Homeಫ್ಯಾಕ್ಟ್‌ಚೆಕ್FACT CHECK | ತಾಲಿಬಾನ್ ಕಾರ್ಯದರ್ಶಿ ಆರೆಸ್ಸೆಸ್‌, ಬಿಜೆಪಿಯನ್ನು ಹೊಗಳಿದ್ದಾರೆ ಎಂಬುವುದು ಸುಳ್ಳು

FACT CHECK | ತಾಲಿಬಾನ್ ಕಾರ್ಯದರ್ಶಿ ಆರೆಸ್ಸೆಸ್‌, ಬಿಜೆಪಿಯನ್ನು ಹೊಗಳಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

“ಭಾರತದಲ್ಲಿ ಆರೆಸ್ಸೆಸ್‌ ಮತ್ತು ಬಿಜೆಪಿ ಇರುವವರೆಗೂ ಯಾವುದೇ ದೇಶ ಭಾರತದ ಮೇಲೆ ದಾಳಿ ಮಾಡಲು ಸಾಧ್ಯವಿಲ್ಲ” ಎಂದು ತಾಲಿಬಾನ್ ನಾಯಕ ಹೇಳಿದ್ದಾನೆಂದು ಪ್ರತಿಪಾದಿಸಿ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿರುವ ವ್ಯಕ್ತಿಯು ಗಡ್ಡದಾರಿಯಾಗಿದ್ದು, ಟೋಪಿ ಧರಿಸಿದ್ದಾರೆ. ಅವರ ವೇಷ ಭೂಷಣ ನೋಡಿದರೆ ಅವರು ಮುಸ್ಲಿಂ ವ್ಯಕ್ತಿ ಎಂದು ಹೇಳಬಹುದಾಗಿದೆ.

ANU ANITHA(@Ani_Sanatani) ಎಂಬವರು ಅಕ್ಟೋಬರ್ 13, 2024ರಂದು ಎಕ್ಸ್‌ನಲ್ಲಿ ವೈರಲ್ ವಿಡಿಯೋ ಹಂಚಿಕೊಂಡಿದ್ದಾರೆ. ಈ ಹಿಂದೆ Karnataka BJP Supporters ಎಂಬ ಫೇಸ್‌ಬುಕ್ ಪೇಜ್ ಸೇರಿದಂತೆ ಹಲವೆಡೆ ಈ ವಿಡಿಯೋ ಹಂಚಿಕೊಳ್ಳಲಾಗಿತ್ತು.

“ಭಾರತದಲ್ಲಿ ಬಿಜೆಪಿ ಇರುವವರೆಗೂ ಯಾವುದೇ ದೇಶ ಭಾರತದ ಮೇಲೆ ದಾಳಿ ಮಾಡಲು ಸಾಧ್ಯವಿಲ್ಲ. ಆರೆಸ್ಸೆಸ್‌ ಮತ್ತು ಬಿಜೆಪಿ ಅತ್ಯಂತ ಶಕ್ತಿಶಾಲಿ. ಮೊದಲು ಬಿಜೆಪಿಯನ್ನು ತೊಡೆದುಹಾಕಿ ನಂತರ ಮಾತ್ರ ಭಾರತದ ಮೇಲೆ ಜಯ ಸಿಗುತ್ತದೆ…ಭಯೋತ್ಪಾದಕ ಸಂಘಟನೆ ತಾಲಿಬಾನ್‌ನ ಮುಖ್ಯ ಕಾರ್ಯದರ್ಶಿ ಅಲ್ ಬೇಡರ್ ಇಲ್ಯಾಸಿ ಹೇಳಿಕೆ” ಎಂಬ ಪ್ರತಿಪಾದನೆಯೊಂದಿಗೆ ಅಕ್ಟೋಬರ್ 9, 2023ರಂದು Karnataka BJP Supporters ಫೇಸ್‌ಬುಕ್ ಪೇಜ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಲಾಗಿತ್ತು.

ಇದೇ ಪ್ರತಿಪಾದನೆಯೊಂದಿಗೆ ಹಲವಾರು ಜನರು ಬೇರೆ ಬೇರೆ ಭಾಷೆಯಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಅವುಗಳನ್ನು ಇಲ್ಲಿಇಲ್ಲಿಇಲ್ಲಿಇಲ್ಲಿಇಲ್ಲಿ ನೋಡಬಹುದಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ವಿಡಿಯೋ ಕುರಿತು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ ವಿಡಿಯೋದಲ್ಲಿರುವ ವ್ಯಕ್ತಿ ಪಾಕಿಸ್ತಾನದ ಇಸ್ಲಾಮಾಬಾದ್‌ನ ಖಾಲಿದ್ ಮೆಹಮೂದ್ ಅಬ್ಬಾಸಿ ಎಂಬ ಮುಸ್ಲಿಂ ಧಾರ್ಮಿಕ ವಿದ್ವಾಂಸ ಎಂದು ತಿಳಿದು ಬಂದಿದೆ. ಅವರು ತಾಲಿಬಾನ್‌ನ ಜೊತೆಗೆ ಸಂಬಂಧ ಹೊಂದಿಲ್ಲ.

ಅವರ ಬಗ್ಗೆ ಮತ್ತಷ್ಟು ಮಾಹಿತಿ ಹುಡುಕಾಡಿದಾಗ Khalid Mehmood Abbasi Official ಎಂಬ ಯೂಟ್ಯೂಬ್ ಚಾನೆಲ್‌ ಅವರ ಹೆಸರಿನಲ್ಲಿ ಇರುವುದು ಕಂಡು ಬಂದಿದೆ. ಈ ಚಾನೆಲ್‌ನಲ್ಲಿ ಬಿಜೆಪಿ ಬೆಂಬಲಿಗರು ವೈರಲ್ ಮಾಡಿರುವ ಕ್ಲಿಪ್‌ ಇರುವ ವಿಡಿಯೋ ಕೂಡ ನಮಗೆ ಲಭ್ಯವಾಗಿದೆ. ಈ ವಿಡಿಯೋದಲ್ಲಿ 0.53 ಸೆಕೆಂಡ್‌ನಿಂದ ಕ್ಲಿಪ್ ಕಟ್‌ ಮಾಡಿ ವೈರಲ್ ಮಾಡಲಾಗಿದೆ.

ಈ ವಿಡಿಯೋ 3 ಆಗಸ್ಟ್ 2021ರಂದು ಅಪ್‌ಲೋಡ್ ಮಾಡಲಾಗಿದ್ದು, ಅದನ್ನು 1 ಮಾರ್ಚ್ 2019 ರಂದು ರೆಕಾರ್ಡ್ ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಜೊತೆಗೆ ವಿಡಿಯೋ ಶೀರ್ಷಿಕೆಯು ಮಾತನಾಡುತ್ತಿರುವವರು ಖಾಲಿದ್ ಮೆಹಮೂದ್ ಅಬ್ಬಾಸಿ ಎಂದು ಉಲ್ಲೇಖಿಸಿದೆ.

ಅವರ ಅಧಿಕೃತ ಫೇಸ್‌ಬುಕ್ ಪೇಜ್‌ನಲ್ಲಿ, ಅವರು ಇಸ್ಲಾಮಿಕ್ ವಿದ್ವಾಂಸ ಎಂದು ಹೇಳಿಕೊಂಡಿದ್ದು, ತಂಝೀಮ್-ಎ-ಇಸ್ಲಾಮಿ ಎಂಬ ಸಂಘಟನೆಯೊಂದಿಗೆ 30 ವರ್ಷಗಳ ಕಾಲ ಕೆಲಸ ಮಾಡಿದ ಅವರು 2018ರಲ್ಲಿ ತಂಝೀಮ್-ಎ-ಇಸ್ಲಾಮಿ ತೊರೆದು ಶುಬ್ಬನ್-ಉಲ್-ಮುಸ್ಲಿಮೀನ್ ಅನ್ನು ಸ್ಥಾಪಿಸಿದ್ದಾರೆ ಎಂದು ಫೇಸ್‌ಬುಕ್‌ನಲ್ಲಿ ಉಲ್ಲೇಖವಿದೆ.

ದಿ ಕ್ವಿಂಟ್ ಮಾಧ್ಯಮದ ಜೊತೆಗೆ ಈ ಹಿಂದೆ ಮಾತನಾಡಿದ್ದ ಅಬ್ಬಾಸಿ ಅವರು, ತಾಲಿಬಾನ್‌ ಜೊತೆಗೆ ತನಗೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದರು. ವೈರಲ್ ಆಗಿರುವ ವಿಡಿಯೊ ಹಳೆಯದು ಎಂದಿದ್ದರು. ಅಲ್ಲದೆ, ಖಾಲಿದ್ ಅಬ್ಬಾಸಿ ಅವರು “ಶುಬ್ಬನ್ ಉಲ್ ಮುಸ್ಲಿಮೀನ್” ಹೆಸರಿನ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಾರೆಯಾದರೂ, ಅದು ರಾಜಕೀಯ ಪಕ್ಷವಲ್ಲ ಎಂದು ಅವರು ಸ್ಪಷ್ಟಪಡಿಸಿದ್ದರು.

“ನಾನು ತಾಲಿಬಾನ್‌ನ ಮುಖ್ಯ ಕಾರ್ಯದರ್ಶಿ ಎಂಬುವುದು ಸಂಪೂರ್ಣ ಸುಳ್ಳು ಹೇಳಿಕೆಯಾಗಿದೆ. ತಾಲಿಬಾನ್ ಈಗ ಅಫ್ಘಾನಿಸ್ತಾನದಲ್ಲಿ ಅಧಿಕಾರಕ್ಕೆ ಬಂದಿದೆ, ಆದರೆ ವೈರಲ್ ಕ್ಲಿಪ್‌ನ ಭಾಗವು ಸುಮಾರು 1.5 ವರ್ಷಗಳ ಹಿಂದಿನ ವಿಡಿಯೋ ಆಗಿದೆ. ತಾಲಿಬಾನ್ ಅಥವಾ ಯಾವುದೇ ರಾಜಕೀಯ ಪಕ್ಷದೊಂದಿಗೆ ನನಗೆ ಯಾವುದೇ ಸಂಬಂಧ ಇಲ್ಲ” ಎಂದು ಖಾಲಿದ್ ಮೆಹಮೂದ್ ಅಬ್ಬಾಸಿ ಹೇಳಿದ್ದಾಗಿ ದಿ ಕ್ವಿಂಟ್ ವರದಿ ಹೇಳಿತ್ತು.

ಒಟ್ಟಿನಲ್ಲಿ, ವೈರಲ್ ವಿಡಿಯೋ 1 ಮಾರ್ಚ್ 2019 ರಂದು ರೆಕಾರ್ಡ್ ಮಾಡಲಾದ ಕ್ಲಿಪ್‌ನ ಸಣ್ಣ ಭಾಗವಾಗಿದೆ. ಇದರಲ್ಲಿ ಕಾಣಿಸಿಕೊಂಡಿರುವ ವ್ಯಕ್ತಿ ಖಾಲಿದ್ ಮೆಹಮೂದ್ ಅಬ್ಬಾಸಿ. ಖಾಲಿದ್ ಅವರು ಪಾಕಿಸ್ತಾನದ ಇಸ್ಲಾಮಾಬಾದ್ ಮೂಲದ ಮುಸ್ಲಿಂ ಧಾರ್ಮಿಕ ಬೋಧಕರಾಗಿದ್ದಾರೆ. ಅವರು ಶುಬ್ಬನ್-ಉಲ್-ಮುಸ್ಲಿಮೀನ್ ಎಂಬ ಸಂಘಟನೆ 2018ರಲ್ಲಿ ಸ್ಥಾಪಿಸಿ ಅದರಲ್ಲಿ ಕೆಲಸ ಮಾಡುತ್ತಿದ್ದಾರೆ. ತನಗೂ ತಾಲಿಬಾನ್ ಅಥವಾ ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಬಂಧ ಇಲ್ಲ ಎಂದು ಸ್ವತಃ ಅವರೇ ಈ ಹಿಂದೆಯೇ ಹೇಳಿದ್ದರು. ಆದ್ದರಿಂದ ವೈರಲ್ ವಿಡಿಯೋದಲ್ಲಿ ಖಾಲಿದ್ ಮೆಹಮೂದ್ ಅಬ್ಬಾಸಿ ಅವರನ್ನು ತಾಲಿಬಾನ್‌ನ ಮುಖ್ಯ ಕಾರ್ಯದರ್ಶಿ ಎಂಬಂತೆ ತಪ್ಪಾಗಿ ಬಿಂಬಿಸಿ ಸುಳ್ಳು ಸುದ್ದಿ ಹಬ್ಬಿಸಲಾಗಿದೆ.

ಇದನ್ನೂ ಓದಿ : FACT CHECK : ವೈರಲ್ ಫೋಟೋ ಎಪಿಜೆ ಅಬ್ದುಲ್ ಕಲಾಂ ಅವರ ಬಾಲ್ಯದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...