Homeಫ್ಯಾಕ್ಟ್‌ಚೆಕ್Fact Check: ರಾಹುಲ್‌ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಪಾಕಿಸ್ತಾನದ ಧ್ವಜ ಪ್ರದರ್ಶಿಸಲಾಗಿದೆ ಎಂಬುವುದು ಸುಳ್ಳು

Fact Check: ರಾಹುಲ್‌ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಪಾಕಿಸ್ತಾನದ ಧ್ವಜ ಪ್ರದರ್ಶಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿಯವರ ನಾಮಪತ್ರ ಸಲ್ಲಿಕೆ ಮೆರವಣಿಗೆಯಲ್ಲಿ ಪಾಕಿಸ್ತಾನದ ಧ್ವಜ ಪ್ರದರ್ಶಿಸಲಾಗಿದೆ ಎಂಬ ಪೋಸ್ಟ್‌ ಅನ್ನು Manipur Banner ಎಂಬ ಫೇಸ್‌ಬುಕ್ ಗ್ರೂಪ್‌ನಲ್ಲಿ ಹಾಕಲಾಗಿದೆ. ಜೊತೆಗೆ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ.

ಪೋಸ್ಟ್‌ ಲಿಂಕ್ ಇಲ್ಲಿದೆ

ಇದೇ ರೀತಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಅಭಿಮಾನಿಗಳ ಎಕ್ಸ್‌ ಖಾತೆಯಲ್ಲಿ “ಕೇರಳದ ವಯನಾಡ್ ಅಭ್ಯರ್ಥಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ ರ‍್ಯಾಲಿಯಲ್ಲಿ ಮುಸಲ್ಮಾನರ ಬಾವುಟ. ಕಾಂಗ್ರೆಸ್ ಸಾಬ್ರು ಪಕ್ಷ ಅನ್ನೋದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ? ಭಾರತದಲ್ಲಿ ಕಾಂಗ್ರೆಸ್ ಅನ್ನು ಬಹಿಷ್ಕರಿಸದ ಹೊರತು ಹಿಂದೂಗಳಿಗೆ ಇಲ್ಲಿ ಉಳಿಗಾಲವಿಲ್ಲ ಅನ್ನಿಸ್ತಿದೆ. ಹಿಂದೂಗಳೇ ಎಚ್ಚೆತ್ತುಕೊಳ್ಳಿ” ಎಂದು ಬರೆಯಲಾಗಿದೆ. ಅಲ್ಲೂ ನಾವು ಮೇಲ್ಗಡೆ ಉಲ್ಲೇಖಿಸಿದ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ

ಫ್ಯಾಕ್ಟ್‌ಚೆಕ್ : ನಾವು ಮೇಲೆ ಉಲ್ಲೇಖಿಸಿದ ಎರಡೂ ಪೋಸ್ಟ್‌ಗಳ ವಿಡಿಯೋದಲ್ಲಿರುವ ಹಸಿರು ಧ್ವಜಗಳು ಪಾಕಿಸ್ತಾನದ್ದಾಗಲಿ, ಮುಸ್ಲಿಮರದ್ದಾಗಲಿ ಅಲ್ಲ. ಕೇರಳದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್‌ (ಐಯುಎಂಎಲ್‌) ಪಕ್ಷದ ಧ್ವಜಗಳಾಗಿವೆ. ಮುಸ್ಲಿಂ ಲೀಗ್ ಭಾರತದ ಅಧಿಕೃತ ರಾಜಕೀಯ ಪಕ್ಷಗಳಲ್ಲಿ ಒಂದು. ಕೇರಳದಲ್ಲಿ ಕಾಂಗ್ರೆಸ್‌ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್‌) ಮೈತ್ರಿಕೂಟದ ಪ್ರಮುಖ ಪಕ್ಷವಾಗಿದೆ.

ಈ ಸುದ್ದಿಯಲ್ಲಿ ನಾವು ಉಲ್ಲೇಖಿಸಿದ್ದು ಮಾತ್ರವಲ್ಲದೆ, ಅನೇಕ ಬಾರಿ ಹಸಿರು ಧ್ವಜ ಹಿಡಿದರೆ ಅದು ಪಾಕಿಸ್ತಾನದ್ದು ಎಂದು ಬಿಂಬಿಸುವ ಪರಿಪಾಠವಿದೆ. ಮುಸ್ಲಿಂ ಲೀಗ್ ಪಕ್ಷದ ಧ್ವಜ, ಮುಸಲ್ಮಾನರು ವಿಶೇಷ ಕಾರ್ಯಕ್ರಮಗಳಲ್ಲಿ ಬಳಸುವ ಧಾರ್ಮಿಕ ಧ್ವಜ ಮತ್ತು ಪಾಕಿಸ್ತಾನದ ರಾಷ್ಟ್ರೀಯ ಧ್ವಜಕ್ಕೆ ವ್ಯತ್ಯಾಸಗಳಿವೆ.

ಎರಡೂ ಧ್ವಜಗಳ ಫೋಟೋಗಳ ಕೆಳಗಡೆ ಕೊಡಲಾಗಿದೆ. ವ್ಯತ್ಯಾಸ ಗಮನಿಸಬಹುದು.

ಕೆಲ ದಿನಗಳ ಹಿಂದೆ ಕೇರಳದ ತ್ರಿಶ್ಶೂರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಮುರಳೀಧರನ್ ಅವರು ಹಸಿರು ಧ್ವಜಗಳೊಂದಿಗೆ ಚುನಾವಣೆ ಪ್ರಚಾರ ನಡೆಸಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ಬಿಜೆಪಿ ನಾಯಕರು ಮತ್ತು ಬಲಪಂಥೀಯ ಸಾಮಾಜಿಕ ಮಾಧ್ಯಮ ಬಳಕೆದಾರರು, ‘ಪಾಕಿಸ್ತಾನದ ಧ್ವಜಗಳೊಂದಿಗೆ ಮುರಳೀಧರನ್ ಚುನಾವಣೆ ಪ್ರಚಾರ ನಡೆಸಿದ್ದಾರೆ’ಎಂಬರ್ಥದಲ್ಲಿ ಸುದ್ದಿ ಹಬ್ಬಿದ್ದರು.

ಈ ಕುರಿತು ನಾನುಗೌರಿ.ಕಾಂ ಫ್ಯಾಕ್ಟ್‌ಚೆಕ್ ಮಾಡಿದೆ. ಅದರ ಲಿಂಕ್ ಕೆಳಗಡೆ ಇದೆ.

Fact Check: ಕೇರಳದ ಕಾಂಗ್ರೆಸ್ ಅಭ್ಯರ್ಥಿ ಪಾಕಿಸ್ತಾನದ ಧ್ವಜಗಳೊಂದಿಗೆ ಚುನಾವಣಾ ಪ್ರಚಾರ ಮಾಡಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...