Homeಫ್ಯಾಕ್ಟ್‌ಚೆಕ್FACT CHECK : ಬ್ಯಾಂಕ್ ಮ್ಯಾನೇಜರ್‌ಗೆ ಬಿಜೆಪಿ ಮುಖಂಡ ಕಪಾಳಮೋಕ್ಷ ಮಾಡಿದ್ದಾರೆ ಎಂಬುವುದು ಸುಳ್ಳು

FACT CHECK : ಬ್ಯಾಂಕ್ ಮ್ಯಾನೇಜರ್‌ಗೆ ಬಿಜೆಪಿ ಮುಖಂಡ ಕಪಾಳಮೋಕ್ಷ ಮಾಡಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ವ್ಯಕ್ತಿಯೊಬ್ಬ ಬ್ಯಾಂಕ್ ಮ್ಯಾನೇಜರ್‌ ಒಬ್ಬರಿಗೆ ಕಪಾಳಮೋಕ್ಷ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ರವಿಂದ್ರ ಕಪೂರ್ ಎಂಬ ಎಕ್ಸ್‌ ಬಳಕೆದಾರರೊಬ್ಬರು ವಿಡಿಯೋ ಹಂಚಿಕೊಂಡಿದ್ದು, “ಬಿಜೆಪಿ ಮುಖಂಡರೊಬ್ಬರು ಸಾರ್ವಜನಿಕ ವಲಯದ ಬ್ಯಾಂಕ್ ಮ್ಯಾನೇಜರ್‌ಗೆ ಕಪಾಳಮೋಕ್ಷ ಮಾಡುವ ಧೈರ್ಯ ತೋರಿದ್ದಾರೆ ಎಂದು ಬರೆದುಕೊಂಡಿದ್ದಾರೆ. 

“ದುರಹಂಕಾರಿ ಬಿಜೆಪಿಗೆ ಬೇಗ ತಕ್ಕ ಪಾಠ ಕಲಿಸಬೇಕು. ಎಂತಹ ಗೂಂಡಾಗಿರಿ ನಡೆಯುತ್ತಿದೆ, ಬಿಜೆಪಿಯವರು ನಾಚಿಕೆಯಿಲ್ಲದೆ ಬ್ಯಾಂಕ್ ಮ್ಯಾನೇಜರ್ ಮೇಲೆ ಕೈ ಎತ್ತಿದ್ದಾರೆ. ಈ ನಾಯಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಶಾಯರ್ ಗುರೂಜಿ ಹರಿಯಾಣ ಎಂಬ ಎಕ್ಸ್‌ ಖಾತೆಯಯಲ್ಲಿ ಬರೆದುಕೊಳ್ಳಲಾಗಿದೆ. 

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, 13 ಆಗಸ್ಟ್‌ 2024 ರಂದು ಪುಣೆ ಪಲ್ಸ್‌ ಎಂಬ ಮಾಧ್ಯಮ ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ.

ಪುಣೆ ಪಲ್ಸ್‌ ವರದಿಯ ಪ್ರಕಾರ, ಬ್ಯಾಂಕ್ ಮ್ಯಾನೇಜರ್ ಮೇಲೆ ‘ಸ್ವಾಭಿಮಾನಿ’ ಗುಂಪಿನ ಸದಸ್ಯರು ಹಲ್ಲೆ ನಡೆಸಿದ್ದಾರೆ. ಬ್ಯಾಂಕ್ ಮ್ಯಾನೇಜರ್ ರೈತರಿಗೆ ನೀಡುವ ವಿವಿಧ ಸಬ್ಸಿಡಿಗಳನ್ನು ಸ್ಥಗಿತಗೊಳಿಸಿದ್ದಾರೆ ಎಂದು ಆರೋಪಿಸಿ ಸ್ವಾಭಿಮಾನಿ ಶೇತ್ಕರಿ ಸಂಘಟನೆಯ ಯುವ ಜಿಲ್ಲಾಧ್ಯಕ್ಷರು ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಸ್ವಾಭಿಮಾನಿ ಶೆಟ್ಕರಿ ಸಂಘಟನೆಯು ಮಹಾರಾಷ್ಟ್ರದ ಕೊಲ್ಲಾಪುರ ಮೂಲದ ರೈತ ಸಂಘವಾಗಿದೆ. ಇದನ್ನು ಸಂಸದ ರಾಜು ಶೆಟ್ಟಿ ಅವರು ಸ್ಥಾಪಿಸಿದ್ದಾರೆ.

ದಿ ಟೈಮ್ಸ್‌ ಆಫ್ ಇಂಡಿಯಾ ವರದಿಯ ಪ್ರಕಾರ, ಸ್ವಾಭಿಮಾನಿ ಶೇತ್ಕರಿ ಸಂಘಟನೆಯ ಯುವ ಜಿಲ್ಲಾಧ್ಯಕ್ಷರು ಬ್ಯಾಂಕ್ ಮ್ಯಾನೇಜರ್ ಹಲ್ಲೆ ನಡೆಸಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖ ಮಾಡಿದೆ. ರೈತರು, ಹಾಲು, ವಸತಿ, ವಿಧವೆಯರು ಮತ್ತು ನಿರ್ಗತಿಕರಿಗೆ ನೆರವು ಸೇರಿದಂತೆ ವಿವಿಧ ಸಬ್ಸಿಡಿಗಳನ್ನು ಬ್ಯಾಂಕ್ ಮ್ಯಾನೇಜರ್ ಸ್ಥಗಿತಗೊಳಿಸಿದ್ದಾರೆ ಎಂದು ಗುಂಪು ಆರೋಪಿಸಿದೆ. ಇಂದು ಸ್ವಾಭಿಮಾನಿ ಶೆಟ್ಕರಿ ಸಂಘಟನೆಯ ಸದಸ್ಯರು ಬ್ಯಾಂಕ್‌ಗೆ ಮುತ್ತಿಗೆ ಹಾಕಿ ಗದ್ದಲ ಎಬ್ಬಿಸಿ ಪ್ರತಿಭಟನೆ ನಡೆಸಿದರು ಎಂದು ವರದಿಯಾಗಿದೆ.

ಹಾಗಾಗಿ ವೈರಲ್ ವಿಡಿಯೋದಲ್ಲಿಹಂಚಿಕೊಂಡಂತೆ ಬ್ಯಾಂಕ್ ಮ್ಯಾನೆಜರ್‌ ಮೇಲೆ ಹಲ್ಲೆ ನಡೆಸಿರುವುದು ಬಿಜೆಪಿ ನಾಯಕರಲ್ಲ ಎಂಬುದು ಸ್ಪಷ್ಟವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಬ್ಯಾಂಕ್ ಮ್ಯಾನೇಜರ್‌ಗೆ ಕಪಾಳಮೋಕ್ಷ ಮಾಡಿದವರು ಸ್ವಾಭಿಮಾನಿ ಶೆಟ್ಕರಿ ಸಂಘಟನೆಯ ಯುವ ಜಿಲ್ಲಾಧ್ಯಕ್ಷರೇ ಹೊರತು ಬಿಜೆಪಿ ನಾಯಕರಲ್ಲ ಎಂಬುದು  ಸ್ಪಷ್ಟವಾಗಿದೆ. ಆದ್ದರಿಂದ, ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಪ್ರತಿಪಾದನೆಯೊಂದಿಗೆ ಬ್ಯಾಂಕ್ ಮ್ಯಾನೇಜರ್‌ಗೆ ಕಪಾಳಮೋಕ್ಷ ಮಾಡಿದವರು  ಬಿಜೆಪಿ ನಾಯಕರು  ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : FACT CHECK : ಪ್ರತಿಭಟನೆಯ ವಿಡಿಯೋಗೆ ಕೋಮು ಬಣ್ಣ ಬಳಿದ ಮಾಧ್ಯಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...