Homeಫ್ಯಾಕ್ಟ್‌ಚೆಕ್FACT CHECK | ತಾಲಿಬಾನ್ ಕಾರ್ಯದರ್ಶಿ ಆರೆಸ್ಸೆಸ್‌, ಬಿಜೆಪಿಯನ್ನು ಹೊಗಳಿದ್ದಾರೆ ಎಂಬುವುದು ಸುಳ್ಳು

FACT CHECK | ತಾಲಿಬಾನ್ ಕಾರ್ಯದರ್ಶಿ ಆರೆಸ್ಸೆಸ್‌, ಬಿಜೆಪಿಯನ್ನು ಹೊಗಳಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

“ಭಾರತದಲ್ಲಿ ಆರೆಸ್ಸೆಸ್‌ ಮತ್ತು ಬಿಜೆಪಿ ಇರುವವರೆಗೂ ಯಾವುದೇ ದೇಶ ಭಾರತದ ಮೇಲೆ ದಾಳಿ ಮಾಡಲು ಸಾಧ್ಯವಿಲ್ಲ” ಎಂದು ತಾಲಿಬಾನ್ ನಾಯಕ ಹೇಳಿದ್ದಾನೆಂದು ಪ್ರತಿಪಾದಿಸಿ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿರುವ ವ್ಯಕ್ತಿಯು ಗಡ್ಡದಾರಿಯಾಗಿದ್ದು, ಟೋಪಿ ಧರಿಸಿದ್ದಾರೆ. ಅವರ ವೇಷ ಭೂಷಣ ನೋಡಿದರೆ ಅವರು ಮುಸ್ಲಿಂ ವ್ಯಕ್ತಿ ಎಂದು ಹೇಳಬಹುದಾಗಿದೆ.

ANU ANITHA(@Ani_Sanatani) ಎಂಬವರು ಅಕ್ಟೋಬರ್ 13, 2024ರಂದು ಎಕ್ಸ್‌ನಲ್ಲಿ ವೈರಲ್ ವಿಡಿಯೋ ಹಂಚಿಕೊಂಡಿದ್ದಾರೆ. ಈ ಹಿಂದೆ Karnataka BJP Supporters ಎಂಬ ಫೇಸ್‌ಬುಕ್ ಪೇಜ್ ಸೇರಿದಂತೆ ಹಲವೆಡೆ ಈ ವಿಡಿಯೋ ಹಂಚಿಕೊಳ್ಳಲಾಗಿತ್ತು.

“ಭಾರತದಲ್ಲಿ ಬಿಜೆಪಿ ಇರುವವರೆಗೂ ಯಾವುದೇ ದೇಶ ಭಾರತದ ಮೇಲೆ ದಾಳಿ ಮಾಡಲು ಸಾಧ್ಯವಿಲ್ಲ. ಆರೆಸ್ಸೆಸ್‌ ಮತ್ತು ಬಿಜೆಪಿ ಅತ್ಯಂತ ಶಕ್ತಿಶಾಲಿ. ಮೊದಲು ಬಿಜೆಪಿಯನ್ನು ತೊಡೆದುಹಾಕಿ ನಂತರ ಮಾತ್ರ ಭಾರತದ ಮೇಲೆ ಜಯ ಸಿಗುತ್ತದೆ…ಭಯೋತ್ಪಾದಕ ಸಂಘಟನೆ ತಾಲಿಬಾನ್‌ನ ಮುಖ್ಯ ಕಾರ್ಯದರ್ಶಿ ಅಲ್ ಬೇಡರ್ ಇಲ್ಯಾಸಿ ಹೇಳಿಕೆ” ಎಂಬ ಪ್ರತಿಪಾದನೆಯೊಂದಿಗೆ ಅಕ್ಟೋಬರ್ 9, 2023ರಂದು Karnataka BJP Supporters ಫೇಸ್‌ಬುಕ್ ಪೇಜ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಲಾಗಿತ್ತು.

ಇದೇ ಪ್ರತಿಪಾದನೆಯೊಂದಿಗೆ ಹಲವಾರು ಜನರು ಬೇರೆ ಬೇರೆ ಭಾಷೆಯಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಅವುಗಳನ್ನು ಇಲ್ಲಿಇಲ್ಲಿಇಲ್ಲಿಇಲ್ಲಿಇಲ್ಲಿ ನೋಡಬಹುದಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ವಿಡಿಯೋ ಕುರಿತು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ ವಿಡಿಯೋದಲ್ಲಿರುವ ವ್ಯಕ್ತಿ ಪಾಕಿಸ್ತಾನದ ಇಸ್ಲಾಮಾಬಾದ್‌ನ ಖಾಲಿದ್ ಮೆಹಮೂದ್ ಅಬ್ಬಾಸಿ ಎಂಬ ಮುಸ್ಲಿಂ ಧಾರ್ಮಿಕ ವಿದ್ವಾಂಸ ಎಂದು ತಿಳಿದು ಬಂದಿದೆ. ಅವರು ತಾಲಿಬಾನ್‌ನ ಜೊತೆಗೆ ಸಂಬಂಧ ಹೊಂದಿಲ್ಲ.

ಅವರ ಬಗ್ಗೆ ಮತ್ತಷ್ಟು ಮಾಹಿತಿ ಹುಡುಕಾಡಿದಾಗ Khalid Mehmood Abbasi Official ಎಂಬ ಯೂಟ್ಯೂಬ್ ಚಾನೆಲ್‌ ಅವರ ಹೆಸರಿನಲ್ಲಿ ಇರುವುದು ಕಂಡು ಬಂದಿದೆ. ಈ ಚಾನೆಲ್‌ನಲ್ಲಿ ಬಿಜೆಪಿ ಬೆಂಬಲಿಗರು ವೈರಲ್ ಮಾಡಿರುವ ಕ್ಲಿಪ್‌ ಇರುವ ವಿಡಿಯೋ ಕೂಡ ನಮಗೆ ಲಭ್ಯವಾಗಿದೆ. ಈ ವಿಡಿಯೋದಲ್ಲಿ 0.53 ಸೆಕೆಂಡ್‌ನಿಂದ ಕ್ಲಿಪ್ ಕಟ್‌ ಮಾಡಿ ವೈರಲ್ ಮಾಡಲಾಗಿದೆ.

ಈ ವಿಡಿಯೋ 3 ಆಗಸ್ಟ್ 2021ರಂದು ಅಪ್‌ಲೋಡ್ ಮಾಡಲಾಗಿದ್ದು, ಅದನ್ನು 1 ಮಾರ್ಚ್ 2019 ರಂದು ರೆಕಾರ್ಡ್ ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಜೊತೆಗೆ ವಿಡಿಯೋ ಶೀರ್ಷಿಕೆಯು ಮಾತನಾಡುತ್ತಿರುವವರು ಖಾಲಿದ್ ಮೆಹಮೂದ್ ಅಬ್ಬಾಸಿ ಎಂದು ಉಲ್ಲೇಖಿಸಿದೆ.

ಅವರ ಅಧಿಕೃತ ಫೇಸ್‌ಬುಕ್ ಪೇಜ್‌ನಲ್ಲಿ, ಅವರು ಇಸ್ಲಾಮಿಕ್ ವಿದ್ವಾಂಸ ಎಂದು ಹೇಳಿಕೊಂಡಿದ್ದು, ತಂಝೀಮ್-ಎ-ಇಸ್ಲಾಮಿ ಎಂಬ ಸಂಘಟನೆಯೊಂದಿಗೆ 30 ವರ್ಷಗಳ ಕಾಲ ಕೆಲಸ ಮಾಡಿದ ಅವರು 2018ರಲ್ಲಿ ತಂಝೀಮ್-ಎ-ಇಸ್ಲಾಮಿ ತೊರೆದು ಶುಬ್ಬನ್-ಉಲ್-ಮುಸ್ಲಿಮೀನ್ ಅನ್ನು ಸ್ಥಾಪಿಸಿದ್ದಾರೆ ಎಂದು ಫೇಸ್‌ಬುಕ್‌ನಲ್ಲಿ ಉಲ್ಲೇಖವಿದೆ.

ದಿ ಕ್ವಿಂಟ್ ಮಾಧ್ಯಮದ ಜೊತೆಗೆ ಈ ಹಿಂದೆ ಮಾತನಾಡಿದ್ದ ಅಬ್ಬಾಸಿ ಅವರು, ತಾಲಿಬಾನ್‌ ಜೊತೆಗೆ ತನಗೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದರು. ವೈರಲ್ ಆಗಿರುವ ವಿಡಿಯೊ ಹಳೆಯದು ಎಂದಿದ್ದರು. ಅಲ್ಲದೆ, ಖಾಲಿದ್ ಅಬ್ಬಾಸಿ ಅವರು “ಶುಬ್ಬನ್ ಉಲ್ ಮುಸ್ಲಿಮೀನ್” ಹೆಸರಿನ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಾರೆಯಾದರೂ, ಅದು ರಾಜಕೀಯ ಪಕ್ಷವಲ್ಲ ಎಂದು ಅವರು ಸ್ಪಷ್ಟಪಡಿಸಿದ್ದರು.

“ನಾನು ತಾಲಿಬಾನ್‌ನ ಮುಖ್ಯ ಕಾರ್ಯದರ್ಶಿ ಎಂಬುವುದು ಸಂಪೂರ್ಣ ಸುಳ್ಳು ಹೇಳಿಕೆಯಾಗಿದೆ. ತಾಲಿಬಾನ್ ಈಗ ಅಫ್ಘಾನಿಸ್ತಾನದಲ್ಲಿ ಅಧಿಕಾರಕ್ಕೆ ಬಂದಿದೆ, ಆದರೆ ವೈರಲ್ ಕ್ಲಿಪ್‌ನ ಭಾಗವು ಸುಮಾರು 1.5 ವರ್ಷಗಳ ಹಿಂದಿನ ವಿಡಿಯೋ ಆಗಿದೆ. ತಾಲಿಬಾನ್ ಅಥವಾ ಯಾವುದೇ ರಾಜಕೀಯ ಪಕ್ಷದೊಂದಿಗೆ ನನಗೆ ಯಾವುದೇ ಸಂಬಂಧ ಇಲ್ಲ” ಎಂದು ಖಾಲಿದ್ ಮೆಹಮೂದ್ ಅಬ್ಬಾಸಿ ಹೇಳಿದ್ದಾಗಿ ದಿ ಕ್ವಿಂಟ್ ವರದಿ ಹೇಳಿತ್ತು.

ಒಟ್ಟಿನಲ್ಲಿ, ವೈರಲ್ ವಿಡಿಯೋ 1 ಮಾರ್ಚ್ 2019 ರಂದು ರೆಕಾರ್ಡ್ ಮಾಡಲಾದ ಕ್ಲಿಪ್‌ನ ಸಣ್ಣ ಭಾಗವಾಗಿದೆ. ಇದರಲ್ಲಿ ಕಾಣಿಸಿಕೊಂಡಿರುವ ವ್ಯಕ್ತಿ ಖಾಲಿದ್ ಮೆಹಮೂದ್ ಅಬ್ಬಾಸಿ. ಖಾಲಿದ್ ಅವರು ಪಾಕಿಸ್ತಾನದ ಇಸ್ಲಾಮಾಬಾದ್ ಮೂಲದ ಮುಸ್ಲಿಂ ಧಾರ್ಮಿಕ ಬೋಧಕರಾಗಿದ್ದಾರೆ. ಅವರು ಶುಬ್ಬನ್-ಉಲ್-ಮುಸ್ಲಿಮೀನ್ ಎಂಬ ಸಂಘಟನೆ 2018ರಲ್ಲಿ ಸ್ಥಾಪಿಸಿ ಅದರಲ್ಲಿ ಕೆಲಸ ಮಾಡುತ್ತಿದ್ದಾರೆ. ತನಗೂ ತಾಲಿಬಾನ್ ಅಥವಾ ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಬಂಧ ಇಲ್ಲ ಎಂದು ಸ್ವತಃ ಅವರೇ ಈ ಹಿಂದೆಯೇ ಹೇಳಿದ್ದರು. ಆದ್ದರಿಂದ ವೈರಲ್ ವಿಡಿಯೋದಲ್ಲಿ ಖಾಲಿದ್ ಮೆಹಮೂದ್ ಅಬ್ಬಾಸಿ ಅವರನ್ನು ತಾಲಿಬಾನ್‌ನ ಮುಖ್ಯ ಕಾರ್ಯದರ್ಶಿ ಎಂಬಂತೆ ತಪ್ಪಾಗಿ ಬಿಂಬಿಸಿ ಸುಳ್ಳು ಸುದ್ದಿ ಹಬ್ಬಿಸಲಾಗಿದೆ.

ಇದನ್ನೂ ಓದಿ : FACT CHECK : ವೈರಲ್ ಫೋಟೋ ಎಪಿಜೆ ಅಬ್ದುಲ್ ಕಲಾಂ ಅವರ ಬಾಲ್ಯದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...