Homeಫ್ಯಾಕ್ಟ್‌ಚೆಕ್Fact Check: ಹಿಂದೂ ಧರ್ಮ ಬೋಧಿಸದಂತೆ ಕಾಂಗ್ರೆಸ್ ತಡೆ ಹಿಡಿದಿದೆ ಎಂಬುವುದು ಸುಳ್ಳು

Fact Check: ಹಿಂದೂ ಧರ್ಮ ಬೋಧಿಸದಂತೆ ಕಾಂಗ್ರೆಸ್ ತಡೆ ಹಿಡಿದಿದೆ ಎಂಬುವುದು ಸುಳ್ಳು

- Advertisement -
- Advertisement -

“ಸಂವಿಧಾನದ ಮೂಲಕ ಕಾಂಗ್ರೆಸ್ ಭಾರತವನ್ನು ಮುಸ್ಲಿಂ ರಾಷ್ಟ್ರವನ್ನಾಗಿ ಮಾಡಿತ್ತು. ಆದರೆ, ಅದನ್ನು ಘೋಷಿಸಲು ಆಗಿಲ್ಲ. ಕಾಂಗ್ರೆಸ್‌ನವರು ಆರ್ಟಿಕಲ್ 25ರ ಮೂಲಕ ಮತಾಂತರವನ್ನು ಕಾನೂನು ಬದ್ದಗೊಳಿಸಿದರು. ಆರ್ಟಿಕಲ್ 28ರ ಮೂಲಕ ಹಿಂದೂಗಳು ಧಾರ್ಮಿಕ ಶಿಕ್ಷಣದಿಂದ ವಂಚಿತರಾಗುವಂತೆ ಮಾಡಿದರು. ಆರ್ಟಿಕಲ್ 28ರ ಪ್ರಕಾರ ಹಿಂದೂ ಧರ್ಮವನ್ನು ಬೋಧಿಸುವಂತಿಲ್ಲ. ಆದರೆ, ಆರ್ಟಿಕಲ್ 30ರ ಮೂಲಕ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ತಮ್ಮ ಧಾರ್ಮಿಕ ಶಿಕ್ಷಣ ಪಡೆಯಲು ಅನುಮತಿಸಲಾಗಿದೆ” ಎಂದು ಪ್ರತಿಪಾದಿಸಲಾದ ಸಂದೇಶವೊಂದು ವಾಟ್ಸಾಪ್‌ನಲ್ಲಿ ಹರಿದಾಡುತ್ತಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಾಟ್ಸಾಪ್ ಸಂದೇಶದಲ್ಲಿ ಹೇಳಿರುವುದು ನಿಜಾನಾ? ಎಂದು ನಾನುಗೌರಿ.ಕಾಂ ಸತ್ಯಾ ಸತ್ಯತೆ ಪರಿಶೀಲನೆ ನಡೆಸಿದೆ.

ಇದಕ್ಕಾಗಿ ನಾವು ಸಂದೇಶದಲ್ಲಿ ಹೇಳಿರುವ ಸಂವಿಧಾನ ಆರ್ಟಿಕಲ್‌ಗಳು ಏನು ಹೇಳಿವೆ ಎಂದು ಪರಿಶೀಲಿಸಿದ್ದೇವೆ.

ಸಂವಿಧಾನದ 25ನೇ ವಿಧಿಯು ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಕುರಿತು ಹೇಳುತ್ತದೆ. ಇದು ಭಾರತದ ಎಲ್ಲಾ ವ್ಯಕ್ತಿಗಳಿಗೆ ಧಾರ್ಮಿಕ ಸ್ವಾತಂತ್ರ್ಯವನ್ನು ಖಾತರಿಪಡಿಸುತ್ತದೆ ಮತ್ತು ಭಾರತದ ಎಲ್ಲಾ ವ್ಯಕ್ತಿಗಳು ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ, ಆರೋಗ್ಯ ಮತ್ತು ಇತರ ನಿಬಂಧನೆಗಳಿಗೆ ಒಳಪಟ್ಟಿರುತ್ತಾರೆ ಎಂದು ಹೇಳುತ್ತದೆ. ಭಾರತದ ನಾಗರಿಕರು ಆತ್ಮಸಾಕ್ಷಿಯ ಸ್ವಾತಂತ್ರ್ಯಕ್ಕೆ ಸಮಾನವಾಗಿ ಅರ್ಹರಾಗಿರುತ್ತಾರೆ. ಧರ್ಮವನ್ನು ಮುಕ್ತವಾಗಿ ಪ್ರತಿಪಾದಿಸುವ, ಅಭ್ಯಾಸ ಮಾಡುವ ಮತ್ತು ಪ್ರಚಾರ ಮಾಡುವ ಹಕ್ಕನ್ನು ಈ ವಿಧಿ ನೀಡಿದೆ.

ಆರ್ಟಿಕಲ್ 25 ಭಾರತೀಯರಿಗೆ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ನೀಡಿದೆಯೇ ಹೊರತು, ಇದು ಮತಾಂತರವನ್ನು ಕಾನೂನು ಬದ್ದಗೊಳಿಸಿದ ವಿಧಿಯಲ್ಲ. ಧಾರ್ಮಿಕ ಸ್ವಾತಂತ್ರ್ಯ ಎನ್ನುವುದು ಪ್ರತಿಯೊಬ್ಬ ಭಾರತೀಯನ ಮೂಲಭೂತ ಹಕ್ಕಾಗಿದೆ.

ಸಂವಿಧಾನದ 28ನೇ ವಿಧಿಯು ಸರ್ಕಾರದ ಅನುದಾನದಲ್ಲಿ ನಿರ್ವಹಿಸಲ್ಪಡುವ ಯಾವುದೇ ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಸೂಚನೆಗಳನ್ನು ನೀಡಲಾಗುವುದಿಲ್ಲ. ಇದು ಸರ್ಕಾರದಿಂದ ಧನಸಹಾಯ ಪಡೆದ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳು ಜಾತ್ಯತೀತವಾಗಿ ಉಳಿಯುತ್ತದೆ ಮತ್ತು ಧಾರ್ಮಿಕ ಬೋಧನೆಗಳನ್ನು ನೀಡುವುದಿಲ್ಲ ಎಂದು ಖಚಿತಪಡಿಸುತ್ತದೆ.

ಇನ್ನು ಸರ್ಕಾರದ ಅನುದಾನದಲ್ಲಿ ನಿರ್ವಹಿಸಲ್ಪಡೆ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಶಿಕ್ಷಣವನ್ನು ಅನುಮತಿಸಲಾಗಿದೆ. ಆದರೆ, ಇಲ್ಲಿ ವಿದ್ಯಾರ್ಥಿಗಳು ಅಪ್ರಾಪ್ತರಾಗದ್ದರೆ ಅವರ ಪೋಷಕರ ಒಪ್ಪಿಗೆ ಅಗತ್ಯವಿದೆ. ಈ ಸಂಸ್ಥೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಧಾರ್ಮಿಕ ಬೋಧನೆಯನ್ನು ಸ್ವೀಕರಿಸಬೇಕೆ ಅಥವಾ ಬೇಡವೇ ಎಂಬುದನ್ನು ಆಯ್ಕೆ ಮಾಡುವ ಹಕ್ಕನ್ನು ಹೊಂದಿರುತ್ತಾರೆ.
ರಾಜ್ಯದ ನಿಧಿಯಿಂದ ಸಂಪೂರ್ಣವಾಗಿ ನಿರ್ವಹಿಸಲ್ಪಡದ ಶಿಕ್ಷಣ ಸಂಸ್ಥೆಗಳಲ್ಲಿ, ನಿರ್ದಿಷ್ಟ ಧರ್ಮಕ್ಕೆ ಸೇರಿದ ವಿದ್ಯಾರ್ಥಿಗಳು ಸಂಸ್ಥೆಯು ನಡೆಸುವ ಧಾರ್ಮಿಕ ಪೂಜೆ ಅಥವಾ ಧಾರ್ಮಿಕ ಸೂಚನೆಗೆ ಹಾಜರಾಗುವ ಹಕ್ಕನ್ನು ಹೊಂದಿರುತ್ತಾರೆ.

ಸಂವಿಧಾನದ 30ನೇ ವಿಧಿಯು ಅಲ್ಪಸಂಖ್ಯಾತರಿಗೆ ತಮ್ಮ ಆಯ್ಕೆಯ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲು ಮತ್ತು ನಿರ್ವಹಿಸುವ ಹಕ್ಕನ್ನು ನೀಡುತ್ತದೆ. ಈ ಹಕ್ಕನ್ನು ಧರ್ಮ ಅಥವಾ ಭಾಷೆಯ ಆಧಾರದ ಮೇಲೆ ಅಲ್ಪಸಂಖ್ಯಾತರಿಗೆ ನೀಡಲಾಗಿದೆ ಮತ್ತು ಅವರ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಹಿತಾಸಕ್ತಿಗಳನ್ನು ರಕ್ಷಿಸಲು ಉದ್ದೇಶಿಸಲಾಗಿದೆ. ಈ ಶಿಕ್ಷಣ ಸಂಸ್ಥೆಗಳಿಗೆ ನೆರವು ನೀಡುವಲ್ಲಿ ರಾಜ್ಯವು ಯಾವುದೇ ಶಿಕ್ಷಣ ಸಂಸ್ಥೆಯನ್ನು ಧರ್ಮ ಅಥವಾ ಭಾಷೆಯ ಆಧಾರದ ಮೇಲೆ ಅಲ್ಪಸಂಖ್ಯಾತರ ನಿರ್ವಹಣೆಗೆ ಒಳಪಟ್ಟಿದೆ ಎಂಬ ಕಾರಣಕ್ಕೆ ತಾರತಮ್ಯ ಮಾಡಬಾರದು. ಎಂದು ತಿಳಿಸುತ್ತದೆ.

ಅಲ್ಪ ಸಂಖ್ಯಾತರಿಗೆ ಅವರ ಆಯ್ಕೆಯ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲು ಅವಕಾಶ ನೀಡಿರುವುದು, ಅಲ್ಪ ಸಂಖ್ಯಾತರ ಶೈಕ್ಷಣಿಕೆ, ಸಾಮಾಜಿಕ ಅಭಿವೃದ್ದಿಗಾಗಿ ಆಗಿದೆ. ಅಲ್ಲದೆ, ಅಲ್ಪ ಸಂಖ್ಯಾತರ ಧಾರ್ಮಿಕ ಶಿಕ್ಷಣವನ್ನು ಹರಡಲು ಅಲ್ಲ. ಇಲ್ಲಿ ಅಲ್ಪ ಸಂಖ್ಯಾತರು ಎಂದರೆ ಕೇವಲ ಮುಸ್ಲಿಮರು ಎಂಬುವುದು ತಪ್ಪು ಕ್ರೈಸ್ತರು, ಬೌದ್ಧರು, ಜೈನರು ಮತ್ತು ಪಾರ್ಸಿಗಳು ಕೂಡ ಅಲ್ಪ ಸಂಖ್ಯಾತರಾಗಿದ್ದಾರೆ.

ಹಾಗಾಗಿ, ಆರ್ಟಿಕಲ್ 25, 28, 30ರ ಮೂಲಕ ಕಾಂಗ್ರೆಸ್ ಮತಾಂತರವನ್ನು ಕಾನೂನು ಬದ್ದಗೊಳಿಸಿದೆ. ಹಿಂದೂಗಳನ್ನು ಧಾರ್ಮಿಕ ಶಿಕ್ಷಣದಿಂದ ವಂಚಿತರಾಗುವಂತೆ ಮಾಡಿದೆ. ಹಿಂದೂ ಧರ್ಮದ ಬಗ್ಗೆ ಭೋದಿಸುವಂತಿಲ್ಲ ಎಂಬುದು ಸುಳ್ಳು ಪ್ರತಿಪಾದನೆಯಾಗಿದೆ.

ನಾವು ಮೇಲೆ ಉಲ್ಲೇಖಿಸಿದ ಪುರಾವೆಗಳನ್ನು ಹೊರತುಪಡಿಸಿ ನೋಡುವುದಾದರೆ, ವಾಟ್ಸಾಪ್‌ನಲ್ಲಿ ಹರಿದಾಡುತ್ತಿರುವ ಸಂದೇಶ ಒಂದು ರೀತಿ ಬಾಲಿಶತನದಿಂದ ಕೂಡಿದೆ ಎಂದು ಹೇಳಬಹುದು. ಯಾಕೆಂದರೆ, ಪ್ರತಿಯೊಬ್ಬ ಭಾರತೀಯ ಪ್ರಜೆಗೂ ಇಲ್ಲಿರುವ ಪ್ರಸ್ತುತ ಕಾನೂನುಗಳ ಬಗ್ಗೆ ಸಾಮಾನ್ಯ ಅರಿವಿದೆ. ಇಲ್ಲಾ ಅಂದರೆ, ಸುಮ್ಮನೆ ಗೂಗಲ್ ಮೂಲಕ ಸರ್ಚ್ ಮಾಡಿದರೆ ಮೇಲೆ ಉಲ್ಲೇಖಿಸಿದ ಆರ್ಟಿಕಲ್‌ಗಳ ಬಗ್ಗೆ ಎಷ್ಟು ಮಾಹಿತಿ ಬೇಕಾದರು ಹಲವು ಮೂಲಗಳಲ್ಲಿ ಲಭ್ಯವಿದೆ.

ಹಿಂದೂಗಳು ಧರ್ಮ ಬೋಧಿಸುವಂತಿಲ್ಲ ಎಂಬುವುದು ಸುಳ್ಳು ಪ್ರತಿಪಾದನೆಯಾಗಿದೆ. ಭಾರತದ ಪ್ರತಿಯೊಬ್ಬ ಪ್ರಜೆಯೂ ಸಂವಿಧಾನ ಅಡಿ ಧಾರ್ಮಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ಹೊಂದಿರುತ್ತಾರೆ. ದೇಶದಲ್ಲಿ ಪ್ರಸ್ತುತ ಹಿಂದೂ ಧಾರ್ಮಿಕ ಆಚರಣೆಗಳು ಯಾವುದೇ ಅಡೆತಡೆ ಇಲ್ಲದೆ ನಡೆಯುತ್ತಿದೆ.

ಇದನ್ನೂ ಓದಿ : Fact Check : ‘ಮೋದಿ ದೇಶದ್ರೋಹಿ’ ಎಂಬ ಭಾಗ ಕೈಬಿಟ್ಟು ವೈಕೋ ಹೇಳಿಕೆ ಹಂಚಿಕೊಂಡ ANI

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....