Homeಫ್ಯಾಕ್ಟ್‌ಚೆಕ್FACT CHECK | ತಾಲಿಬಾನ್ ಕಾರ್ಯದರ್ಶಿ ಆರೆಸ್ಸೆಸ್‌, ಬಿಜೆಪಿಯನ್ನು ಹೊಗಳಿದ್ದಾರೆ ಎಂಬುವುದು ಸುಳ್ಳು

FACT CHECK | ತಾಲಿಬಾನ್ ಕಾರ್ಯದರ್ಶಿ ಆರೆಸ್ಸೆಸ್‌, ಬಿಜೆಪಿಯನ್ನು ಹೊಗಳಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

“ಭಾರತದಲ್ಲಿ ಆರೆಸ್ಸೆಸ್‌ ಮತ್ತು ಬಿಜೆಪಿ ಇರುವವರೆಗೂ ಯಾವುದೇ ದೇಶ ಭಾರತದ ಮೇಲೆ ದಾಳಿ ಮಾಡಲು ಸಾಧ್ಯವಿಲ್ಲ” ಎಂದು ತಾಲಿಬಾನ್ ನಾಯಕ ಹೇಳಿದ್ದಾನೆಂದು ಪ್ರತಿಪಾದಿಸಿ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿರುವ ವ್ಯಕ್ತಿಯು ಗಡ್ಡದಾರಿಯಾಗಿದ್ದು, ಟೋಪಿ ಧರಿಸಿದ್ದಾರೆ. ಅವರ ವೇಷ ಭೂಷಣ ನೋಡಿದರೆ ಅವರು ಮುಸ್ಲಿಂ ವ್ಯಕ್ತಿ ಎಂದು ಹೇಳಬಹುದಾಗಿದೆ.

ANU ANITHA(@Ani_Sanatani) ಎಂಬವರು ಅಕ್ಟೋಬರ್ 13, 2024ರಂದು ಎಕ್ಸ್‌ನಲ್ಲಿ ವೈರಲ್ ವಿಡಿಯೋ ಹಂಚಿಕೊಂಡಿದ್ದಾರೆ. ಈ ಹಿಂದೆ Karnataka BJP Supporters ಎಂಬ ಫೇಸ್‌ಬುಕ್ ಪೇಜ್ ಸೇರಿದಂತೆ ಹಲವೆಡೆ ಈ ವಿಡಿಯೋ ಹಂಚಿಕೊಳ್ಳಲಾಗಿತ್ತು.

“ಭಾರತದಲ್ಲಿ ಬಿಜೆಪಿ ಇರುವವರೆಗೂ ಯಾವುದೇ ದೇಶ ಭಾರತದ ಮೇಲೆ ದಾಳಿ ಮಾಡಲು ಸಾಧ್ಯವಿಲ್ಲ. ಆರೆಸ್ಸೆಸ್‌ ಮತ್ತು ಬಿಜೆಪಿ ಅತ್ಯಂತ ಶಕ್ತಿಶಾಲಿ. ಮೊದಲು ಬಿಜೆಪಿಯನ್ನು ತೊಡೆದುಹಾಕಿ ನಂತರ ಮಾತ್ರ ಭಾರತದ ಮೇಲೆ ಜಯ ಸಿಗುತ್ತದೆ…ಭಯೋತ್ಪಾದಕ ಸಂಘಟನೆ ತಾಲಿಬಾನ್‌ನ ಮುಖ್ಯ ಕಾರ್ಯದರ್ಶಿ ಅಲ್ ಬೇಡರ್ ಇಲ್ಯಾಸಿ ಹೇಳಿಕೆ” ಎಂಬ ಪ್ರತಿಪಾದನೆಯೊಂದಿಗೆ ಅಕ್ಟೋಬರ್ 9, 2023ರಂದು Karnataka BJP Supporters ಫೇಸ್‌ಬುಕ್ ಪೇಜ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಲಾಗಿತ್ತು.

ಇದೇ ಪ್ರತಿಪಾದನೆಯೊಂದಿಗೆ ಹಲವಾರು ಜನರು ಬೇರೆ ಬೇರೆ ಭಾಷೆಯಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಅವುಗಳನ್ನು ಇಲ್ಲಿಇಲ್ಲಿಇಲ್ಲಿಇಲ್ಲಿಇಲ್ಲಿ ನೋಡಬಹುದಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ವಿಡಿಯೋ ಕುರಿತು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ ವಿಡಿಯೋದಲ್ಲಿರುವ ವ್ಯಕ್ತಿ ಪಾಕಿಸ್ತಾನದ ಇಸ್ಲಾಮಾಬಾದ್‌ನ ಖಾಲಿದ್ ಮೆಹಮೂದ್ ಅಬ್ಬಾಸಿ ಎಂಬ ಮುಸ್ಲಿಂ ಧಾರ್ಮಿಕ ವಿದ್ವಾಂಸ ಎಂದು ತಿಳಿದು ಬಂದಿದೆ. ಅವರು ತಾಲಿಬಾನ್‌ನ ಜೊತೆಗೆ ಸಂಬಂಧ ಹೊಂದಿಲ್ಲ.

ಅವರ ಬಗ್ಗೆ ಮತ್ತಷ್ಟು ಮಾಹಿತಿ ಹುಡುಕಾಡಿದಾಗ Khalid Mehmood Abbasi Official ಎಂಬ ಯೂಟ್ಯೂಬ್ ಚಾನೆಲ್‌ ಅವರ ಹೆಸರಿನಲ್ಲಿ ಇರುವುದು ಕಂಡು ಬಂದಿದೆ. ಈ ಚಾನೆಲ್‌ನಲ್ಲಿ ಬಿಜೆಪಿ ಬೆಂಬಲಿಗರು ವೈರಲ್ ಮಾಡಿರುವ ಕ್ಲಿಪ್‌ ಇರುವ ವಿಡಿಯೋ ಕೂಡ ನಮಗೆ ಲಭ್ಯವಾಗಿದೆ. ಈ ವಿಡಿಯೋದಲ್ಲಿ 0.53 ಸೆಕೆಂಡ್‌ನಿಂದ ಕ್ಲಿಪ್ ಕಟ್‌ ಮಾಡಿ ವೈರಲ್ ಮಾಡಲಾಗಿದೆ.

ಈ ವಿಡಿಯೋ 3 ಆಗಸ್ಟ್ 2021ರಂದು ಅಪ್‌ಲೋಡ್ ಮಾಡಲಾಗಿದ್ದು, ಅದನ್ನು 1 ಮಾರ್ಚ್ 2019 ರಂದು ರೆಕಾರ್ಡ್ ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಜೊತೆಗೆ ವಿಡಿಯೋ ಶೀರ್ಷಿಕೆಯು ಮಾತನಾಡುತ್ತಿರುವವರು ಖಾಲಿದ್ ಮೆಹಮೂದ್ ಅಬ್ಬಾಸಿ ಎಂದು ಉಲ್ಲೇಖಿಸಿದೆ.

ಅವರ ಅಧಿಕೃತ ಫೇಸ್‌ಬುಕ್ ಪೇಜ್‌ನಲ್ಲಿ, ಅವರು ಇಸ್ಲಾಮಿಕ್ ವಿದ್ವಾಂಸ ಎಂದು ಹೇಳಿಕೊಂಡಿದ್ದು, ತಂಝೀಮ್-ಎ-ಇಸ್ಲಾಮಿ ಎಂಬ ಸಂಘಟನೆಯೊಂದಿಗೆ 30 ವರ್ಷಗಳ ಕಾಲ ಕೆಲಸ ಮಾಡಿದ ಅವರು 2018ರಲ್ಲಿ ತಂಝೀಮ್-ಎ-ಇಸ್ಲಾಮಿ ತೊರೆದು ಶುಬ್ಬನ್-ಉಲ್-ಮುಸ್ಲಿಮೀನ್ ಅನ್ನು ಸ್ಥಾಪಿಸಿದ್ದಾರೆ ಎಂದು ಫೇಸ್‌ಬುಕ್‌ನಲ್ಲಿ ಉಲ್ಲೇಖವಿದೆ.

ದಿ ಕ್ವಿಂಟ್ ಮಾಧ್ಯಮದ ಜೊತೆಗೆ ಈ ಹಿಂದೆ ಮಾತನಾಡಿದ್ದ ಅಬ್ಬಾಸಿ ಅವರು, ತಾಲಿಬಾನ್‌ ಜೊತೆಗೆ ತನಗೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದರು. ವೈರಲ್ ಆಗಿರುವ ವಿಡಿಯೊ ಹಳೆಯದು ಎಂದಿದ್ದರು. ಅಲ್ಲದೆ, ಖಾಲಿದ್ ಅಬ್ಬಾಸಿ ಅವರು “ಶುಬ್ಬನ್ ಉಲ್ ಮುಸ್ಲಿಮೀನ್” ಹೆಸರಿನ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಾರೆಯಾದರೂ, ಅದು ರಾಜಕೀಯ ಪಕ್ಷವಲ್ಲ ಎಂದು ಅವರು ಸ್ಪಷ್ಟಪಡಿಸಿದ್ದರು.

“ನಾನು ತಾಲಿಬಾನ್‌ನ ಮುಖ್ಯ ಕಾರ್ಯದರ್ಶಿ ಎಂಬುವುದು ಸಂಪೂರ್ಣ ಸುಳ್ಳು ಹೇಳಿಕೆಯಾಗಿದೆ. ತಾಲಿಬಾನ್ ಈಗ ಅಫ್ಘಾನಿಸ್ತಾನದಲ್ಲಿ ಅಧಿಕಾರಕ್ಕೆ ಬಂದಿದೆ, ಆದರೆ ವೈರಲ್ ಕ್ಲಿಪ್‌ನ ಭಾಗವು ಸುಮಾರು 1.5 ವರ್ಷಗಳ ಹಿಂದಿನ ವಿಡಿಯೋ ಆಗಿದೆ. ತಾಲಿಬಾನ್ ಅಥವಾ ಯಾವುದೇ ರಾಜಕೀಯ ಪಕ್ಷದೊಂದಿಗೆ ನನಗೆ ಯಾವುದೇ ಸಂಬಂಧ ಇಲ್ಲ” ಎಂದು ಖಾಲಿದ್ ಮೆಹಮೂದ್ ಅಬ್ಬಾಸಿ ಹೇಳಿದ್ದಾಗಿ ದಿ ಕ್ವಿಂಟ್ ವರದಿ ಹೇಳಿತ್ತು.

ಒಟ್ಟಿನಲ್ಲಿ, ವೈರಲ್ ವಿಡಿಯೋ 1 ಮಾರ್ಚ್ 2019 ರಂದು ರೆಕಾರ್ಡ್ ಮಾಡಲಾದ ಕ್ಲಿಪ್‌ನ ಸಣ್ಣ ಭಾಗವಾಗಿದೆ. ಇದರಲ್ಲಿ ಕಾಣಿಸಿಕೊಂಡಿರುವ ವ್ಯಕ್ತಿ ಖಾಲಿದ್ ಮೆಹಮೂದ್ ಅಬ್ಬಾಸಿ. ಖಾಲಿದ್ ಅವರು ಪಾಕಿಸ್ತಾನದ ಇಸ್ಲಾಮಾಬಾದ್ ಮೂಲದ ಮುಸ್ಲಿಂ ಧಾರ್ಮಿಕ ಬೋಧಕರಾಗಿದ್ದಾರೆ. ಅವರು ಶುಬ್ಬನ್-ಉಲ್-ಮುಸ್ಲಿಮೀನ್ ಎಂಬ ಸಂಘಟನೆ 2018ರಲ್ಲಿ ಸ್ಥಾಪಿಸಿ ಅದರಲ್ಲಿ ಕೆಲಸ ಮಾಡುತ್ತಿದ್ದಾರೆ. ತನಗೂ ತಾಲಿಬಾನ್ ಅಥವಾ ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಬಂಧ ಇಲ್ಲ ಎಂದು ಸ್ವತಃ ಅವರೇ ಈ ಹಿಂದೆಯೇ ಹೇಳಿದ್ದರು. ಆದ್ದರಿಂದ ವೈರಲ್ ವಿಡಿಯೋದಲ್ಲಿ ಖಾಲಿದ್ ಮೆಹಮೂದ್ ಅಬ್ಬಾಸಿ ಅವರನ್ನು ತಾಲಿಬಾನ್‌ನ ಮುಖ್ಯ ಕಾರ್ಯದರ್ಶಿ ಎಂಬಂತೆ ತಪ್ಪಾಗಿ ಬಿಂಬಿಸಿ ಸುಳ್ಳು ಸುದ್ದಿ ಹಬ್ಬಿಸಲಾಗಿದೆ.

ಇದನ್ನೂ ಓದಿ : FACT CHECK : ವೈರಲ್ ಫೋಟೋ ಎಪಿಜೆ ಅಬ್ದುಲ್ ಕಲಾಂ ಅವರ ಬಾಲ್ಯದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...