Homeಫ್ಯಾಕ್ಟ್‌ಚೆಕ್FACT CHECK : ಎರಡು ಸಿಮ್ ಕಾರ್ಡ್ ಹೊಂದಿರುವವರಿಗೆ ಸರ್ಕಾರ ದಂಡ ವಿಧಿಸಲಿದೆ ಎಂಬುವುದು ಸುಳ್ಳು

FACT CHECK : ಎರಡು ಸಿಮ್ ಕಾರ್ಡ್ ಹೊಂದಿರುವವರಿಗೆ ಸರ್ಕಾರ ದಂಡ ವಿಧಿಸಲಿದೆ ಎಂಬುವುದು ಸುಳ್ಳು

- Advertisement -
- Advertisement -

ಒಂದೇ ಮೊಬೈಲ್‌ನಲ್ಲಿ ಎರಡು ಸಿಮ್ ಕಾರ್ಡ್ ಹೊಂದಿರುವವರಿಗೆ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ದಂಡ ವಿಧಿಸಲು ಯೋಜಿಸುತ್ತಿದೆ ಎಂದು ಸುದ್ದಿಯೊಂದು ಹಬ್ಬಿದೆ.

ನೆಟ್‌ವರ್ಕ್ ಸೇವಾ ಪೂರೈಕೆದಾರರು ದಂಡದ ಹಣವನ್ನು ಒಂದು ದೊಡ್ಡ ಮೊತ್ತವಾಗಿ ಅಥವಾ ವಾರ್ಷಿಕ ಆಧಾರದ ಮೇಲೆ ಪಡೆದುಕೊಳ್ಳಬಹುದು ಎಂದು ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿರುವ ಸುದ್ದಿಯ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ಗೂಗಲ್‌ನಲ್ಲಿ ಕೀ ವರ್ಡ್ಸ್ ಬಳಸಿ ಮಾಹಿತಿ ಹುಡುಕಿದಾಗ ಜೂನ್ 13,2024ರಂದು ಎಕಾನಾಮಿಕ್ಸ್ ಟೈಮ್ಸ್ ಪ್ರಕಟಿಸಿರುವ ಸುದ್ದಿಯೊಂದು ದೊರೆತಿದೆ.

ಸುದ್ದಿಯಲ್ಲಿ ಟ್ರಾಯ್ ‘ಸಂಖ್ಯಾ ಸಂಪನ್ಮೂಲ ನಿಯಂತ್ರಣ'(regulate numbering resources) ಪ್ರಸ್ತಾಪವನ್ನು ಕೇಂದ್ರ ದೂರ ಸಂಪರ್ಕ ಸಚಿವಾಲಯದ ಮುಂದಿಟ್ಟಿದೆ ಎಂದು ಹೇಳಲಾಗಿದೆ.

ಟ್ರಾಯ್ ಫೋನ್ ನಂಬರ್‌ಗಳನ್ನು ‘ಪರಿಮಿತವಲ್ಲದ ಹೆಚ್ಚು ಮೌಲ್ಯಯುತವಾದ ಸಾರ್ವಜನಿಕ ಸಂಪನ್ಮೂಲ’ ಎಂದು ಪರಿಗಣಿಸುತ್ತದೆ ಎಂದು ವರದಿ ಉಲ್ಲೇಖಿಸಿದೆ. ಆದ್ದರಿಂದ, ಕಡಿಮೆ ಬಳಕೆಯೊಂದಿಗೆ ಸಂಖ್ಯೆಗಳನ್ನು ಹೊಂದಿರುವ ಮೊಬೈಲ್ ಆಪರೇಟರ್‌ಗಳ ಮೇಲೆ ಶುಲ್ಕಗಳನ್ನು ವಿಧಿಸಲು ಯೋಜಿಸುತ್ತಿದೆ’ ಎಂದಿದೆ.

ದೀರ್ಘಾವಧಿಯವರೆಗೆ ಬಳಸದೆ ಇರುವ ಸಂಖ್ಯೆಗಳ ಮೇಲೆ ಗ್ರಾಹಕರಿಗೆ ಏಕರೂಪವಾಗಿ ಅಥವಾ ವಾರ್ಷಿಕ ಶುಲ್ಕದ ರೂಪದಲ್ಲಿ ದಂಡ ವಿಧಿಸಬಹುದು ಎಂದು ವರದಿ ಹೇಳಿದೆ.

ಒಂದು ಹೆಸರಿನಲ್ಲಿ ಎರಡು ಫೋನ್ ನಂಬರ್‌ಗಳಿದ್ದು, ಅವುಗಳಲ್ಲಿ ಒಂದನ್ನು ಮಾತ್ರ ಬಳಸಿ, ಇನ್ನೊಂದು ಬಳಸದೇ ಇದ್ದರೆ ಅಂಥವರ ಮೇಲೆ ಮಾತ್ರ ದಂಡ ವಿಧಿಸುವುದು ಪ್ರಸ್ತಾವಣೆಯಲ್ಲಿದೆ ಎಂದು ತಿಳಿಸಿದೆ.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ‘ರಾಷ್ಟ್ರೀಯ ಸಂಖ್ಯಾ ಯೋಜನೆಯ ಪರಿಷ್ಕರಣೆ‘ ಎಂಬ ಶೀರ್ಷಿಕೆಯಲ್ಲಿ ಜೂನ್ 6, 2024ರಂದು ಟ್ರಾಯ್ ಹೊರಡಿಸಿದ ಪ್ರಕಟನೆ ಅದರ ವೆಬ್‌ಸೈಟ್‌ನಲ್ಲಿ ಲಭ್ಯವಾಗಿದೆ.

ಪ್ರಕಟಣೆಯಲ್ಲಿ, ಎರಡು ಸಿಮ್‌ ಕಾರ್ಡ್‌ಗಳನ್ನು ಹೊಂದಿರುವ ಕಾರಣಕ್ಕೆ ದಂಡ ವಿಧಿಸಲಾಗುತ್ತದೆ ಎಂದು ಎಲ್ಲೂ ಹೇಳಿಲ್ಲ.

ಆದರೆ, ಪ್ರಕಟಣೆಯ ಒಂದು ವಿಭಾಗದಲ್ಲಿ ವ್ಯಾನಿಟಿ ಸಂಖ್ಯೆಗಳ ಕುರಿತು ಚರ್ಚಿಸಲಾಗಿದೆ. ಟೆಲಿಕಾಂ ಸೇವಾ ಪೂರೈಕೆದಾರರು (ಟಿಎಸ್‌ಪಿಗಳು) ಹಂಚಿಕೆ ಮಾಡಿದ ಸಂಖ್ಯೆಗಳನ್ನು ಗ್ರಾಹಕರು ಬಳಸಬಹುದು, ಬಳಸದೇ ಇರಬಹುದು ಅಥವಾ ಅವುಗಳನ್ನು ಸಂಗ್ರಹಿಸಿಡಬಹುದು. ಈ ಸಂಖ್ಯೆಗಳಿಗೆ ವ್ಯಾನಿಟಿ ಸಂಖ್ಯೆಗಳು ಎನ್ನಲಾಗುತ್ತದೆ. ಇಂತಹ ‘ಸಂಖ್ಯೆಗಳು ಸಂಪನ್ಮೂಲಗಳ ಅಸಮರ್ಥ ಬಳಕೆಗೆ’ ಕಾರಣವಾಗುತ್ತದೆ ಎಂದು ಹೇಳಲಾಗಿದೆ.

ಟಿಎಸ್‌ಪಿಯಲ್ಲಿ ಬಳಕೆಯಾಗದ ಸಂಖ್ಯೆಗಳಿಗೆ ಒಂದು ಬಾರಿ ಅಥವಾ ಪ್ರತಿ ವರ್ಷ ಶುಲ್ಕಗಳನ್ನು ವಿಧಿಸುವುದು ನಿಷ್ಕ್ರಿಯಗೊಳಿಸಿದ ಫೋನ್ ನಂಬರ್‌ಗಳನ್ನು ಮರುಹಂಚಿಕೆ ಮಾಡದೆಯೇ ಹಿಡಿದಿಟ್ಟುಕೊಳ್ಳುವ ಟಿಎಸ್‌ಪಿಗಳ ಮೇಲೆ ಆರ್ಥಿಕ ನಿರಾಕರಣೆ ವಿಧಿಸುವುದನ್ನು ಟ್ರಾಯ್ ವಿವರಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಯ ಕುರಿತು ಜೂನ್ 14ರಂದು ಟ್ರಾಯ್‌ ತನ್ನ ಎಕ್ಸ್‌ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದು, “ಒಂದಕ್ಕಿಂತ ಹೆಚ್ಚು ಸಿಮ್‌ಗಳು ಅಥವಾ ಸಂಖ್ಯೆಗಳು ಹೊಂದಿರುವ ಗ್ರಾಹಕರ ಮೇಲೆ ಶುಲ್ಕ ವಿಧಿಸಲು ಟ್ರಾಯ್ ಉದ್ದೇಶಿಸಿದೆ ಎಂಬುವುದು ಸುಳ್ಳು, ಆಧಾರ ರಹಿತ ಮತ್ತು  ಸಾರ್ವಜನಿಕರನ್ನು ತಪ್ಪು ದಾರಿಗೆಳೆಯುವ ಸುದ್ದಿಯಾಗಿದೆ ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ : FACT CHECK : ವಸತಿ ಸಂಕೀರ್ಣದ ಮುಂದೆ ಜಾನುವಾರು ಹತ್ಯೆ ಮಾಡಿರುವ ವಿಡಿಯೋ ಭಾರತದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...