Homeಫ್ಯಾಕ್ಟ್‌ಚೆಕ್Fact Check: ಹಿಂದೂ ಧರ್ಮ ಬೋಧಿಸದಂತೆ ಕಾಂಗ್ರೆಸ್ ತಡೆ ಹಿಡಿದಿದೆ ಎಂಬುವುದು ಸುಳ್ಳು

Fact Check: ಹಿಂದೂ ಧರ್ಮ ಬೋಧಿಸದಂತೆ ಕಾಂಗ್ರೆಸ್ ತಡೆ ಹಿಡಿದಿದೆ ಎಂಬುವುದು ಸುಳ್ಳು

- Advertisement -
- Advertisement -

“ಸಂವಿಧಾನದ ಮೂಲಕ ಕಾಂಗ್ರೆಸ್ ಭಾರತವನ್ನು ಮುಸ್ಲಿಂ ರಾಷ್ಟ್ರವನ್ನಾಗಿ ಮಾಡಿತ್ತು. ಆದರೆ, ಅದನ್ನು ಘೋಷಿಸಲು ಆಗಿಲ್ಲ. ಕಾಂಗ್ರೆಸ್‌ನವರು ಆರ್ಟಿಕಲ್ 25ರ ಮೂಲಕ ಮತಾಂತರವನ್ನು ಕಾನೂನು ಬದ್ದಗೊಳಿಸಿದರು. ಆರ್ಟಿಕಲ್ 28ರ ಮೂಲಕ ಹಿಂದೂಗಳು ಧಾರ್ಮಿಕ ಶಿಕ್ಷಣದಿಂದ ವಂಚಿತರಾಗುವಂತೆ ಮಾಡಿದರು. ಆರ್ಟಿಕಲ್ 28ರ ಪ್ರಕಾರ ಹಿಂದೂ ಧರ್ಮವನ್ನು ಬೋಧಿಸುವಂತಿಲ್ಲ. ಆದರೆ, ಆರ್ಟಿಕಲ್ 30ರ ಮೂಲಕ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ತಮ್ಮ ಧಾರ್ಮಿಕ ಶಿಕ್ಷಣ ಪಡೆಯಲು ಅನುಮತಿಸಲಾಗಿದೆ” ಎಂದು ಪ್ರತಿಪಾದಿಸಲಾದ ಸಂದೇಶವೊಂದು ವಾಟ್ಸಾಪ್‌ನಲ್ಲಿ ಹರಿದಾಡುತ್ತಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಾಟ್ಸಾಪ್ ಸಂದೇಶದಲ್ಲಿ ಹೇಳಿರುವುದು ನಿಜಾನಾ? ಎಂದು ನಾನುಗೌರಿ.ಕಾಂ ಸತ್ಯಾ ಸತ್ಯತೆ ಪರಿಶೀಲನೆ ನಡೆಸಿದೆ.

ಇದಕ್ಕಾಗಿ ನಾವು ಸಂದೇಶದಲ್ಲಿ ಹೇಳಿರುವ ಸಂವಿಧಾನ ಆರ್ಟಿಕಲ್‌ಗಳು ಏನು ಹೇಳಿವೆ ಎಂದು ಪರಿಶೀಲಿಸಿದ್ದೇವೆ.

ಸಂವಿಧಾನದ 25ನೇ ವಿಧಿಯು ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಕುರಿತು ಹೇಳುತ್ತದೆ. ಇದು ಭಾರತದ ಎಲ್ಲಾ ವ್ಯಕ್ತಿಗಳಿಗೆ ಧಾರ್ಮಿಕ ಸ್ವಾತಂತ್ರ್ಯವನ್ನು ಖಾತರಿಪಡಿಸುತ್ತದೆ ಮತ್ತು ಭಾರತದ ಎಲ್ಲಾ ವ್ಯಕ್ತಿಗಳು ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ, ಆರೋಗ್ಯ ಮತ್ತು ಇತರ ನಿಬಂಧನೆಗಳಿಗೆ ಒಳಪಟ್ಟಿರುತ್ತಾರೆ ಎಂದು ಹೇಳುತ್ತದೆ. ಭಾರತದ ನಾಗರಿಕರು ಆತ್ಮಸಾಕ್ಷಿಯ ಸ್ವಾತಂತ್ರ್ಯಕ್ಕೆ ಸಮಾನವಾಗಿ ಅರ್ಹರಾಗಿರುತ್ತಾರೆ. ಧರ್ಮವನ್ನು ಮುಕ್ತವಾಗಿ ಪ್ರತಿಪಾದಿಸುವ, ಅಭ್ಯಾಸ ಮಾಡುವ ಮತ್ತು ಪ್ರಚಾರ ಮಾಡುವ ಹಕ್ಕನ್ನು ಈ ವಿಧಿ ನೀಡಿದೆ.

ಆರ್ಟಿಕಲ್ 25 ಭಾರತೀಯರಿಗೆ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ನೀಡಿದೆಯೇ ಹೊರತು, ಇದು ಮತಾಂತರವನ್ನು ಕಾನೂನು ಬದ್ದಗೊಳಿಸಿದ ವಿಧಿಯಲ್ಲ. ಧಾರ್ಮಿಕ ಸ್ವಾತಂತ್ರ್ಯ ಎನ್ನುವುದು ಪ್ರತಿಯೊಬ್ಬ ಭಾರತೀಯನ ಮೂಲಭೂತ ಹಕ್ಕಾಗಿದೆ.

ಸಂವಿಧಾನದ 28ನೇ ವಿಧಿಯು ಸರ್ಕಾರದ ಅನುದಾನದಲ್ಲಿ ನಿರ್ವಹಿಸಲ್ಪಡುವ ಯಾವುದೇ ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಸೂಚನೆಗಳನ್ನು ನೀಡಲಾಗುವುದಿಲ್ಲ. ಇದು ಸರ್ಕಾರದಿಂದ ಧನಸಹಾಯ ಪಡೆದ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳು ಜಾತ್ಯತೀತವಾಗಿ ಉಳಿಯುತ್ತದೆ ಮತ್ತು ಧಾರ್ಮಿಕ ಬೋಧನೆಗಳನ್ನು ನೀಡುವುದಿಲ್ಲ ಎಂದು ಖಚಿತಪಡಿಸುತ್ತದೆ.

ಇನ್ನು ಸರ್ಕಾರದ ಅನುದಾನದಲ್ಲಿ ನಿರ್ವಹಿಸಲ್ಪಡೆ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಶಿಕ್ಷಣವನ್ನು ಅನುಮತಿಸಲಾಗಿದೆ. ಆದರೆ, ಇಲ್ಲಿ ವಿದ್ಯಾರ್ಥಿಗಳು ಅಪ್ರಾಪ್ತರಾಗದ್ದರೆ ಅವರ ಪೋಷಕರ ಒಪ್ಪಿಗೆ ಅಗತ್ಯವಿದೆ. ಈ ಸಂಸ್ಥೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಧಾರ್ಮಿಕ ಬೋಧನೆಯನ್ನು ಸ್ವೀಕರಿಸಬೇಕೆ ಅಥವಾ ಬೇಡವೇ ಎಂಬುದನ್ನು ಆಯ್ಕೆ ಮಾಡುವ ಹಕ್ಕನ್ನು ಹೊಂದಿರುತ್ತಾರೆ.
ರಾಜ್ಯದ ನಿಧಿಯಿಂದ ಸಂಪೂರ್ಣವಾಗಿ ನಿರ್ವಹಿಸಲ್ಪಡದ ಶಿಕ್ಷಣ ಸಂಸ್ಥೆಗಳಲ್ಲಿ, ನಿರ್ದಿಷ್ಟ ಧರ್ಮಕ್ಕೆ ಸೇರಿದ ವಿದ್ಯಾರ್ಥಿಗಳು ಸಂಸ್ಥೆಯು ನಡೆಸುವ ಧಾರ್ಮಿಕ ಪೂಜೆ ಅಥವಾ ಧಾರ್ಮಿಕ ಸೂಚನೆಗೆ ಹಾಜರಾಗುವ ಹಕ್ಕನ್ನು ಹೊಂದಿರುತ್ತಾರೆ.

ಸಂವಿಧಾನದ 30ನೇ ವಿಧಿಯು ಅಲ್ಪಸಂಖ್ಯಾತರಿಗೆ ತಮ್ಮ ಆಯ್ಕೆಯ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲು ಮತ್ತು ನಿರ್ವಹಿಸುವ ಹಕ್ಕನ್ನು ನೀಡುತ್ತದೆ. ಈ ಹಕ್ಕನ್ನು ಧರ್ಮ ಅಥವಾ ಭಾಷೆಯ ಆಧಾರದ ಮೇಲೆ ಅಲ್ಪಸಂಖ್ಯಾತರಿಗೆ ನೀಡಲಾಗಿದೆ ಮತ್ತು ಅವರ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಹಿತಾಸಕ್ತಿಗಳನ್ನು ರಕ್ಷಿಸಲು ಉದ್ದೇಶಿಸಲಾಗಿದೆ. ಈ ಶಿಕ್ಷಣ ಸಂಸ್ಥೆಗಳಿಗೆ ನೆರವು ನೀಡುವಲ್ಲಿ ರಾಜ್ಯವು ಯಾವುದೇ ಶಿಕ್ಷಣ ಸಂಸ್ಥೆಯನ್ನು ಧರ್ಮ ಅಥವಾ ಭಾಷೆಯ ಆಧಾರದ ಮೇಲೆ ಅಲ್ಪಸಂಖ್ಯಾತರ ನಿರ್ವಹಣೆಗೆ ಒಳಪಟ್ಟಿದೆ ಎಂಬ ಕಾರಣಕ್ಕೆ ತಾರತಮ್ಯ ಮಾಡಬಾರದು. ಎಂದು ತಿಳಿಸುತ್ತದೆ.

ಅಲ್ಪ ಸಂಖ್ಯಾತರಿಗೆ ಅವರ ಆಯ್ಕೆಯ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲು ಅವಕಾಶ ನೀಡಿರುವುದು, ಅಲ್ಪ ಸಂಖ್ಯಾತರ ಶೈಕ್ಷಣಿಕೆ, ಸಾಮಾಜಿಕ ಅಭಿವೃದ್ದಿಗಾಗಿ ಆಗಿದೆ. ಅಲ್ಲದೆ, ಅಲ್ಪ ಸಂಖ್ಯಾತರ ಧಾರ್ಮಿಕ ಶಿಕ್ಷಣವನ್ನು ಹರಡಲು ಅಲ್ಲ. ಇಲ್ಲಿ ಅಲ್ಪ ಸಂಖ್ಯಾತರು ಎಂದರೆ ಕೇವಲ ಮುಸ್ಲಿಮರು ಎಂಬುವುದು ತಪ್ಪು ಕ್ರೈಸ್ತರು, ಬೌದ್ಧರು, ಜೈನರು ಮತ್ತು ಪಾರ್ಸಿಗಳು ಕೂಡ ಅಲ್ಪ ಸಂಖ್ಯಾತರಾಗಿದ್ದಾರೆ.

ಹಾಗಾಗಿ, ಆರ್ಟಿಕಲ್ 25, 28, 30ರ ಮೂಲಕ ಕಾಂಗ್ರೆಸ್ ಮತಾಂತರವನ್ನು ಕಾನೂನು ಬದ್ದಗೊಳಿಸಿದೆ. ಹಿಂದೂಗಳನ್ನು ಧಾರ್ಮಿಕ ಶಿಕ್ಷಣದಿಂದ ವಂಚಿತರಾಗುವಂತೆ ಮಾಡಿದೆ. ಹಿಂದೂ ಧರ್ಮದ ಬಗ್ಗೆ ಭೋದಿಸುವಂತಿಲ್ಲ ಎಂಬುದು ಸುಳ್ಳು ಪ್ರತಿಪಾದನೆಯಾಗಿದೆ.

ನಾವು ಮೇಲೆ ಉಲ್ಲೇಖಿಸಿದ ಪುರಾವೆಗಳನ್ನು ಹೊರತುಪಡಿಸಿ ನೋಡುವುದಾದರೆ, ವಾಟ್ಸಾಪ್‌ನಲ್ಲಿ ಹರಿದಾಡುತ್ತಿರುವ ಸಂದೇಶ ಒಂದು ರೀತಿ ಬಾಲಿಶತನದಿಂದ ಕೂಡಿದೆ ಎಂದು ಹೇಳಬಹುದು. ಯಾಕೆಂದರೆ, ಪ್ರತಿಯೊಬ್ಬ ಭಾರತೀಯ ಪ್ರಜೆಗೂ ಇಲ್ಲಿರುವ ಪ್ರಸ್ತುತ ಕಾನೂನುಗಳ ಬಗ್ಗೆ ಸಾಮಾನ್ಯ ಅರಿವಿದೆ. ಇಲ್ಲಾ ಅಂದರೆ, ಸುಮ್ಮನೆ ಗೂಗಲ್ ಮೂಲಕ ಸರ್ಚ್ ಮಾಡಿದರೆ ಮೇಲೆ ಉಲ್ಲೇಖಿಸಿದ ಆರ್ಟಿಕಲ್‌ಗಳ ಬಗ್ಗೆ ಎಷ್ಟು ಮಾಹಿತಿ ಬೇಕಾದರು ಹಲವು ಮೂಲಗಳಲ್ಲಿ ಲಭ್ಯವಿದೆ.

ಹಿಂದೂಗಳು ಧರ್ಮ ಬೋಧಿಸುವಂತಿಲ್ಲ ಎಂಬುವುದು ಸುಳ್ಳು ಪ್ರತಿಪಾದನೆಯಾಗಿದೆ. ಭಾರತದ ಪ್ರತಿಯೊಬ್ಬ ಪ್ರಜೆಯೂ ಸಂವಿಧಾನ ಅಡಿ ಧಾರ್ಮಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ಹೊಂದಿರುತ್ತಾರೆ. ದೇಶದಲ್ಲಿ ಪ್ರಸ್ತುತ ಹಿಂದೂ ಧಾರ್ಮಿಕ ಆಚರಣೆಗಳು ಯಾವುದೇ ಅಡೆತಡೆ ಇಲ್ಲದೆ ನಡೆಯುತ್ತಿದೆ.

ಇದನ್ನೂ ಓದಿ : Fact Check : ‘ಮೋದಿ ದೇಶದ್ರೋಹಿ’ ಎಂಬ ಭಾಗ ಕೈಬಿಟ್ಟು ವೈಕೋ ಹೇಳಿಕೆ ಹಂಚಿಕೊಂಡ ANI

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...