Homeಫ್ಯಾಕ್ಟ್‌ಚೆಕ್Fact Check: ಹಿಂದೂ ಧರ್ಮ ಬೋಧಿಸದಂತೆ ಕಾಂಗ್ರೆಸ್ ತಡೆ ಹಿಡಿದಿದೆ ಎಂಬುವುದು ಸುಳ್ಳು

Fact Check: ಹಿಂದೂ ಧರ್ಮ ಬೋಧಿಸದಂತೆ ಕಾಂಗ್ರೆಸ್ ತಡೆ ಹಿಡಿದಿದೆ ಎಂಬುವುದು ಸುಳ್ಳು

- Advertisement -
- Advertisement -

“ಸಂವಿಧಾನದ ಮೂಲಕ ಕಾಂಗ್ರೆಸ್ ಭಾರತವನ್ನು ಮುಸ್ಲಿಂ ರಾಷ್ಟ್ರವನ್ನಾಗಿ ಮಾಡಿತ್ತು. ಆದರೆ, ಅದನ್ನು ಘೋಷಿಸಲು ಆಗಿಲ್ಲ. ಕಾಂಗ್ರೆಸ್‌ನವರು ಆರ್ಟಿಕಲ್ 25ರ ಮೂಲಕ ಮತಾಂತರವನ್ನು ಕಾನೂನು ಬದ್ದಗೊಳಿಸಿದರು. ಆರ್ಟಿಕಲ್ 28ರ ಮೂಲಕ ಹಿಂದೂಗಳು ಧಾರ್ಮಿಕ ಶಿಕ್ಷಣದಿಂದ ವಂಚಿತರಾಗುವಂತೆ ಮಾಡಿದರು. ಆರ್ಟಿಕಲ್ 28ರ ಪ್ರಕಾರ ಹಿಂದೂ ಧರ್ಮವನ್ನು ಬೋಧಿಸುವಂತಿಲ್ಲ. ಆದರೆ, ಆರ್ಟಿಕಲ್ 30ರ ಮೂಲಕ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ತಮ್ಮ ಧಾರ್ಮಿಕ ಶಿಕ್ಷಣ ಪಡೆಯಲು ಅನುಮತಿಸಲಾಗಿದೆ” ಎಂದು ಪ್ರತಿಪಾದಿಸಲಾದ ಸಂದೇಶವೊಂದು ವಾಟ್ಸಾಪ್‌ನಲ್ಲಿ ಹರಿದಾಡುತ್ತಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಾಟ್ಸಾಪ್ ಸಂದೇಶದಲ್ಲಿ ಹೇಳಿರುವುದು ನಿಜಾನಾ? ಎಂದು ನಾನುಗೌರಿ.ಕಾಂ ಸತ್ಯಾ ಸತ್ಯತೆ ಪರಿಶೀಲನೆ ನಡೆಸಿದೆ.

ಇದಕ್ಕಾಗಿ ನಾವು ಸಂದೇಶದಲ್ಲಿ ಹೇಳಿರುವ ಸಂವಿಧಾನ ಆರ್ಟಿಕಲ್‌ಗಳು ಏನು ಹೇಳಿವೆ ಎಂದು ಪರಿಶೀಲಿಸಿದ್ದೇವೆ.

ಸಂವಿಧಾನದ 25ನೇ ವಿಧಿಯು ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಕುರಿತು ಹೇಳುತ್ತದೆ. ಇದು ಭಾರತದ ಎಲ್ಲಾ ವ್ಯಕ್ತಿಗಳಿಗೆ ಧಾರ್ಮಿಕ ಸ್ವಾತಂತ್ರ್ಯವನ್ನು ಖಾತರಿಪಡಿಸುತ್ತದೆ ಮತ್ತು ಭಾರತದ ಎಲ್ಲಾ ವ್ಯಕ್ತಿಗಳು ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ, ಆರೋಗ್ಯ ಮತ್ತು ಇತರ ನಿಬಂಧನೆಗಳಿಗೆ ಒಳಪಟ್ಟಿರುತ್ತಾರೆ ಎಂದು ಹೇಳುತ್ತದೆ. ಭಾರತದ ನಾಗರಿಕರು ಆತ್ಮಸಾಕ್ಷಿಯ ಸ್ವಾತಂತ್ರ್ಯಕ್ಕೆ ಸಮಾನವಾಗಿ ಅರ್ಹರಾಗಿರುತ್ತಾರೆ. ಧರ್ಮವನ್ನು ಮುಕ್ತವಾಗಿ ಪ್ರತಿಪಾದಿಸುವ, ಅಭ್ಯಾಸ ಮಾಡುವ ಮತ್ತು ಪ್ರಚಾರ ಮಾಡುವ ಹಕ್ಕನ್ನು ಈ ವಿಧಿ ನೀಡಿದೆ.

ಆರ್ಟಿಕಲ್ 25 ಭಾರತೀಯರಿಗೆ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ನೀಡಿದೆಯೇ ಹೊರತು, ಇದು ಮತಾಂತರವನ್ನು ಕಾನೂನು ಬದ್ದಗೊಳಿಸಿದ ವಿಧಿಯಲ್ಲ. ಧಾರ್ಮಿಕ ಸ್ವಾತಂತ್ರ್ಯ ಎನ್ನುವುದು ಪ್ರತಿಯೊಬ್ಬ ಭಾರತೀಯನ ಮೂಲಭೂತ ಹಕ್ಕಾಗಿದೆ.

ಸಂವಿಧಾನದ 28ನೇ ವಿಧಿಯು ಸರ್ಕಾರದ ಅನುದಾನದಲ್ಲಿ ನಿರ್ವಹಿಸಲ್ಪಡುವ ಯಾವುದೇ ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಸೂಚನೆಗಳನ್ನು ನೀಡಲಾಗುವುದಿಲ್ಲ. ಇದು ಸರ್ಕಾರದಿಂದ ಧನಸಹಾಯ ಪಡೆದ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳು ಜಾತ್ಯತೀತವಾಗಿ ಉಳಿಯುತ್ತದೆ ಮತ್ತು ಧಾರ್ಮಿಕ ಬೋಧನೆಗಳನ್ನು ನೀಡುವುದಿಲ್ಲ ಎಂದು ಖಚಿತಪಡಿಸುತ್ತದೆ.

ಇನ್ನು ಸರ್ಕಾರದ ಅನುದಾನದಲ್ಲಿ ನಿರ್ವಹಿಸಲ್ಪಡೆ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಶಿಕ್ಷಣವನ್ನು ಅನುಮತಿಸಲಾಗಿದೆ. ಆದರೆ, ಇಲ್ಲಿ ವಿದ್ಯಾರ್ಥಿಗಳು ಅಪ್ರಾಪ್ತರಾಗದ್ದರೆ ಅವರ ಪೋಷಕರ ಒಪ್ಪಿಗೆ ಅಗತ್ಯವಿದೆ. ಈ ಸಂಸ್ಥೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಧಾರ್ಮಿಕ ಬೋಧನೆಯನ್ನು ಸ್ವೀಕರಿಸಬೇಕೆ ಅಥವಾ ಬೇಡವೇ ಎಂಬುದನ್ನು ಆಯ್ಕೆ ಮಾಡುವ ಹಕ್ಕನ್ನು ಹೊಂದಿರುತ್ತಾರೆ.
ರಾಜ್ಯದ ನಿಧಿಯಿಂದ ಸಂಪೂರ್ಣವಾಗಿ ನಿರ್ವಹಿಸಲ್ಪಡದ ಶಿಕ್ಷಣ ಸಂಸ್ಥೆಗಳಲ್ಲಿ, ನಿರ್ದಿಷ್ಟ ಧರ್ಮಕ್ಕೆ ಸೇರಿದ ವಿದ್ಯಾರ್ಥಿಗಳು ಸಂಸ್ಥೆಯು ನಡೆಸುವ ಧಾರ್ಮಿಕ ಪೂಜೆ ಅಥವಾ ಧಾರ್ಮಿಕ ಸೂಚನೆಗೆ ಹಾಜರಾಗುವ ಹಕ್ಕನ್ನು ಹೊಂದಿರುತ್ತಾರೆ.

ಸಂವಿಧಾನದ 30ನೇ ವಿಧಿಯು ಅಲ್ಪಸಂಖ್ಯಾತರಿಗೆ ತಮ್ಮ ಆಯ್ಕೆಯ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲು ಮತ್ತು ನಿರ್ವಹಿಸುವ ಹಕ್ಕನ್ನು ನೀಡುತ್ತದೆ. ಈ ಹಕ್ಕನ್ನು ಧರ್ಮ ಅಥವಾ ಭಾಷೆಯ ಆಧಾರದ ಮೇಲೆ ಅಲ್ಪಸಂಖ್ಯಾತರಿಗೆ ನೀಡಲಾಗಿದೆ ಮತ್ತು ಅವರ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಹಿತಾಸಕ್ತಿಗಳನ್ನು ರಕ್ಷಿಸಲು ಉದ್ದೇಶಿಸಲಾಗಿದೆ. ಈ ಶಿಕ್ಷಣ ಸಂಸ್ಥೆಗಳಿಗೆ ನೆರವು ನೀಡುವಲ್ಲಿ ರಾಜ್ಯವು ಯಾವುದೇ ಶಿಕ್ಷಣ ಸಂಸ್ಥೆಯನ್ನು ಧರ್ಮ ಅಥವಾ ಭಾಷೆಯ ಆಧಾರದ ಮೇಲೆ ಅಲ್ಪಸಂಖ್ಯಾತರ ನಿರ್ವಹಣೆಗೆ ಒಳಪಟ್ಟಿದೆ ಎಂಬ ಕಾರಣಕ್ಕೆ ತಾರತಮ್ಯ ಮಾಡಬಾರದು. ಎಂದು ತಿಳಿಸುತ್ತದೆ.

ಅಲ್ಪ ಸಂಖ್ಯಾತರಿಗೆ ಅವರ ಆಯ್ಕೆಯ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲು ಅವಕಾಶ ನೀಡಿರುವುದು, ಅಲ್ಪ ಸಂಖ್ಯಾತರ ಶೈಕ್ಷಣಿಕೆ, ಸಾಮಾಜಿಕ ಅಭಿವೃದ್ದಿಗಾಗಿ ಆಗಿದೆ. ಅಲ್ಲದೆ, ಅಲ್ಪ ಸಂಖ್ಯಾತರ ಧಾರ್ಮಿಕ ಶಿಕ್ಷಣವನ್ನು ಹರಡಲು ಅಲ್ಲ. ಇಲ್ಲಿ ಅಲ್ಪ ಸಂಖ್ಯಾತರು ಎಂದರೆ ಕೇವಲ ಮುಸ್ಲಿಮರು ಎಂಬುವುದು ತಪ್ಪು ಕ್ರೈಸ್ತರು, ಬೌದ್ಧರು, ಜೈನರು ಮತ್ತು ಪಾರ್ಸಿಗಳು ಕೂಡ ಅಲ್ಪ ಸಂಖ್ಯಾತರಾಗಿದ್ದಾರೆ.

ಹಾಗಾಗಿ, ಆರ್ಟಿಕಲ್ 25, 28, 30ರ ಮೂಲಕ ಕಾಂಗ್ರೆಸ್ ಮತಾಂತರವನ್ನು ಕಾನೂನು ಬದ್ದಗೊಳಿಸಿದೆ. ಹಿಂದೂಗಳನ್ನು ಧಾರ್ಮಿಕ ಶಿಕ್ಷಣದಿಂದ ವಂಚಿತರಾಗುವಂತೆ ಮಾಡಿದೆ. ಹಿಂದೂ ಧರ್ಮದ ಬಗ್ಗೆ ಭೋದಿಸುವಂತಿಲ್ಲ ಎಂಬುದು ಸುಳ್ಳು ಪ್ರತಿಪಾದನೆಯಾಗಿದೆ.

ನಾವು ಮೇಲೆ ಉಲ್ಲೇಖಿಸಿದ ಪುರಾವೆಗಳನ್ನು ಹೊರತುಪಡಿಸಿ ನೋಡುವುದಾದರೆ, ವಾಟ್ಸಾಪ್‌ನಲ್ಲಿ ಹರಿದಾಡುತ್ತಿರುವ ಸಂದೇಶ ಒಂದು ರೀತಿ ಬಾಲಿಶತನದಿಂದ ಕೂಡಿದೆ ಎಂದು ಹೇಳಬಹುದು. ಯಾಕೆಂದರೆ, ಪ್ರತಿಯೊಬ್ಬ ಭಾರತೀಯ ಪ್ರಜೆಗೂ ಇಲ್ಲಿರುವ ಪ್ರಸ್ತುತ ಕಾನೂನುಗಳ ಬಗ್ಗೆ ಸಾಮಾನ್ಯ ಅರಿವಿದೆ. ಇಲ್ಲಾ ಅಂದರೆ, ಸುಮ್ಮನೆ ಗೂಗಲ್ ಮೂಲಕ ಸರ್ಚ್ ಮಾಡಿದರೆ ಮೇಲೆ ಉಲ್ಲೇಖಿಸಿದ ಆರ್ಟಿಕಲ್‌ಗಳ ಬಗ್ಗೆ ಎಷ್ಟು ಮಾಹಿತಿ ಬೇಕಾದರು ಹಲವು ಮೂಲಗಳಲ್ಲಿ ಲಭ್ಯವಿದೆ.

ಹಿಂದೂಗಳು ಧರ್ಮ ಬೋಧಿಸುವಂತಿಲ್ಲ ಎಂಬುವುದು ಸುಳ್ಳು ಪ್ರತಿಪಾದನೆಯಾಗಿದೆ. ಭಾರತದ ಪ್ರತಿಯೊಬ್ಬ ಪ್ರಜೆಯೂ ಸಂವಿಧಾನ ಅಡಿ ಧಾರ್ಮಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ಹೊಂದಿರುತ್ತಾರೆ. ದೇಶದಲ್ಲಿ ಪ್ರಸ್ತುತ ಹಿಂದೂ ಧಾರ್ಮಿಕ ಆಚರಣೆಗಳು ಯಾವುದೇ ಅಡೆತಡೆ ಇಲ್ಲದೆ ನಡೆಯುತ್ತಿದೆ.

ಇದನ್ನೂ ಓದಿ : Fact Check : ‘ಮೋದಿ ದೇಶದ್ರೋಹಿ’ ಎಂಬ ಭಾಗ ಕೈಬಿಟ್ಟು ವೈಕೋ ಹೇಳಿಕೆ ಹಂಚಿಕೊಂಡ ANI

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...