Homeಫ್ಯಾಕ್ಟ್‌ಚೆಕ್Fact Check: ಹಿಂದೂ ಧರ್ಮ ಬೋಧಿಸದಂತೆ ಕಾಂಗ್ರೆಸ್ ತಡೆ ಹಿಡಿದಿದೆ ಎಂಬುವುದು ಸುಳ್ಳು

Fact Check: ಹಿಂದೂ ಧರ್ಮ ಬೋಧಿಸದಂತೆ ಕಾಂಗ್ರೆಸ್ ತಡೆ ಹಿಡಿದಿದೆ ಎಂಬುವುದು ಸುಳ್ಳು

- Advertisement -
- Advertisement -

“ಸಂವಿಧಾನದ ಮೂಲಕ ಕಾಂಗ್ರೆಸ್ ಭಾರತವನ್ನು ಮುಸ್ಲಿಂ ರಾಷ್ಟ್ರವನ್ನಾಗಿ ಮಾಡಿತ್ತು. ಆದರೆ, ಅದನ್ನು ಘೋಷಿಸಲು ಆಗಿಲ್ಲ. ಕಾಂಗ್ರೆಸ್‌ನವರು ಆರ್ಟಿಕಲ್ 25ರ ಮೂಲಕ ಮತಾಂತರವನ್ನು ಕಾನೂನು ಬದ್ದಗೊಳಿಸಿದರು. ಆರ್ಟಿಕಲ್ 28ರ ಮೂಲಕ ಹಿಂದೂಗಳು ಧಾರ್ಮಿಕ ಶಿಕ್ಷಣದಿಂದ ವಂಚಿತರಾಗುವಂತೆ ಮಾಡಿದರು. ಆರ್ಟಿಕಲ್ 28ರ ಪ್ರಕಾರ ಹಿಂದೂ ಧರ್ಮವನ್ನು ಬೋಧಿಸುವಂತಿಲ್ಲ. ಆದರೆ, ಆರ್ಟಿಕಲ್ 30ರ ಮೂಲಕ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ತಮ್ಮ ಧಾರ್ಮಿಕ ಶಿಕ್ಷಣ ಪಡೆಯಲು ಅನುಮತಿಸಲಾಗಿದೆ” ಎಂದು ಪ್ರತಿಪಾದಿಸಲಾದ ಸಂದೇಶವೊಂದು ವಾಟ್ಸಾಪ್‌ನಲ್ಲಿ ಹರಿದಾಡುತ್ತಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಾಟ್ಸಾಪ್ ಸಂದೇಶದಲ್ಲಿ ಹೇಳಿರುವುದು ನಿಜಾನಾ? ಎಂದು ನಾನುಗೌರಿ.ಕಾಂ ಸತ್ಯಾ ಸತ್ಯತೆ ಪರಿಶೀಲನೆ ನಡೆಸಿದೆ.

ಇದಕ್ಕಾಗಿ ನಾವು ಸಂದೇಶದಲ್ಲಿ ಹೇಳಿರುವ ಸಂವಿಧಾನ ಆರ್ಟಿಕಲ್‌ಗಳು ಏನು ಹೇಳಿವೆ ಎಂದು ಪರಿಶೀಲಿಸಿದ್ದೇವೆ.

ಸಂವಿಧಾನದ 25ನೇ ವಿಧಿಯು ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಕುರಿತು ಹೇಳುತ್ತದೆ. ಇದು ಭಾರತದ ಎಲ್ಲಾ ವ್ಯಕ್ತಿಗಳಿಗೆ ಧಾರ್ಮಿಕ ಸ್ವಾತಂತ್ರ್ಯವನ್ನು ಖಾತರಿಪಡಿಸುತ್ತದೆ ಮತ್ತು ಭಾರತದ ಎಲ್ಲಾ ವ್ಯಕ್ತಿಗಳು ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ, ಆರೋಗ್ಯ ಮತ್ತು ಇತರ ನಿಬಂಧನೆಗಳಿಗೆ ಒಳಪಟ್ಟಿರುತ್ತಾರೆ ಎಂದು ಹೇಳುತ್ತದೆ. ಭಾರತದ ನಾಗರಿಕರು ಆತ್ಮಸಾಕ್ಷಿಯ ಸ್ವಾತಂತ್ರ್ಯಕ್ಕೆ ಸಮಾನವಾಗಿ ಅರ್ಹರಾಗಿರುತ್ತಾರೆ. ಧರ್ಮವನ್ನು ಮುಕ್ತವಾಗಿ ಪ್ರತಿಪಾದಿಸುವ, ಅಭ್ಯಾಸ ಮಾಡುವ ಮತ್ತು ಪ್ರಚಾರ ಮಾಡುವ ಹಕ್ಕನ್ನು ಈ ವಿಧಿ ನೀಡಿದೆ.

ಆರ್ಟಿಕಲ್ 25 ಭಾರತೀಯರಿಗೆ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ನೀಡಿದೆಯೇ ಹೊರತು, ಇದು ಮತಾಂತರವನ್ನು ಕಾನೂನು ಬದ್ದಗೊಳಿಸಿದ ವಿಧಿಯಲ್ಲ. ಧಾರ್ಮಿಕ ಸ್ವಾತಂತ್ರ್ಯ ಎನ್ನುವುದು ಪ್ರತಿಯೊಬ್ಬ ಭಾರತೀಯನ ಮೂಲಭೂತ ಹಕ್ಕಾಗಿದೆ.

ಸಂವಿಧಾನದ 28ನೇ ವಿಧಿಯು ಸರ್ಕಾರದ ಅನುದಾನದಲ್ಲಿ ನಿರ್ವಹಿಸಲ್ಪಡುವ ಯಾವುದೇ ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಸೂಚನೆಗಳನ್ನು ನೀಡಲಾಗುವುದಿಲ್ಲ. ಇದು ಸರ್ಕಾರದಿಂದ ಧನಸಹಾಯ ಪಡೆದ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳು ಜಾತ್ಯತೀತವಾಗಿ ಉಳಿಯುತ್ತದೆ ಮತ್ತು ಧಾರ್ಮಿಕ ಬೋಧನೆಗಳನ್ನು ನೀಡುವುದಿಲ್ಲ ಎಂದು ಖಚಿತಪಡಿಸುತ್ತದೆ.

ಇನ್ನು ಸರ್ಕಾರದ ಅನುದಾನದಲ್ಲಿ ನಿರ್ವಹಿಸಲ್ಪಡೆ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಶಿಕ್ಷಣವನ್ನು ಅನುಮತಿಸಲಾಗಿದೆ. ಆದರೆ, ಇಲ್ಲಿ ವಿದ್ಯಾರ್ಥಿಗಳು ಅಪ್ರಾಪ್ತರಾಗದ್ದರೆ ಅವರ ಪೋಷಕರ ಒಪ್ಪಿಗೆ ಅಗತ್ಯವಿದೆ. ಈ ಸಂಸ್ಥೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಧಾರ್ಮಿಕ ಬೋಧನೆಯನ್ನು ಸ್ವೀಕರಿಸಬೇಕೆ ಅಥವಾ ಬೇಡವೇ ಎಂಬುದನ್ನು ಆಯ್ಕೆ ಮಾಡುವ ಹಕ್ಕನ್ನು ಹೊಂದಿರುತ್ತಾರೆ.
ರಾಜ್ಯದ ನಿಧಿಯಿಂದ ಸಂಪೂರ್ಣವಾಗಿ ನಿರ್ವಹಿಸಲ್ಪಡದ ಶಿಕ್ಷಣ ಸಂಸ್ಥೆಗಳಲ್ಲಿ, ನಿರ್ದಿಷ್ಟ ಧರ್ಮಕ್ಕೆ ಸೇರಿದ ವಿದ್ಯಾರ್ಥಿಗಳು ಸಂಸ್ಥೆಯು ನಡೆಸುವ ಧಾರ್ಮಿಕ ಪೂಜೆ ಅಥವಾ ಧಾರ್ಮಿಕ ಸೂಚನೆಗೆ ಹಾಜರಾಗುವ ಹಕ್ಕನ್ನು ಹೊಂದಿರುತ್ತಾರೆ.

ಸಂವಿಧಾನದ 30ನೇ ವಿಧಿಯು ಅಲ್ಪಸಂಖ್ಯಾತರಿಗೆ ತಮ್ಮ ಆಯ್ಕೆಯ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲು ಮತ್ತು ನಿರ್ವಹಿಸುವ ಹಕ್ಕನ್ನು ನೀಡುತ್ತದೆ. ಈ ಹಕ್ಕನ್ನು ಧರ್ಮ ಅಥವಾ ಭಾಷೆಯ ಆಧಾರದ ಮೇಲೆ ಅಲ್ಪಸಂಖ್ಯಾತರಿಗೆ ನೀಡಲಾಗಿದೆ ಮತ್ತು ಅವರ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಹಿತಾಸಕ್ತಿಗಳನ್ನು ರಕ್ಷಿಸಲು ಉದ್ದೇಶಿಸಲಾಗಿದೆ. ಈ ಶಿಕ್ಷಣ ಸಂಸ್ಥೆಗಳಿಗೆ ನೆರವು ನೀಡುವಲ್ಲಿ ರಾಜ್ಯವು ಯಾವುದೇ ಶಿಕ್ಷಣ ಸಂಸ್ಥೆಯನ್ನು ಧರ್ಮ ಅಥವಾ ಭಾಷೆಯ ಆಧಾರದ ಮೇಲೆ ಅಲ್ಪಸಂಖ್ಯಾತರ ನಿರ್ವಹಣೆಗೆ ಒಳಪಟ್ಟಿದೆ ಎಂಬ ಕಾರಣಕ್ಕೆ ತಾರತಮ್ಯ ಮಾಡಬಾರದು. ಎಂದು ತಿಳಿಸುತ್ತದೆ.

ಅಲ್ಪ ಸಂಖ್ಯಾತರಿಗೆ ಅವರ ಆಯ್ಕೆಯ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲು ಅವಕಾಶ ನೀಡಿರುವುದು, ಅಲ್ಪ ಸಂಖ್ಯಾತರ ಶೈಕ್ಷಣಿಕೆ, ಸಾಮಾಜಿಕ ಅಭಿವೃದ್ದಿಗಾಗಿ ಆಗಿದೆ. ಅಲ್ಲದೆ, ಅಲ್ಪ ಸಂಖ್ಯಾತರ ಧಾರ್ಮಿಕ ಶಿಕ್ಷಣವನ್ನು ಹರಡಲು ಅಲ್ಲ. ಇಲ್ಲಿ ಅಲ್ಪ ಸಂಖ್ಯಾತರು ಎಂದರೆ ಕೇವಲ ಮುಸ್ಲಿಮರು ಎಂಬುವುದು ತಪ್ಪು ಕ್ರೈಸ್ತರು, ಬೌದ್ಧರು, ಜೈನರು ಮತ್ತು ಪಾರ್ಸಿಗಳು ಕೂಡ ಅಲ್ಪ ಸಂಖ್ಯಾತರಾಗಿದ್ದಾರೆ.

ಹಾಗಾಗಿ, ಆರ್ಟಿಕಲ್ 25, 28, 30ರ ಮೂಲಕ ಕಾಂಗ್ರೆಸ್ ಮತಾಂತರವನ್ನು ಕಾನೂನು ಬದ್ದಗೊಳಿಸಿದೆ. ಹಿಂದೂಗಳನ್ನು ಧಾರ್ಮಿಕ ಶಿಕ್ಷಣದಿಂದ ವಂಚಿತರಾಗುವಂತೆ ಮಾಡಿದೆ. ಹಿಂದೂ ಧರ್ಮದ ಬಗ್ಗೆ ಭೋದಿಸುವಂತಿಲ್ಲ ಎಂಬುದು ಸುಳ್ಳು ಪ್ರತಿಪಾದನೆಯಾಗಿದೆ.

ನಾವು ಮೇಲೆ ಉಲ್ಲೇಖಿಸಿದ ಪುರಾವೆಗಳನ್ನು ಹೊರತುಪಡಿಸಿ ನೋಡುವುದಾದರೆ, ವಾಟ್ಸಾಪ್‌ನಲ್ಲಿ ಹರಿದಾಡುತ್ತಿರುವ ಸಂದೇಶ ಒಂದು ರೀತಿ ಬಾಲಿಶತನದಿಂದ ಕೂಡಿದೆ ಎಂದು ಹೇಳಬಹುದು. ಯಾಕೆಂದರೆ, ಪ್ರತಿಯೊಬ್ಬ ಭಾರತೀಯ ಪ್ರಜೆಗೂ ಇಲ್ಲಿರುವ ಪ್ರಸ್ತುತ ಕಾನೂನುಗಳ ಬಗ್ಗೆ ಸಾಮಾನ್ಯ ಅರಿವಿದೆ. ಇಲ್ಲಾ ಅಂದರೆ, ಸುಮ್ಮನೆ ಗೂಗಲ್ ಮೂಲಕ ಸರ್ಚ್ ಮಾಡಿದರೆ ಮೇಲೆ ಉಲ್ಲೇಖಿಸಿದ ಆರ್ಟಿಕಲ್‌ಗಳ ಬಗ್ಗೆ ಎಷ್ಟು ಮಾಹಿತಿ ಬೇಕಾದರು ಹಲವು ಮೂಲಗಳಲ್ಲಿ ಲಭ್ಯವಿದೆ.

ಹಿಂದೂಗಳು ಧರ್ಮ ಬೋಧಿಸುವಂತಿಲ್ಲ ಎಂಬುವುದು ಸುಳ್ಳು ಪ್ರತಿಪಾದನೆಯಾಗಿದೆ. ಭಾರತದ ಪ್ರತಿಯೊಬ್ಬ ಪ್ರಜೆಯೂ ಸಂವಿಧಾನ ಅಡಿ ಧಾರ್ಮಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ಹೊಂದಿರುತ್ತಾರೆ. ದೇಶದಲ್ಲಿ ಪ್ರಸ್ತುತ ಹಿಂದೂ ಧಾರ್ಮಿಕ ಆಚರಣೆಗಳು ಯಾವುದೇ ಅಡೆತಡೆ ಇಲ್ಲದೆ ನಡೆಯುತ್ತಿದೆ.

ಇದನ್ನೂ ಓದಿ : Fact Check : ‘ಮೋದಿ ದೇಶದ್ರೋಹಿ’ ಎಂಬ ಭಾಗ ಕೈಬಿಟ್ಟು ವೈಕೋ ಹೇಳಿಕೆ ಹಂಚಿಕೊಂಡ ANI

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...