Homeಫ್ಯಾಕ್ಟ್‌ಚೆಕ್FACT CHECK | ತಾಲಿಬಾನ್ ಕಾರ್ಯದರ್ಶಿ ಆರೆಸ್ಸೆಸ್‌, ಬಿಜೆಪಿಯನ್ನು ಹೊಗಳಿದ್ದಾರೆ ಎಂಬುವುದು ಸುಳ್ಳು

FACT CHECK | ತಾಲಿಬಾನ್ ಕಾರ್ಯದರ್ಶಿ ಆರೆಸ್ಸೆಸ್‌, ಬಿಜೆಪಿಯನ್ನು ಹೊಗಳಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

“ಭಾರತದಲ್ಲಿ ಆರೆಸ್ಸೆಸ್‌ ಮತ್ತು ಬಿಜೆಪಿ ಇರುವವರೆಗೂ ಯಾವುದೇ ದೇಶ ಭಾರತದ ಮೇಲೆ ದಾಳಿ ಮಾಡಲು ಸಾಧ್ಯವಿಲ್ಲ” ಎಂದು ತಾಲಿಬಾನ್ ನಾಯಕ ಹೇಳಿದ್ದಾನೆಂದು ಪ್ರತಿಪಾದಿಸಿ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿರುವ ವ್ಯಕ್ತಿಯು ಗಡ್ಡದಾರಿಯಾಗಿದ್ದು, ಟೋಪಿ ಧರಿಸಿದ್ದಾರೆ. ಅವರ ವೇಷ ಭೂಷಣ ನೋಡಿದರೆ ಅವರು ಮುಸ್ಲಿಂ ವ್ಯಕ್ತಿ ಎಂದು ಹೇಳಬಹುದಾಗಿದೆ.

ANU ANITHA(@Ani_Sanatani) ಎಂಬವರು ಅಕ್ಟೋಬರ್ 13, 2024ರಂದು ಎಕ್ಸ್‌ನಲ್ಲಿ ವೈರಲ್ ವಿಡಿಯೋ ಹಂಚಿಕೊಂಡಿದ್ದಾರೆ. ಈ ಹಿಂದೆ Karnataka BJP Supporters ಎಂಬ ಫೇಸ್‌ಬುಕ್ ಪೇಜ್ ಸೇರಿದಂತೆ ಹಲವೆಡೆ ಈ ವಿಡಿಯೋ ಹಂಚಿಕೊಳ್ಳಲಾಗಿತ್ತು.

“ಭಾರತದಲ್ಲಿ ಬಿಜೆಪಿ ಇರುವವರೆಗೂ ಯಾವುದೇ ದೇಶ ಭಾರತದ ಮೇಲೆ ದಾಳಿ ಮಾಡಲು ಸಾಧ್ಯವಿಲ್ಲ. ಆರೆಸ್ಸೆಸ್‌ ಮತ್ತು ಬಿಜೆಪಿ ಅತ್ಯಂತ ಶಕ್ತಿಶಾಲಿ. ಮೊದಲು ಬಿಜೆಪಿಯನ್ನು ತೊಡೆದುಹಾಕಿ ನಂತರ ಮಾತ್ರ ಭಾರತದ ಮೇಲೆ ಜಯ ಸಿಗುತ್ತದೆ…ಭಯೋತ್ಪಾದಕ ಸಂಘಟನೆ ತಾಲಿಬಾನ್‌ನ ಮುಖ್ಯ ಕಾರ್ಯದರ್ಶಿ ಅಲ್ ಬೇಡರ್ ಇಲ್ಯಾಸಿ ಹೇಳಿಕೆ” ಎಂಬ ಪ್ರತಿಪಾದನೆಯೊಂದಿಗೆ ಅಕ್ಟೋಬರ್ 9, 2023ರಂದು Karnataka BJP Supporters ಫೇಸ್‌ಬುಕ್ ಪೇಜ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಲಾಗಿತ್ತು.

ಇದೇ ಪ್ರತಿಪಾದನೆಯೊಂದಿಗೆ ಹಲವಾರು ಜನರು ಬೇರೆ ಬೇರೆ ಭಾಷೆಯಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಅವುಗಳನ್ನು ಇಲ್ಲಿಇಲ್ಲಿಇಲ್ಲಿಇಲ್ಲಿಇಲ್ಲಿ ನೋಡಬಹುದಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ವಿಡಿಯೋ ಕುರಿತು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ ವಿಡಿಯೋದಲ್ಲಿರುವ ವ್ಯಕ್ತಿ ಪಾಕಿಸ್ತಾನದ ಇಸ್ಲಾಮಾಬಾದ್‌ನ ಖಾಲಿದ್ ಮೆಹಮೂದ್ ಅಬ್ಬಾಸಿ ಎಂಬ ಮುಸ್ಲಿಂ ಧಾರ್ಮಿಕ ವಿದ್ವಾಂಸ ಎಂದು ತಿಳಿದು ಬಂದಿದೆ. ಅವರು ತಾಲಿಬಾನ್‌ನ ಜೊತೆಗೆ ಸಂಬಂಧ ಹೊಂದಿಲ್ಲ.

ಅವರ ಬಗ್ಗೆ ಮತ್ತಷ್ಟು ಮಾಹಿತಿ ಹುಡುಕಾಡಿದಾಗ Khalid Mehmood Abbasi Official ಎಂಬ ಯೂಟ್ಯೂಬ್ ಚಾನೆಲ್‌ ಅವರ ಹೆಸರಿನಲ್ಲಿ ಇರುವುದು ಕಂಡು ಬಂದಿದೆ. ಈ ಚಾನೆಲ್‌ನಲ್ಲಿ ಬಿಜೆಪಿ ಬೆಂಬಲಿಗರು ವೈರಲ್ ಮಾಡಿರುವ ಕ್ಲಿಪ್‌ ಇರುವ ವಿಡಿಯೋ ಕೂಡ ನಮಗೆ ಲಭ್ಯವಾಗಿದೆ. ಈ ವಿಡಿಯೋದಲ್ಲಿ 0.53 ಸೆಕೆಂಡ್‌ನಿಂದ ಕ್ಲಿಪ್ ಕಟ್‌ ಮಾಡಿ ವೈರಲ್ ಮಾಡಲಾಗಿದೆ.

ಈ ವಿಡಿಯೋ 3 ಆಗಸ್ಟ್ 2021ರಂದು ಅಪ್‌ಲೋಡ್ ಮಾಡಲಾಗಿದ್ದು, ಅದನ್ನು 1 ಮಾರ್ಚ್ 2019 ರಂದು ರೆಕಾರ್ಡ್ ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಜೊತೆಗೆ ವಿಡಿಯೋ ಶೀರ್ಷಿಕೆಯು ಮಾತನಾಡುತ್ತಿರುವವರು ಖಾಲಿದ್ ಮೆಹಮೂದ್ ಅಬ್ಬಾಸಿ ಎಂದು ಉಲ್ಲೇಖಿಸಿದೆ.

ಅವರ ಅಧಿಕೃತ ಫೇಸ್‌ಬುಕ್ ಪೇಜ್‌ನಲ್ಲಿ, ಅವರು ಇಸ್ಲಾಮಿಕ್ ವಿದ್ವಾಂಸ ಎಂದು ಹೇಳಿಕೊಂಡಿದ್ದು, ತಂಝೀಮ್-ಎ-ಇಸ್ಲಾಮಿ ಎಂಬ ಸಂಘಟನೆಯೊಂದಿಗೆ 30 ವರ್ಷಗಳ ಕಾಲ ಕೆಲಸ ಮಾಡಿದ ಅವರು 2018ರಲ್ಲಿ ತಂಝೀಮ್-ಎ-ಇಸ್ಲಾಮಿ ತೊರೆದು ಶುಬ್ಬನ್-ಉಲ್-ಮುಸ್ಲಿಮೀನ್ ಅನ್ನು ಸ್ಥಾಪಿಸಿದ್ದಾರೆ ಎಂದು ಫೇಸ್‌ಬುಕ್‌ನಲ್ಲಿ ಉಲ್ಲೇಖವಿದೆ.

ದಿ ಕ್ವಿಂಟ್ ಮಾಧ್ಯಮದ ಜೊತೆಗೆ ಈ ಹಿಂದೆ ಮಾತನಾಡಿದ್ದ ಅಬ್ಬಾಸಿ ಅವರು, ತಾಲಿಬಾನ್‌ ಜೊತೆಗೆ ತನಗೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದರು. ವೈರಲ್ ಆಗಿರುವ ವಿಡಿಯೊ ಹಳೆಯದು ಎಂದಿದ್ದರು. ಅಲ್ಲದೆ, ಖಾಲಿದ್ ಅಬ್ಬಾಸಿ ಅವರು “ಶುಬ್ಬನ್ ಉಲ್ ಮುಸ್ಲಿಮೀನ್” ಹೆಸರಿನ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಾರೆಯಾದರೂ, ಅದು ರಾಜಕೀಯ ಪಕ್ಷವಲ್ಲ ಎಂದು ಅವರು ಸ್ಪಷ್ಟಪಡಿಸಿದ್ದರು.

“ನಾನು ತಾಲಿಬಾನ್‌ನ ಮುಖ್ಯ ಕಾರ್ಯದರ್ಶಿ ಎಂಬುವುದು ಸಂಪೂರ್ಣ ಸುಳ್ಳು ಹೇಳಿಕೆಯಾಗಿದೆ. ತಾಲಿಬಾನ್ ಈಗ ಅಫ್ಘಾನಿಸ್ತಾನದಲ್ಲಿ ಅಧಿಕಾರಕ್ಕೆ ಬಂದಿದೆ, ಆದರೆ ವೈರಲ್ ಕ್ಲಿಪ್‌ನ ಭಾಗವು ಸುಮಾರು 1.5 ವರ್ಷಗಳ ಹಿಂದಿನ ವಿಡಿಯೋ ಆಗಿದೆ. ತಾಲಿಬಾನ್ ಅಥವಾ ಯಾವುದೇ ರಾಜಕೀಯ ಪಕ್ಷದೊಂದಿಗೆ ನನಗೆ ಯಾವುದೇ ಸಂಬಂಧ ಇಲ್ಲ” ಎಂದು ಖಾಲಿದ್ ಮೆಹಮೂದ್ ಅಬ್ಬಾಸಿ ಹೇಳಿದ್ದಾಗಿ ದಿ ಕ್ವಿಂಟ್ ವರದಿ ಹೇಳಿತ್ತು.

ಒಟ್ಟಿನಲ್ಲಿ, ವೈರಲ್ ವಿಡಿಯೋ 1 ಮಾರ್ಚ್ 2019 ರಂದು ರೆಕಾರ್ಡ್ ಮಾಡಲಾದ ಕ್ಲಿಪ್‌ನ ಸಣ್ಣ ಭಾಗವಾಗಿದೆ. ಇದರಲ್ಲಿ ಕಾಣಿಸಿಕೊಂಡಿರುವ ವ್ಯಕ್ತಿ ಖಾಲಿದ್ ಮೆಹಮೂದ್ ಅಬ್ಬಾಸಿ. ಖಾಲಿದ್ ಅವರು ಪಾಕಿಸ್ತಾನದ ಇಸ್ಲಾಮಾಬಾದ್ ಮೂಲದ ಮುಸ್ಲಿಂ ಧಾರ್ಮಿಕ ಬೋಧಕರಾಗಿದ್ದಾರೆ. ಅವರು ಶುಬ್ಬನ್-ಉಲ್-ಮುಸ್ಲಿಮೀನ್ ಎಂಬ ಸಂಘಟನೆ 2018ರಲ್ಲಿ ಸ್ಥಾಪಿಸಿ ಅದರಲ್ಲಿ ಕೆಲಸ ಮಾಡುತ್ತಿದ್ದಾರೆ. ತನಗೂ ತಾಲಿಬಾನ್ ಅಥವಾ ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಬಂಧ ಇಲ್ಲ ಎಂದು ಸ್ವತಃ ಅವರೇ ಈ ಹಿಂದೆಯೇ ಹೇಳಿದ್ದರು. ಆದ್ದರಿಂದ ವೈರಲ್ ವಿಡಿಯೋದಲ್ಲಿ ಖಾಲಿದ್ ಮೆಹಮೂದ್ ಅಬ್ಬಾಸಿ ಅವರನ್ನು ತಾಲಿಬಾನ್‌ನ ಮುಖ್ಯ ಕಾರ್ಯದರ್ಶಿ ಎಂಬಂತೆ ತಪ್ಪಾಗಿ ಬಿಂಬಿಸಿ ಸುಳ್ಳು ಸುದ್ದಿ ಹಬ್ಬಿಸಲಾಗಿದೆ.

ಇದನ್ನೂ ಓದಿ : FACT CHECK : ವೈರಲ್ ಫೋಟೋ ಎಪಿಜೆ ಅಬ್ದುಲ್ ಕಲಾಂ ಅವರ ಬಾಲ್ಯದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...