Homeಫ್ಯಾಕ್ಟ್‌ಚೆಕ್FACT CHECK : ಎರಡು ಸಿಮ್ ಕಾರ್ಡ್ ಹೊಂದಿರುವವರಿಗೆ ಸರ್ಕಾರ ದಂಡ ವಿಧಿಸಲಿದೆ ಎಂಬುವುದು ಸುಳ್ಳು

FACT CHECK : ಎರಡು ಸಿಮ್ ಕಾರ್ಡ್ ಹೊಂದಿರುವವರಿಗೆ ಸರ್ಕಾರ ದಂಡ ವಿಧಿಸಲಿದೆ ಎಂಬುವುದು ಸುಳ್ಳು

- Advertisement -
- Advertisement -

ಒಂದೇ ಮೊಬೈಲ್‌ನಲ್ಲಿ ಎರಡು ಸಿಮ್ ಕಾರ್ಡ್ ಹೊಂದಿರುವವರಿಗೆ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ದಂಡ ವಿಧಿಸಲು ಯೋಜಿಸುತ್ತಿದೆ ಎಂದು ಸುದ್ದಿಯೊಂದು ಹಬ್ಬಿದೆ.

ನೆಟ್‌ವರ್ಕ್ ಸೇವಾ ಪೂರೈಕೆದಾರರು ದಂಡದ ಹಣವನ್ನು ಒಂದು ದೊಡ್ಡ ಮೊತ್ತವಾಗಿ ಅಥವಾ ವಾರ್ಷಿಕ ಆಧಾರದ ಮೇಲೆ ಪಡೆದುಕೊಳ್ಳಬಹುದು ಎಂದು ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿರುವ ಸುದ್ದಿಯ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ಗೂಗಲ್‌ನಲ್ಲಿ ಕೀ ವರ್ಡ್ಸ್ ಬಳಸಿ ಮಾಹಿತಿ ಹುಡುಕಿದಾಗ ಜೂನ್ 13,2024ರಂದು ಎಕಾನಾಮಿಕ್ಸ್ ಟೈಮ್ಸ್ ಪ್ರಕಟಿಸಿರುವ ಸುದ್ದಿಯೊಂದು ದೊರೆತಿದೆ.

ಸುದ್ದಿಯಲ್ಲಿ ಟ್ರಾಯ್ ‘ಸಂಖ್ಯಾ ಸಂಪನ್ಮೂಲ ನಿಯಂತ್ರಣ'(regulate numbering resources) ಪ್ರಸ್ತಾಪವನ್ನು ಕೇಂದ್ರ ದೂರ ಸಂಪರ್ಕ ಸಚಿವಾಲಯದ ಮುಂದಿಟ್ಟಿದೆ ಎಂದು ಹೇಳಲಾಗಿದೆ.

ಟ್ರಾಯ್ ಫೋನ್ ನಂಬರ್‌ಗಳನ್ನು ‘ಪರಿಮಿತವಲ್ಲದ ಹೆಚ್ಚು ಮೌಲ್ಯಯುತವಾದ ಸಾರ್ವಜನಿಕ ಸಂಪನ್ಮೂಲ’ ಎಂದು ಪರಿಗಣಿಸುತ್ತದೆ ಎಂದು ವರದಿ ಉಲ್ಲೇಖಿಸಿದೆ. ಆದ್ದರಿಂದ, ಕಡಿಮೆ ಬಳಕೆಯೊಂದಿಗೆ ಸಂಖ್ಯೆಗಳನ್ನು ಹೊಂದಿರುವ ಮೊಬೈಲ್ ಆಪರೇಟರ್‌ಗಳ ಮೇಲೆ ಶುಲ್ಕಗಳನ್ನು ವಿಧಿಸಲು ಯೋಜಿಸುತ್ತಿದೆ’ ಎಂದಿದೆ.

ದೀರ್ಘಾವಧಿಯವರೆಗೆ ಬಳಸದೆ ಇರುವ ಸಂಖ್ಯೆಗಳ ಮೇಲೆ ಗ್ರಾಹಕರಿಗೆ ಏಕರೂಪವಾಗಿ ಅಥವಾ ವಾರ್ಷಿಕ ಶುಲ್ಕದ ರೂಪದಲ್ಲಿ ದಂಡ ವಿಧಿಸಬಹುದು ಎಂದು ವರದಿ ಹೇಳಿದೆ.

ಒಂದು ಹೆಸರಿನಲ್ಲಿ ಎರಡು ಫೋನ್ ನಂಬರ್‌ಗಳಿದ್ದು, ಅವುಗಳಲ್ಲಿ ಒಂದನ್ನು ಮಾತ್ರ ಬಳಸಿ, ಇನ್ನೊಂದು ಬಳಸದೇ ಇದ್ದರೆ ಅಂಥವರ ಮೇಲೆ ಮಾತ್ರ ದಂಡ ವಿಧಿಸುವುದು ಪ್ರಸ್ತಾವಣೆಯಲ್ಲಿದೆ ಎಂದು ತಿಳಿಸಿದೆ.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ‘ರಾಷ್ಟ್ರೀಯ ಸಂಖ್ಯಾ ಯೋಜನೆಯ ಪರಿಷ್ಕರಣೆ‘ ಎಂಬ ಶೀರ್ಷಿಕೆಯಲ್ಲಿ ಜೂನ್ 6, 2024ರಂದು ಟ್ರಾಯ್ ಹೊರಡಿಸಿದ ಪ್ರಕಟನೆ ಅದರ ವೆಬ್‌ಸೈಟ್‌ನಲ್ಲಿ ಲಭ್ಯವಾಗಿದೆ.

ಪ್ರಕಟಣೆಯಲ್ಲಿ, ಎರಡು ಸಿಮ್‌ ಕಾರ್ಡ್‌ಗಳನ್ನು ಹೊಂದಿರುವ ಕಾರಣಕ್ಕೆ ದಂಡ ವಿಧಿಸಲಾಗುತ್ತದೆ ಎಂದು ಎಲ್ಲೂ ಹೇಳಿಲ್ಲ.

ಆದರೆ, ಪ್ರಕಟಣೆಯ ಒಂದು ವಿಭಾಗದಲ್ಲಿ ವ್ಯಾನಿಟಿ ಸಂಖ್ಯೆಗಳ ಕುರಿತು ಚರ್ಚಿಸಲಾಗಿದೆ. ಟೆಲಿಕಾಂ ಸೇವಾ ಪೂರೈಕೆದಾರರು (ಟಿಎಸ್‌ಪಿಗಳು) ಹಂಚಿಕೆ ಮಾಡಿದ ಸಂಖ್ಯೆಗಳನ್ನು ಗ್ರಾಹಕರು ಬಳಸಬಹುದು, ಬಳಸದೇ ಇರಬಹುದು ಅಥವಾ ಅವುಗಳನ್ನು ಸಂಗ್ರಹಿಸಿಡಬಹುದು. ಈ ಸಂಖ್ಯೆಗಳಿಗೆ ವ್ಯಾನಿಟಿ ಸಂಖ್ಯೆಗಳು ಎನ್ನಲಾಗುತ್ತದೆ. ಇಂತಹ ‘ಸಂಖ್ಯೆಗಳು ಸಂಪನ್ಮೂಲಗಳ ಅಸಮರ್ಥ ಬಳಕೆಗೆ’ ಕಾರಣವಾಗುತ್ತದೆ ಎಂದು ಹೇಳಲಾಗಿದೆ.

ಟಿಎಸ್‌ಪಿಯಲ್ಲಿ ಬಳಕೆಯಾಗದ ಸಂಖ್ಯೆಗಳಿಗೆ ಒಂದು ಬಾರಿ ಅಥವಾ ಪ್ರತಿ ವರ್ಷ ಶುಲ್ಕಗಳನ್ನು ವಿಧಿಸುವುದು ನಿಷ್ಕ್ರಿಯಗೊಳಿಸಿದ ಫೋನ್ ನಂಬರ್‌ಗಳನ್ನು ಮರುಹಂಚಿಕೆ ಮಾಡದೆಯೇ ಹಿಡಿದಿಟ್ಟುಕೊಳ್ಳುವ ಟಿಎಸ್‌ಪಿಗಳ ಮೇಲೆ ಆರ್ಥಿಕ ನಿರಾಕರಣೆ ವಿಧಿಸುವುದನ್ನು ಟ್ರಾಯ್ ವಿವರಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಯ ಕುರಿತು ಜೂನ್ 14ರಂದು ಟ್ರಾಯ್‌ ತನ್ನ ಎಕ್ಸ್‌ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದು, “ಒಂದಕ್ಕಿಂತ ಹೆಚ್ಚು ಸಿಮ್‌ಗಳು ಅಥವಾ ಸಂಖ್ಯೆಗಳು ಹೊಂದಿರುವ ಗ್ರಾಹಕರ ಮೇಲೆ ಶುಲ್ಕ ವಿಧಿಸಲು ಟ್ರಾಯ್ ಉದ್ದೇಶಿಸಿದೆ ಎಂಬುವುದು ಸುಳ್ಳು, ಆಧಾರ ರಹಿತ ಮತ್ತು  ಸಾರ್ವಜನಿಕರನ್ನು ತಪ್ಪು ದಾರಿಗೆಳೆಯುವ ಸುದ್ದಿಯಾಗಿದೆ ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ : FACT CHECK : ವಸತಿ ಸಂಕೀರ್ಣದ ಮುಂದೆ ಜಾನುವಾರು ಹತ್ಯೆ ಮಾಡಿರುವ ವಿಡಿಯೋ ಭಾರತದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...