Homeಫ್ಯಾಕ್ಟ್‌ಚೆಕ್FACT CHECK : ನೀಟ್ ಅಕ್ರಮದ ಆರೋಪಿಗಳನ್ನು ಕಾಂಗ್ರೆಸ್ ಕಚೇರಿಯಿಂದ ಬಂಧಿಸಲಾಗಿದೆ ಎಂಬುವುದು ಸುಳ್ಳು

FACT CHECK : ನೀಟ್ ಅಕ್ರಮದ ಆರೋಪಿಗಳನ್ನು ಕಾಂಗ್ರೆಸ್ ಕಚೇರಿಯಿಂದ ಬಂಧಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ದೇಶದಾದ್ಯಂತ ಸುದ್ದಿಯಲ್ಲಿರುವ ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್-ಯುಜಿ ಅಕ್ರಮದ ಆರೋಪಿಗಳನ್ನು ಜಾರ್ಖಂಡ್‌ನ ಕಾಂಗ್ರೆಸ್‌ ಕಚೇರಿಯಿಂದ ಬಂಧಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹಬ್ಬಿದೆ.

ಮೂರ್ನಾಲ್ಕು ಮಂದಿಯನ್ನು ಅಧಿಕಾರಿಗಳು ಕರೆದುಕೊಂಡು ಹೋಗುತ್ತಿರುವ ಎಎನ್‌ಐ ಸುದ್ದಿ ಸಂಸ್ಥೆಯ ಲೋಗೋ ಇರುವ ವಿಡಿಯೋವೊಂದನ್ನು ಹಂಚಿಕೊಂಡಿರುವ ಅನೇಕರು “ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ 6 ಆರೋಪಿಗಳನ್ನು ಬಿಹಾರ ಪೊಲೀಸರು ಜಾರ್ಖಂಡ್‌ನ ದಿಯೋಘರ್‌ನಲ್ಲಿರುವ ಕಾಂಗ್ರೆಸ್ ಕಚೇರಿಯಿಂದ ಬಂಧಿಸಿದ್ದಾರೆ. ಕಾಂಗ್ರೆಸ್ ನೀಟ್ ಆಕಾಂಕ್ಷಿಗಳನ್ನು ಭೇಟಿಯಾಗಿ ತನ್ನ ಮೊಸಳೆ ಕಣ್ಣೀರಿನ ಮೂಲಕ ಪ್ರಚೋದಿಸುತ್ತಿದೆ” ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಗೂಗಲ್‌ ರಿವರ್ಸ್ ಇಮೇಜ್‌ನಲ್ಲಿ ವಿಡಿಯೋದ ಸ್ಕ್ರೀನ್ ಶಾಟ್ ಹಾಕಿ ಸರ್ಚ್‌ ಮಾಡಿದಾಗ 23 ಜೂನ್ 2024 ರಂದು ಎಎನ್‌ಐ ತನ್ನ ಅಧಿಕೃತ ಎಕ್ಸ್‌ ಹ್ಯಾಂಡಲ್‌ನಿಂದ ಹಂಚಿಕೊಳ್ಳಲಾದ ಪೋಸ್ಟ್‌ವೊಂದು ಲಭ್ಯವಾಗಿದೆ.

ವಿಡಿಯೋ ಜೊತೆಗೆ ” ನೀಟ್-ಯುಜಿ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಯ ನಂತರ ಪಾಟ್ನಾದ ಎಲ್‌ಎನ್‌ಜೆಪಿ ಆಸ್ಪತ್ರೆಯಿಂದ ಕರೆದೊಯ್ಯಲಾಯಿತು. ಬಿಹಾರ ಪೊಲೀಸರು ಆರೋಪಿಗಳನ್ನು ಜೂನ್ 21 ರಂದು ಜಾರ್ಖಂಡ್‌ನ ದಿಯೋಘರ್‌ನಿಂದ ಬಂಧಿಸಿದ್ದರು” ಎಂದು ಎಎನ್‌ಎ ಬರೆದುಕೊಂಡಿತ್ತು.

ವೈರಲ್ ವಿಡಿಯೋ ಮತ್ತು ಎಎನ್‌ಐ ಹಂಚಿಕೊಂಡಿರುವ ವಿಡಿಯೋಗಳು ಒಂದೇ ಆಗಿರುವುದರಿಂದ ಸುಳ್ಳು ಸುದ್ದಿ ಹಬ್ಬಿಸಿರುವುದು ನಮಗೆ ಗೊತ್ತಾಗಿದೆ.

ಮೇ 5, 2024 ರಂದು ದೇಶದಾದ್ಯಂತ ನಡೆದ ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ -ಯುಜಿಯ ಫಲಿತಾಂಶ ಜೂನ್ 4, 2024 ರಂದು ಪ್ರಕಟಗೊಂಡಿತ್ತು. ಈ ಬೆನ್ನಲ್ಲೇ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿತ್ತು. ದೇಶದ ಹಲವೆಡೆ ಪ್ರತಿಭಟನೆಗಳು ನಡೆದಿತ್ತು. ಪ್ರತಿಭಟನೆಗಳು ತೀವ್ರಗೊಳ್ಳುತ್ತಿದ್ದಂತೆ ಕೇಂದ್ರ ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು.

ಈ ನಡುವೆ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 21ರಂದು ಬಿಹಾರ ಪೊಲೀಸರು ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯ ಆರು ಮಂದಿಯನ್ನು ಬಂಧಿಸಿದ್ದರು. ದಿಯೋಘರ್ ಜಿಲ್ಲೆಯ ದೇವಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ಏಮ್ಸ್-ದಿಯೋಘರ್ ಬಳಿಯ ಮನೆಯೊಂದರಿಂದ ಶಂಕಿತರನ್ನು ಬಂಧಿಸಲಾಗಿತ್ತು.

ಬಂಧಿತರನ್ನು ಬಿಹಾರದ ಪಾಟ್ನಾಗೆ ಕರೆತಂದಿದ್ದ ಪೊಲೀಸರು, ಅವರನ್ನು ಎಲ್‌ಎನ್‌ಜೆಪಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದರು. ತಪಾಸಣೆ ಬಳಿಕ ಬಂಧಿತರನ್ನು ಪೊಲೀಸರು ಆಸ್ಪತ್ರೆಯಿಂದ ಕರೆದೊಯ್ಯುವ ವಿಡಿಯೋವನ್ನು ಎಎನ್‌ಐ ಪೋಸ್ಟ್‌ ಮಾಡಿತ್ತು.

ಆ ವಿಡಿಯೋವನ್ನು ಕಾಂಗ್ರೆಸ್ ಕಚೇರಿಯಿಂದ ನೀಟ್ ಅಕ್ರಮದ ಆರೋಪಿಗಳನ್ನು ಬಂಧಿಸಲಾಗಿದೆ ಎಂಬ ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗ್ತಿದೆ.

ಇದನ್ನೂ ಓದಿ : FACT CHECK ಸಂಸತ್‌ನಲ್ಲಿ ರಾಷ್ಟ್ರಗೀತೆ ನುಡಿಸುವ ವೇಳೆ ರಾಹುಲ್ ಗಾಂಧಿ ಹಾಜರಿರಲಿಲ್ಲ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...