಿಬಾನ್‌ನ ಮುಖ್ಯ ಕಾರ್ಯದರ್ಶಿ ಎಂಬಂತೆ ತಪ್ಪಾಗಿ ಬಿಂಬಿಸಿ ಸುಳ್ಳು ಸುದ್ದಿ ಹಬ್ಬಿಸಲಾಗಿದೆ.

ಇದನ್ನೂ ಓದಿ : FACT CHECK : ವೈರಲ್ ಫೋಟೋ ಎಪಿಜೆ ಅಬ್ದುಲ್ ಕಲಾಂ ಅವರ ಬಾಲ್ಯದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...