Homeಫ್ಯಾಕ್ಟ್‌ಚೆಕ್FACT CHECK : ಬ್ಯಾಂಕ್ ಮ್ಯಾನೇಜರ್‌ಗೆ ಬಿಜೆಪಿ ಮುಖಂಡ ಕಪಾಳಮೋಕ್ಷ ಮಾಡಿದ್ದಾರೆ ಎಂಬುವುದು ಸುಳ್ಳು

FACT CHECK : ಬ್ಯಾಂಕ್ ಮ್ಯಾನೇಜರ್‌ಗೆ ಬಿಜೆಪಿ ಮುಖಂಡ ಕಪಾಳಮೋಕ್ಷ ಮಾಡಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ವ್ಯಕ್ತಿಯೊಬ್ಬ ಬ್ಯಾಂಕ್ ಮ್ಯಾನೇಜರ್‌ ಒಬ್ಬರಿಗೆ ಕಪಾಳಮೋಕ್ಷ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ರವಿಂದ್ರ ಕಪೂರ್ ಎಂಬ ಎಕ್ಸ್‌ ಬಳಕೆದಾರರೊಬ್ಬರು ವಿಡಿಯೋ ಹಂಚಿಕೊಂಡಿದ್ದು, “ಬಿಜೆಪಿ ಮುಖಂಡರೊಬ್ಬರು ಸಾರ್ವಜನಿಕ ವಲಯದ ಬ್ಯಾಂಕ್ ಮ್ಯಾನೇಜರ್‌ಗೆ ಕಪಾಳಮೋಕ್ಷ ಮಾಡುವ ಧೈರ್ಯ ತೋರಿದ್ದಾರೆ ಎಂದು ಬರೆದುಕೊಂಡಿದ್ದಾರೆ. 

“ದುರಹಂಕಾರಿ ಬಿಜೆಪಿಗೆ ಬೇಗ ತಕ್ಕ ಪಾಠ ಕಲಿಸಬೇಕು. ಎಂತಹ ಗೂಂಡಾಗಿರಿ ನಡೆಯುತ್ತಿದೆ, ಬಿಜೆಪಿಯವರು ನಾಚಿಕೆಯಿಲ್ಲದೆ ಬ್ಯಾಂಕ್ ಮ್ಯಾನೇಜರ್ ಮೇಲೆ ಕೈ ಎತ್ತಿದ್ದಾರೆ. ಈ ನಾಯಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಶಾಯರ್ ಗುರೂಜಿ ಹರಿಯಾಣ ಎಂಬ ಎಕ್ಸ್‌ ಖಾತೆಯಯಲ್ಲಿ ಬರೆದುಕೊಳ್ಳಲಾಗಿದೆ. 

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, 13 ಆಗಸ್ಟ್‌ 2024 ರಂದು ಪುಣೆ ಪಲ್ಸ್‌ ಎಂಬ ಮಾಧ್ಯಮ ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ.

ಪುಣೆ ಪಲ್ಸ್‌ ವರದಿಯ ಪ್ರಕಾರ, ಬ್ಯಾಂಕ್ ಮ್ಯಾನೇಜರ್ ಮೇಲೆ ‘ಸ್ವಾಭಿಮಾನಿ’ ಗುಂಪಿನ ಸದಸ್ಯರು ಹಲ್ಲೆ ನಡೆಸಿದ್ದಾರೆ. ಬ್ಯಾಂಕ್ ಮ್ಯಾನೇಜರ್ ರೈತರಿಗೆ ನೀಡುವ ವಿವಿಧ ಸಬ್ಸಿಡಿಗಳನ್ನು ಸ್ಥಗಿತಗೊಳಿಸಿದ್ದಾರೆ ಎಂದು ಆರೋಪಿಸಿ ಸ್ವಾಭಿಮಾನಿ ಶೇತ್ಕರಿ ಸಂಘಟನೆಯ ಯುವ ಜಿಲ್ಲಾಧ್ಯಕ್ಷರು ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಸ್ವಾಭಿಮಾನಿ ಶೆಟ್ಕರಿ ಸಂಘಟನೆಯು ಮಹಾರಾಷ್ಟ್ರದ ಕೊಲ್ಲಾಪುರ ಮೂಲದ ರೈತ ಸಂಘವಾಗಿದೆ. ಇದನ್ನು ಸಂಸದ ರಾಜು ಶೆಟ್ಟಿ ಅವರು ಸ್ಥಾಪಿಸಿದ್ದಾರೆ.

ದಿ ಟೈಮ್ಸ್‌ ಆಫ್ ಇಂಡಿಯಾ ವರದಿಯ ಪ್ರಕಾರ, ಸ್ವಾಭಿಮಾನಿ ಶೇತ್ಕರಿ ಸಂಘಟನೆಯ ಯುವ ಜಿಲ್ಲಾಧ್ಯಕ್ಷರು ಬ್ಯಾಂಕ್ ಮ್ಯಾನೇಜರ್ ಹಲ್ಲೆ ನಡೆಸಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖ ಮಾಡಿದೆ. ರೈತರು, ಹಾಲು, ವಸತಿ, ವಿಧವೆಯರು ಮತ್ತು ನಿರ್ಗತಿಕರಿಗೆ ನೆರವು ಸೇರಿದಂತೆ ವಿವಿಧ ಸಬ್ಸಿಡಿಗಳನ್ನು ಬ್ಯಾಂಕ್ ಮ್ಯಾನೇಜರ್ ಸ್ಥಗಿತಗೊಳಿಸಿದ್ದಾರೆ ಎಂದು ಗುಂಪು ಆರೋಪಿಸಿದೆ. ಇಂದು ಸ್ವಾಭಿಮಾನಿ ಶೆಟ್ಕರಿ ಸಂಘಟನೆಯ ಸದಸ್ಯರು ಬ್ಯಾಂಕ್‌ಗೆ ಮುತ್ತಿಗೆ ಹಾಕಿ ಗದ್ದಲ ಎಬ್ಬಿಸಿ ಪ್ರತಿಭಟನೆ ನಡೆಸಿದರು ಎಂದು ವರದಿಯಾಗಿದೆ.

ಹಾಗಾಗಿ ವೈರಲ್ ವಿಡಿಯೋದಲ್ಲಿಹಂಚಿಕೊಂಡಂತೆ ಬ್ಯಾಂಕ್ ಮ್ಯಾನೆಜರ್‌ ಮೇಲೆ ಹಲ್ಲೆ ನಡೆಸಿರುವುದು ಬಿಜೆಪಿ ನಾಯಕರಲ್ಲ ಎಂಬುದು ಸ್ಪಷ್ಟವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಬ್ಯಾಂಕ್ ಮ್ಯಾನೇಜರ್‌ಗೆ ಕಪಾಳಮೋಕ್ಷ ಮಾಡಿದವರು ಸ್ವಾಭಿಮಾನಿ ಶೆಟ್ಕರಿ ಸಂಘಟನೆಯ ಯುವ ಜಿಲ್ಲಾಧ್ಯಕ್ಷರೇ ಹೊರತು ಬಿಜೆಪಿ ನಾಯಕರಲ್ಲ ಎಂಬುದು  ಸ್ಪಷ್ಟವಾಗಿದೆ. ಆದ್ದರಿಂದ, ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಪ್ರತಿಪಾದನೆಯೊಂದಿಗೆ ಬ್ಯಾಂಕ್ ಮ್ಯಾನೇಜರ್‌ಗೆ ಕಪಾಳಮೋಕ್ಷ ಮಾಡಿದವರು  ಬಿಜೆಪಿ ನಾಯಕರು  ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : FACT CHECK : ಪ್ರತಿಭಟನೆಯ ವಿಡಿಯೋಗೆ ಕೋಮು ಬಣ್ಣ ಬಳಿದ ಮಾಧ್ಯಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...